ವಿಜಯಪುರ: ಕಬ್ಬು ಸಾಗಾಟ ಮಾಡುತ್ತಿದ್ದ ಲಾರಿಗೆ ಹಿಂಬದಿಯಿಂದ ಬೈಕ್ ಡಿಕ್ಕಿಯಾದ ಪರಿಣಾಮ ಸವಾರ ಸಾವನ್ನಪ್ಪಿದ್ದಾನೆ.
ಸಿಂದಗಿ ತಾಲೂಕಿನ ಹಂಚಿನಾಳ ಗ್ರಾಮದ ಎನ್ಎಚ್ 218 ರಲ್ಲಿ ಈ ಘಟನೆ ಜರುಗಿದೆ. ಹಂಚಿನಾಳ ಗ್ರಾಮದ ಪ್ರಭು ಬಡಿಗೇರ ಸಾವನ್ನಪ್ಪಿದ ಬೈಕ್ ಸವಾರ.
ಘಟನೆ ನಂತರ ಲಾರಿ ಚಾಲಕ ಪರಾರಿಯಾಗಿದ್ದಾನೆ. ಸಿಂದಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ಜರುಗಿದೆ.