ವಿಜಯಪುರ: ಬೆಚ್ಚಿಬೀಳಿಸುವ ಮತ್ತೊಂದು ಘಟನೆಗೆ ವಿಜಯಪುರ ಜಿಲ್ಲೆ ಸಾಕ್ಷಿಯಾಗಿದೆ. ವಿವಾಹೇತರ ಸಂಬಂಧ ಶಂಕೆ ಹಿನ್ನೆಲೆ ಯುವಕನೊರ್ವನನ್ನು ಹತ್ಯೆಗೈದು ಬಳಿಕ ಬೆಂಕಿ ಹಚ್ಚಿ ಸುಟ್ಟು ಹಾಕಿರುವ ಭೀಕರ ಘಟನೆ ಜಿಲ್ಲೆಯ ಚಡಚಣ ತಾಲೂಕಿನ ಉಮದಿ ರಸ್ತೆಯ ಹೊರವಲಯದಲ್ಲಿ ನಡೆದಿದೆ.
ಸಿಂದಗಿ ತಾಲೂಕಿನ ಬೋರಗಿ ಗ್ರಾಮದ ನಿವಾಸಿ ಅರವಿಂದ ಮಲ್ಲಣ್ಣ ದ್ಯಾಪುರ ಹತ್ಯೆಗೀಡಾಗಿರುವ ಯುವಕ. ಮೃತ ಯುವಕನು ಯುವತಿಯೊಂದಿಗೆ ವಿವಾಹೇತರ ಸಂಬಂಧ ಹೊಂದಿದ್ದ ಹಿನ್ನೆಲೆ ಆಕೆಯ ಕುಟುಂಬಸ್ಥರು ಹತ್ಯೆಗೈದಿರುವ ಬಗ್ಗೆ ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ.
ಘಟನಾ ಸ್ಥಳಕ್ಕೆ ಚಡಚಣ ಪೊಲೀಸರು ಭೇಟಿ ನೀಡಿ ಮಾಹಿತಿ ಕಲೆ ಹಾಕುತ್ತಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.