ETV Bharat / state

ವಿಜಯಪುರ ಬಿಜೆಪಿ ಜಿಲ್ಲಾಧ್ಯಕ್ಷರೊಂದಿಗೆ ಸಿಎಂ ಸಂವಾದ : ದ್ರಾಕ್ಷಿ, ದಾಳಿಂಬೆ ಬೆಳೆಗಾರರ ನೆರವಿಗೆ ಮನವಿ - ಮುಖ್ಯ ಬಿ.ಎಸ್​ ಯಡಿಯೂರಪ್ಪ ವಿಡಿಯೋ ಸಂವಾದ

ಕಳೆದ ವಾರ ಸಿಎಂ ಬಿ.ಎಸ್. ಯಡಿಯೂರಪ್ಪ ನಮ್ಮೊಂದಿಗೆ ವಿಡಿಯೋ ಸಂವಾದ ನಡೆಸಿದ್ದು, ಈ ವೇಳೆ, ಜಿಲ್ಲೆಯ ದ್ರಾಕ್ಷಿ, ದಾಳಿಂಬೆ ಬೆಳೆಗಾರರ ಸಂಕಷ್ಟವನ್ನು ಸಿಎಂ ಗಮನಕ್ಕೆ ತಂದು ನೆರವು ನೀಡುವಂತೆ ಮನವಿ ಮಾಡಿದ್ದೇನೆ ಎಂದು ವಿಜಯಪುರ ಬಿಜೆಪಿ ಜಿಲ್ಲಾಧ್ಯಕ್ಷ ಆರ್.ಎಸ್.ಪಾಟೀಲ್​​​ ಕೂಚಬಾಳ ತಿಳಿಸಿದ್ದಾರೆ.

CM BSY conversation with BJP district president of Vijayapura
ವಿಜಯಪುರ ಬಿಜೆಪಿ ಜಿಲ್ಲಾಧ್ಯಕ್ಷರೊಂದಿಗೆ ಸಿಎಂ ಬಿಎಸ್​​ವೈ ಸಂವಾದ
author img

By

Published : May 12, 2020, 1:02 PM IST

ಮುದ್ದೇಬಿಹಾಳ (ವಿಜಯಪುರ) : ಲಾಕ್​​​​​ಡೌನ್​ನಿಂದಾಗಿ ಸಂಕಷ್ಟದಲ್ಲಿರುವ ಜಿಲ್ಲೆಯ ದ್ರಾಕ್ಷಿ, ದಾಳಿಂಬೆ ಬೆಳೆಗಾರರಿಗೆ ಅಗತ್ಯ ನೆರವು ನೀಡುವಂತೆ ಬಿಜೆಪಿ ಜಿಲ್ಲಾಧ್ಯಕ್ಷ ಆರ್.ಎಸ್.ಪಾಟೀಲ್​​​​ ಕೂಚಬಾಳ ಸಿಎಂ ಬಿ.ಎಸ್.ಯಡಿಯೂರಪ್ಪ ಅವರಿಗೆ ಮನವಿ ಮಾಡಿದ್ದಾರೆ.

ಈ ಕುರಿತು ಈಟಿವಿ ಭಾರತಕ್ಕೆ ಮಾಹಿತಿ ನೀಡಿದ ಅವರು, ಕಳೆದ ವಾರ ನಮ್ಮೊಂದಿಗೆ ಮುಖ್ಯಮಂತ್ರಿಗಳು ವಿಡಿಯೋ ಸಂವಾದ ಮಾಡಿದ್ದಾರೆ. ಈ ವೇಳೆ, ಜಿಲ್ಲೆಯ ದ್ರಾಕ್ಷಿ, ದಾಳಿಂಬೆ, ನಿಂಬೆ ಬೆಳೆಗಾರರ ಬೆಳೆಗಳು ಹೊರರಾಜ್ಯಗಳಿಗೆ ರಫ್ತು ಆಗದೇ ಉಳಿದುಕೊಂಡಿರುವ ಬಗ್ಗೆ ಸಿಎಂ ಗಮನಕ್ಕೆ ತಂದು ರಫ್ತು ಮಾಡಲು ಅವಕಾಶ ಕಲ್ಪಿಸಿಕೊಡಬೇಕು ಎಂದು ಮನವಿ ಮಾಡಿದ್ದೇನೆ. ಜೊತೆಗೆ ಕೋಲ್ಡ್​ ಸ್ಟೋರೇಜ್​ ಸ್ಥಾಪಿಸಿಕೊಡುವಂತೆಯೂ ಕೇಳಿಕೊಂಡಿದ್ದೇನೆ ಎಂದರು.

