ETV Bharat / state

ಸಿಜೇರಿಯನ್ ಒಳಗಾದ ಬಾಣಂತಿಯರ ಹೊಲಿಗೆ ಬಿಚ್ಚುತ್ತಿರುವ ಪ್ರಕರಣ.. 2ನೇ ದಿನವೂ ಮುಂದುವರಿದ ವಿಚಾರಣೆ

author img

By

Published : May 17, 2022, 7:46 PM IST

ಜಿಲ್ಲಾಧಿಕಾರಿ ನೇಮಿಸಿದ್ದ ತಂಡ ಇಂದು ಕೂಡ ವಿಜಯಪುರ ಜಿಲ್ಲಾ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ವಿಚಾರಣೆ ಮುಂದುವರೆಸಿದೆ. ನಾಳೆ ಜಿಲ್ಲಾಧಿಕಾರಿಗಳಿಗೆ ವಿಚಾರಣೆಯ ವರದಿಯನ್ನು ತಂಡ ನೀಡಲಿದ್ದು, ಜಿಲ್ಲಾಡಳಿತ ಈ ಕುರಿತು ಮುಂದಿನ ಕ್ರಮ ಕೈಗೊಳ್ಳಲಿದೆ.

c section
ಎರಡನೇ ದಿನವೂ ಮುಂದುವರೆದ ವಿಚಾರಣೆ

ವಿಜಯಪುರ: ಜಿಲ್ಲಾ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಸಿಜೇರಿಯನ್ ಡೆಲಿವರಿ ಆದ‌ ಬಾಣಂತಿಯರಿಗೆ ಶಸ್ತ್ರಚಿಕಿತ್ಸೆಯ ನಂತರ ಮಾಡಿದ ಹೊಲಿಗೆಗಳು ಬಿಚ್ಚಿರೋ ಘಟನೆಗಳ ಬಗ್ಗೆ ಮಾಧ್ಯಮಗಳಲ್ಲಿ ವರದಿಯಾಗಿತ್ತು. ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿರುವ ಜಿಲ್ಲಾಧಿಕಾರಿ ವಿಜಯ ಮಹಾಂತೇಶ ದಾನಮ್ಮನವರ ಅವರು ಉಪವಿಭಾಗಾಧಿಕಾರಿ ನೇತೃತ್ವದಲ್ಲಿ ತಂಡ ರಚನೆ ಮಾಡಿ ಆದೇಶ ಹೊರಡಿಸಿದ್ದರು.

ಎಸಿ, ಡಿಎಚ್​ಒ ಹಾಗೂ ಆರ್​ಸಿಎಚ್ಒ ಅಧಿಕಾರಿಗಳನ್ನ ಒಳಗೊಂಡ ತಂಡ ನಿನ್ನೆ ಆಸ್ಪತ್ರೆಗೆ ಭೇಟಿ ನೀಡಿ ವೈದ್ಯರನ್ನು ವಿಚಾರಣೆ ಮಾಡಿತ್ತು, ಈ ತನಿಖೆ ಇಂದಿಗೂ ಮುಂದುವರೆದಿದೆ. ಎಸಿ ಬಲರಾಮ ಲಮಾಣಿ ನೇತೃತ್ವದ ತಂಡದಿಂದ ಇಂದು ಕೂಡ ವೈದ್ಯರು, ನರ್ಸ್​ ಹಾಗೂ ಬಾಣಂತಿಯರ ವಿಚಾರಣೆ ಮಾಡಲಾಯಿತು. ನಾಳೆ ಈ ತಂಡ ಸಂಪೂರ್ಣ ವರದಿಯನ್ನು ಜಿಲ್ಲಾಧಿಕಾರಿಗಳಿಗೆ ನೀಡಲಿದೆ.

ವರದಿಯ ನಂತರ ಜಿಲ್ಲಾಡಳಿತ ಸಮಸ್ಯೆಗೆ ಕಾರಣಗಳನ್ನು ತಿಳಿದು ಕೊಳ್ಳಲಿದೆ. ಸದ್ಯದ ಮಟ್ಟಿಗೆ ಆಸ್ಪತ್ರೆಯ 100 ಹಾಸಿಗೆಗಳು ಬರ್ತಿಯಾಗಿದೆ. ಹೆಚ್ಚು ಒತ್ತಡ ಇದ್ದ ಕಾರಣ ಈ ರೀತಿ ಸಂಭವಿಸಿದೆ ಎಂದು ಹೇಳಲಾಗುತ್ತಿದೆ. ತಜ್ಞರ ವರದಿಯ ನಂತರ ಪ್ರಕರಣದ ವಿಚಾರ ತಿಳಿದು ಬರಲಿದೆ.

