ವಿಜಯಪುರ : ಭೀಮಾತೀರದ ಸಾಹುಕಾರ ಮಹಾದೇವ ಭೈರಗೊಂಡ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಹೈದರಾಬಾದ್ನ ಖಾಸಗಿ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ. ತಡರಾತ್ರಿ ಆ್ಯಂಬುಲೆನ್ಸ್ ಮೂಲಕ ಬಿಗಿ ಭದ್ರತೆಯಲ್ಲಿ ಅವರನ್ನು ಹೈದರಾಬಾದ್ಗೆ ಕರೆದುಕೊಂಡು ಹೋಗಲಾಗಿದೆ.
ಆದರೆ, ಈ ಕುರಿತು ಈಟಿವಿ ಭಾರತದೊಂದಿಗೆ ಮಾತನಾಡಿದ ಎಸ್ಪಿ ಅನುಪಮ್ ಅಗರವಾಲ್, ವಿಜಯಪುರದ ಬಿಎಲ್ಡಿಇ ಆಸ್ಪತ್ರೆಯಿಂದ ಹೆಚ್ಚಿನ ಚಿಕಿತ್ಸೆಗಾಗಿ ಸ್ಥಳಾಂತರ ಮಾಡಲಾಗಿದೆ. ಆದರೆ, ಭದ್ರತೆ ದೃಷ್ಟಿಯಿಂದ ಯಾವ ಕಡೆ ಸ್ಥಳಾಂತರ ಮಾಡಲಾಗಿದೆ ಎಂಬ ಮಾಹಿತಿ ಹೇಳಲು ಸಾಧ್ಯವಿಲ್ಲ ಎಂದಿದ್ದಾರೆ.
ನಿನ್ನೆ ತಡರಾತ್ರಿಯೇ ಪೂರ್ಣ ಭದ್ರತೆಯಲ್ಲಿ ಮಹಾದೇವ ಸಾಹುಕಾರ ಭೈರಗೊಂಡ ಅವರನ್ನು ವಿಜಯಪುರದಿಂದ ಸ್ಥಳಾಂತರ ಮಾಡಲಾಗಿದೆ. ಭೈರಗೊಂಡ ಮೇಲೆ ನಡೆದ ದಾಳಿಯಲ್ಲಿ ಮೂರು ಗುಂಡು ಅವರಿಗೆ ತಗುಲಿದ್ದವು.
ಅದನ್ನು ವಿಜಯಪುರದ ಬಿಎಲ್ಡಿಇ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿ ಹೊರ ತೆಗೆಯಲಾಗಿದೆ. ಬಿಪಿ ಹಾಗೂ ಸಕ್ಕರೆ ಕಾಯಿಲೆ ಇರುವ ಕಾರಣ ಕೃತಕ ಉಸಿರಾಟದಲ್ಲಿ ಮಹಾದೇವ ಸಾಹುಕಾರ ಭೈರಗೊಂಡ ಚಿಕಿತ್ಸೆ ಪಡೆಯುತ್ತಿದ್ದಾರೆ.