ETV Bharat / state

ಮತಪೆಟ್ಟಿಗೆ ಸಾಗಿಸುತ್ತಿದ್ದ ಬಸ್​ಗೆ ಟಿಪ್ಪರ್​ ಡಿಕ್ಕಿ: ಹಲವರಿಗೆ ಗಾಯ

author img

By

Published : Dec 23, 2020, 11:52 AM IST

ಗ್ರಾಮ ಪಂಚಾಯತ್​ ಚುನಾವಣೆಯ ಮತದಾನ ಪ್ರಕ್ರಿಯೆ ಮುಗಿಸಿ ಮತಪೆಟ್ಟಿಗೆ ಡಿ- ಮಸ್ಟರಿಂಗ್ ಕೇಂದ್ರಕ್ಕೆ ಕೊಂಡೊಯ್ಯುತ್ತಿದ್ದ ವೇಳೆ ಸಾರಿಗೆ ಇಲಾಖೆ ಬಸ್​ಗೆ ಟಿಪ್ಪರ್ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ಹಲವರು ಗಾಯಗೊಂಡಿದ್ದಾರೆ.

ಮತಪೆಟ್ಟಿಗೆ ಸಾಗಿಸುತ್ತಿದ್ದ ಬಸ್​ ಅಪಘಾತ
ಮತಪೆಟ್ಟಿಗೆ ಸಾಗಿಸುತ್ತಿದ್ದ ಬಸ್​ ಅಪಘಾತ

ಮುದ್ದೇಬಿಹಾಳ: ಗ್ರಾ.ಪಂ ಚುನಾವಣೆಯ ಮತದಾನ ಮುಗಿಸಿಕೊಂಡು ಮತಪೆಟ್ಟಿಗೆ ಡಿ- ಮಸ್ಟರಿಂಗ್ ಕೇಂದ್ರಕ್ಕೆ ತರುತ್ತಿದ್ದ ವೇಳೆ ತಾಲೂಕಿನಲ್ಲಿ ಸಾರಿಗೆ ಬಸ್​ಗೆ ಟಿಪ್ಪರ್ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ಗಾಯಗೊಂಡವರನ್ನು ಭೇಟಿ ಮಾಡಿದ ಜಿಲ್ಲಾಡಳಿತದ ಅಧಿಕಾರಿಗಳು ಆರೋಗ್ಯ ವಿಚಾರಿಸಿದ್ದಾರೆ‌.

ಹೆಚ್ಚುವರಿ‌‌ ಜಿಲ್ಲಾಧಿಕಾರಿ ಡಾ.ಔದ್ರಾಮ, ಹೆಚ್ಚುವರಿ ಎಸ್ಪಿ ಡಾ.ರಾಮ್ ಅರಸಿದ್ದಿ, ಡಿವೈಎಸ್ಪಿ ಈ ಶಾಂತವಿರ, ಉಪವಿಭಾಗಾಧಿಕಾರಿ ರಾಮಚಂದ್ರ ಗಡಾದೆ, ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ಔದ್ರಾಮ, ತಹಶೀಲ್ದಾರ್ ಎಂ.ಎಸ್.ಅರಕೇರಿ, ಗ್ರಾಪಂ ಚುನಾವಣೆಯ ಎಂಸಿಸಿ ನೋಡಲ್ ಅಧಿಕಾರಿಯೂ ಆಗಿರುವ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಪ್ರಾಂಶುಪಾಲ ಡಾ. ಎನ್.ಬಿ.ಹೊಸಮನಿ, ಸಿಪಿಐ ಆನಂದ ವಾಘ್ಮೋಡೆ ಗಾಯಾಳುಗಳ ಆರೋಗ್ಯ ವಿಚಾರಿಸಿದರು.

ಮತಪೆಟ್ಟಿಗೆ ಸಾಗಿಸುತ್ತಿದ್ದ ಬಸ್​ ಅಪಘಾತ

ಬಸ್ಸಿನ ಚಾಲಕ ಹುಲಗಪ್ಪ ಬಿರಾದಾರ ತನ್ನ ಸೀಟಲ್ಲಿ ಸಿಲುಕಿಕೊಂಡು ಹೊರಬರಲಾಗದೆ ಒದ್ದಾಡುತ್ತಿದ್ದರು. ತಕ್ಷಣ ನೆರವಿಗೆ ಧಾವಿಸಿದ ಪಿಎಸ್​ಐ ಮಲ್ಲಪ್ಪ ಮಡ್ಡಿ, ಅಗ್ನಿಶಾಮಕ ಠಾಣೆಯ ಪ್ರಮೋದ ಬಿ.ಎಸ್. ನೇತೃತ್ವದ ಪೊಲೀಸರು, ಅಗ್ನಿಶಾಮಕ ಠಾಣೆಯ ಸಿಬ್ಬಂದಿ, ಸಮೀಪದ ಗ್ರಾಮಸ್ಥರು ಹರಸಾಹಸಪಟ್ಟು ಬಸ್ ಚಾಲಕನನ್ನು ಹೊರತೆಗೆದಿದ್ದಾರೆ.

