ETV Bharat / state

ವಿಜಯಪುರದಲ್ಲಿ ಆದರ್ಶ ಗ್ರಾಮಗಳ ಸಮಿತಿ ತರಬೇತಿ ಸಭೆ

author img

By

Published : Dec 11, 2019, 8:18 AM IST

ಪ್ರಧಾನಮಂತ್ರಿ ಆದರ್ಶ ಗ್ರಾಮ ಯೋಜನೆಯಡಿ ಆಯ್ಕೆಯಾದ ಗ್ರಾಮಗಳನ್ನು ಸಂಪೂರ್ಣವಾಗಿ ಆದರ್ಶ ಗ್ರಾಮಗಳನ್ನಾಗಿ ಪರಿವರ್ತಿಸುವಂತೆ ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ್ ಅಧಿಕಾರಿಗಳಿಗೆ ಸಲಹೆ ನೀಡಿದ್ದಾರೆ.

dc-meeting-in-vijayapur
ವಿಜಯಪುರದಲ್ಲಿ ಆದರ್ಶ ಗ್ರಾಮಗಳ ಸಮಿತಿಯ ತರಬೇತಿ ಸಭೆ

ವಿಜಯಪುರ: ಪ್ರಧಾನಮಂತ್ರಿ ಆದರ್ಶ ಗ್ರಾಮ ಯೋಜನೆಯಡಿ ಆಯ್ಕೆಯಾದ ಗ್ರಾಮಗಳನ್ನು ಸಂಪೂರ್ಣವಾಗಿ ಆದರ್ಶ ಗ್ರಾಮಗಳನ್ನಾಗಿ ಪರಿವರ್ತಿಸುವಂತೆ ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ್ ಅಧಿಕಾರಿಗಳಿಗೆ ಸಲಹೆ ನೀಡಿದ್ದಾರೆ. ಸಮಾಜ ಕಲ್ಯಾಣ ಇಲಾಖೆ ವತಿಯಿಂದ ನಡೆದ ಗ್ರಾಮ ಮಟ್ಟದ ಸಮಿತಿಯ ತರಬೇತಿ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಈ ಯೋಜನೆಯಡಿ ಪರಿಶಿಷ್ಟ ಜನಾಂಗದವರು ಹೆಚ್ಚಿರುವ ಗ್ರಾಮಗಳನ್ನು ಆಯ್ಕೆ ಮಾಡಲಾಗುತ್ತದೆ. ಈ ಗ್ರಾಮಗಳಲ್ಲಿ ಶೈಕ್ಷಣಿಕ ಪ್ರಗತಿ ಹೆಚ್ಚಿಸುವುದರ ಜೊತೆಗೆ ಮೂಲ ಸೌಕರ್ಯಗಳನ್ನು ಆ ಗ್ರಾಮಗಳಿಗೆ ಕಲ್ಪಿಸುವುದಾಗಿದೆ. ಇದು ಕೇಂದ್ರ ಸರ್ಕಾರದ ಯೋಜನೆಯಾಗಿದ್ದು, ಸಂಸದರ ಆದರ್ಶ ಗ್ರಾಮವಾಗಿ ಅಭಿವೃದ್ದಿಪಡಿಸುವಲ್ಲಿ ಅಧಿಕಾರಿಗಳು ಶ್ರಮಿಸುವಂತೆ ಅವರು ತಿಳಿಸಿದರು.

2018-19ನೇ ಸಾಲಿನ ಅಡಿ ಜಿಲ್ಲೆಯ ವಿಜಯಪುರ ತಾಲೂಕಿನ ಜಾಲಗೇರಿ, ಬರಟಗಿ, ಮಖಣಾಪುರ, ಕನ್ನಾಳ, ಹುಬನೂರ, ಇಂಡಿ ತಾಲೂಕಿನ ಲಿಂಗದಳ್ಳಿ ಮತ್ತು ಹಡಲಸಂಗ, ಸಿಂದಗಿ ತಾಲೂಕಿನ ದೇವೂರ, ಗುತ್ತರಗಿ ಹಾಗೂ ಮುದ್ದೇಬಿಹಾಳ ತಾಲೂಕಿನ ಗೆದ್ದಲಮರಿ ಗ್ರಾಮಗಳನ್ನು ಆಯ್ಕೆ ಮಾಡಲಾಗಿದೆ ಎಂದು ತಿಳಿಸಿದರು. ಪ್ರತಿಯೊಂದು ಗ್ರಾಮಕ್ಕೆ 40 ಲಕ್ಷ ರೂ. ಅನುದಾನವನ್ನು ವೆಚ್ಚ ಮಾಡಲಾಗುತ್ತಿದ್ದು, ಈಗಾಗಲೇ ಗ್ರಾಮಗಳಲ್ಲಿ ಸಮಗ್ರ ಅಭಿವೃದ್ದಿ ಕಾರ್ಯಗಳನ್ನು ಕೈಗೊಳ್ಳಲು ಜಿಲ್ಲಾ ಹಾಗೂ ಗ್ರಾಮ ಮಟ್ಟದಲ್ಲಿ ಸಮಿತಿಗಳನ್ನು ರಚಿಸಲಾಗಿದೆ ಎಂದು ಹೇಳಿದರು.

