ETV Bharat / state

Vijayapur crime: ಭೀಮಾತೀರದಲ್ಲಿ ರೌಡಿಶೀಟರ್ ಬರ್ಬರ​ ಹತ್ಯೆ.. ಹಳೇ ದ್ವೇಷಕ್ಕೆ ಕೊಲೆ ಶಂಕೆ

author img

By

Published : Jul 11, 2023, 7:52 PM IST

ದುಷ್ಕರ್ಮಿಗಳು ಮಾಳಪ್ಪ ಯಮನಪ್ಪ ಮೇತ್ರಿ ತಲೆಗೆ ಮಾರಕಾಸ್ತ್ರಗಳಿಂದ ಹೊಡೆದು ಹತ್ಯೆ ಮಾಡಿ, ಸ್ಥಳದಿಂದ ಪರಾರಿಯಾಗಿದ್ದಾರೆ.

Rowdy sheeter who murdered
ಕೊಲೆಯಾದ ರೌಡಿ ಶೀಟರ್​

ವಿಜಯಪುರ: ಭೀಮಾ ತೀರದಲ್ಲಿ ಮತ್ತೆ ನೆತ್ತರು ಹರಿದಿದೆ. ರೌಡಿಶೀಟರ್​ವೋರ್ವನ ಬರ್ಬರ ಹತ್ಯೆ ನಡೆದಿದೆ. ಮಂಗಳವಾರ ಹಾಡಹಗಲೇ ನಡುರಸ್ತೆಯಲ್ಲಿ ಈ ಘಟನೆ‌ ನಡೆದಿರುವುದು ಜನರಲ್ಲಿ ಭೀತಿ ಮೂಡಿಸಿದೆ. ಜಿಲ್ಲೆಯ ಆಲಮೇಲ ಸಮೀಪದ ದೇವರನಾವದಗಿ ಗ್ರಾಮದಲ್ಲಿ ಈ ಪ್ರಕರಣ ನಡೆದಿದೆ. ಕೊಲೆಯಾದ ರೌಡಿಶೀಟರ್​ನನ್ನು ಮಾಳಪ್ಪ ಯಮನಪ್ಪ ಮೇತ್ರಿ (40) ಎಂದು ಗುರುತಿಸಲಾಗಿದೆ. ಈತನನ್ನು ದುರ್ಷ್ಕಮಿಗಳು ಮಾರಕಾಸ್ತ್ರಗಳಿಂದ ತಲೆಗೆ ಹೊಡೆದು ಬರ್ಬರವಾಗಿ ಹತ್ಯೆ ಮಾಡಿ ಪರಾರಿಯಾಗಿದ್ದಾರೆ.

ಕೊಲೆಯಾದ ಮಾಳಪ್ಪ ಮೇತ್ರಿ ಮೇಲೆ ಶಸ್ತ್ರಾಸ್ತ್ರ ಕಾಯ್ದೆ, ಕಂಟ್ರಿ ಪಿಸ್ತೂಲ್ ಹೊಂದಿರುವ ಹಾಗೂ ಕೊಲೆ ಯತ್ನ ಪ್ರಕರಣ ದಾಖಲಾದ ಮೇಲೆ ಪೊಲೀಸರು ಆತನ ವಿರುದ್ಧ 2002ರಲ್ಲಿ ರೌಡಿಶೀಟರ್ ಕೇಸ್​ ಹಾಕಿದ್ದರು. ಈತನ ಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಆದ್ರೆ ಹಳೇ ದ್ವೇಷಕ್ಕೆ ಕೊಲೆ ನಡೆದಿರಬಹುದು ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ. ಸ್ಥಳಕ್ಕೆ ಪೊಲೀಸ್​ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಆಲಮೇಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಪ್ರಕರಣ ನಡೆದಿದೆ.

