ETV Bharat / state

ವಿಜಯಪುರ: ಜಿಲ್ಲಾ ಉಸ್ತುವಾರಿ ಸಚಿವರಿಂದ ಬರ ಪರಿಶೀಲನೆ

author img

By ETV Bharat Karnataka Team

Published : Nov 15, 2023, 5:26 PM IST

ಸಚಿವ ಎಂಬಿ ಪಾಟೀಲ್ ಅವರು ಚಡಚಣ ಹಾಗೂ ಇಂಡಿ ತಾಲೂಕುಗಳ ಬರ ಪೀಡಿತ ಗ್ರಾಮಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

Drought check by district in-charge minister
Drought check by district in-charge minister
ಜಿಲ್ಲಾ ಉಸ್ತುವಾರಿ ಸಚಿವರಿಂದ ಬರ ಪರಿಶೀಲನೆ

ವಿಜಯಪುರ: ಕೇಂದ್ರ ಸರ್ಕಾರ ರಾಜ್ಯದಲ್ಲಿನ ಬರದ ಬಗ್ಗೆ ಗಮನ ಹರಿಸುತ್ತಿಲ್ಲ. ಬರ ನಿರ್ವಹಣೆ ಚರ್ಚೆಗೆ ಮುಖ್ಯಮಂತ್ರಿಗಳಿಗೆ ಸಮಯಾವಕಾಶ ಕೂಡ ನೀಡುತ್ತಿಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಂ ಬಿ ಪಾಟೀಲ್ ಹೇಳಿದರು. ನಾಗಠಾಣ ಹಾಗೂ ಇಂಡಿ ತಾಲೂಕುಗಳಲ್ಲಿ ಬರ ಪರಿಶೀಲನೆ ನಡೆಸಿ ಮಾತನಾಡಿದ ಅವರು, ಕೇಂದ್ರ ಸಚಿವರು ನಮಗೆ ಸಿಗುತ್ತಿಲ್ಲ. ಭೇಟಿಗೆ ಸಮಯ ಸಹ ನೀಡುತ್ತಿಲ್ಲ. ಅವರಲ್ಲಿ ಸಮಯ ಕೊಡದ ಪರಿಸ್ಥಿತಿ ನಿರ್ಮಾಣವಾಗಿದೆ. ರೈತರು ಯಾವುದೋ ಒಂದು ಪಕ್ಷದ ಆಸ್ತಿ ಅಲ್ಲ, ಅವರು ಮತ ಹಾಕಿರಬಹುದಷ್ಟೇ. ರಾಜಕೀಯ ಬದಿಗಿಟ್ಟು ಎಲ್ಲರೂ ರೈತರ ನೆರವಿಗೆ ಬರಬೇಕಿದೆ ಎಂದು ಒತ್ತಾಯಿಸಿದರು.

ಕೇಂದ್ರದ ಮೇಲೆ ಒತ್ತಡ ಹಾಕುವ ಮೂಲಕ ನಾವು ನಮ್ಮ ಜವಾಬ್ದಾರಿಯಿಂದ‌ ನುಣಿಚಿಕೊಳ್ಳುತ್ತಿಲ್ಲ. ಸಂಸದರು ಕೇಂದ್ರ ಸರ್ಕಾರದ ಮನವೊಲಿಸಿ ಸಹಾಯಕ್ಕೆ ಬರಬೇಕಿದೆ. ಇದು ಅವರು ಮಾಡಬೇಕಿರುವ ಮೊದಲ ಕೆಲಸ. ಅದಕ್ಕಾಗಿಯೇ ಸಂಸದರನ್ನು ರಾಜ್ಯದ ಜನರು ಆಯ್ಕೆ ಮಾಡಿ ಕಳುಹಿಸಿದ್ದಾರೆ. ಈಗಾಗಲೇ ಬರ ಅಧ್ಯಯನಕ್ಕೆ ಬಂದಿದ್ದ ತಂಡ ಕೇಂದ್ರಕ್ಕೆ ವರದಿ ಒಪ್ಪಿಸಿದೆ. ಈ ವರೆಗೆ ಪರಿಹಾರ ಬಂದಿಲ್ಲ. ಕೇಂದ್ರ ನಿಯಮಾವಳಿಯಂತೆ ಪರಿಹಾರ ನೀಡಬೇಕಿದೆ.

