ETV Bharat / state

ಟರ್ಕಿ, ಸಿರಿಯಾ ಭೂಕಂಪದಲ್ಲಿ ಸಂಬಂಧಿಕರು ಸಿಲುಕಿದ್ದರೆ ಮಾಹಿತಿ ನೀಡಿ- ವಿಜಯಪುರ ಡಿಸಿ

author img

By

Published : Feb 9, 2023, 4:18 PM IST

ಟರ್ಕಿ ಮತ್ತು ಸಿರಿಯಾದಲ್ಲಿ ಸಂಭವಿಸಿರುವ ಭೂಕಂಪದಲ್ಲಿ ವಿಜಯಪುರದ ನಾಗರಿಕರು ಸಿಲುಕಿಕೊಂಡಿದ್ದರೆ ಜಿಲ್ಲಾಡಳಿತಕ್ಕೆ ಮಾಹಿತಿ ನೀಡುವಂತೆ ಡಿಸಿ ತಿಳಿಸಿದ್ದಾರೆ.

ಜಿಲ್ಲಾಧಿಕಾರಿ ವಿಜಯ ಮಹಾಂತೇಶ ದಾನಮ್ಮನವರ
ಜಿಲ್ಲಾಧಿಕಾರಿ ವಿಜಯ ಮಹಾಂತೇಶ ದಾನಮ್ಮನವರ

ವಿಜಯಪುರ: ಟರ್ಕಿ ಮತ್ತು ಸಿರಿಯಾದಲ್ಲಿ ಸಂಭವಿಸಿರುವ ಪ್ರಬಲ ಭೂಕಂಪದಲ್ಲಿ ಜಿಲ್ಲೆಯ‌ ನಾಗರಿಕರು, ಸಂಬಂಧಿಕರು ಸಿಲುಕಿಕೊಂಡಿದ್ದರೆ ಕುಟುಂಬ ಸದಸ್ಯರು ವಿಜಯಪುರ ಜಿಲ್ಲಾಡಳಿತಕ್ಕೆ ಸಂಪರ್ಕಿಸಿ. ಎಲ್ಲಾ ರೀತಿಯ ನೆರವು ನೀಡಲು ಜಿಲ್ಲಾಡಳಿತ ಸಿದ್ದವಾಗಿದೆ. ರಾಜ್ಯ ಸರ್ಕಾರ ನೋಡಲ್ ಅಧಿಕಾರಿಯನ್ನು ನೇಮಿಸಿದೆ. ಅವರ ಮೂಲಕ ಸರ್ಕಾರ ರಕ್ಷಣೆಗೆ ಮುಂದಾಗಲಿದೆ ಎಂದು ಜಿಲ್ಲಾಧಿಕಾರಿ ವಿಜಯ ಮಹಾಂತೇಶ ದಾನಮ್ಮನವರ ತಿಳಿಸಿದ್ದಾರೆ.‌

ಭೂಕಂಪದ ಬಳಿಕ ಇಲ್ಲಿಯವರೆಗೆ ಯಾರೂ ಜಿಲ್ಲಾಡಳಿತವನ್ನು ಸಂಪರ್ಕಿಸಿಲ್ಲ. ಕುಟುಂಬಸ್ಥರು ಅಥವಾ ಪರಿಚಯಸ್ಥರು ಸಿಲುಕಿಕೊಂಡಿದ್ದರೆ ತಕ್ಷಣ ಸಂಪರ್ಕಿಸಿ, ಅಗತ್ಯ ಮಾಹಿತಿ ನೀಡಿ. ದೂರವಾಣಿ ಸಂಖ್ಯೆ: 080-1070, 080-22340676 ಇಲ್ಲವೇ ಇಮೇಲ್: seockarataka@gmail.com ಮೂಲಕ ಸಂಪರ್ಕಿಸಬಹುದು ಎಂದು ತಿಳಿಸಿದ್ದಾರೆ.

ಇದನ್ನೂ ಓದಿ:

ವಿಜಯಪುರ: ಟರ್ಕಿ ಮತ್ತು ಸಿರಿಯಾದಲ್ಲಿ ಸಂಭವಿಸಿರುವ ಪ್ರಬಲ ಭೂಕಂಪದಲ್ಲಿ ಜಿಲ್ಲೆಯ‌ ನಾಗರಿಕರು, ಸಂಬಂಧಿಕರು ಸಿಲುಕಿಕೊಂಡಿದ್ದರೆ ಕುಟುಂಬ ಸದಸ್ಯರು ವಿಜಯಪುರ ಜಿಲ್ಲಾಡಳಿತಕ್ಕೆ ಸಂಪರ್ಕಿಸಿ. ಎಲ್ಲಾ ರೀತಿಯ ನೆರವು ನೀಡಲು ಜಿಲ್ಲಾಡಳಿತ ಸಿದ್ದವಾಗಿದೆ. ರಾಜ್ಯ ಸರ್ಕಾರ ನೋಡಲ್ ಅಧಿಕಾರಿಯನ್ನು ನೇಮಿಸಿದೆ. ಅವರ ಮೂಲಕ ಸರ್ಕಾರ ರಕ್ಷಣೆಗೆ ಮುಂದಾಗಲಿದೆ ಎಂದು ಜಿಲ್ಲಾಧಿಕಾರಿ ವಿಜಯ ಮಹಾಂತೇಶ ದಾನಮ್ಮನವರ ತಿಳಿಸಿದ್ದಾರೆ.‌

ಭೂಕಂಪದ ಬಳಿಕ ಇಲ್ಲಿಯವರೆಗೆ ಯಾರೂ ಜಿಲ್ಲಾಡಳಿತವನ್ನು ಸಂಪರ್ಕಿಸಿಲ್ಲ. ಕುಟುಂಬಸ್ಥರು ಅಥವಾ ಪರಿಚಯಸ್ಥರು ಸಿಲುಕಿಕೊಂಡಿದ್ದರೆ ತಕ್ಷಣ ಸಂಪರ್ಕಿಸಿ, ಅಗತ್ಯ ಮಾಹಿತಿ ನೀಡಿ. ದೂರವಾಣಿ ಸಂಖ್ಯೆ: 080-1070, 080-22340676 ಇಲ್ಲವೇ ಇಮೇಲ್: seockarataka@gmail.com ಮೂಲಕ ಸಂಪರ್ಕಿಸಬಹುದು ಎಂದು ತಿಳಿಸಿದ್ದಾರೆ.

ಇದನ್ನೂ ಓದಿ:

ಟರ್ಕಿ, ಸಿರಿಯಾ ಭೂಕಂಪನದಲ್ಲಿ 7 ಸಾವಿರಕ್ಕೂ ಹೆಚ್ಚು ಮಂದಿ ಸಾವು: ವಿಶ್ವ ಆರೋಗ್ಯ ಸಂಸ್ಥೆ ಕಳವಳ

ಟರ್ಕಿ, ಸಿರಿಯಾ ಭೂಕಂಪ: ಸಾವಿನ ಸಂಖ್ಯೆ 15 ಸಾವಿರಕ್ಕೆ.. ಓರ್ವ ಭಾರತೀಯ ನಾಪತ್ತೆ

ಟರ್ಕಿ, ಸಿರಿಯಾದಲ್ಲಿ 'ಸಾವಿನ ಭೂಕಂಪ'.. 640 ಜನರ ಬಲಿ ಪಡೆದ ಪ್ರಕೃತಿ.. ಭಾರತದಿಂದ ನೆರವು!

ETV Bharat Logo

Copyright © 2024 Ushodaya Enterprises Pvt. Ltd., All Rights Reserved.