ETV Bharat / state

ಬಸವಣ್ಣನ ಐಕ್ಯಮಂಟಪಕ್ಕೆ ನಾಳೆ ರಾಹುಲ್ ಗಾಂಧಿ ಭೇಟಿ....  ಎಂ ಬಿ ಪಾಟೀಲ್​​

author img

By

Published : Apr 22, 2023, 3:17 PM IST

Updated : Apr 22, 2023, 4:05 PM IST

ಬಸವ ಜಯಂತಿ ಹಿನ್ನೆಲೆಯಲ್ಲಿ ಕಾಂಗ್ರೆಸ್​ ಮುಖಂಡ ರಾಹುಲ್​ ಗಾಂಧಿ ಅವರು ಬಾಗಲಕೋಟೆ ಮತ್ತು ವಿಜಯಪುರ ಜಿಲ್ಲಾ ಪ್ರವಾಸ ಕೈಗೊಂಡಿದ್ದು, ಇದೇ ವೇಳೆ ಬಸವಣ್ಣನ ಐಕ್ಯ ಮಂಟಪಕ್ಕೆ ಭೇಟಿ ನೀಡಲಿದ್ದಾರೆ.

congress-leader-rahul-gandhi-visits-bagalakote-and-vijaypur-tomorrow
ಬಸವಣ್ಣನ ಐಕ್ಯಮಂಟಪಕ್ಕೆ ನಾಳೆ ರಾಹುಲ್ ಗಾಂಧಿ ಭೇಟಿ
ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ.ಪಾಟೀಲ್

ವಿಜಯಪುರ : ಬಸವಜಯಂತಿ ಹಿನ್ನೆಲೆ ನಾಳೆ (ಆದಿತ್ಯವಾರ) ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಅವರು ಬಾಗಲಕೋಟೆ ಮತ್ತು ವಿಜಯಪುರ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ ಎಂದು ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ.ಪಾಟೀಲ್ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾಳೆ ಬೆಳಗ್ಗೆ 7.20ಕ್ಕೆ ದೆಹಲಿ ಏರ್​​ ಪೋರ್ಟ್ ನಿಂದ ಪ್ರಯಾಣ ಬೆಳೆಸಲಿದ್ದು, ಬೆಳಿಗ್ಗೆ 10 ಗಂಟೆಗೆ ಹೈದರಾಬಾದ್ ತಲುಪಲಿದ್ದಾರೆ. ಬಳಿಕ ಅಲ್ಲಿಂದ ಹುಬ್ಬಳ್ಳಿಗೆ ಪ್ರಯಾಣ ಬೆಳೆಸಲಿದ್ದಾರೆ ಎಂದು ಮಾಹಿತಿ ನೀಡಿದರು.

ಹುಬ್ಬಳ್ಳಿಯಿಂದ ಹೆಲಿಕಾಪ್ಟರ್ ಮೂಲಕ 10.50 ಕ್ಕೆ ಪ್ರಯಾಣ ಬೆಳೆಸಿ 11.40 ಕ್ಕೆ ಬಾಗಲಕೋಟೆಯ ಕೂಡಲ ಸಂಗಮ ಕ್ಷೇತ್ರ ತಲುಪಲಿದ್ದಾರೆ. 11.50 ರಿಂದ 12.10 ರವರೆಗೆ ಕೂಡಲಸಂಗಮ ದೇವಸ್ಥಾನ ಹಾಗೂ ಬಸವಣ್ಣನವರ ಐಕ್ಯ ಮಂಟಪ ದರ್ಶನ ಮಾಡಲಿದ್ದಾರೆ. 12. 15 ರಿಂದ 1.30 ರವರೆಗೆ ಕೂಡಲಸಂಗಮದ ಬಸವ ಮಂಟಪದಲ್ಲಿ ನಡೆಯುವ ಬಸವ ಜಯಂತಿ ಕಾರ್ಯಕ್ರಮದಲ್ಲಿ ಅವರು ಭಾಗಿಯಾಗಲಿದ್ದಾರೆ ಎಂದು ಎಂ. ಬಿ. ಪಾಟೀಲ್​ ತಿಳಿಸಿದ್ದಾರೆ.