ರಾಜ್ಯ ಸರ್ಕಾರವು ತಮ್ಮ ಇತಿಮಿತಿಯಲ್ಲಿ ಸಹಾಯ ಮಾಡೇ ಮಾಡುತ್ತದೆ. ನಷ್ಟವಾದ ಪ್ರಮಾಣದ ಅರ್ಧವನ್ನಾದರೂ ಕೇಂದ್ರ ಸರ್ಕಾರ ನೀಡಬೇಕು. ಏಕರೆಗೆ 12 ಸಾವಿರವಾದರೂ ಕೊಡಲಿ, 24 ಸಾವಿರ ಕೇಳಿದರೆ ಅದು ರಾಜಕೀಯವಾಗುತ್ತೆ. ಈ ನಿಟ್ಟಿನಲ್ಲಿ ರಾಜ್ಯದ 26 ಸಂಸದರು ಬರದ ಬಗ್ಗೆ ಕೇಂದ್ರ ಹಾಗೂ ಪ್ರಧಾನಿಗಳ ಗಮನ ಸೆಳೆಯುತ್ತಿಲ್ಲ ಎಂದು ಸಚಿವರು ಆಕ್ರೋಶ ಹೊರಹಾಕಿದರು. ಎನ್‌ಡಿ‌ಆರ್‌ಎಫ್​ನ ನಿಯಮಾವಳಿಯಲ್ಲಿ ಬದಲಾಗಬೇಕು. ಜನಪ್ರತಿನಿಧಿಗಳಾದ ನಾವು ಸಹ ಒತ್ತಾಯ ಮಾಡುತ್ತಿದ್ದೇವೆ ಎಂದು ಅವರು ಇದೇ ವೇಳೆ ಹೇಳಿದರು.

ಇದಕ್ಕೂ ಮುನ್ನ ಸಚಿವರು ವಿಜಯಪುರ ತಾಲೂಕಿನ ತಿಡಗುಂದಿ ಗ್ರಾಮದ ಬಳಿ ಮುಳವಾಡ ಏತ ನೀರಾವರಿ ಯೋಜನೆ 2ರ ಕಾಲುವೆ ವೀಕ್ಷಣೆ ನಡೆಸಿದರು. ವಿವಿಧ ಕೆರೆಗಳಿಗೆ ನೀರು ತುಂಬಿಸುವ ಯೋಜನೆ ಕುರಿತು ಅಧಿಕಾರಿಗಳಿಂದ ಇದೇ ವೇಳೆ ಮಾಹಿತಿ ಪಡೆದರು. ಭೀಕರ ಬರಗಾಲ ಇರುವ ಹಿನ್ನೆಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗದಂತೆ ಕೆರೆಗೆ ನೀರು ತುಂಬಿಸಲು ಆದ್ಯತೆ ನೀಡುವಂತೆ ಸೂಚಿಸಿದರು. ಬಳಿಕ ಇಂಡಿ ತಾಲೂಕಿನ ಅಗಸನಾಳ ಗ್ರಾಮದ ಬಳಿ 16 ಕೆರೆಗಳಿಗೆ ನೀರು ತುಂಬಿಸುವ ಯೋಜನಾ ಸ್ಥಳಕ್ಕೆ ಭೇಟಿ ನೀಡಿ, ಕಾಮಗಾರಿ ವೀಕ್ಷಿಸಿದರು. ಆ ಬಳಿಕ ಚಡಚಣ ತಾಲೂಕಿನ ಸಾವಳಂಗ ಹಾಗೂ ಇಂಚಗೇರಿಯತ್ತ ಪ್ರಯಾಣ ಬೆಳೆಸಿದರು.

ಇಂಡಿ ಶಾಸಕ ಯಶವಂತ​ರಾಯಗೌಡ ಪಾಟೀಲ, ನಾಗಠಾಣ ಶಾಸಕ ವಿಠ್ಠಲ ಕಟಕಧೋಂಡ, ಜಿಲ್ಲಾಧಿಕಾರಿ ಭೂಬಾಲನ್, ಜಿ.ಪಂ. ಸಿಇಒ ರಾಹುಲ್ ಶಿಂಧೆ, ಎಸ್ಪಿ ಋಷಿಕೇಶ ಭಗವಾನ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