ಇನ್ನು ಜಿಲ್ಲಾ ಪಂಚಾಯತ್ ಸಿಇಒ ಗೋವಿಂದರೆಡ್ಡಿ ಮಾತನಾಡಿ, ಆಯ್ಕೆಯಾದ ಗ್ರಾಮಗಳಲ್ಲಿ ಗ್ರಾಮ ಮಟ್ಟದ ಸಭೆಯನ್ನು ಕರೆದು, ಈ ಯೋಜನೆಯಡಿ ಅಂಗನವಾಡಿ ಕಟ್ಟಡಗಳ ನಿರ್ಮಾಣ, ಶಾಲೆ ಮತ್ತು ಅಂಗನವಾಡಿಗಳಲ್ಲಿನ ಶೌಚಾಲಯಗಳ ನಿರ್ಮಾಣ - ದುರಸ್ತಿ ಕಾರ್ಯ, ಕುಡಿವ ನೀರು ಮತ್ತು ಮೂಲ ಸೌಕರ್ಯಗಳನ್ನು ಅಭಿವೃದ್ಧಿಪಡಿಸುವುದು ಸೇರಿದಂತೆ ಸೋಲಾರ ದೀಪ ಹಾಗೂ ಬೀದಿ ದೀಪಗಳನ್ನು ಅಭಿವೃದ್ದಿಗೊಳಿಸುವ ಕಾಮಗಾರಿಗಳನ್ನು ಮುಖ್ಯವಾಗಿ ಕೈಗೊಳ್ಳಬೇಕು ಎಂದರು.

ಅದರಂತೆ ವಿವಿಧ ಮೂಲ ಸೌಕರ್ಯಗಳನ್ನು ಅಭಿವೃದ್ಧಿಪಡಿಸುವ ಕಾಮಗಾರಿಗಳನ್ನು ಕೈಗೊಳ್ಳಲು ಅವಕಾಶ ಕಲ್ಪಿಸಲಾಗಿರುತ್ತದೆ. ಕ್ರಿಯಾ ಯೋಜನೆಯನ್ನು ಸಿದ್ಧಪಡಿಸಿ ಸಂಬಂಧಪಟ್ಟ ಗ್ರಾಮ ಪಂಚಾಯತ್ ಅಧ್ಯಕ್ಷರು ಗ್ರಾಮ ಸಭೆ ಕರೆದು, ಸಭೆಯಲ್ಲಿ ಅನುಮೋದನೆ ಪಡೆದು, ಜಿಲ್ಲಾ ಮಟ್ಟದ ಸಮಿತಿಗೆ ಅನುಮೋದನೆಗಾಗಿ ಡಿಸೆಂಬರ್ 20ರೊಳಗೆ ಸಲ್ಲಿಸಬೇಕು ಎಂದು ಹೇಳಿದರು.