ಜಿಲ್ಲಾಡಳಿತದ ಶ್ರಮಕ್ಕೆ ಸಿಎಂ ಶ್ಲಾಘನೆ : ಕೊರೊನಾ ತಡೆಗಟ್ಟಲು ಜಿಲ್ಲಾಡಳಿತ ಕೈಗೊಂಡಿರುವ ಕ್ರಮಗಳ ಬಗ್ಗೆ ಸಿಎಂ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಜಿಲ್ಲೆ ರೆಡ್ ಝೋನ್​ನಿಂದ ಗ್ರೀನ್​​​​​​​ ಝೋನ್​ ಆಗುತ್ತಿರುವುದ್ಕಕ್ಕೆ ಸಂತಸ ವ್ಯಕ್ತಪಡಿಸಿದ್ದು, ಕೊರೊನಾ ಹೋರಾಟದಲ್ಲಿ ನಿರತರಾಗಿರುವ ಜಿಲ್ಲೆಯ ವೈದ್ಯರು, ಆಶಾ ಕಾರ್ಯಕರ್ತರು, ಪೊಲೀಸ್​ ಮತ್ತು ಮಾಧ್ಯಮ ಸಿಬ್ಬಂದಿ ಹಾಗೂ ಅಧಿಕಾರಿ ವರ್ಗದವರಿಗೆ ಅಭಿನಂದನೆ ಸಲ್ಲಿಸಿದ್ದಾರೆ ಎಂದರು.

ಮುದ್ದೇಬಿಹಾಳ (ವಿಜಯಪುರ) : ಲಾಕ್​​​​​ಡೌನ್​ನಿಂದಾಗಿ ಸಂಕಷ್ಟದಲ್ಲಿರುವ ಜಿಲ್ಲೆಯ ದ್ರಾಕ್ಷಿ, ದಾಳಿಂಬೆ ಬೆಳೆಗಾರರಿಗೆ ಅಗತ್ಯ ನೆರವು ನೀಡುವಂತೆ ಬಿಜೆಪಿ ಜಿಲ್ಲಾಧ್ಯಕ್ಷ ಆರ್.ಎಸ್.ಪಾಟೀಲ್​​​​ ಕೂಚಬಾಳ ಸಿಎಂ ಬಿ.ಎಸ್.ಯಡಿಯೂರಪ್ಪ ಅವರಿಗೆ ಮನವಿ ಮಾಡಿದ್ದಾರೆ.

ಈ ಕುರಿತು ಈಟಿವಿ ಭಾರತಕ್ಕೆ ಮಾಹಿತಿ ನೀಡಿದ ಅವರು, ಕಳೆದ ವಾರ ನಮ್ಮೊಂದಿಗೆ ಮುಖ್ಯಮಂತ್ರಿಗಳು ವಿಡಿಯೋ ಸಂವಾದ ಮಾಡಿದ್ದಾರೆ. ಈ ವೇಳೆ, ಜಿಲ್ಲೆಯ ದ್ರಾಕ್ಷಿ, ದಾಳಿಂಬೆ, ನಿಂಬೆ ಬೆಳೆಗಾರರ ಬೆಳೆಗಳು ಹೊರರಾಜ್ಯಗಳಿಗೆ ರಫ್ತು ಆಗದೇ ಉಳಿದುಕೊಂಡಿರುವ ಬಗ್ಗೆ ಸಿಎಂ ಗಮನಕ್ಕೆ ತಂದು ರಫ್ತು ಮಾಡಲು ಅವಕಾಶ ಕಲ್ಪಿಸಿಕೊಡಬೇಕು ಎಂದು ಮನವಿ ಮಾಡಿದ್ದೇನೆ. ಜೊತೆಗೆ ಕೋಲ್ಡ್​ ಸ್ಟೋರೇಜ್​ ಸ್ಥಾಪಿಸಿಕೊಡುವಂತೆಯೂ ಕೇಳಿಕೊಂಡಿದ್ದೇನೆ ಎಂದರು.

ಜಿಲ್ಲಾಡಳಿತದ ಶ್ರಮಕ್ಕೆ ಸಿಎಂ ಶ್ಲಾಘನೆ : ಕೊರೊನಾ ತಡೆಗಟ್ಟಲು ಜಿಲ್ಲಾಡಳಿತ ಕೈಗೊಂಡಿರುವ ಕ್ರಮಗಳ ಬಗ್ಗೆ ಸಿಎಂ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಜಿಲ್ಲೆ ರೆಡ್ ಝೋನ್​ನಿಂದ ಗ್ರೀನ್​​​​​​​ ಝೋನ್​ ಆಗುತ್ತಿರುವುದ್ಕಕ್ಕೆ ಸಂತಸ ವ್ಯಕ್ತಪಡಿಸಿದ್ದು, ಕೊರೊನಾ ಹೋರಾಟದಲ್ಲಿ ನಿರತರಾಗಿರುವ ಜಿಲ್ಲೆಯ ವೈದ್ಯರು, ಆಶಾ ಕಾರ್ಯಕರ್ತರು, ಪೊಲೀಸ್​ ಮತ್ತು ಮಾಧ್ಯಮ ಸಿಬ್ಬಂದಿ ಹಾಗೂ ಅಧಿಕಾರಿ ವರ್ಗದವರಿಗೆ ಅಭಿನಂದನೆ ಸಲ್ಲಿಸಿದ್ದಾರೆ ಎಂದರು.

For All Latest Updates

ETV Bharat Logo

Copyright © 2025 Ushodaya Enterprises Pvt. Ltd., All Rights Reserved.