ಭೀಮಾ ತೀರ ಶಾಂತವಾಗಲು ಶಾಂತಿ ಸಭೆ ನಡೆದಿತ್ತು: ಅಂದಿನ ಉತ್ತರ ವಲಯ ಐಜಿಪಿ ಅಲೋಕ್​ ಕುಮಾರ್​ ಅವರು ರೌಡಿಗಳ ಪರೇಡ್ ನಡೆಸಿ ಎಚ್ಚರಿಕೆ ನೀಡಿದ್ದರು. ನಂತರ ಮತ್ತೊಮ್ಮೆ ಕಾನೂನು ಸುವ್ಯವಸ್ಥೆ ಎಡಿಜಿಪಿ ಆದ ಮೇಲೆ ಚಡಚಣಕ್ಕೆ ಬಂದಿದ್ದರು. ಅಲ್ಲಿಯೂ ಶಾಂತಿ ಸಭೆ ನಡೆಸಿ ಹಳೇ ದ್ವೇಷ ಬಿಟ್ಟು ಮನುಷ್ಯರಾಗಿ ಬಾಳಿ ಎಂದು ಎಚ್ಚರಿಕೆ ನೀಡಿದ್ದರು. ಎರಡು ಕುಟುಂಬಗಳ ದ್ವೇಷ ಅಂತ್ಯವಾಗಬೇಕು ಎಂದು ಖಡಕ್​ ಎಚ್ಚರಿಕೆ ನೀಡಿದ್ದರು. ಆದರೂ ಮತ್ತೆ ಕೊಲೆ ನಡೆದಿರುವುದು ಆತಂಕ ಮೂಡಿಸಿದೆ.

ತಂದೆಯನ್ನು ಕೊಂದ ಮಗ: ಕ್ಷುಲ್ಲಕ ಕಾರಣಕ್ಕೆ ತಂದೆಯನ್ನೇ ಮಗ ಕೊಂದ ಘಟನೆ ವಿಜಯಪುರದ ವೆಂಕಟೇಶ ನಗರದಲ್ಲಿ ನಡೆದಿದೆ. ರಮೇಶ ಕೂಡಿಗನವರ ಕೊಲೆಯಾದವನು. ಆತನ ಮಗ ಅಮಿತ್​ ಕೊಲೆ ಮಾಡಿ ಪರಾರಿಯಾಗಿದ್ದಾನೆ. ಸ್ಥಳಕ್ಕೆ ಜಲನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಜಲನಗರ‌ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

ಅನೈತಿಕ ಸಂಬಂಧ ಶಂಕೆ- ಪತಿಯಿಂದಲೇ ಪತ್ನಿ‌ಯ ಬರ್ಬರ ಕೊಲೆ: ಅನೈತಿಕ ಸಂಬಂಧ ಶಂಕೆ ಪಟ್ಟು ಪತಿಯೇ ಪತ್ನಿ‌ಯನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ನಡೆದಿದೆ. ರಾಯಚೂರು ತಾಲೂಕಿನ ಬುಳ್ಳಾಪುರ ಗ್ರಾಮದಲ್ಲಿ ಇಂದು ಪ್ರಕರಣ ನಡೆದಿದೆ . ಶಾರದಾ (32) ಕೊಲೆಯಾದ ಮಹಿಳೆ ಎಂದು ಗುರುತಿಸಲಾಗಿದೆ. ಪತಿ ಕಿಷ್ಟಪ್ಪ ಕೊಲೆ ಮಾಡಿದ ಆರೋಪಿಯಾಗಿದ್ದಾನೆ. ಕೊಡಲಿಯಿಂದ ಕುತ್ತಿಗೆ ಭಾಗಕ್ಕೆ ಬಲವಾಗಿ ಹೊಡೆದ ಹಿನ್ನೆಲೆಯಿಂದಾಗಿ ತೀವ್ರವಾಗಿ ಪೆಟ್ಟು ತಗುಲಿ, ರಕ್ತಸ್ರಾವ‌ವಾಗಿ ಮಹಿಳೆ ಮೃತಪಟ್ಟಿದ್ದಾಳೆ.

ಇಬ್ಬರು ಮಕ್ಕಳನ್ನು ಹೊಂದಿದ್ದ ದಂಪತಿ‌ ನಿತ್ಯ ಜಗಳವಾಡುತ್ತಿದ್ದರು. ಜಗಳ ತಾರಕಕ್ಕೇರಿ ಮನೆಯ ಮುಂದೆ ಪತ್ನಿಯನ್ನು ಹೊಡೆದು ಕೊಲೆ ಮಾಡಿದ್ದಾನೆ. ಬಳಿಕ ಆರೋಪಿ ಕಿಷ್ಟಪ್ಪ ಸ್ಥಳದಿಂದ ಪರಾರಿಯಾಗಿದ್ದಾನೆ. ಇಡಪನೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಮಾಹಿತಿ ತಿಳಿದು ಸ್ಥಳಕ್ಕೆ ಎಸ್ ಪಿ ನಿಖಿಲ್ ಬಿ ಭೇಟಿ ನೀಡಿ, ಸ್ಥಳ ಪರಿಶೀಲನೆ ನಡೆಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಕೈಗೆತ್ತಿಕೊಂಡಿದ್ದಾರೆ.

