ವಿಜಯಪುರ: ದೇವರಹಿಪ್ಪರಗಿ ತಾಲೂಕಿನ ಬೊಮ್ಮನಹಳ್ಳಿ ಕೆರೆ ಸೇರಿದಂತೆ ಜಿಲ್ಲೆಯ 80 ಕೆರೆಗಳನ್ನು ತುಂಬಿಸುವಂತೆ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಕಾರ್ಯಕರ್ತರು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.
ಬೇಸಿಗೆ ಆರಂಭವಾಗುವ ಕಾರಣ, ಜನ ಜಾನುವಾರುಗಳಿಗೆ ಕುಡಿಯುವ ನೀರಿನ ಸಮಸ್ಯೆ ಎದುರಾಗುವ ಸಂಭವವಿದೆ. ಹಿಂಗಾರು ಮಳೆ ಉತ್ತಮವಾಗಿದ್ದು, ಆಲಮಟ್ಟಿ ಜಲಾಶಯದಲ್ಲಿ ನೀರು ಭರ್ತಿಯಾಗಿದೆ. ಕುಡಿಯಲು ಹಾಗೂ ಕೃಷಿ ಚಟುವಟಿಕೆಗೆ ಬೇಕಾಗುವ ನೀರು ತುಂಬಿಸುವಂತೆ ಜಿಲ್ಲಾಧಿಕಾರಿಗೆ ರೈ ತರು ಮನವರಿಕೆ ಮಾಡಿದರು.