ETV Bharat / state

ವಿಜಯಪುರಕ್ಕೆ ಆಗಮಿಸಿದ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರಗೆ ಭರ್ಜರಿ ಸ್ವಾಗತ

author img

By ETV Bharat Karnataka Team

Published : Dec 31, 2023, 11:35 AM IST

Updated : Dec 31, 2023, 2:06 PM IST

ಬಿಜೆಪಿ ರಾಜ್ಯಾಧ್ಯಕ್ಷರಾದ ಬಳಿಕ ಇದೇ ಮೊದಲ ಬಾರಿಗೆ ಶನಿವಾರ ವಿಜಯಪುರಕ್ಕೆ ಆಗಮಿಸಿದ ಬಿ.ವೈ.ವಿಜಯೇಂದ್ರ ಅವರನ್ನು ಪಕ್ಷದ ಕಾರ್ಯಕರ್ತರು ಅದ್ಧೂರಿಯಾಗಿ ಸ್ವಾಗತಿಸಿದ್ದಾರೆ.

By VIJAYENDRA
ಬಿವೈ ವಿಜಯೇಂದ್ರರಿಗೆ ಭರ್ಜರಿ ಸ್ವಾಗತ
ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ

ವಿಜಯಪುರ: ಬಿಜೆಪಿ ರಾಜ್ಯಾಧ್ಯಕ್ಷರಾದ ನಂತರ ಮೊದಲ ಬಾರಿಗೆ ಜಿಲ್ಲೆಗೆ ಆಗಮಿಸಿದ ಬಿ.ವೈ.ವಿಜಯೇಂದ್ರ ಅವರಿಗೆ ವಿಜಯಪುರದಲ್ಲಿ ಅದ್ಧೂರಿ ಸ್ವಾಗತ ಸಿಕ್ಕಿದೆ. ಬಿಜೆಪಿ ರೈತ ಮೋರ್ಚಾ ಅಧ್ಯಕ್ಷ ಎ.ಎಸ್​​.ಪಾಟೀಲ್​ ನಡಹಳ್ಳಿ, ಸಂಸದ ರಮೇಶ ಜಿಗಜಿಣಗಿ ಹಾಗು ಅರುಣ ಶಹಾಪುರ ಖುದ್ದಾಗಿ ಆಗಮಿಸಿ ವಿಜಯೇಂದ್ರರನ್ನು ಸ್ವಾಗತಿಸಿದರು.

ನಗರದ ಹೊರವಲಯಕ್ಕೆ ಆಗಮಿಸಿದ್ದ ರಾಜ್ಯಾಧ್ಯಕ್ಷರು, ವೀರ​ ಸಾವರ್ಕರ್​ ಮೂರ್ತಿಗೆ ಮಾಲಾರ್ಪಣೆ ಮಾಡಿದರು. ಬಳಿಕ ಪಕ್ಷದ ಜಿಲ್ಲಾ ಕಚೇರಿಗೆ ಆಗಮಿಸಿ ಮಾಧ್ಯಮಗೋಷ್ಠಿ ನಡೆಸಿ ಮಾತನಾಡುತ್ತಾ, ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಗುಡುಗಿದರು.

"ಕಾಂಗ್ರೆಸ್ ಸರ್ಕಾರ ಬಂದು ಏಳು ತಿಂಗಳು ಕಳೆದಿದೆ. ಅವರು ನೀಡಿದ ಭರವಸೆಗಳು ಜನರಲ್ಲಿ ವಿಶ್ವಾಸ ಮೂಡಿಸಿದ್ದರಿಂದ ಬಹುಮತ ಬಂದಿದೆ. ಆದರೆ ಇಂದು ಮತದಾರರು ಶಾಪ ಹಾಕುತ್ತಿದ್ದಾರೆ. ಸಿದ್ದರಾಮಯ್ಯ ಸರ್ಕಾರ ಆರು ತಿಂಗಳಲ್ಲೇ ಜನಪ್ರಿಯತೆ ಕಳೆದುಕೊಂಡಿದೆ" ಎಂದು ಟೀಕಿಸಿದರು.