1.40 ರಿಂದ 2.10 ಕೂಡಲಸಂಗಮದಲ್ಲಿನ ದಾಸೋಹ ಭವನದಲ್ಲಿ ಪ್ರಸಾದ ಸೇವನೆ ಮಾಡಿದ ನಂತರ 2.15ರಿಂದ 4.15 ರವರೆಗೆ ಕೂಡಲಸಂಗಮದಲ್ಲಿನ ಯಾತ್ರಿ ನಿವಾಸದಲ್ಲಿ ವಿಶ್ರಾಂತಿ ಪಡೆಯಲಿದ್ದಾರೆ. ನಂತರ 4.25 ಕ್ಕೆ ಹೆಲಿಕಾಪ್ಟರ್ ಮೂಲಕ ವಿಜಯಪುರದತ್ತ ಪ್ರಯಾಣ ಬೆಳೆಸಲಿದ್ದಾರೆ. ಇಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಪರ ಚುನಾವಣಾ ಪ್ರಚಾರ ಹಾಗೂ ರೋಡ ಶೋ ನಡೆಸಲಿದ್ದಾರೆ. ನಗರದ ಶಿವಾಜಿ ಚೌಕ್ ನಿಂದ ಕನಕದಾಸ ವೃತ್ತದವರೆಗೂ ರೋಡ್ ಶೋ ನಡೆಯಲಿದ್ದು, ರೋಡ್​​ ಶೋದಲ್ಲಿ ರಾಹುಲ್ ಗಾಂಧಿ ಜತೆ ಮಾಜಿ ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ಭಾಗವಹಿಸಲಿದ್ದಾರೆ. ಬಳಿಕ ಅಂದು ರಾತ್ರಿ ವಿಜಯಪುರದಲ್ಲಿ ವಾಸ್ತವ್ಯ ಹೂಡಿ ಮರುದಿನ ವಾಪಸ್ ದೆಹಲಿಗೆ ಪ್ರಯಾಣಿಸಲಿದ್ದಾರೆ.

ನಾನು ಸಿಎಂ ಆಗಲು ಸಮರ್ಥನಿದ್ದೇನೆ: ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್​ ಗೆದ್ದು ಪಕ್ಷ ಅಧಿಕಾರಕ್ಕೆ ಬರಲಿದ್ದು, ಶಾಸಕರು ಮತ್ತು ಪಕ್ಷದ ವರಿಷ್ಠರು ಬಯಸಿದರೆ ನಾನು ಸಿಎಂ ಆಗಲು ಸಿದ್ಧನಿದ್ದೇನೆ ಎಂದು ಕೆಪಿಸಿಸಿ ಚುನಾವಣಾ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ.ಪಾಟೀಲ್​ ಹೇಳಿದರು. ಸಿಎಂ ರೇಸ್​​​ನಲ್ಲಿ ಈಗಾಗಲೇ ಸಿದ್ದರಾಮಯ್ಯ, ಡಿಕೆ ಶಿವಕುಮಾರ್​, ಕೃಷ್ಣ ಭೈರೇಗೌಡ, ಜಿ.ಪರಮೇಶ್ವರ್​ ಅವರು ಇದ್ದಾರೆ. ತಾವು ನೀರಾವರಿ ಸಚಿವನಾಗಿ, ಗೃಹಸಚಿವನಾಗಿ ಉತ್ತಮ ಕೆಲಸ ಮಾಡಿದ್ದು, ಸಿಎಂ ಆಗುವ ಎಲ್ಲ ಅರ್ಹತೆ ಹೊಂದಿದ್ದೇನೆ. ಶಾಸಕರು, ಪಕ್ಷದ ವರಿಷ್ಠರು ಬಯಸಿದರೆ ನಾನು ಸಿಎಂ ಆಗಲು ಸಿದ್ಧ ಎಂದು ಹೇಳಿದರು.