ಟಿಪ್ಪರ್‌ ಕ್ಲೀನರ್ ರಾಯಚೂರು ಜಿಲ್ಲೆಯ ಸಿಂಧನೂರು ತಾಲೂಕಿನ ವೆಂಕಟೇಶ್ವರ ಕ್ಯಾಂಪ್‌ನ ಗೋವಿಂದಗೌಡ ಮೇಟಿಗೌಡ್ರ ಎಂಬಾತನ ಮುಖ, ತಲೆಗೆ ಗಂಭೀರ ಗಾಯವಾಗಿದೆ. ಸದ್ಯ ಇವರಿಬ್ಬರನ್ನೂ ಹೆಚ್ಚಿನ ಚಿಕಿತ್ಸೆಗೆ ಬಾಗಲಕೋಟೆ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.

ಮುದ್ದೇಬಿಹಾಳ: ಗ್ರಾ.ಪಂ ಚುನಾವಣೆಯ ಮತದಾನ ಮುಗಿಸಿಕೊಂಡು ಮತಪೆಟ್ಟಿಗೆ ಡಿ- ಮಸ್ಟರಿಂಗ್ ಕೇಂದ್ರಕ್ಕೆ ತರುತ್ತಿದ್ದ ವೇಳೆ ತಾಲೂಕಿನಲ್ಲಿ ಸಾರಿಗೆ ಬಸ್​ಗೆ ಟಿಪ್ಪರ್ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ಗಾಯಗೊಂಡವರನ್ನು ಭೇಟಿ ಮಾಡಿದ ಜಿಲ್ಲಾಡಳಿತದ ಅಧಿಕಾರಿಗಳು ಆರೋಗ್ಯ ವಿಚಾರಿಸಿದ್ದಾರೆ‌.

ಹೆಚ್ಚುವರಿ‌‌ ಜಿಲ್ಲಾಧಿಕಾರಿ ಡಾ.ಔದ್ರಾಮ, ಹೆಚ್ಚುವರಿ ಎಸ್ಪಿ ಡಾ.ರಾಮ್ ಅರಸಿದ್ದಿ, ಡಿವೈಎಸ್ಪಿ ಈ ಶಾಂತವಿರ, ಉಪವಿಭಾಗಾಧಿಕಾರಿ ರಾಮಚಂದ್ರ ಗಡಾದೆ, ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ಔದ್ರಾಮ, ತಹಶೀಲ್ದಾರ್ ಎಂ.ಎಸ್.ಅರಕೇರಿ, ಗ್ರಾಪಂ ಚುನಾವಣೆಯ ಎಂಸಿಸಿ ನೋಡಲ್ ಅಧಿಕಾರಿಯೂ ಆಗಿರುವ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಪ್ರಾಂಶುಪಾಲ ಡಾ. ಎನ್.ಬಿ.ಹೊಸಮನಿ, ಸಿಪಿಐ ಆನಂದ ವಾಘ್ಮೋಡೆ ಗಾಯಾಳುಗಳ ಆರೋಗ್ಯ ವಿಚಾರಿಸಿದರು.

ಮತಪೆಟ್ಟಿಗೆ ಸಾಗಿಸುತ್ತಿದ್ದ ಬಸ್​ ಅಪಘಾತ

ಬಸ್ಸಿನ ಚಾಲಕ ಹುಲಗಪ್ಪ ಬಿರಾದಾರ ತನ್ನ ಸೀಟಲ್ಲಿ ಸಿಲುಕಿಕೊಂಡು ಹೊರಬರಲಾಗದೆ ಒದ್ದಾಡುತ್ತಿದ್ದರು. ತಕ್ಷಣ ನೆರವಿಗೆ ಧಾವಿಸಿದ ಪಿಎಸ್​ಐ ಮಲ್ಲಪ್ಪ ಮಡ್ಡಿ, ಅಗ್ನಿಶಾಮಕ ಠಾಣೆಯ ಪ್ರಮೋದ ಬಿ.ಎಸ್. ನೇತೃತ್ವದ ಪೊಲೀಸರು, ಅಗ್ನಿಶಾಮಕ ಠಾಣೆಯ ಸಿಬ್ಬಂದಿ, ಸಮೀಪದ ಗ್ರಾಮಸ್ಥರು ಹರಸಾಹಸಪಟ್ಟು ಬಸ್ ಚಾಲಕನನ್ನು ಹೊರತೆಗೆದಿದ್ದಾರೆ.

ಟಿಪ್ಪರ್‌ ಕ್ಲೀನರ್ ರಾಯಚೂರು ಜಿಲ್ಲೆಯ ಸಿಂಧನೂರು ತಾಲೂಕಿನ ವೆಂಕಟೇಶ್ವರ ಕ್ಯಾಂಪ್‌ನ ಗೋವಿಂದಗೌಡ ಮೇಟಿಗೌಡ್ರ ಎಂಬಾತನ ಮುಖ, ತಲೆಗೆ ಗಂಭೀರ ಗಾಯವಾಗಿದೆ. ಸದ್ಯ ಇವರಿಬ್ಬರನ್ನೂ ಹೆಚ್ಚಿನ ಚಿಕಿತ್ಸೆಗೆ ಬಾಗಲಕೋಟೆ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.