ಇದನ್ನೂ ಓದಿ: ಸಿಸೇರಿಯನ್​ಗೆ ಒಳಗಾದ ಬಾಣಂತಿಯರ ನರಳಾಟ.. ಚುರುಕುಗೊಂಡ ತನಿಖೆ

ವಿಜಯಪುರ: ಜಿಲ್ಲಾ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಸಿಜೇರಿಯನ್ ಡೆಲಿವರಿ ಆದ‌ ಬಾಣಂತಿಯರಿಗೆ ಶಸ್ತ್ರಚಿಕಿತ್ಸೆಯ ನಂತರ ಮಾಡಿದ ಹೊಲಿಗೆಗಳು ಬಿಚ್ಚಿರೋ ಘಟನೆಗಳ ಬಗ್ಗೆ ಮಾಧ್ಯಮಗಳಲ್ಲಿ ವರದಿಯಾಗಿತ್ತು. ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿರುವ ಜಿಲ್ಲಾಧಿಕಾರಿ ವಿಜಯ ಮಹಾಂತೇಶ ದಾನಮ್ಮನವರ ಅವರು ಉಪವಿಭಾಗಾಧಿಕಾರಿ ನೇತೃತ್ವದಲ್ಲಿ ತಂಡ ರಚನೆ ಮಾಡಿ ಆದೇಶ ಹೊರಡಿಸಿದ್ದರು.

ಎಸಿ, ಡಿಎಚ್​ಒ ಹಾಗೂ ಆರ್​ಸಿಎಚ್ಒ ಅಧಿಕಾರಿಗಳನ್ನ ಒಳಗೊಂಡ ತಂಡ ನಿನ್ನೆ ಆಸ್ಪತ್ರೆಗೆ ಭೇಟಿ ನೀಡಿ ವೈದ್ಯರನ್ನು ವಿಚಾರಣೆ ಮಾಡಿತ್ತು, ಈ ತನಿಖೆ ಇಂದಿಗೂ ಮುಂದುವರೆದಿದೆ. ಎಸಿ ಬಲರಾಮ ಲಮಾಣಿ ನೇತೃತ್ವದ ತಂಡದಿಂದ ಇಂದು ಕೂಡ ವೈದ್ಯರು, ನರ್ಸ್​ ಹಾಗೂ ಬಾಣಂತಿಯರ ವಿಚಾರಣೆ ಮಾಡಲಾಯಿತು. ನಾಳೆ ಈ ತಂಡ ಸಂಪೂರ್ಣ ವರದಿಯನ್ನು ಜಿಲ್ಲಾಧಿಕಾರಿಗಳಿಗೆ ನೀಡಲಿದೆ.

ವರದಿಯ ನಂತರ ಜಿಲ್ಲಾಡಳಿತ ಸಮಸ್ಯೆಗೆ ಕಾರಣಗಳನ್ನು ತಿಳಿದು ಕೊಳ್ಳಲಿದೆ. ಸದ್ಯದ ಮಟ್ಟಿಗೆ ಆಸ್ಪತ್ರೆಯ 100 ಹಾಸಿಗೆಗಳು ಬರ್ತಿಯಾಗಿದೆ. ಹೆಚ್ಚು ಒತ್ತಡ ಇದ್ದ ಕಾರಣ ಈ ರೀತಿ ಸಂಭವಿಸಿದೆ ಎಂದು ಹೇಳಲಾಗುತ್ತಿದೆ. ತಜ್ಞರ ವರದಿಯ ನಂತರ ಪ್ರಕರಣದ ವಿಚಾರ ತಿಳಿದು ಬರಲಿದೆ.

ಇದನ್ನೂ ಓದಿ: ಸಿಸೇರಿಯನ್​ಗೆ ಒಳಗಾದ ಬಾಣಂತಿಯರ ನರಳಾಟ.. ಚುರುಕುಗೊಂಡ ತನಿಖೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.