ಲಿಂಗಾಯತ ಸಿಎಂ ಘೋಷಣೆ ಕುರಿತು ಬಿಜೆಪಿ ನಡೆಸುತ್ತಿರುವ ಟೀಕೆಗೆ ಎದುರೇಟು ನೀಡಿದ ಅವರು, ಬಿಜೆಪಿ ವರಿಷ್ಠರು ಲಿಂಗಾಯತರನ್ನು ವ್ಯವಸ್ಥಿತವಾಗಿ ಹೊರಗಿಡುತ್ತಿದೆ. ಇದಕ್ಕೆ ಮುನ್ನುಡಿಯಾಗಿ ಬಿ.ಎಸ್.ಯಡಿಯೂರಪ್ಪ ಅವರನ್ನು ಸಿಎಂ ಹುದ್ದೆಯಿಂದ ಕೆಳಗಿಳಿಸಿದ್ದಾರೆ. ಜಗದೀಶ್​ ಶೆಟ್ಟರ್​, ಲಕ್ಷ್ಮಣ ಸವದಿಗೆ ಟಿಕೆಟ್ ನಿರಾಕರಿಸಿದ್ದಾರೆ. ಅನಿರ್ವಾಯವಾಗಿ ಬಸವರಾಜ ಬೊಮ್ಮಾಯಿ ಅವರನ್ನು ಸಿಎಂ ಮಾಡಿದ್ದಾರೆ. ಹೀಗಾಗಿ ಬೊಮ್ಮಾಯಿ ಎಕ್ಸಿಡೆಂಟಲ್ ಸಿಎಂ ಎಂದು ಹೇಳಿದರು.

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸಿಎಂ ವಿಚಾರವಾಗಿ ಪ್ರತಿಕ್ರಿಯಿಸಿ, ಖರ್ಗೆ ಎಐಸಿಸಿ ಅಧ್ಯಕ್ಷರು. ಅವರ ಕೈಯಲ್ಲಿ ಕಾಂಗ್ರೆಸ್ ಸಿಎಂಗಳು, ಪಕ್ಷ ವಿದೆ. ಮನಸ್ಸು ಮಾಡಿದರೆ ಅವರು 2024ರಲ್ಲಿ ಪ್ರಧಾನ ಮಂತ್ರಿಯೇ ಆಗಬಹುದು. ಇನ್ನೂ ಸಿಎಂ ಯಾವ ಲೆಕ್ಕ ಎಂದು ಹೇಳಿದರು.

ಇದನ್ನೂ ಓದಿ : ಖಾಸಗಿ ಸಮಾರಂಭದಲ್ಲಿ ಆತ್ಮೀಯತೆ ಪ್ರದರ್ಶಿಸಿದ ಡಿಕೆಶಿ - ಸಿದ್ದರಾಮಯ್ಯ

ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ.ಪಾಟೀಲ್

ವಿಜಯಪುರ : ಬಸವಜಯಂತಿ ಹಿನ್ನೆಲೆ ನಾಳೆ (ಆದಿತ್ಯವಾರ) ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಅವರು ಬಾಗಲಕೋಟೆ ಮತ್ತು ವಿಜಯಪುರ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ ಎಂದು ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ.ಪಾಟೀಲ್ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾಳೆ ಬೆಳಗ್ಗೆ 7.20ಕ್ಕೆ ದೆಹಲಿ ಏರ್​​ ಪೋರ್ಟ್ ನಿಂದ ಪ್ರಯಾಣ ಬೆಳೆಸಲಿದ್ದು, ಬೆಳಿಗ್ಗೆ 10 ಗಂಟೆಗೆ ಹೈದರಾಬಾದ್ ತಲುಪಲಿದ್ದಾರೆ. ಬಳಿಕ ಅಲ್ಲಿಂದ ಹುಬ್ಬಳ್ಳಿಗೆ ಪ್ರಯಾಣ ಬೆಳೆಸಲಿದ್ದಾರೆ ಎಂದು ಮಾಹಿತಿ ನೀಡಿದರು.