"ರಾಜ್ಯದಲ್ಲಿ ಬರಗಾಲ ಇದೆ. ರೈತರಿಗೆ, ಕಬ್ಬು ಬೆಳೆಗಾರರಿಗೆ ಬೆಂಬಲ‌ ಬೆಲೆ ನೀಡಬೇಕು. ಆರ್ಥಿಕ ಶಕ್ತಿ ನೀಡಬೇಕು ಎಂದು ನಾವು ಸದನದಲ್ಲಿ ಒತ್ತಾಯಿಸಿದ್ದೇವೆ. ಆದರೆ ಸರ್ಕಾರ ಕಣ್ಣಿದ್ದೂ ಕುರುಡನಂತೆ, ಕಿವಿ ಇದ್ದೂ ಕಿವುಡನಂತೆ ವರ್ತಿಸುತ್ತಿದೆ. ಬರದ ವಿಚಾರದಲ್ಲಿ ಪ್ರಧಾನಿ ಭೇಟಿಗೆ ಸಿಎಂ ಹಾಗೂ ಇತರರು ಐಷಾರಾಮಿ ವಿಮಾನದಲ್ಲಿ ಹೋಗಿ ಬಂದಿದ್ದಾರೆ" ಎಂದು ಕುಟುಕಿದರು.

ಜಿಲ್ಲಾ ಉಸ್ತುವಾರಿ ಸಚಿವರು ಜಿಲ್ಲಾ ಪ್ರವಾಸ ಮಾಡಿ, ಬರಗಾಲ ಕುರಿತು ಯಾವುದೇ ಸಭೆ ಮಾಡುತ್ತಿಲ್ಲ. ಕಂದಾಯ ಸಚಿವರು ಎಸಿ ರೂಂನಲ್ಲಿ ಕುಳಿತು ಸಭೆ ಮಾಡುತ್ತಿದ್ದಾರೆ ಎಂದರು. ರಾಜ್ಯದ ಹಣಕಾಸು ಪರಿಸ್ಥಿತಿ ಹದಗೆಟ್ಟಿದೆ. ಹಣಕಾಸು ಹೊಂದಿಸಲು 14 ಬಾರಿ ಬಜೆಟ್ ಮಂಡಸಿರುವ ಸಿಎಂ ವಿಲವಿಲ ಒದ್ದಾಡುತ್ತಿದಾರೆ. ಇವರಿಗೆ ಚುನಾವಣೆ ವೇಳೆ ಕೊಟ್ಟ ಗ್ಯಾರೆಂಟಿಗಳನ್ನು ನಿಭಾಯಿಸಲು ಆಗುತ್ತಿಲ್ಲ ಎಂದು ಹೇಳಿದರು.

₹40 ಸಾವಿರ ಕೋಟಿ ಹಗರಣ ಆರೋಪ ವಿಚಾರ: ಬಿ.ವೈ.ಯಡಿಯೂರಪ್ಪನವರು ಸಿಎಂ ಆಗಿದ್ದಾಗ ಕೊರೊನಾ ಸಂದರ್ಭದಲ್ಲಿ 40 ಸಾವಿರ ಕೋಟಿ ರೂಪಾಯಿಯ ಹಗರಣ ನಡೆದಿದೆ ಎಂಬ ಯತ್ನಾಳ್ ಗಂಭೀರ ಆರೋಪಕ್ಕೆ,​ ಈ ಆರೋಪದಲ್ಲಿ ಸತ್ಯಾಂಶವಿದ್ದರೆ ಪ್ರತಿಕ್ರಿಯೆ ಬರುತ್ತದೆ. ತಮ್ಮ ತಂದೆಯ ವಿರುದ್ಧ ಮಾಡಿರುವ ಆರೋಪ ಹುಡುಗಾಟದ್ದು ಎಂದರು. ಇದೇ ವೇಳೆ, ನಾನು ರಾಜ್ಯಾಧ್ಯಕ್ಷನಾಗಿದ್ದು ನಮ್ಮ ತಂದೆಯ ಕೃಪೆಯಿಂದಲ್ಲ. ಪ್ರಧಾನಿ ಮೋದಿ, ಜೆ.ಪಿ.ನಡ್ಡಾ, ಸೇರಿದಂತೆ ರಾಷ್ಟ್ರೀಯ ನಾಯಕರು ಅಧ್ಯಕ್ಷನನ್ನಾಗಿ ಮಾಡಿದ್ದಾರೆ ಎಂದರು.