ವಿಜಯಪುರ: ಪ್ರಧಾನಮಂತ್ರಿ ಆದರ್ಶ ಗ್ರಾಮ ಯೋಜನೆಯಡಿ ಆಯ್ಕೆಯಾದ ಗ್ರಾಮಗಳನ್ನು ಸಂಪೂರ್ಣವಾಗಿ ಆದರ್ಶ ಗ್ರಾಮಗಳನ್ನಾಗಿ ಪರಿವರ್ತಿಸುವಂತೆ ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ್ ಅಧಿಕಾರಿಗಳಿಗೆ ಸಲಹೆ ನೀಡಿದ್ದಾರೆ. ಸಮಾಜ ಕಲ್ಯಾಣ ಇಲಾಖೆ ವತಿಯಿಂದ ನಡೆದ ಗ್ರಾಮ ಮಟ್ಟದ ಸಮಿತಿಯ ತರಬೇತಿ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಈ ಯೋಜನೆಯಡಿ ಪರಿಶಿಷ್ಟ ಜನಾಂಗದವರು ಹೆಚ್ಚಿರುವ ಗ್ರಾಮಗಳನ್ನು ಆಯ್ಕೆ ಮಾಡಲಾಗುತ್ತದೆ. ಈ ಗ್ರಾಮಗಳಲ್ಲಿ ಶೈಕ್ಷಣಿಕ ಪ್ರಗತಿ ಹೆಚ್ಚಿಸುವುದರ ಜೊತೆಗೆ ಮೂಲ ಸೌಕರ್ಯಗಳನ್ನು ಆ ಗ್ರಾಮಗಳಿಗೆ ಕಲ್ಪಿಸುವುದಾಗಿದೆ. ಇದು ಕೇಂದ್ರ ಸರ್ಕಾರದ ಯೋಜನೆಯಾಗಿದ್ದು, ಸಂಸದರ ಆದರ್ಶ ಗ್ರಾಮವಾಗಿ ಅಭಿವೃದ್ದಿಪಡಿಸುವಲ್ಲಿ ಅಧಿಕಾರಿಗಳು ಶ್ರಮಿಸುವಂತೆ ಅವರು ತಿಳಿಸಿದರು.

2018-19ನೇ ಸಾಲಿನ ಅಡಿ ಜಿಲ್ಲೆಯ ವಿಜಯಪುರ ತಾಲೂಕಿನ ಜಾಲಗೇರಿ, ಬರಟಗಿ, ಮಖಣಾಪುರ, ಕನ್ನಾಳ, ಹುಬನೂರ, ಇಂಡಿ ತಾಲೂಕಿನ ಲಿಂಗದಳ್ಳಿ ಮತ್ತು ಹಡಲಸಂಗ, ಸಿಂದಗಿ ತಾಲೂಕಿನ ದೇವೂರ, ಗುತ್ತರಗಿ ಹಾಗೂ ಮುದ್ದೇಬಿಹಾಳ ತಾಲೂಕಿನ ಗೆದ್ದಲಮರಿ ಗ್ರಾಮಗಳನ್ನು ಆಯ್ಕೆ ಮಾಡಲಾಗಿದೆ ಎಂದು ತಿಳಿಸಿದರು. ಪ್ರತಿಯೊಂದು ಗ್ರಾಮಕ್ಕೆ 40 ಲಕ್ಷ ರೂ. ಅನುದಾನವನ್ನು ವೆಚ್ಚ ಮಾಡಲಾಗುತ್ತಿದ್ದು, ಈಗಾಗಲೇ ಗ್ರಾಮಗಳಲ್ಲಿ ಸಮಗ್ರ ಅಭಿವೃದ್ದಿ ಕಾರ್ಯಗಳನ್ನು ಕೈಗೊಳ್ಳಲು ಜಿಲ್ಲಾ ಹಾಗೂ ಗ್ರಾಮ ಮಟ್ಟದಲ್ಲಿ ಸಮಿತಿಗಳನ್ನು ರಚಿಸಲಾಗಿದೆ ಎಂದು ಹೇಳಿದರು.

ಇನ್ನು ಜಿಲ್ಲಾ ಪಂಚಾಯತ್ ಸಿಇಒ ಗೋವಿಂದರೆಡ್ಡಿ ಮಾತನಾಡಿ, ಆಯ್ಕೆಯಾದ ಗ್ರಾಮಗಳಲ್ಲಿ ಗ್ರಾಮ ಮಟ್ಟದ ಸಭೆಯನ್ನು ಕರೆದು, ಈ ಯೋಜನೆಯಡಿ ಅಂಗನವಾಡಿ ಕಟ್ಟಡಗಳ ನಿರ್ಮಾಣ, ಶಾಲೆ ಮತ್ತು ಅಂಗನವಾಡಿಗಳಲ್ಲಿನ ಶೌಚಾಲಯಗಳ ನಿರ್ಮಾಣ - ದುರಸ್ತಿ ಕಾರ್ಯ, ಕುಡಿವ ನೀರು ಮತ್ತು ಮೂಲ ಸೌಕರ್ಯಗಳನ್ನು ಅಭಿವೃದ್ಧಿಪಡಿಸುವುದು ಸೇರಿದಂತೆ ಸೋಲಾರ ದೀಪ ಹಾಗೂ ಬೀದಿ ದೀಪಗಳನ್ನು ಅಭಿವೃದ್ದಿಗೊಳಿಸುವ ಕಾಮಗಾರಿಗಳನ್ನು ಮುಖ್ಯವಾಗಿ ಕೈಗೊಳ್ಳಬೇಕು ಎಂದರು.

