ETV Bharat / state

ರಾಣಿ ಚನ್ನಮ್ಮಳ ತತ್ತ್ವಾದರ್ಶಗಳನ್ನು ಎಲ್ಲರೂ ಅಳವಡಿಸಿಕೊಳ್ಳಿ: ಡಿಸಿ ಸುನೀಲ್​ ಕುಮಾರ್​​ ಕರೆ - Kittur Rani Channamma Jayanthriva Festival 2020

ಸ್ವಾತಂತ್ರ್ಯ ಹೋರಾಟದಲ್ಲಿ ಮುಂಚೂಣಿಯಲ್ಲಿದ್ದ ಕಿತ್ತೂರು ರಾಣಿ ಚನ್ನಮ್ಮ, ಅಂದಿನ ಕಾಲದಲ್ಲಿ‌ ಸ್ತ್ರಿ ಸಮಾನತೆಗೆ ಪ್ರಾಧ್ಯಾನತೆ ನೀಡಿದ್ದರ ಕಾರಣ ನಾವಿಂದು ಅವರನ್ನು ನೆನಪಿಸಿಕೊಳ್ಳುತ್ತಿದ್ದೇವೆ ಎಂದು ಜಿಲ್ಲಾಧಿಕಾರಿ ಪಿ. ಸುನೀಲ್​ ಕುಮಾರ್​​ ತಿಳಿಸಿದರು.

p-sunil-kumar
ಡಿಸಿ ಪಿ. ಸುನೀಲ್​ ಕುಮಾರ್
author img

By

Published : Oct 23, 2020, 5:15 PM IST

ವಿಜಯಪುರ: ಕಿತ್ತೂರು ರಾಣಿ ಚನ್ನಮ್ಮ ಅವರ ತತ್ತ್ವಾದರ್ಶಗಳನ್ನು ಜೀವನದಲ್ಲಿ ಎಲ್ಲರೂ ಅಳವಡಿಸಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಪಿ. ಸುನೀಲ್​ ಕುಮಾರ್​​ ಜನರಿಗೆ ಕರೆ ನೀಡಿದ್ದಾರೆ.

ನಗರದ ಜಿಲ್ಲಾಧಿಕಾರಿ ಕಚೇರಿಯ ಸಭಾಭವನದಲ್ಲಿ ನಡೆದ ಕಿತ್ತೂರು ರಾಣಿ ಚನ್ನಮ್ಮ ಜಯಂತ್ಯುತ್ಸವದಲ್ಲಿ ಚನ್ನಮ್ಮ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಮಾತನಾಡಿದ ಅವರು, ಸ್ವಾತಂತ್ರ್ಯ ಹೋರಾಟದಲ್ಲಿ ಮುಂಚೂಣಿಯಲ್ಲಿದ್ದ ಕಿತ್ತೂರು ರಾಣಿ ಚನ್ನಮ್ಮ ಅಂದಿನ ಕಾಲದಲ್ಲಿ‌ ಸ್ತ್ರಿಯರ ಸಮಾನತೆಗೆ ಪ್ರಾಧ್ಯಾನತೆ ನೀಡಿದ್ದರು. ಅದೇ ಕಾರಣದಿಂದ ನಾವಿಂದು ಅವರನ್ನು ನೆನಪಿಸಿಕೊಳ್ಳುತ್ತಿದ್ದೇವೆ ಎಂದ ಅವರು, ಚೆನ್ನಮ್ಮ ಹೋರಾಟದ ಇತಿಹಾಸವನ್ನು ಎಲ್ಲ ಮಹಿಳೆಯರು ತಿಳಿದುಕೊಳ್ಳುವಂತೆ ಸಲಹೆ ನೀಡಿದರು.

ಡಿಸಿ ಪಿ. ಸುನೀಲ್​ ಕುಮಾರ್ ಮಾತನಾಡಿದರು

ಕೊರೊನಾ ಭೀತಿಯಿಂದ ಜಯಂತಿಯನ್ನ ಸರಳವಾಗಿ ಆಚರಣೆ ಮಾಡಲಾಯಿತು. ಸಿಪಿಐ ಬಸವರಾಜ ಮೂರ್ಕತಿಹಾಳ ಸೇರಿದಂತೆ ಹಲವು ಅಧಿಕಾರಿಗಳು ಹಾಗೂ ಪಂಚಮಸಾಲಿ ಸಮುದಾಯದ ಮುಖಂಡರು ಭಾಗಿಯಾಗಿದ್ದರು.

ವಿಜಯಪುರ: ಕಿತ್ತೂರು ರಾಣಿ ಚನ್ನಮ್ಮ ಅವರ ತತ್ತ್ವಾದರ್ಶಗಳನ್ನು ಜೀವನದಲ್ಲಿ ಎಲ್ಲರೂ ಅಳವಡಿಸಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಪಿ. ಸುನೀಲ್​ ಕುಮಾರ್​​ ಜನರಿಗೆ ಕರೆ ನೀಡಿದ್ದಾರೆ.

ನಗರದ ಜಿಲ್ಲಾಧಿಕಾರಿ ಕಚೇರಿಯ ಸಭಾಭವನದಲ್ಲಿ ನಡೆದ ಕಿತ್ತೂರು ರಾಣಿ ಚನ್ನಮ್ಮ ಜಯಂತ್ಯುತ್ಸವದಲ್ಲಿ ಚನ್ನಮ್ಮ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಮಾತನಾಡಿದ ಅವರು, ಸ್ವಾತಂತ್ರ್ಯ ಹೋರಾಟದಲ್ಲಿ ಮುಂಚೂಣಿಯಲ್ಲಿದ್ದ ಕಿತ್ತೂರು ರಾಣಿ ಚನ್ನಮ್ಮ ಅಂದಿನ ಕಾಲದಲ್ಲಿ‌ ಸ್ತ್ರಿಯರ ಸಮಾನತೆಗೆ ಪ್ರಾಧ್ಯಾನತೆ ನೀಡಿದ್ದರು. ಅದೇ ಕಾರಣದಿಂದ ನಾವಿಂದು ಅವರನ್ನು ನೆನಪಿಸಿಕೊಳ್ಳುತ್ತಿದ್ದೇವೆ ಎಂದ ಅವರು, ಚೆನ್ನಮ್ಮ ಹೋರಾಟದ ಇತಿಹಾಸವನ್ನು ಎಲ್ಲ ಮಹಿಳೆಯರು ತಿಳಿದುಕೊಳ್ಳುವಂತೆ ಸಲಹೆ ನೀಡಿದರು.

ಡಿಸಿ ಪಿ. ಸುನೀಲ್​ ಕುಮಾರ್ ಮಾತನಾಡಿದರು

ಕೊರೊನಾ ಭೀತಿಯಿಂದ ಜಯಂತಿಯನ್ನ ಸರಳವಾಗಿ ಆಚರಣೆ ಮಾಡಲಾಯಿತು. ಸಿಪಿಐ ಬಸವರಾಜ ಮೂರ್ಕತಿಹಾಳ ಸೇರಿದಂತೆ ಹಲವು ಅಧಿಕಾರಿಗಳು ಹಾಗೂ ಪಂಚಮಸಾಲಿ ಸಮುದಾಯದ ಮುಖಂಡರು ಭಾಗಿಯಾಗಿದ್ದರು.

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.