ETV Bharat / state

ಮುದ್ದೇಬಿಹಾಳ; ಹದಗೆಟ್ಟ ರಸ್ತೆ.. ವಾಹನ ಸವಾರರ ಪರದಾಟ

author img

By

Published : Jul 30, 2020, 10:43 PM IST

ವಿಜಯಪುರ ತಾಲೂಕಿನ ಮುದ್ದೇಬಿಹಾಳ ಪಟ್ಟಣದ ಕಾಯಿಪಲ್ಯೆ ಮಾರುಕಟ್ಟೆಗೆ ತೆರಳುವ ಕೆರೆ ಸಮೀಪದಲ್ಲಿರುವ ರಸ್ತೆಯಲ್ಲಿ ದೊಡ್ಡ-ದೊಡ್ಡ ಗುಂಡಿಗಳಾಗಿದ್ದು, ವಾಹನ ಸವಾರರು ನಿತ್ಯ ಪರದಾಡುವಂತಾಗಿದೆ.

A completely deteriorated road in muddebihal
ಸಂಪೂರ್ಣ ಹದಗೆಟ್ಟ ರಸ್ತೆ: ವಾಹನ ಸವಾರರ ಪರದಾಟ

ಮುದ್ದೇಬಿಹಾಳ (ವಿಜಯಪುರ): ಪಟ್ಟಣದ ಕಾಯಿಪಲ್ಯೆ ಮಾರುಕಟ್ಟೆಗೆ ತೆರಳುವ ಕೆರೆ ಸಮೀಪದಲ್ಲಿರುವ ರಸ್ತೆಯಲ್ಲಿ ದೊಡ್ಡ-ದೊಡ್ಡ ಗುಂಡಿಗಳಾಗಿದ್ದು, ವಾಹನ ಸವಾರರು ಪರದಾಡುವಂತಾಗಿದೆ.

ಸಂಪೂರ್ಣ ಹದಗೆಟ್ಟ ರಸ್ತೆ: ವಾಹನ ಸವಾರರ ಪರದಾಟ

ಒಳಚರಂಡಿ ಕಾಮಗಾರಿ ಮುಗಿದ ನಂತರ ರಸ್ತೆ ಮಧ್ಯದಲ್ಲಿ ಚೇಂಬರ್ ನಿರ್ಮಿಸಿ, ಅದನ್ನು ವ್ಯವಸ್ಥಿತವಾಗಿ ಮುಚ್ಚಿ ಡಾಂಬರೀಕರಣ ಮಾಡಲಾಗಿತ್ತು. ಆದರೆ, ಮತ್ತೆ ಆರೆಂಟು ತಿಂಗಳಲ್ಲಿ ಅದೇ ರಾಗ ಅದೇ ಹಾಡು ಎಂಬುವಂತಾಗಿದೆ. ದೊಡ್ಡ ಚರಂಡಿ ಮೇಲೆ ಹಾಕಿರುವ ಸ್ಲ್ಯಾಬ್​ಗಳು ಕೂಡಾ ಕಿತ್ತುಹೋಗಿದ್ದು, ಅಂಗೈಯಲ್ಲಿ ಜೀವ ಹಿಡಿದುಕೊಂಡು ಓಡಾಡುವ ಪರಿಸ್ಥಿತಿ ಬಂದೊದಗಿದೆ.

ಹೀಗಾಗಿ ಸಂಬಂಧಪಟ್ಟ ಅಧಿಕಾರಿಗಳು ದ್ಯಾಮವ್ವನ ಕಟ್ಟೆಯಿಂದ ಇಂದಿರಾ ವೃತ್ತದವರೆಗಿನ ರಸ್ತೆ ಸರಿಪಡಿಸಬೇಕು ಎಂದು ಜಯ ಕರ್ನಾಟಕ ಸಂಘಟನೆಯ ಜಿಲ್ಲಾ ಸಂಘಟನಾ ಕಾರ್ಯದರ್ಶಿ ಪರಶುರಾಮ ಸಿಂಧೆ ಒತ್ತಾಯಿಸಿದ್ದಾರೆ.

ಮುದ್ದೇಬಿಹಾಳ (ವಿಜಯಪುರ): ಪಟ್ಟಣದ ಕಾಯಿಪಲ್ಯೆ ಮಾರುಕಟ್ಟೆಗೆ ತೆರಳುವ ಕೆರೆ ಸಮೀಪದಲ್ಲಿರುವ ರಸ್ತೆಯಲ್ಲಿ ದೊಡ್ಡ-ದೊಡ್ಡ ಗುಂಡಿಗಳಾಗಿದ್ದು, ವಾಹನ ಸವಾರರು ಪರದಾಡುವಂತಾಗಿದೆ.

ಸಂಪೂರ್ಣ ಹದಗೆಟ್ಟ ರಸ್ತೆ: ವಾಹನ ಸವಾರರ ಪರದಾಟ

ಒಳಚರಂಡಿ ಕಾಮಗಾರಿ ಮುಗಿದ ನಂತರ ರಸ್ತೆ ಮಧ್ಯದಲ್ಲಿ ಚೇಂಬರ್ ನಿರ್ಮಿಸಿ, ಅದನ್ನು ವ್ಯವಸ್ಥಿತವಾಗಿ ಮುಚ್ಚಿ ಡಾಂಬರೀಕರಣ ಮಾಡಲಾಗಿತ್ತು. ಆದರೆ, ಮತ್ತೆ ಆರೆಂಟು ತಿಂಗಳಲ್ಲಿ ಅದೇ ರಾಗ ಅದೇ ಹಾಡು ಎಂಬುವಂತಾಗಿದೆ. ದೊಡ್ಡ ಚರಂಡಿ ಮೇಲೆ ಹಾಕಿರುವ ಸ್ಲ್ಯಾಬ್​ಗಳು ಕೂಡಾ ಕಿತ್ತುಹೋಗಿದ್ದು, ಅಂಗೈಯಲ್ಲಿ ಜೀವ ಹಿಡಿದುಕೊಂಡು ಓಡಾಡುವ ಪರಿಸ್ಥಿತಿ ಬಂದೊದಗಿದೆ.

ಹೀಗಾಗಿ ಸಂಬಂಧಪಟ್ಟ ಅಧಿಕಾರಿಗಳು ದ್ಯಾಮವ್ವನ ಕಟ್ಟೆಯಿಂದ ಇಂದಿರಾ ವೃತ್ತದವರೆಗಿನ ರಸ್ತೆ ಸರಿಪಡಿಸಬೇಕು ಎಂದು ಜಯ ಕರ್ನಾಟಕ ಸಂಘಟನೆಯ ಜಿಲ್ಲಾ ಸಂಘಟನಾ ಕಾರ್ಯದರ್ಶಿ ಪರಶುರಾಮ ಸಿಂಧೆ ಒತ್ತಾಯಿಸಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.