ವಿಜಯಪುರ : ಕನಿಷ್ಠ ವೇತನ, ಕೆಲಸದ ಭದ್ರತೆ ಎಲ್ಐಸಿ ಜಾರಿಗೊಳೊಸುವಂತೆ ಕರ್ನಾಟಕ ರಾಜ್ಯ ಅಕ್ಷರ ದಾಸೋಹ ನೌಕರರ ಸಂಘದಿಂದ ಪ್ರತಿಭಟನೆ ನಡೆಸಲಾಯಿತು.
ಜಿಲ್ಲಾ ಪಂಚಾಯತ್ ಕಚೇರಿ ಮುಂಭಾಗದಲ್ಲಿ ಧರಣಿ ನಡೆಸಿ ಕಳೆದ 17 ವರ್ಷಗಳಿಂದ ಸೂಕ್ತವಾದ ಕೂಲಿ ನೀಡುತ್ತಿಲ್ಲ . ಹಲವು ಬಾರಿ ಪ್ರತಿಭಟನೆ ನಡೆಸಿದರೂ ಸರ್ಕಾರ ಕ್ರಮ ಕೈಗೊಂಡಿಲ್ಲ. ಪಿಂಚಣಿ ನೀಡುತ್ತೇವೆ ಎಂದು ಅಧಿಕಾರಿಗಳು ಕೇವಲ ಹೇಳಿಕೊಂಡೇ ಬರುತ್ತಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಬಳಿಕ ಪ್ರತಿಭಟನಾಕಾರರ ಮನವಿ ಸ್ವಿಕರಿಸಿದ ಜಿಲ್ಲಾ ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಸರ್ಕಾರಕ್ಕೆ ತಮ್ಮ ಬೇಡಿಕೆಗಳನ್ನು ತಿಳಿಸುವುದಾಗಿ ಭರವಸೆ ನೀಡಿದರು.