ಇದನ್ನೂ ಓದಿ: Bengaluru crime: ಖಾಸಗಿ ಕಂಪನಿಯಲ್ಲಿ ಜೋಡಿ ಕೊಲೆ.. ಕಚೇರಿಗೆ ನುಗ್ಗಿದ ಮಾಜಿ ಉದ್ಯೋಗಿಯಿಂದ ಎಂಡಿ, ಸಿಇಓ ಬರ್ಬರ ಹತ್ಯೆ

ವಿಜಯಪುರ: ಭೀಮಾ ತೀರದಲ್ಲಿ ಮತ್ತೆ ನೆತ್ತರು ಹರಿದಿದೆ. ರೌಡಿಶೀಟರ್​ವೋರ್ವನ ಬರ್ಬರ ಹತ್ಯೆ ನಡೆದಿದೆ. ಮಂಗಳವಾರ ಹಾಡಹಗಲೇ ನಡುರಸ್ತೆಯಲ್ಲಿ ಈ ಘಟನೆ‌ ನಡೆದಿರುವುದು ಜನರಲ್ಲಿ ಭೀತಿ ಮೂಡಿಸಿದೆ. ಜಿಲ್ಲೆಯ ಆಲಮೇಲ ಸಮೀಪದ ದೇವರನಾವದಗಿ ಗ್ರಾಮದಲ್ಲಿ ಈ ಪ್ರಕರಣ ನಡೆದಿದೆ. ಕೊಲೆಯಾದ ರೌಡಿಶೀಟರ್​ನನ್ನು ಮಾಳಪ್ಪ ಯಮನಪ್ಪ ಮೇತ್ರಿ (40) ಎಂದು ಗುರುತಿಸಲಾಗಿದೆ. ಈತನನ್ನು ದುರ್ಷ್ಕಮಿಗಳು ಮಾರಕಾಸ್ತ್ರಗಳಿಂದ ತಲೆಗೆ ಹೊಡೆದು ಬರ್ಬರವಾಗಿ ಹತ್ಯೆ ಮಾಡಿ ಪರಾರಿಯಾಗಿದ್ದಾರೆ.

ಕೊಲೆಯಾದ ಮಾಳಪ್ಪ ಮೇತ್ರಿ ಮೇಲೆ ಶಸ್ತ್ರಾಸ್ತ್ರ ಕಾಯ್ದೆ, ಕಂಟ್ರಿ ಪಿಸ್ತೂಲ್ ಹೊಂದಿರುವ ಹಾಗೂ ಕೊಲೆ ಯತ್ನ ಪ್ರಕರಣ ದಾಖಲಾದ ಮೇಲೆ ಪೊಲೀಸರು ಆತನ ವಿರುದ್ಧ 2002ರಲ್ಲಿ ರೌಡಿಶೀಟರ್ ಕೇಸ್​ ಹಾಕಿದ್ದರು. ಈತನ ಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಆದ್ರೆ ಹಳೇ ದ್ವೇಷಕ್ಕೆ ಕೊಲೆ ನಡೆದಿರಬಹುದು ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ. ಸ್ಥಳಕ್ಕೆ ಪೊಲೀಸ್​ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಆಲಮೇಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಪ್ರಕರಣ ನಡೆದಿದೆ.

ಭೀಮಾ ತೀರ ಶಾಂತವಾಗಲು ಶಾಂತಿ ಸಭೆ ನಡೆದಿತ್ತು: ಅಂದಿನ ಉತ್ತರ ವಲಯ ಐಜಿಪಿ ಅಲೋಕ್​ ಕುಮಾರ್​ ಅವರು ರೌಡಿಗಳ ಪರೇಡ್ ನಡೆಸಿ ಎಚ್ಚರಿಕೆ ನೀಡಿದ್ದರು. ನಂತರ ಮತ್ತೊಮ್ಮೆ ಕಾನೂನು ಸುವ್ಯವಸ್ಥೆ ಎಡಿಜಿಪಿ ಆದ ಮೇಲೆ ಚಡಚಣಕ್ಕೆ ಬಂದಿದ್ದರು. ಅಲ್ಲಿಯೂ ಶಾಂತಿ ಸಭೆ ನಡೆಸಿ ಹಳೇ ದ್ವೇಷ ಬಿಟ್ಟು ಮನುಷ್ಯರಾಗಿ ಬಾಳಿ ಎಂದು ಎಚ್ಚರಿಕೆ ನೀಡಿದ್ದರು. ಎರಡು ಕುಟುಂಬಗಳ ದ್ವೇಷ ಅಂತ್ಯವಾಗಬೇಕು ಎಂದು ಖಡಕ್​ ಎಚ್ಚರಿಕೆ ನೀಡಿದ್ದರು. ಆದರೂ ಮತ್ತೆ ಕೊಲೆ ನಡೆದಿರುವುದು ಆತಂಕ ಮೂಡಿಸಿದೆ.