ಹುಬ್ಬಳ್ಳಿಯಿಂದ ಹೆಲಿಕಾಪ್ಟರ್ ಮೂಲಕ 10.50 ಕ್ಕೆ ಪ್ರಯಾಣ ಬೆಳೆಸಿ 11.40 ಕ್ಕೆ ಬಾಗಲಕೋಟೆಯ ಕೂಡಲ ಸಂಗಮ ಕ್ಷೇತ್ರ ತಲುಪಲಿದ್ದಾರೆ. 11.50 ರಿಂದ 12.10 ರವರೆಗೆ ಕೂಡಲಸಂಗಮ ದೇವಸ್ಥಾನ ಹಾಗೂ ಬಸವಣ್ಣನವರ ಐಕ್ಯ ಮಂಟಪ ದರ್ಶನ ಮಾಡಲಿದ್ದಾರೆ. 12. 15 ರಿಂದ 1.30 ರವರೆಗೆ ಕೂಡಲಸಂಗಮದ ಬಸವ ಮಂಟಪದಲ್ಲಿ ನಡೆಯುವ ಬಸವ ಜಯಂತಿ ಕಾರ್ಯಕ್ರಮದಲ್ಲಿ ಅವರು ಭಾಗಿಯಾಗಲಿದ್ದಾರೆ ಎಂದು ಎಂ. ಬಿ. ಪಾಟೀಲ್​ ತಿಳಿಸಿದ್ದಾರೆ.

1.40 ರಿಂದ 2.10 ಕೂಡಲಸಂಗಮದಲ್ಲಿನ ದಾಸೋಹ ಭವನದಲ್ಲಿ ಪ್ರಸಾದ ಸೇವನೆ ಮಾಡಿದ ನಂತರ 2.15ರಿಂದ 4.15 ರವರೆಗೆ ಕೂಡಲಸಂಗಮದಲ್ಲಿನ ಯಾತ್ರಿ ನಿವಾಸದಲ್ಲಿ ವಿಶ್ರಾಂತಿ ಪಡೆಯಲಿದ್ದಾರೆ. ನಂತರ 4.25 ಕ್ಕೆ ಹೆಲಿಕಾಪ್ಟರ್ ಮೂಲಕ ವಿಜಯಪುರದತ್ತ ಪ್ರಯಾಣ ಬೆಳೆಸಲಿದ್ದಾರೆ. ಇಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಪರ ಚುನಾವಣಾ ಪ್ರಚಾರ ಹಾಗೂ ರೋಡ ಶೋ ನಡೆಸಲಿದ್ದಾರೆ. ನಗರದ ಶಿವಾಜಿ ಚೌಕ್ ನಿಂದ ಕನಕದಾಸ ವೃತ್ತದವರೆಗೂ ರೋಡ್ ಶೋ ನಡೆಯಲಿದ್ದು, ರೋಡ್​​ ಶೋದಲ್ಲಿ ರಾಹುಲ್ ಗಾಂಧಿ ಜತೆ ಮಾಜಿ ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ಭಾಗವಹಿಸಲಿದ್ದಾರೆ. ಬಳಿಕ ಅಂದು ರಾತ್ರಿ ವಿಜಯಪುರದಲ್ಲಿ ವಾಸ್ತವ್ಯ ಹೂಡಿ ಮರುದಿನ ವಾಪಸ್ ದೆಹಲಿಗೆ ಪ್ರಯಾಣಿಸಲಿದ್ದಾರೆ.