ಅದರಂತೆ ವಿವಿಧ ಮೂಲ ಸೌಕರ್ಯಗಳನ್ನು ಅಭಿವೃದ್ಧಿಪಡಿಸುವ ಕಾಮಗಾರಿಗಳನ್ನು ಕೈಗೊಳ್ಳಲು ಅವಕಾಶ ಕಲ್ಪಿಸಲಾಗಿರುತ್ತದೆ. ಕ್ರಿಯಾ ಯೋಜನೆಯನ್ನು ಸಿದ್ಧಪಡಿಸಿ ಸಂಬಂಧಪಟ್ಟ ಗ್ರಾಮ ಪಂಚಾಯತ್ ಅಧ್ಯಕ್ಷರು ಗ್ರಾಮ ಸಭೆ ಕರೆದು, ಸಭೆಯಲ್ಲಿ ಅನುಮೋದನೆ ಪಡೆದು, ಜಿಲ್ಲಾ ಮಟ್ಟದ ಸಮಿತಿಗೆ ಅನುಮೋದನೆಗಾಗಿ ಡಿಸೆಂಬರ್ 20ರೊಳಗೆ ಸಲ್ಲಿಸಬೇಕು ಎಂದು ಹೇಳಿದರು.

Intro:ವಿಜಯಪುರ Body:ವಿಜಯಪುರ: ಪ್ರಧಾನಮಂತ್ರಿ ಆದರ್ಶ ಗ್ರಾಮ ಯೋಜನೆಯಡಿ ಆಯ್ಕೆಯಾದ ಗ್ರಾಮಗಳಲ್ಲಿ ತಮ್ಮ ಇಲಾಖೆಯಿಂದ ಅನುಷ್ಠಾನಗೊಳ್ಳುವ ಕಾಮಗಾರಿಗಳನ್ನು ಹಾಗೂ ಫಲಾನುಭವಿ ಯೋಜನೆಗಳನ್ನು ಜಾರಿಗೆ ತಂದು, ಇಡೀ ಗ್ರಾಮವನ್ನು ಆದರ್ಶ ಗ್ರಾಮವನ್ನಾಗಿ ಪರಿವರ್ತಿಸುವಂತೆ ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ ಅಧಿಕಾರಿಗಳಿಗೆ ಸಲಹೆ ನೀಡಿದ್ದಾರೆ.
ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಸಮಾಜ ಕಲ್ಯಾಣ ಇಲಾಖೆ ವತಿಯಿಂದ 2018-19ನೇ ಸಾಲಿನ ಪ್ರಧಾನಮಂತ್ರಿ ಆದರ್ಶ ಗ್ರಾಮ ಯೋಜನೆಯಡಿಯಲ್ಲಿ ಜಿಲ್ಲೆಯಿಂದ ಆಯ್ಕೆಯಾದ ಗ್ರಾಮಗಳ ಗ್ರಾಮ ಮಟ್ಟದ ಸಮಿತಿಯ ತರಬೇತಿ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಈ ಯೋಜನೆಯಡಿಯಲ್ಲಿ ಪರಿಶಿಷ್ಟ ಜನಾಂಗದವರು ಹೆಚ್ಚಿರುವ ಗ್ರಾಮಗಳನ್ನು ಆಯ್ಕೆ ಮಾಡಲಾಗುತ್ತದೆ. ಈ ಗ್ರಾಮಗಳಲ್ಲಿ ಶೈಕ್ಷಣಿಕ ಪ್ರಗತಿಯನ್ನು ಹೆಚ್ಚಿಸುವುದರ ಜೊತೆಗೆ ಮೂಲ ಸೌಕರ್ಯಗಳನ್ನು ಆ ಗ್ರಾಮಗಳಿಗೆ ಕಲ್ಪಿಸುವುದಾಗಿದೆ. ಪ್ರಧಾನಮಂತ್ರಿ ಆದರ್ಶ ಗ್ರಾಮ ಯೋಜನೆಯೂ ಕೇಂದ್ರ ಸರ್ಕಾರದ ಯೋಜನೆಯಾಗಿದ್ದು, ಸಂಸದರ ಆದರ್ಶ ಗ್ರಾಮವಾಗಿ ಅಭಿವೃದ್ದಿಪಡಿಸುವಲ್ಲಿ ಅಧಿಕಾರಿಗಳು ಶ್ರಮಿಸುವಂತೆ ಅವರು ತಿಳಿಸಿದರು.