ಹೊಸ ವರ್ಷದ ಹೊಸ್ತಿಲಲ್ಲಿ ನಾವಿದ್ದೇವೆ. ಎಲ್ಲ ಹಳೆ ವಿಚಾರಗಳನ್ನು ಬದಿಗಿಟ್ಟು ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ನಾನು ಮುನ್ನಡೆಯುತ್ತೇನೆ ಎಂದು ಭರವಸೆ ನೀಡಿದರು.

ರಾಜ್ಯ ರೈತ ಮೋರ್ಚಾ ಅಧ್ಯಕ್ಷ ಎ.ಎಸ್​.ಪಾಟೀಲ್​ ನಡಹಳ್ಳಿ ಮಾತನಾಡಿ, "ನಾವು ಹಿರಿಯರ ಮಾರ್ಗದರ್ಶನದಲ್ಲಿ ಮುಂದಿನ ಲೋಕಸಭಾ ಚುನಾವಣೆಯಲ್ಲಿ 28ಕ್ಕೆ 28 ಸ್ಥಾನಗಳನ್ನು ಗೆಲ್ಲುತ್ತೇವೆ" ಎಂಬ ವಿಶ್ವಾಸ ವ್ಯಕ್ತಪಡಿಸಿದರು.

ಕಾರ್ಯಕ್ರಮದ ಬಳಿಕ ವಿಜಯೇಂದ್ರ ಜ್ಞಾನ ಯೋಗಾಶ್ರಮದಲ್ಲಿ ಗುರುನಮನ ಕಾರ್ಯಕ್ರಮದ ಪ್ರಯುಕ್ತ ಆಯೋಜಿಸಿದ್ದ ಶಿಕ್ಷಣ ಹಾಗೂ ವಿಜ್ಞಾನ ಗೋಷ್ಠಿಯಲ್ಲಿ ಭಾಗಿಯಾದರು. ಮಾಜಿ ಸಿಎಂ ಜಗದೀಶ್‌ ಶೆಟ್ಟರ್​ ಗೋಷ್ಠಿಯಲ್ಲಿ ಪಾಲ್ಗೊಂಡಿದ್ದರು.

ಇದನ್ನೂ ಓದಿ: 'ನನ್ನ ತಟ್ಟೆ ಕ್ಲೀನ್ ಇದೆ, ಮೊದಲು ಬಿಜೆಪಿಯವರು ತಮ್ಮ ತಟ್ಟೆ ನೋಡಿಕೊಳ್ಳಲಿ'

ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ

ವಿಜಯಪುರ: ಬಿಜೆಪಿ ರಾಜ್ಯಾಧ್ಯಕ್ಷರಾದ ನಂತರ ಮೊದಲ ಬಾರಿಗೆ ಜಿಲ್ಲೆಗೆ ಆಗಮಿಸಿದ ಬಿ.ವೈ.ವಿಜಯೇಂದ್ರ ಅವರಿಗೆ ವಿಜಯಪುರದಲ್ಲಿ ಅದ್ಧೂರಿ ಸ್ವಾಗತ ಸಿಕ್ಕಿದೆ. ಬಿಜೆಪಿ ರೈತ ಮೋರ್ಚಾ ಅಧ್ಯಕ್ಷ ಎ.ಎಸ್​​.ಪಾಟೀಲ್​ ನಡಹಳ್ಳಿ, ಸಂಸದ ರಮೇಶ ಜಿಗಜಿಣಗಿ ಹಾಗು ಅರುಣ ಶಹಾಪುರ ಖುದ್ದಾಗಿ ಆಗಮಿಸಿ ವಿಜಯೇಂದ್ರರನ್ನು ಸ್ವಾಗತಿಸಿದರು.