ಇದನ್ನೂ ಓದಿ: ಕುಡಿವ ನೀರು ಸಿಗದಿದ್ದರೆ ಯಾವ ಉದ್ದೇಶಕ್ಕಾಗಿ ನಾನು ಶಾಸಕನಾಗಿರಬೇಕು? ಹೊಸ ಜಿಲ್ಲೆಗಾಗಿ ಯಶವಂತರಾಯಗೌಡ ಒತ್ತಾಯ

ಜಿಲ್ಲಾ ಉಸ್ತುವಾರಿ ಸಚಿವರಿಂದ ಬರ ಪರಿಶೀಲನೆ

ವಿಜಯಪುರ: ಕೇಂದ್ರ ಸರ್ಕಾರ ರಾಜ್ಯದಲ್ಲಿನ ಬರದ ಬಗ್ಗೆ ಗಮನ ಹರಿಸುತ್ತಿಲ್ಲ. ಬರ ನಿರ್ವಹಣೆ ಚರ್ಚೆಗೆ ಮುಖ್ಯಮಂತ್ರಿಗಳಿಗೆ ಸಮಯಾವಕಾಶ ಕೂಡ ನೀಡುತ್ತಿಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಂ ಬಿ ಪಾಟೀಲ್ ಹೇಳಿದರು. ನಾಗಠಾಣ ಹಾಗೂ ಇಂಡಿ ತಾಲೂಕುಗಳಲ್ಲಿ ಬರ ಪರಿಶೀಲನೆ ನಡೆಸಿ ಮಾತನಾಡಿದ ಅವರು, ಕೇಂದ್ರ ಸಚಿವರು ನಮಗೆ ಸಿಗುತ್ತಿಲ್ಲ. ಭೇಟಿಗೆ ಸಮಯ ಸಹ ನೀಡುತ್ತಿಲ್ಲ. ಅವರಲ್ಲಿ ಸಮಯ ಕೊಡದ ಪರಿಸ್ಥಿತಿ ನಿರ್ಮಾಣವಾಗಿದೆ. ರೈತರು ಯಾವುದೋ ಒಂದು ಪಕ್ಷದ ಆಸ್ತಿ ಅಲ್ಲ, ಅವರು ಮತ ಹಾಕಿರಬಹುದಷ್ಟೇ. ರಾಜಕೀಯ ಬದಿಗಿಟ್ಟು ಎಲ್ಲರೂ ರೈತರ ನೆರವಿಗೆ ಬರಬೇಕಿದೆ ಎಂದು ಒತ್ತಾಯಿಸಿದರು.

ಕೇಂದ್ರದ ಮೇಲೆ ಒತ್ತಡ ಹಾಕುವ ಮೂಲಕ ನಾವು ನಮ್ಮ ಜವಾಬ್ದಾರಿಯಿಂದ‌ ನುಣಿಚಿಕೊಳ್ಳುತ್ತಿಲ್ಲ. ಸಂಸದರು ಕೇಂದ್ರ ಸರ್ಕಾರದ ಮನವೊಲಿಸಿ ಸಹಾಯಕ್ಕೆ ಬರಬೇಕಿದೆ. ಇದು ಅವರು ಮಾಡಬೇಕಿರುವ ಮೊದಲ ಕೆಲಸ. ಅದಕ್ಕಾಗಿಯೇ ಸಂಸದರನ್ನು ರಾಜ್ಯದ ಜನರು ಆಯ್ಕೆ ಮಾಡಿ ಕಳುಹಿಸಿದ್ದಾರೆ. ಈಗಾಗಲೇ ಬರ ಅಧ್ಯಯನಕ್ಕೆ ಬಂದಿದ್ದ ತಂಡ ಕೇಂದ್ರಕ್ಕೆ ವರದಿ ಒಪ್ಪಿಸಿದೆ. ಈ ವರೆಗೆ ಪರಿಹಾರ ಬಂದಿಲ್ಲ. ಕೇಂದ್ರ ನಿಯಮಾವಳಿಯಂತೆ ಪರಿಹಾರ ನೀಡಬೇಕಿದೆ.

