ವಿಜಯಪುರ : ಜಿಲ್ಲೆಯ ಕಲಕೇರಿ ಗ್ರಾಮದಲ್ಲಿ ನಡೆದ ಪ್ರೇಮಿಗಳ ಮರ್ಯಾದಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರನ್ನು ಬಂಧಿಸಲಾಗಿದೆ. ಲಾಳೇಸಾಬ್ ವಲ್ಲಿಬಾಯಿ, ಅಲ್ಲಾಪಟೇಲ್, ರಫೀಕ್, ದಾವಲ್ ಪಟೇಲ್, ಬಂದಗಿಸಾಬ್ ಬಂಧಿತ ಆರೋಪಿಗಳೆಂದು ಗುರುತಿಸಲಾಗಿದೆ.
ವಿಜಯಪುರದ ವಿಶೇಷ ನ್ಯಾಯಾಲಯಕ್ಕೆ ಆರೋಪಿಗಳನ್ನು ಇಂದು ಹಾಜರುಪಡಿಸಲಾಯಿತು. ಜುಲೈ 9ರವರೆಗೆ ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ನೀಡಲಾಗಿದೆ. ದೇವರಹಿಪ್ಪರಗಿ ತಾಲೂಕಿನ ಸಲಾದಹಳ್ಳಿಯಲ್ಲಿ ಮರ್ಯಾದಾ ಹತ್ಯೆ ಪ್ರಕರಣ ನಡೆದಿತ್ತು. ಈ ಕುರಿತು ಕಲಕೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.