ವಿಜಯಪುರ: ಜಿಲ್ಲೆಯ ತಾಳಿಕೋಟಿಯ ಹೊರ ಭಾಗದಲ್ಲಿರುವ ಡೋಣಿ ನದಿಯ ಸೇತುವೆ ತಡೆ ಗೋಡೆಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಸವಾರರಿಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.

ತಾಳಿಕೋಟೆ ತಾಲೂಕಿನ ತಮದಡ್ಡಿ ಗ್ರಾಮದ ಗುರುನಾಥಪ್ಪ ಚೌಧರಿ (25), ಸಂಗನಗೌಡ ಬಿರಾದಾರ ( 26) ಮೃತ ಸವಾರರು. ಸ್ಥಳಕ್ಕೆ ತಾಳಿಕೋಟೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು.
ತಾಳಿಕೋಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.