ETV Bharat / state

ಇಂಥವರೂ ಇರ್ತಾರೀಪಾ.. ಕದ್ದಿರುವ 11 ಎಮ್ಮೆ ಸಾಗಿಸುತ್ತಿದ್ದ ಒಂದೇ ಕುಟುಂಬದ 6 ಮಂದಿ ಬಂಧನ.. - ವಿಜಯಪುರದಲ್ಲಿ ಎಮ್ಮೆಗಳ ಕಳ್ಳತನ ಪ್ರಕರಣ

ಇತ್ತೀಚಿಗೆ ಜಿಲ್ಲೆಯಲ್ಲಿ ಮನೆಗಳ್ಳತನದ ಜತೆ ಜಾನುವಾರುಗಳ ಕಳ್ಳತನ ಹೆಚ್ಚಾಗುತ್ತಿರುವ ಬಗ್ಗೆ ದೂರು ಕೇಳಿ ಬಂದ ಹಿನ್ನೆಲೆ ಎಸ್​​ಪಿ ಆನಂದಕುಮಾರ್ ವಿಶೇಷ ತಂಡ ರಚಿಸಿದ್ದರು..

6 members from same family arrested for Buffalo theft case
11 ಎಮ್ಮೆಗಳ ಕದ್ದು ಸಾಗಿಸುತ್ತಿದ್ದ ಒಂದೇ ಕುಟುಂಬದ 6 ಮಂದಿ ಬಂಧನ
author img

By

Published : Dec 17, 2021, 12:56 PM IST

ವಿಜಯಪುರ : ಗುಮ್ಮಟ ನಗರಿಯಲ್ಲಿ ಎಮ್ಮೆಗಳನ್ನ ಕದ್ದು ಮಾರಾಟ ಮಾಡುತ್ತಿದ್ದ ಒಂದೇ ಕುಟುಂಬದ 6 ಮಂದಿಯನ್ನ ಪೊಲೀಸರು ಬಂಧಿಸಿದ್ದಾರೆ.

ಬಂಧಿತರಿಂದ 7 ಲಕ್ಷ ಮೌಲ್ಯದ 11 ಎಮ್ಮೆಗಳನ್ನು ವಶಕ್ಕೆ ಪಡೆದಿದ್ದಾರೆ. ಜಲನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮೂರು ಎಮ್ಮೆ ಕಳ್ಳತನ ಪ್ರಕರಣ ದಾಖಲಾಗಿದ್ದವು.

11 ಎಮ್ಮೆಗಳ ಕದ್ದು ಸಾಗಿಸುತ್ತಿದ್ದ ಒಂದೇ ಕುಟುಂಬದ 6 ಮಂದಿ ಬಂಧನ

ಈ ಪ್ರಕರಣ ಬೆನ್ನತ್ತಿದ ಪೊಲೀಸರು, ಆರೋಪಿಗಳಾದ ಬೇಗಂ ತಾಲಾಬ್, ದೊಡ್ಡಿ ನಿವಾಸಿ ಸಹೋದರರಾದ ಶ್ರೀಕಾಂತ ಲಕ್ಷ್ಮಣ ಗೋಪಣೆ, ಮೈಲಾರಿ ಲಕ್ಷ್ಮಣ ಗೋಪಣೆ, ಇವರ ಸಂಬಂಧಿಗಳಾದ ರಾಮು ತಾಯಪ್ಪ ಗೋಪಣೆ, ಭೀಮು ಅಂಬು ಗೋಪಣೆ ಹಾಗೂ ಭೀಮಶಿ ಅಂಬು ಗೋಪಣೆ ಅವರನ್ನು ಬಂಧಿಸಿದ್ದಾರೆ.

ವಿಶೇಷ ತಂಡ ರಚನೆ : ಇತ್ತೀಚಿಗೆ ಜಿಲ್ಲೆಯಲ್ಲಿ ಮನೆಗಳ್ಳತನದ ಜತೆ ಜಾನುವಾರುಗಳ ಕಳ್ಳತನ ಹೆಚ್ಚಾಗುತ್ತಿರುವ ಬಗ್ಗೆ ದೂರು ಕೇಳಿ ಬಂದ ಹಿನ್ನೆಲೆ ಎಸ್​​ಪಿ ಆನಂದಕುಮಾರ್ ವಿಶೇಷ ತಂಡ ರಚಿಸಿದ್ದರು.

ಈ ತಂಡ ಮಹಾರಾಷ್ಟ್ರದ ಸೋಲಾಪೂರ್, ಮಿರಜ್, ಸಾಂಗ್ಲಿ, ಪುಣೆ, ಮುಂಬೈ ಸೇರಿದಂತೆ ರಾಜ್ಯದ ಹುಬ್ಬಳ್ಳಿ, ಬೆಳಗಾವಿ, ಬಾಗಲಕೋಟೆ, ಕಲಬುರಗಿ, ವಿಜಯಪುರ ಜಿಲ್ಲೆಯಲ್ಲಿ ತಪಾಸಣೆ ನಡೆಸಿದಾಗ ಎಮ್ಮೆಗಳನ್ನು ಕಳ್ಳತನ ಮಾಡುತ್ತಿದ್ದ ಗೋಪಣೆ ಕುಟುಂಬದ 6 ಸದಸ್ಯರು ಭಾಗಿಯಾಗಿದ್ದು ಕಂಡು ಬಂದಿದೆ. ಪ್ರಕರಣ ಪತ್ತೆ ಮಾಡಿದ ವಿಶೇಷ ತಂಡಕ್ಕೆ ಎಸ್​ಪಿ ಬಹುಮಾನ ಘೋಷಿಸಿದ್ದಾರೆ.