2018-19ನೇ ಸಾಲಿಗೆ ಜಿಲ್ಲೆಯ ವಿಜಯಪುರ ತಾಲೂಕಿನ ಜಾಲಗೇರಿ, ಬರಟಗಿ, ಮಖಣಾಪುರ, ಕನ್ನಾಳ, ಹುಬನೂರ, ಇಂಡಿ ತಾಲೂಕಿನ ಲಿಂಗದಳ್ಳಿ ಮತ್ತು ಹಡಲಸಂಗ, ಸಿಂದಗಿ ತಾಲೂಕಿನ ದೇವೂರ, ಗುತ್ತರಗಿ, ಮುದ್ದೇಬಿಹಾಳ ತಾಲೂಕಿನ ಗೆದ್ದಲಮರಿ ಗ್ರಾಮಗಳನ್ನು ಆಯ್ಕೆ ಮಾಡಲಾಗಿದ್ದು, ಈ ಗ್ರಾಮಗಳಲ್ಲಿ ಅಭಿವೃದ್ದಿ ಕಾಮಗಾರಿಗಳನ್ನು ಕೈಗೊಳ್ಳಲು ಪ್ರತಿಯೊಂದು ಗ್ರಾಮಕ್ಕೆ 40 ಲಕ್ಷ ರೂ. ಅನುದಾನವನ್ನು ವೆಚ್ಚ ಮಾಡಲಾಗುತ್ತದೆ. ಈಗಾಗಲೇ ಗ್ರಾಮಗಳಲ್ಲಿ ಸಮಗ್ರ ಅಭಿವೃದ್ದಿ ಕಾರ್ಯಗಳನ್ನು ಕೈಗೊಳ್ಳಲು ಜಿಲ್ಲಾ ಹಾಗೂ ಗ್ರಾಮ ಮಟ್ಟದಲ್ಲಿ ಸಮಿತಿಗಳನ್ನು ರಚಿಸಲಾಗಿದೆ ಎಂದು ಹೇಳಿದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಗೋವಿಂದ ರೆಡ್ಡಿ ಅವರು ಮಾತನಾಡಿ, ಆಯ್ಕೆಯಾದ ಗ್ರಾಮಗಳಲ್ಲಿ ಗ್ರಾಮ ಮಟ್ಟದ ಸಭೆಯನ್ನು ಕರೆದು, ಈ ಯೋಜನೆಯಡಿ ಅಂಗನವಾಡಿ ಕಟ್ಟಡಗಳ ನಿರ್ಮಾಣ, ಶಾಲೆ ಮತ್ತು ಅಂಗನವಾಡಿಗಳಲ್ಲಿನ ಶೌಚಾಲಯಗಳ ನಿರ್ಮಾಣ-ದುರಸ್ತಿ ಕಾರ್ಯ, ಕುಡಿಯುವ ನೀರು ಮತ್ತು ಮೂಲಭೂತ ಸೌಕರ್ಯಗಳನ್ನು ಅಭಿವೃದ್ದಿಪಡಿಸುವುದು, ಸೋಲಾರ ದೀಪ ಹಾಗೂ ಬೀದಿದೀಪಗಳನ್ನು ಅಭಿವೃದ್ದಿಗೊಳಿಸುವ ಕಾಮಗಾರಿಗಳನ್ನು ಮುಖ್ಯವಾಗಿ ಕೈಗೊಳ್ಳಬೇಕು.
