ETV Bharat / state

ಯತ್ನಾಳ್​ ಹೇಳಿದ್ರೆ ರಾಜೀನಾಮೆ ಕೊಡಬೇಕು ಅಂತ ಎಲ್ಲಿದೆ? : ಸಚಿವ ಬಿ.ಸಿ.ಪಾಟೀಲ್​ ಪ್ರಶ್ನೆ

ಮೀಸಲಾತಿ ಸಿಗದಿದ್ದರೆ ಸಮುದಾಯದ ಶಾಸಕರು, ಸಚಿವರು ರಾಜೀನಾಮೆ ನೀಡಬೇಕು ಎಂಬ ಯತ್ನಾಳ್​ ಹೇಳಿಕೆ ಸರಿಯಲ್ಲ, ಅದು ಯತ್ನಾಳ್​ ಅವರ ವೈಯಕ್ತಿಕ ಅಭಿಪ್ರಾಯ ಅಷ್ಟೇ, ರಾಜೀನಾಮೆ ಕೊಡುವವರು ಅದಕ್ಕೆ ಬದ್ಧರಾಗಿರಬೇಕಲ್ಲ ಎಂದು ಯತ್ನಾಳ್ ಹೇಳಿಕೆಗೆ ಸಚಿವ ಬಿ.ಸಿ.ಪಾಟೀಲ್​ ತಿರುಗೇಟು ನೀಡಿದ್ದಾರೆ.

author img

By

Published : Feb 22, 2021, 12:45 PM IST

BC Patil
ಬಿ.ಸಿ. ಪಾಟೀಲ್

ವಿಜಯಪುರ: ಶಾಸಕ ಬಸನಗೌಡ ಪಾಟೀಲ ಯತ್ನಾಳ್​ ಅವರಿಗೆ ಕೇಂದ್ರ ಬಿಜೆಪಿ ಹೈಕಮಾಂಡ್​ ದೆಹಲಿ ಬುಲಾವ್ ವಿಚಾರವಾಗಿ ಪ್ರತಿಕ್ರಿಯೆ ನೀಡಿರುವ ಕೃಷಿ ಸಚಿವ ಬಿ.ಸಿ. ಪಾಟೀಲ್​, ಅದನ್ನು ಯತ್ನಾಳ್​ ಅವರಿಗೆ ಕೇಳಬೇಕು, ನನಗೇನು ಗೊತ್ತಿಲ್ಲಾ ಎಂದರು.

ವಿಜಯಪುರ ತಾಲೂಕಿನ ಇಟ್ಟಂಗಿಹಾಳದಲ್ಲಿ ಮಾತನಾಡಿದ ಅವರು, ಅವರನ್ನು ದೆಹಲಿಗೆ ಕರೆದಿದ್ರೆ ಅಲ್ಲಿಗೆ ಹೋದ ಬಳಿಕ ಅವರೇ ಪ್ರೆಸ್ ಮೀಟ್ ಮಾಡಿ ಹೇಳಬೇಕು ಎಂದರು.

ಕೃಷಿ ಸಚಿವ ಬಿ.ಸಿ. ಪಾಟೀಲ್

ಮೀಸಲಾತಿ ವಿಚಾರದಲ್ಲಿ ಯತ್ನಾಳ್​ ಭಾಗವಸಿದ್ದ ವಿಚಾರವಾಗಿ ಖಾರವಾಗಿ ಪ್ರತಿಕ್ರಿಯಿಸಿದ ಅವರು, ಅವರು ಒಬ್ಬರೇ ಭಾಗವಹಿಸಿಲ್ಲ, ಬೇರೆ ಬೇರೆ ಸಮುದಾಯದವರೂ ಭಾಗವಹಿಸಿದ್ದಾರೆ. ಆದರೆ, ಒಂದು ವಿನಂತಿ ಮಾಡುತ್ತೇನೆ, ಸಿಎಂ ಸ್ಥಾನ ಗೌರವಯುತ ಸ್ಥಾನ, ಅದಕ್ಕೆ ಗೌರವ ಕೊಡಬೇಕು ಎಂದು ಪರೋಕ್ಷವಾಗಿ ಶಾಸಕ ಯತ್ನಾಳ್​ ಸಿಎಂ ವಿರುದ್ಧ ನೀಡುತ್ತಿರುವ ಹೇಳಿಕೆಗೆ ಆಕ್ಷೇಪ ವ್ಯಕ್ತಪಡಿಸಿದರು.

ಮೀಸಲಾತಿ ಸಿಗದಿದ್ದರೆ ಸಮುದಾಯದ ಶಾಸಕರು, ಸಚಿವರು ರಾಜೀನಾಮೆ ನೀಡಬೇಕು ಎಂಬ ಯತ್ನಾಳ್​ ಹೇಳಿಕೆ ಸರಿಯಲ್ಲ, ಅದು ಯತ್ನಾಳ್​ ಅವರ ವೈಯಕ್ತಿಕ ಅಭಿಪ್ರಾಯ ಅಷ್ಟೇ, ರಾಜೀನಾಮೆ ಕೊಡುವವರು ಅದಕ್ಕೆ ಬದ್ಧರಾಗಿರಬೇಕಲ್ಲ ಎಂದು ಯತ್ನಾಳ್​ಗೆ ಮರು ಪ್ರಶ್ನೆ ಮಾಡಿದರು.