ರಾಜ್ಯ ಸರ್ಕಾರವು ತಮ್ಮ ಇತಿಮಿತಿಯಲ್ಲಿ ಸಹಾಯ ಮಾಡೇ ಮಾಡುತ್ತದೆ. ನಷ್ಟವಾದ ಪ್ರಮಾಣದ ಅರ್ಧವನ್ನಾದರೂ ಕೇಂದ್ರ ಸರ್ಕಾರ ನೀಡಬೇಕು. ಏಕರೆಗೆ 12 ಸಾವಿರವಾದರೂ ಕೊಡಲಿ, 24 ಸಾವಿರ ಕೇಳಿದರೆ ಅದು ರಾಜಕೀಯವಾಗುತ್ತೆ. ಈ ನಿಟ್ಟಿನಲ್ಲಿ ರಾಜ್ಯದ 26 ಸಂಸದರು ಬರದ ಬಗ್ಗೆ ಕೇಂದ್ರ ಹಾಗೂ ಪ್ರಧಾನಿಗಳ ಗಮನ ಸೆಳೆಯುತ್ತಿಲ್ಲ ಎಂದು ಸಚಿವರು ಆಕ್ರೋಶ ಹೊರಹಾಕಿದರು. ಎನ್‌ಡಿ‌ಆರ್‌ಎಫ್​ನ ನಿಯಮಾವಳಿಯಲ್ಲಿ ಬದಲಾಗಬೇಕು. ಜನಪ್ರತಿನಿಧಿಗಳಾದ ನಾವು ಸಹ ಒತ್ತಾಯ ಮಾಡುತ್ತಿದ್ದೇವೆ ಎಂದು ಅವರು ಇದೇ ವೇಳೆ ಹೇಳಿದರು.

ಇದಕ್ಕೂ ಮುನ್ನ ಸಚಿವರು ವಿಜಯಪುರ ತಾಲೂಕಿನ ತಿಡಗುಂದಿ ಗ್ರಾಮದ ಬಳಿ ಮುಳವಾಡ ಏತ ನೀರಾವರಿ ಯೋಜನೆ 2ರ ಕಾಲುವೆ ವೀಕ್ಷಣೆ ನಡೆಸಿದರು. ವಿವಿಧ ಕೆರೆಗಳಿಗೆ ನೀರು ತುಂಬಿಸುವ ಯೋಜನೆ ಕುರಿತು ಅಧಿಕಾರಿಗಳಿಂದ ಇದೇ ವೇಳೆ ಮಾಹಿತಿ ಪಡೆದರು. ಭೀಕರ ಬರಗಾಲ ಇರುವ ಹಿನ್ನೆಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗದಂತೆ ಕೆರೆಗೆ ನೀರು ತುಂಬಿಸಲು ಆದ್ಯತೆ ನೀಡುವಂತೆ ಸೂಚಿಸಿದರು. ಬಳಿಕ ಇಂಡಿ ತಾಲೂಕಿನ ಅಗಸನಾಳ ಗ್ರಾಮದ ಬಳಿ 16 ಕೆರೆಗಳಿಗೆ ನೀರು ತುಂಬಿಸುವ ಯೋಜನಾ ಸ್ಥಳಕ್ಕೆ ಭೇಟಿ ನೀಡಿ, ಕಾಮಗಾರಿ ವೀಕ್ಷಿಸಿದರು. ಆ ಬಳಿಕ ಚಡಚಣ ತಾಲೂಕಿನ ಸಾವಳಂಗ ಹಾಗೂ ಇಂಚಗೇರಿಯತ್ತ ಪ್ರಯಾಣ ಬೆಳೆಸಿದರು.

ಇಂಡಿ ಶಾಸಕ ಯಶವಂತ​ರಾಯಗೌಡ ಪಾಟೀಲ, ನಾಗಠಾಣ ಶಾಸಕ ವಿಠ್ಠಲ ಕಟಕಧೋಂಡ, ಜಿಲ್ಲಾಧಿಕಾರಿ ಭೂಬಾಲನ್, ಜಿ.ಪಂ. ಸಿಇಒ ರಾಹುಲ್ ಶಿಂಧೆ, ಎಸ್ಪಿ ಋಷಿಕೇಶ ಭಗವಾನ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

ಇದನ್ನೂ ಓದಿ: ಕುಡಿವ ನೀರು ಸಿಗದಿದ್ದರೆ ಯಾವ ಉದ್ದೇಶಕ್ಕಾಗಿ ನಾನು ಶಾಸಕನಾಗಿರಬೇಕು? ಹೊಸ ಜಿಲ್ಲೆಗಾಗಿ ಯಶವಂತರಾಯಗೌಡ ಒತ್ತಾಯ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.