ETV Bharat / state

ಬಂಗಾಳದಲ್ಲಿ ಮಮತಾ ಬ್ಯಾನರ್ಜಿ ಸೋಲು ಖಚಿತ: ಡಿಸಿಎಂ ಕಾರಜೋಳ - ಪಶ್ಚಿಮ ಬಂಗಾಳ ಚುನಾವಣೆ,

ಪಶ್ವಿಮ ಬಂಗಾಳ ವಿಧಾನಸಭೆ ಚುನಾವಣೆಯಲ್ಲಿ ಮಮತಾ ಬ್ಯಾನರ್ಜಿ ಖಂಡಿತ ಸೋಲು ಕಾಣುತ್ತಾರೆ. ಈ ಚುನಾವಣೆಯಲ್ಲಿ ಎನ್​ಡಿಎ ಮೈತ್ರಿಕೂಟ ಅಧಿಕಾರಕ್ಕೆ ಬರುತ್ತದೆ ಎಂದು ಡಿಸಿಎಂ ಗೋವಿಂದ ಕಾರಜೋಳ ವಿಶ್ವಾಸ ವ್ಯಕ್ತಪಡಿಸಿದರು.

dcm govinda karjola
ಡಿಸಿಎಂ ಗೋವಿಂದ ಕಾರಜೋಳ ಹೇಳಿಕೆ
author img

By

Published : Mar 21, 2021, 1:58 PM IST

ವಿಜಯಪುರ: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಸರ್ಕಾರದ ಕೆಟ್ಟ ಆಡಳಿತದಿಂದ ಜನತೆ ರೋಸಿ ಹೋಗಿದ್ದು, ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಆಡಳಿತಾರೂಢ ಟಿಎಂಸಿಗೆ ಸೋಲಾಗಲಿದೆ. ಬರುವ ಚುನಾವಣೆಯಲ್ಲಿ ಬಂಗಾಳದಲ್ಲಿ ಎನ್​ಡಿಎ ಮೈತ್ರಿಕೂಟ ಅಧಿಕಾರಕ್ಕೆ ಬರಲಿದೆ ಎಂದು ಡಿಸಿಎಂ ಗೋವಿಂದ ಕಾರಜೋಳ ಹೇಳಿದರು.

ಡಿಸಿಎಂ ಗೋವಿಂದ ಕಾರಜೋಳ ಹೇಳಿಕೆ


ಜಿಲ್ಲೆಯ ಇಂಡಿ ತಾಲೂಕಿನ ರಾಜನಾಳ ತಾಂಡಾದಲ್ಲಿ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ಮಮತಾ ಬ್ಯಾನರ್ಜಿ ಆಡಳಿತಾವಧಿಯಲ್ಲಿ ಸ್ವಜನ‌ಪಕ್ಷಪಾತ, ಭ್ರಷ್ಟಾಚಾರ, ಶೂನ್ಯ ಅಭಿವೃದ್ಧಿ ನೀಡಿದ್ದು, ಅವರ ಆಡಳಿತದಿಂದ ಬಂಗಾಳದ ಜನತೆ ಆಕ್ರೋಶಗೊಂಡಿದ್ದಾರೆ ಎಂದರು.


ಪರಿಶಿಷ್ಟ ಜಾತಿ ಜನರ ಕಲ್ಯಾಣದಿಂದ ಮಮತಾ ಬ್ಯಾನರ್ಜಿ ದೂರ ಉಳಿದಿದ್ದಾರೆ. ಹೀಗಾಗಿ ಮಮತಾ ಸೋಲು ಖಚಿತವಾಗಿದೆ ಎಂದರು.

ಇದನ್ನೂ ಓದಿ:ಪ್ರತಾಪಗೌಡ ಪಾಟೀಲ 20 ಸಾವಿರ ಮತಗಳ ಅಂತರದಿಂದ ಗೆಲ್ಲಲಿದ್ದಾರೆ; ಸಿಎಂ

ವಿಜಯಪುರ: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಸರ್ಕಾರದ ಕೆಟ್ಟ ಆಡಳಿತದಿಂದ ಜನತೆ ರೋಸಿ ಹೋಗಿದ್ದು, ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಆಡಳಿತಾರೂಢ ಟಿಎಂಸಿಗೆ ಸೋಲಾಗಲಿದೆ. ಬರುವ ಚುನಾವಣೆಯಲ್ಲಿ ಬಂಗಾಳದಲ್ಲಿ ಎನ್​ಡಿಎ ಮೈತ್ರಿಕೂಟ ಅಧಿಕಾರಕ್ಕೆ ಬರಲಿದೆ ಎಂದು ಡಿಸಿಎಂ ಗೋವಿಂದ ಕಾರಜೋಳ ಹೇಳಿದರು.

ಡಿಸಿಎಂ ಗೋವಿಂದ ಕಾರಜೋಳ ಹೇಳಿಕೆ


ಜಿಲ್ಲೆಯ ಇಂಡಿ ತಾಲೂಕಿನ ರಾಜನಾಳ ತಾಂಡಾದಲ್ಲಿ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ಮಮತಾ ಬ್ಯಾನರ್ಜಿ ಆಡಳಿತಾವಧಿಯಲ್ಲಿ ಸ್ವಜನ‌ಪಕ್ಷಪಾತ, ಭ್ರಷ್ಟಾಚಾರ, ಶೂನ್ಯ ಅಭಿವೃದ್ಧಿ ನೀಡಿದ್ದು, ಅವರ ಆಡಳಿತದಿಂದ ಬಂಗಾಳದ ಜನತೆ ಆಕ್ರೋಶಗೊಂಡಿದ್ದಾರೆ ಎಂದರು.


ಪರಿಶಿಷ್ಟ ಜಾತಿ ಜನರ ಕಲ್ಯಾಣದಿಂದ ಮಮತಾ ಬ್ಯಾನರ್ಜಿ ದೂರ ಉಳಿದಿದ್ದಾರೆ. ಹೀಗಾಗಿ ಮಮತಾ ಸೋಲು ಖಚಿತವಾಗಿದೆ ಎಂದರು.

ಇದನ್ನೂ ಓದಿ:ಪ್ರತಾಪಗೌಡ ಪಾಟೀಲ 20 ಸಾವಿರ ಮತಗಳ ಅಂತರದಿಂದ ಗೆಲ್ಲಲಿದ್ದಾರೆ; ಸಿಎಂ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.