ನಾನು ಸಿಎಂ ಆಗಲು ಸಮರ್ಥನಿದ್ದೇನೆ: ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್​ ಗೆದ್ದು ಪಕ್ಷ ಅಧಿಕಾರಕ್ಕೆ ಬರಲಿದ್ದು, ಶಾಸಕರು ಮತ್ತು ಪಕ್ಷದ ವರಿಷ್ಠರು ಬಯಸಿದರೆ ನಾನು ಸಿಎಂ ಆಗಲು ಸಿದ್ಧನಿದ್ದೇನೆ ಎಂದು ಕೆಪಿಸಿಸಿ ಚುನಾವಣಾ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ.ಪಾಟೀಲ್​ ಹೇಳಿದರು. ಸಿಎಂ ರೇಸ್​​​ನಲ್ಲಿ ಈಗಾಗಲೇ ಸಿದ್ದರಾಮಯ್ಯ, ಡಿಕೆ ಶಿವಕುಮಾರ್​, ಕೃಷ್ಣ ಭೈರೇಗೌಡ, ಜಿ.ಪರಮೇಶ್ವರ್​ ಅವರು ಇದ್ದಾರೆ. ತಾವು ನೀರಾವರಿ ಸಚಿವನಾಗಿ, ಗೃಹಸಚಿವನಾಗಿ ಉತ್ತಮ ಕೆಲಸ ಮಾಡಿದ್ದು, ಸಿಎಂ ಆಗುವ ಎಲ್ಲ ಅರ್ಹತೆ ಹೊಂದಿದ್ದೇನೆ. ಶಾಸಕರು, ಪಕ್ಷದ ವರಿಷ್ಠರು ಬಯಸಿದರೆ ನಾನು ಸಿಎಂ ಆಗಲು ಸಿದ್ಧ ಎಂದು ಹೇಳಿದರು.

ಲಿಂಗಾಯತ ಸಿಎಂ ಘೋಷಣೆ ಕುರಿತು ಬಿಜೆಪಿ ನಡೆಸುತ್ತಿರುವ ಟೀಕೆಗೆ ಎದುರೇಟು ನೀಡಿದ ಅವರು, ಬಿಜೆಪಿ ವರಿಷ್ಠರು ಲಿಂಗಾಯತರನ್ನು ವ್ಯವಸ್ಥಿತವಾಗಿ ಹೊರಗಿಡುತ್ತಿದೆ. ಇದಕ್ಕೆ ಮುನ್ನುಡಿಯಾಗಿ ಬಿ.ಎಸ್.ಯಡಿಯೂರಪ್ಪ ಅವರನ್ನು ಸಿಎಂ ಹುದ್ದೆಯಿಂದ ಕೆಳಗಿಳಿಸಿದ್ದಾರೆ. ಜಗದೀಶ್​ ಶೆಟ್ಟರ್​, ಲಕ್ಷ್ಮಣ ಸವದಿಗೆ ಟಿಕೆಟ್ ನಿರಾಕರಿಸಿದ್ದಾರೆ. ಅನಿರ್ವಾಯವಾಗಿ ಬಸವರಾಜ ಬೊಮ್ಮಾಯಿ ಅವರನ್ನು ಸಿಎಂ ಮಾಡಿದ್ದಾರೆ. ಹೀಗಾಗಿ ಬೊಮ್ಮಾಯಿ ಎಕ್ಸಿಡೆಂಟಲ್ ಸಿಎಂ ಎಂದು ಹೇಳಿದರು.

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸಿಎಂ ವಿಚಾರವಾಗಿ ಪ್ರತಿಕ್ರಿಯಿಸಿ, ಖರ್ಗೆ ಎಐಸಿಸಿ ಅಧ್ಯಕ್ಷರು. ಅವರ ಕೈಯಲ್ಲಿ ಕಾಂಗ್ರೆಸ್ ಸಿಎಂಗಳು, ಪಕ್ಷ ವಿದೆ. ಮನಸ್ಸು ಮಾಡಿದರೆ ಅವರು 2024ರಲ್ಲಿ ಪ್ರಧಾನ ಮಂತ್ರಿಯೇ ಆಗಬಹುದು. ಇನ್ನೂ ಸಿಎಂ ಯಾವ ಲೆಕ್ಕ ಎಂದು ಹೇಳಿದರು.

ಇದನ್ನೂ ಓದಿ : ಖಾಸಗಿ ಸಮಾರಂಭದಲ್ಲಿ ಆತ್ಮೀಯತೆ ಪ್ರದರ್ಶಿಸಿದ ಡಿಕೆಶಿ - ಸಿದ್ದರಾಮಯ್ಯ

Last Updated : Apr 22, 2023, 4:05 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.