ತಂದೆಯನ್ನು ಕೊಂದ ಮಗ: ಕ್ಷುಲ್ಲಕ ಕಾರಣಕ್ಕೆ ತಂದೆಯನ್ನೇ ಮಗ ಕೊಂದ ಘಟನೆ ವಿಜಯಪುರದ ವೆಂಕಟೇಶ ನಗರದಲ್ಲಿ ನಡೆದಿದೆ. ರಮೇಶ ಕೂಡಿಗನವರ ಕೊಲೆಯಾದವನು. ಆತನ ಮಗ ಅಮಿತ್​ ಕೊಲೆ ಮಾಡಿ ಪರಾರಿಯಾಗಿದ್ದಾನೆ. ಸ್ಥಳಕ್ಕೆ ಜಲನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಜಲನಗರ‌ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

ಅನೈತಿಕ ಸಂಬಂಧ ಶಂಕೆ- ಪತಿಯಿಂದಲೇ ಪತ್ನಿ‌ಯ ಬರ್ಬರ ಕೊಲೆ: ಅನೈತಿಕ ಸಂಬಂಧ ಶಂಕೆ ಪಟ್ಟು ಪತಿಯೇ ಪತ್ನಿ‌ಯನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ನಡೆದಿದೆ. ರಾಯಚೂರು ತಾಲೂಕಿನ ಬುಳ್ಳಾಪುರ ಗ್ರಾಮದಲ್ಲಿ ಇಂದು ಪ್ರಕರಣ ನಡೆದಿದೆ . ಶಾರದಾ (32) ಕೊಲೆಯಾದ ಮಹಿಳೆ ಎಂದು ಗುರುತಿಸಲಾಗಿದೆ. ಪತಿ ಕಿಷ್ಟಪ್ಪ ಕೊಲೆ ಮಾಡಿದ ಆರೋಪಿಯಾಗಿದ್ದಾನೆ. ಕೊಡಲಿಯಿಂದ ಕುತ್ತಿಗೆ ಭಾಗಕ್ಕೆ ಬಲವಾಗಿ ಹೊಡೆದ ಹಿನ್ನೆಲೆಯಿಂದಾಗಿ ತೀವ್ರವಾಗಿ ಪೆಟ್ಟು ತಗುಲಿ, ರಕ್ತಸ್ರಾವ‌ವಾಗಿ ಮಹಿಳೆ ಮೃತಪಟ್ಟಿದ್ದಾಳೆ.

ಇಬ್ಬರು ಮಕ್ಕಳನ್ನು ಹೊಂದಿದ್ದ ದಂಪತಿ‌ ನಿತ್ಯ ಜಗಳವಾಡುತ್ತಿದ್ದರು. ಜಗಳ ತಾರಕಕ್ಕೇರಿ ಮನೆಯ ಮುಂದೆ ಪತ್ನಿಯನ್ನು ಹೊಡೆದು ಕೊಲೆ ಮಾಡಿದ್ದಾನೆ. ಬಳಿಕ ಆರೋಪಿ ಕಿಷ್ಟಪ್ಪ ಸ್ಥಳದಿಂದ ಪರಾರಿಯಾಗಿದ್ದಾನೆ. ಇಡಪನೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಮಾಹಿತಿ ತಿಳಿದು ಸ್ಥಳಕ್ಕೆ ಎಸ್ ಪಿ ನಿಖಿಲ್ ಬಿ ಭೇಟಿ ನೀಡಿ, ಸ್ಥಳ ಪರಿಶೀಲನೆ ನಡೆಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಕೈಗೆತ್ತಿಕೊಂಡಿದ್ದಾರೆ.

ಇದನ್ನೂ ಓದಿ: Bengaluru crime: ಖಾಸಗಿ ಕಂಪನಿಯಲ್ಲಿ ಜೋಡಿ ಕೊಲೆ.. ಕಚೇರಿಗೆ ನುಗ್ಗಿದ ಮಾಜಿ ಉದ್ಯೋಗಿಯಿಂದ ಎಂಡಿ, ಸಿಇಓ ಬರ್ಬರ ಹತ್ಯೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.