ನಗರದ ಹೊರವಲಯಕ್ಕೆ ಆಗಮಿಸಿದ್ದ ರಾಜ್ಯಾಧ್ಯಕ್ಷರು, ವೀರ​ ಸಾವರ್ಕರ್​ ಮೂರ್ತಿಗೆ ಮಾಲಾರ್ಪಣೆ ಮಾಡಿದರು. ಬಳಿಕ ಪಕ್ಷದ ಜಿಲ್ಲಾ ಕಚೇರಿಗೆ ಆಗಮಿಸಿ ಮಾಧ್ಯಮಗೋಷ್ಠಿ ನಡೆಸಿ ಮಾತನಾಡುತ್ತಾ, ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಗುಡುಗಿದರು.

"ಕಾಂಗ್ರೆಸ್ ಸರ್ಕಾರ ಬಂದು ಏಳು ತಿಂಗಳು ಕಳೆದಿದೆ. ಅವರು ನೀಡಿದ ಭರವಸೆಗಳು ಜನರಲ್ಲಿ ವಿಶ್ವಾಸ ಮೂಡಿಸಿದ್ದರಿಂದ ಬಹುಮತ ಬಂದಿದೆ. ಆದರೆ ಇಂದು ಮತದಾರರು ಶಾಪ ಹಾಕುತ್ತಿದ್ದಾರೆ. ಸಿದ್ದರಾಮಯ್ಯ ಸರ್ಕಾರ ಆರು ತಿಂಗಳಲ್ಲೇ ಜನಪ್ರಿಯತೆ ಕಳೆದುಕೊಂಡಿದೆ" ಎಂದು ಟೀಕಿಸಿದರು.

"ರಾಜ್ಯದಲ್ಲಿ ಬರಗಾಲ ಇದೆ. ರೈತರಿಗೆ, ಕಬ್ಬು ಬೆಳೆಗಾರರಿಗೆ ಬೆಂಬಲ‌ ಬೆಲೆ ನೀಡಬೇಕು. ಆರ್ಥಿಕ ಶಕ್ತಿ ನೀಡಬೇಕು ಎಂದು ನಾವು ಸದನದಲ್ಲಿ ಒತ್ತಾಯಿಸಿದ್ದೇವೆ. ಆದರೆ ಸರ್ಕಾರ ಕಣ್ಣಿದ್ದೂ ಕುರುಡನಂತೆ, ಕಿವಿ ಇದ್ದೂ ಕಿವುಡನಂತೆ ವರ್ತಿಸುತ್ತಿದೆ. ಬರದ ವಿಚಾರದಲ್ಲಿ ಪ್ರಧಾನಿ ಭೇಟಿಗೆ ಸಿಎಂ ಹಾಗೂ ಇತರರು ಐಷಾರಾಮಿ ವಿಮಾನದಲ್ಲಿ ಹೋಗಿ ಬಂದಿದ್ದಾರೆ" ಎಂದು ಕುಟುಕಿದರು.

ಜಿಲ್ಲಾ ಉಸ್ತುವಾರಿ ಸಚಿವರು ಜಿಲ್ಲಾ ಪ್ರವಾಸ ಮಾಡಿ, ಬರಗಾಲ ಕುರಿತು ಯಾವುದೇ ಸಭೆ ಮಾಡುತ್ತಿಲ್ಲ. ಕಂದಾಯ ಸಚಿವರು ಎಸಿ ರೂಂನಲ್ಲಿ ಕುಳಿತು ಸಭೆ ಮಾಡುತ್ತಿದ್ದಾರೆ ಎಂದರು. ರಾಜ್ಯದ ಹಣಕಾಸು ಪರಿಸ್ಥಿತಿ ಹದಗೆಟ್ಟಿದೆ. ಹಣಕಾಸು ಹೊಂದಿಸಲು 14 ಬಾರಿ ಬಜೆಟ್ ಮಂಡಸಿರುವ ಸಿಎಂ ವಿಲವಿಲ ಒದ್ದಾಡುತ್ತಿದಾರೆ. ಇವರಿಗೆ ಚುನಾವಣೆ ವೇಳೆ ಕೊಟ್ಟ ಗ್ಯಾರೆಂಟಿಗಳನ್ನು ನಿಭಾಯಿಸಲು ಆಗುತ್ತಿಲ್ಲ ಎಂದು ಹೇಳಿದರು.

