ವಿಜಯಪುರ: ಪಟ್ಟಣದ ದಯಾಸಾಗರ ಪಾಟೀಲ್ ಫೌಂಡೇಶನ್ ವತಿಯಿಂದ ಇಂಡಿ ತಾಲೂಕಿನ ಎಲ್ಲ ಗ್ರಾಮಗಳ ಬಡವರ ಮನೆಗಳಿಗೆ ತೆರಳಿ ಉಚಿತ ದಿನಸಿ ವಸ್ತುಗಳ ಕಿಟ್ ವಿತರಿಸಲಾಯಿತು.
ಕೊರೊನಾ ಭೀತಿ ಹಿನ್ನೆಲೆ ದೇಶಾದ್ಯಂತ ಲಾಕ್ಡೌನ್ ಘೋಷಣೆಯಾಗಿದೆ. ಇದರಿಂದಾಗಿ ದುಡಿಯುವ ಕೈಗಳಿಗೆ ಕೆಲಸವಿಲ್ಲದಂತಾಗಿದ್ದು, ತಿನ್ನಲು ಆಹಾರಕ್ಕಾಗಿ ಪರದಾಟ ನಡೆಸುವಂತಾಗಿದೆ. ಹೀಗಾಗಿ ದಯಾಸಾಗರ ಪಾಟೀಲ್ ಪೌಂಡೇಶನ್ ವತಿಯಿಂದ ರವೆ, ಬೆಲ್ಲ, ಸಕ್ಕರೆ, ಅವಲಕ್ಕಿ ಹಾಗೂ 5 ಕೆ.ಜಿ ಅಕ್ಕಿ ಸೇರಿದಂತೆ ಇತರ ದಿನಸಿ ಪದಾರ್ಥಗಳನ್ನು ವಿತರಣೆ ಮಾಡಲಾಯಿತು.