ಯತ್ನಾಳ್​ ಹೇಳಿದ್ರೆ ರಾಜೀನಾಮೆ ಕೊಡಬೇಕು ಅಂತ ಎಲ್ಲಿದೆ? ಇದು ಜಾತ್ಯತೀತ ರಾಷ್ಟ್ರ, ಅವರವರ ಸಮುದಾಯಗಳಿಗೆ ಬೇಡಿಕೆ ಸಲ್ಲಿಸೋದು ಅವರ ಹಕ್ಕು ಅದನ್ನು ಕೇಳುವ ಅಧಿಕಾರ ಬೇರೆಯವರಿಗೆ ಇಲ್ಲ. ಹಾಗಂತ ಈ ರೀತಿ ಬೇರೆಯವರ ಮೇಲೆ ಒತ್ತಡ ಹಾಕೋದು ಸರಿಯಲ್ಲ ಎಂದರು.

ವಿಜಯಪುರ: ಶಾಸಕ ಬಸನಗೌಡ ಪಾಟೀಲ ಯತ್ನಾಳ್​ ಅವರಿಗೆ ಕೇಂದ್ರ ಬಿಜೆಪಿ ಹೈಕಮಾಂಡ್​ ದೆಹಲಿ ಬುಲಾವ್ ವಿಚಾರವಾಗಿ ಪ್ರತಿಕ್ರಿಯೆ ನೀಡಿರುವ ಕೃಷಿ ಸಚಿವ ಬಿ.ಸಿ. ಪಾಟೀಲ್​, ಅದನ್ನು ಯತ್ನಾಳ್​ ಅವರಿಗೆ ಕೇಳಬೇಕು, ನನಗೇನು ಗೊತ್ತಿಲ್ಲಾ ಎಂದರು.

ವಿಜಯಪುರ ತಾಲೂಕಿನ ಇಟ್ಟಂಗಿಹಾಳದಲ್ಲಿ ಮಾತನಾಡಿದ ಅವರು, ಅವರನ್ನು ದೆಹಲಿಗೆ ಕರೆದಿದ್ರೆ ಅಲ್ಲಿಗೆ ಹೋದ ಬಳಿಕ ಅವರೇ ಪ್ರೆಸ್ ಮೀಟ್ ಮಾಡಿ ಹೇಳಬೇಕು ಎಂದರು.

ಕೃಷಿ ಸಚಿವ ಬಿ.ಸಿ. ಪಾಟೀಲ್

ಮೀಸಲಾತಿ ವಿಚಾರದಲ್ಲಿ ಯತ್ನಾಳ್​ ಭಾಗವಸಿದ್ದ ವಿಚಾರವಾಗಿ ಖಾರವಾಗಿ ಪ್ರತಿಕ್ರಿಯಿಸಿದ ಅವರು, ಅವರು ಒಬ್ಬರೇ ಭಾಗವಹಿಸಿಲ್ಲ, ಬೇರೆ ಬೇರೆ ಸಮುದಾಯದವರೂ ಭಾಗವಹಿಸಿದ್ದಾರೆ. ಆದರೆ, ಒಂದು ವಿನಂತಿ ಮಾಡುತ್ತೇನೆ, ಸಿಎಂ ಸ್ಥಾನ ಗೌರವಯುತ ಸ್ಥಾನ, ಅದಕ್ಕೆ ಗೌರವ ಕೊಡಬೇಕು ಎಂದು ಪರೋಕ್ಷವಾಗಿ ಶಾಸಕ ಯತ್ನಾಳ್​ ಸಿಎಂ ವಿರುದ್ಧ ನೀಡುತ್ತಿರುವ ಹೇಳಿಕೆಗೆ ಆಕ್ಷೇಪ ವ್ಯಕ್ತಪಡಿಸಿದರು.

ಮೀಸಲಾತಿ ಸಿಗದಿದ್ದರೆ ಸಮುದಾಯದ ಶಾಸಕರು, ಸಚಿವರು ರಾಜೀನಾಮೆ ನೀಡಬೇಕು ಎಂಬ ಯತ್ನಾಳ್​ ಹೇಳಿಕೆ ಸರಿಯಲ್ಲ, ಅದು ಯತ್ನಾಳ್​ ಅವರ ವೈಯಕ್ತಿಕ ಅಭಿಪ್ರಾಯ ಅಷ್ಟೇ, ರಾಜೀನಾಮೆ ಕೊಡುವವರು ಅದಕ್ಕೆ ಬದ್ಧರಾಗಿರಬೇಕಲ್ಲ ಎಂದು ಯತ್ನಾಳ್​ಗೆ ಮರು ಪ್ರಶ್ನೆ ಮಾಡಿದರು.

ಯತ್ನಾಳ್​ ಹೇಳಿದ್ರೆ ರಾಜೀನಾಮೆ ಕೊಡಬೇಕು ಅಂತ ಎಲ್ಲಿದೆ? ಇದು ಜಾತ್ಯತೀತ ರಾಷ್ಟ್ರ, ಅವರವರ ಸಮುದಾಯಗಳಿಗೆ ಬೇಡಿಕೆ ಸಲ್ಲಿಸೋದು ಅವರ ಹಕ್ಕು ಅದನ್ನು ಕೇಳುವ ಅಧಿಕಾರ ಬೇರೆಯವರಿಗೆ ಇಲ್ಲ. ಹಾಗಂತ ಈ ರೀತಿ ಬೇರೆಯವರ ಮೇಲೆ ಒತ್ತಡ ಹಾಕೋದು ಸರಿಯಲ್ಲ ಎಂದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.