ಇದನ್ನೂ ಓದಿ: ಡ್ರಗ್ಸ್ ಕೇಸ್ : ವಿಚಾರಣೆಗೆ ಹಾಜರಾಗುವಂತೆ ಪ್ರೆಸ್ಟೀಜ್ ಕಂಪನಿ ಸಿಇಒಗೆ ನೋಟಿಸ್

ವಿಜಯಪುರ : ಗುಮ್ಮಟ ನಗರಿಯಲ್ಲಿ ಎಮ್ಮೆಗಳನ್ನ ಕದ್ದು ಮಾರಾಟ ಮಾಡುತ್ತಿದ್ದ ಒಂದೇ ಕುಟುಂಬದ 6 ಮಂದಿಯನ್ನ ಪೊಲೀಸರು ಬಂಧಿಸಿದ್ದಾರೆ.

ಬಂಧಿತರಿಂದ 7 ಲಕ್ಷ ಮೌಲ್ಯದ 11 ಎಮ್ಮೆಗಳನ್ನು ವಶಕ್ಕೆ ಪಡೆದಿದ್ದಾರೆ. ಜಲನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮೂರು ಎಮ್ಮೆ ಕಳ್ಳತನ ಪ್ರಕರಣ ದಾಖಲಾಗಿದ್ದವು.

11 ಎಮ್ಮೆಗಳ ಕದ್ದು ಸಾಗಿಸುತ್ತಿದ್ದ ಒಂದೇ ಕುಟುಂಬದ 6 ಮಂದಿ ಬಂಧನ

ಈ ಪ್ರಕರಣ ಬೆನ್ನತ್ತಿದ ಪೊಲೀಸರು, ಆರೋಪಿಗಳಾದ ಬೇಗಂ ತಾಲಾಬ್, ದೊಡ್ಡಿ ನಿವಾಸಿ ಸಹೋದರರಾದ ಶ್ರೀಕಾಂತ ಲಕ್ಷ್ಮಣ ಗೋಪಣೆ, ಮೈಲಾರಿ ಲಕ್ಷ್ಮಣ ಗೋಪಣೆ, ಇವರ ಸಂಬಂಧಿಗಳಾದ ರಾಮು ತಾಯಪ್ಪ ಗೋಪಣೆ, ಭೀಮು ಅಂಬು ಗೋಪಣೆ ಹಾಗೂ ಭೀಮಶಿ ಅಂಬು ಗೋಪಣೆ ಅವರನ್ನು ಬಂಧಿಸಿದ್ದಾರೆ.

ವಿಶೇಷ ತಂಡ ರಚನೆ : ಇತ್ತೀಚಿಗೆ ಜಿಲ್ಲೆಯಲ್ಲಿ ಮನೆಗಳ್ಳತನದ ಜತೆ ಜಾನುವಾರುಗಳ ಕಳ್ಳತನ ಹೆಚ್ಚಾಗುತ್ತಿರುವ ಬಗ್ಗೆ ದೂರು ಕೇಳಿ ಬಂದ ಹಿನ್ನೆಲೆ ಎಸ್​​ಪಿ ಆನಂದಕುಮಾರ್ ವಿಶೇಷ ತಂಡ ರಚಿಸಿದ್ದರು.

ಈ ತಂಡ ಮಹಾರಾಷ್ಟ್ರದ ಸೋಲಾಪೂರ್, ಮಿರಜ್, ಸಾಂಗ್ಲಿ, ಪುಣೆ, ಮುಂಬೈ ಸೇರಿದಂತೆ ರಾಜ್ಯದ ಹುಬ್ಬಳ್ಳಿ, ಬೆಳಗಾವಿ, ಬಾಗಲಕೋಟೆ, ಕಲಬುರಗಿ, ವಿಜಯಪುರ ಜಿಲ್ಲೆಯಲ್ಲಿ ತಪಾಸಣೆ ನಡೆಸಿದಾಗ ಎಮ್ಮೆಗಳನ್ನು ಕಳ್ಳತನ ಮಾಡುತ್ತಿದ್ದ ಗೋಪಣೆ ಕುಟುಂಬದ 6 ಸದಸ್ಯರು ಭಾಗಿಯಾಗಿದ್ದು ಕಂಡು ಬಂದಿದೆ. ಪ್ರಕರಣ ಪತ್ತೆ ಮಾಡಿದ ವಿಶೇಷ ತಂಡಕ್ಕೆ ಎಸ್​ಪಿ ಬಹುಮಾನ ಘೋಷಿಸಿದ್ದಾರೆ.

ಇದನ್ನೂ ಓದಿ: ಡ್ರಗ್ಸ್ ಕೇಸ್ : ವಿಚಾರಣೆಗೆ ಹಾಜರಾಗುವಂತೆ ಪ್ರೆಸ್ಟೀಜ್ ಕಂಪನಿ ಸಿಇಒಗೆ ನೋಟಿಸ್

ETV Bharat Logo

Copyright © 2025 Ushodaya Enterprises Pvt. Ltd., All Rights Reserved.