₹40 ಸಾವಿರ ಕೋಟಿ ಹಗರಣ ಆರೋಪ ವಿಚಾರ: ಬಿ.ವೈ.ಯಡಿಯೂರಪ್ಪನವರು ಸಿಎಂ ಆಗಿದ್ದಾಗ ಕೊರೊನಾ ಸಂದರ್ಭದಲ್ಲಿ 40 ಸಾವಿರ ಕೋಟಿ ರೂಪಾಯಿಯ ಹಗರಣ ನಡೆದಿದೆ ಎಂಬ ಯತ್ನಾಳ್ ಗಂಭೀರ ಆರೋಪಕ್ಕೆ,​ ಈ ಆರೋಪದಲ್ಲಿ ಸತ್ಯಾಂಶವಿದ್ದರೆ ಪ್ರತಿಕ್ರಿಯೆ ಬರುತ್ತದೆ. ತಮ್ಮ ತಂದೆಯ ವಿರುದ್ಧ ಮಾಡಿರುವ ಆರೋಪ ಹುಡುಗಾಟದ್ದು ಎಂದರು. ಇದೇ ವೇಳೆ, ನಾನು ರಾಜ್ಯಾಧ್ಯಕ್ಷನಾಗಿದ್ದು ನಮ್ಮ ತಂದೆಯ ಕೃಪೆಯಿಂದಲ್ಲ. ಪ್ರಧಾನಿ ಮೋದಿ, ಜೆ.ಪಿ.ನಡ್ಡಾ, ಸೇರಿದಂತೆ ರಾಷ್ಟ್ರೀಯ ನಾಯಕರು ಅಧ್ಯಕ್ಷನನ್ನಾಗಿ ಮಾಡಿದ್ದಾರೆ ಎಂದರು.

ಹೊಸ ವರ್ಷದ ಹೊಸ್ತಿಲಲ್ಲಿ ನಾವಿದ್ದೇವೆ. ಎಲ್ಲ ಹಳೆ ವಿಚಾರಗಳನ್ನು ಬದಿಗಿಟ್ಟು ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ನಾನು ಮುನ್ನಡೆಯುತ್ತೇನೆ ಎಂದು ಭರವಸೆ ನೀಡಿದರು.

ರಾಜ್ಯ ರೈತ ಮೋರ್ಚಾ ಅಧ್ಯಕ್ಷ ಎ.ಎಸ್​.ಪಾಟೀಲ್​ ನಡಹಳ್ಳಿ ಮಾತನಾಡಿ, "ನಾವು ಹಿರಿಯರ ಮಾರ್ಗದರ್ಶನದಲ್ಲಿ ಮುಂದಿನ ಲೋಕಸಭಾ ಚುನಾವಣೆಯಲ್ಲಿ 28ಕ್ಕೆ 28 ಸ್ಥಾನಗಳನ್ನು ಗೆಲ್ಲುತ್ತೇವೆ" ಎಂಬ ವಿಶ್ವಾಸ ವ್ಯಕ್ತಪಡಿಸಿದರು.

ಕಾರ್ಯಕ್ರಮದ ಬಳಿಕ ವಿಜಯೇಂದ್ರ ಜ್ಞಾನ ಯೋಗಾಶ್ರಮದಲ್ಲಿ ಗುರುನಮನ ಕಾರ್ಯಕ್ರಮದ ಪ್ರಯುಕ್ತ ಆಯೋಜಿಸಿದ್ದ ಶಿಕ್ಷಣ ಹಾಗೂ ವಿಜ್ಞಾನ ಗೋಷ್ಠಿಯಲ್ಲಿ ಭಾಗಿಯಾದರು. ಮಾಜಿ ಸಿಎಂ ಜಗದೀಶ್‌ ಶೆಟ್ಟರ್​ ಗೋಷ್ಠಿಯಲ್ಲಿ ಪಾಲ್ಗೊಂಡಿದ್ದರು.

ಇದನ್ನೂ ಓದಿ: 'ನನ್ನ ತಟ್ಟೆ ಕ್ಲೀನ್ ಇದೆ, ಮೊದಲು ಬಿಜೆಪಿಯವರು ತಮ್ಮ ತಟ್ಟೆ ನೋಡಿಕೊಳ್ಳಲಿ'

Last Updated : Dec 31, 2023, 2:06 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.