ವಿಜಯಪುರ: ಅರೆವೈದ್ಯರೊಬ್ಬರು ಮಹಿಳೆಗೆ ಆ್ಯಂಬುಲೆನ್ಸ್ನಲ್ಲೇಹೆರಿಗೆ ಮಾಡಿಸಿ ಮಾನವೀಯತೆ ಮೆರೆದ ಘಟನೆ ಮುದ್ದೇಬಿಹಾಳ ತಾಲೂಕಿನ ಗುಡದಿನ್ನಿ ಗ್ರಾಮದಲ್ಲಿ ನಡೆದಿದೆ.
ಯಲ್ಲಕ್ಕ ಚಲವಾದಿ ಎಂಬುವವರಿಗೆ ನಿನ್ನೆ ತಡರಾತ್ರಿ ಹೆರಿಗೆ ನೋವು ಕಾಣಿಸಿಕೊಂಡಿತ್ತು. ಈ ಸಂದರ್ಭದಲ್ಲಿ 108 ವಾಹನದಲ್ಲಿ ಆಸ್ಪತ್ರೆಗೆ ಸಾಗಿಸುವಾಗ ಮಾರ್ಗ ಮಧ್ಯದಲ್ಲೇ ಹೆರಿಗೆಯಾಗಿದೆ.
ನಾಲ್ಕು ಹೆಣ್ಣು ಮಕ್ಕಳ ಬಳಿಕ ಗಂಡು ಮಗುವಿಗೆ ಯಲಕ್ಕ ಚಲವಾದಿ ಜನ್ಮ ನೀಡಿದ್ದಾರೆ. ಸದ್ಯ ತಾಯಿ ಹಾಗೂ ಮಗು ಆರೋಗ್ಯವಾಗಿದ್ದಾರೆ ಎಂದು ವೈದ್ಯರು ಹೇಳಿದ್ದಾರೆ.