ಅದರಂತೆ ವಿವಿಧ ಮೂಲಭೂತ ಸೌಕರ್ಯಗಳನ್ನು ಅಭಿವೃದ್ದಿಪಡಿಸುವ ಕಾಮಗಾರಿಗಳನ್ನು ಕೈಗೊಳ್ಳಲು ಅವಕಾಶ ಕಲ್ಪಿಸಲಾಗಿರುತ್ತದೆ. ಕ್ರೀಯಾ ಯೋಜನೆಯನ್ನು ಸಿದ್ಧಪಡಿಸಿ ಸಂಬಂಧಪಟ್ಟ ಗ್ರಾಮ ಪಂಚಾಯತ್ ಅಧ್ಯಕ್ಷರು ಗ್ರಾಮ ಸಭೆ ಕರೆದು, ಸಭೆಯಲ್ಲಿ ಅನುಮೋದನೆ ಪಡೆದು, ಜಿಲ್ಲಾ ಮಟ್ಟದ ಸಮಿತಿಗೆ ಅನುಮೋದನೆಗಾಗಿ ಡಿ.20ರೊಳಗೆ ಸಲ್ಲಿಸಬೇಕು ಎಂದು ಹೇಳಿದರು.
ಗ್ರಾಮ ಮಟ್ಟದ ಸಮಿತಿಯೂ ಪ್ರತಿ ತಿಂಗಳು ನಿಗದಿತ ನಮೂನೆಯಲ್ಲಿ ಕಾಮಗಾರಿಗಳ ಪ್ರಗತಿ ವರದಿಯನ್ನು ಹಾಗೂ ಗ್ರಾಮದಲ್ಲಿ ಯಾವ ಯಾವ ಅಭಿವೃದ್ದಿ ಕಾಮಗಾರಿಗಳನ್ನು ಆದ್ಯತೆಯ ಮೇಲೆ ಪರಿಗಣಿಸಬೇಕಾಗಿರುತ್ತದೆ ಎಂಬ ಬಗ್ಗೆ ಸಮೀಕ್ಷೆ ನಡೆಸಿ ಗ್ರಾಮ ಅಭಿವೃದ್ದಿ ಕ್ರೀಯಾಯೋಜನೆಯನ್ನು ಸಿದ್ಧಪಡಿಸಿ ಗ್ರಾಮ ಸಭಾ ಅನುಮೋದನೆಯೊಂದಿಗೆ ಜಿಲ್ಲಾ ಸಮಿತಿ ಅನುಮೊದನೆಗೆ ಸಲ್ಲಿಸಬೇಕು ಎಂದು ಹೇಳಿದರು.
ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಮಹೇಶ ಪೋತದಾರ ಮಾತನಾಡಿ, ಪ್ರಧಾನಮಂತ್ರಿ ಆದರ್ಶ ಗ್ರಾಮ ಯೋಜನೆಯಡಿ ಆಯ್ಕೆಯಾದ ಗ್ರಾಮಗಳಲ್ಲಿ ಮನೆ-ಮನೆಗೆ ತೆರಳಿ ಸಮೀಕ್ಷೆ ಮಾಡಲು ಎನ್.ಜಿ.ಓಗಳನ್ನು ನೇಮಕ ಮಾಡಲಾಗಿದೆ. ಗ್ರಾಮ ಮಟ್ಟದ ಸಮೀಕ್ಷೆ ವೇಳೆಯಲ್ಲಿ ಸೂಕ್ತ ಸಹಕಾರವನ್ನು ಎನ್.ಜಿ.ಓ. ಸಮೀಕ್ಷೆದಾರರಿಗೆ ನೀಡಬೇಕು ಎಂದು ಹೇಳಿದರು.
ಕಾರ್ಯಾಗಾರದಲ್ಲಿ ಜಿಲ್ಲೆಯ ಎಲ್ಲ ತಾಲೂಕಿನ ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕರು, ಗ್ರಾಮ ಪಂಚಾಯತ್ ಅಧ್ಯಕ್ಷರು, ಅಂಗನವಾಡಿ ಕಾರ್ಯಕರ್ತೆಯರು ಇತರರು ಉಪಸ್ಥಿತರಿದ್ದರು.Conclusion:ವಿಜಯಪುರ

For All Latest Updates

ETV Bharat Logo

Copyright © 2024 Ushodaya Enterprises Pvt. Ltd., All Rights Reserved.