ETV Bharat / state

ಕಾರಿಗೆ ಅಡ್ಡಬಂದ ಕುದುರೆ ಸಾವು: ಕೃಷಿ ಅಧಿಕಾರಿಗೆ ಗಾಯ - ಈಟಿವಿ ಭಾರತ​ ಕರ್ನಾಟಕ

ವಿಜಯಪುರ ಜಿಲ್ಲೆ ನಿಡಗುಂದಿ ತಾಲೂಕಿನ ಬೇನಾಳ ಗ್ರಾಮದ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ಕಾರಿಗೆ ಕುದುರೆ ಡಿಕ್ಕಿಯಾಗಿ ಸ್ಥಳದಲ್ಲೇ ಸಾವನ್ನಪ್ಪಿದೆ.

Etv Bharathorse-hit-by-a-car-death-on-spot
ಕಾರಿಗೆ ಡಿಕ್ಕಿ ಹೊಡೆದ ಕುದುರೆ : ಸ್ಥಳದಲ್ಲೇ ಸಾವನ್ನಪ್ಪಿದ ಮೂಕ ಪ್ರಾಣಿ
author img

By

Published : Oct 17, 2022, 8:42 PM IST

ವಿಜಯಪುರ: ಚಲಿಸುತ್ತಿದ್ದ ಕಾರಿಗೆ ಕುದುರೆ ಅಡ್ಡ ಬಂದ ಪರಿಣಾಮ ಡಿಕ್ಕಿಯಾಗಿ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ನಿಡಗುಂದಿ ತಾಲೂಕಿನ ಬೇನಾಳ ಗ್ರಾಮದ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ಸಂಭವಿಸಿದೆ. ಕಾರಿನಲ್ಲಿದ್ದ ಕೃಷಿ ಆಧಿಕಾರಿ ಎನ್​ಟಿ ಗೌಡರ ಅವರಿಗೆ ಚಿಕ್ಕಪುಟ್ಟ ಗಾಯಗಳಾಗಿವೆ.

ನಿಡಗುಂದಿ ತಾಲೂಕು ಕೃಷಿ ಆಧಿಕಾರಿ ಗೌಡರ್​ ಅವರು ಕಚೇರಿಗೆ ಹೋಗುವಾಗ ಕುದುರೆ ಅಡ್ಡ ಬಂದಿದೆ. ಅದಕ್ಕೆ ಡಿಕ್ಕಿ ಹೊಡೆಯುತ್ತಿದ್ದಂತೆ ಹಿಂಬದಿ ಇದ್ದ ಕೆಎಸ್​ಆರ್​ಟಿಸಿ ಬಸ್ ಕಾರಿಗೆ ಗುದ್ದಿದೆ. ಬಸ್ ಗುದ್ದಿದ ಪರಿಣಾಮ ಕಾರು ಪಲ್ಟಿಯಾಗಿದೆ. ಗಾಯಾಳುವನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಇದರ ಮಧ್ಯೆ ತೀವ್ರ ಗಾಯಗೊಂಡಿದ್ದ ಕುದುರೆ ಸ್ಥಳದಲ್ಲಿ ಸಾವನ್ನಪ್ಪಿದೆ. ಈ ಬಗ್ಗೆ ನಿಡಗುಂದಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ಇದನ್ನೂ ಓದಿ : ಬೆಂಗಳೂರಲ್ಲಿ ರಸ್ತೆ ಗುಂಡಿ ತಪ್ಪಿಸಲು ಹೋಗಿ ಅಪಘಾತ.. ಸ್ಕೂಟರ್​ಗೆ ಬಸ್​ ಡಿಕ್ಕಿ- ತಾಯಿ ಮಗಳಿಗೆ ಗಾಯ

ವಿಜಯಪುರ: ಚಲಿಸುತ್ತಿದ್ದ ಕಾರಿಗೆ ಕುದುರೆ ಅಡ್ಡ ಬಂದ ಪರಿಣಾಮ ಡಿಕ್ಕಿಯಾಗಿ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ನಿಡಗುಂದಿ ತಾಲೂಕಿನ ಬೇನಾಳ ಗ್ರಾಮದ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ಸಂಭವಿಸಿದೆ. ಕಾರಿನಲ್ಲಿದ್ದ ಕೃಷಿ ಆಧಿಕಾರಿ ಎನ್​ಟಿ ಗೌಡರ ಅವರಿಗೆ ಚಿಕ್ಕಪುಟ್ಟ ಗಾಯಗಳಾಗಿವೆ.

ನಿಡಗುಂದಿ ತಾಲೂಕು ಕೃಷಿ ಆಧಿಕಾರಿ ಗೌಡರ್​ ಅವರು ಕಚೇರಿಗೆ ಹೋಗುವಾಗ ಕುದುರೆ ಅಡ್ಡ ಬಂದಿದೆ. ಅದಕ್ಕೆ ಡಿಕ್ಕಿ ಹೊಡೆಯುತ್ತಿದ್ದಂತೆ ಹಿಂಬದಿ ಇದ್ದ ಕೆಎಸ್​ಆರ್​ಟಿಸಿ ಬಸ್ ಕಾರಿಗೆ ಗುದ್ದಿದೆ. ಬಸ್ ಗುದ್ದಿದ ಪರಿಣಾಮ ಕಾರು ಪಲ್ಟಿಯಾಗಿದೆ. ಗಾಯಾಳುವನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಇದರ ಮಧ್ಯೆ ತೀವ್ರ ಗಾಯಗೊಂಡಿದ್ದ ಕುದುರೆ ಸ್ಥಳದಲ್ಲಿ ಸಾವನ್ನಪ್ಪಿದೆ. ಈ ಬಗ್ಗೆ ನಿಡಗುಂದಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ಇದನ್ನೂ ಓದಿ : ಬೆಂಗಳೂರಲ್ಲಿ ರಸ್ತೆ ಗುಂಡಿ ತಪ್ಪಿಸಲು ಹೋಗಿ ಅಪಘಾತ.. ಸ್ಕೂಟರ್​ಗೆ ಬಸ್​ ಡಿಕ್ಕಿ- ತಾಯಿ ಮಗಳಿಗೆ ಗಾಯ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.