ETV Bharat / state

ವಿಜಯಪುರ ಲೋಕಸಭಾ ಮೈತ್ರಿ ಅಭ್ಯರ್ಥಿಗೆ ಐಟಿ‌ ಶಾಕ್​​​​!

author img

By

Published : Apr 20, 2019, 8:18 PM IST

ವಿಜಯಪುರ ಜಿಲ್ಲೆಯ ಮೈತ್ರಿ ಅಭ್ಯರ್ಥಿ‌ ಡಾ‌. ಸುನಿತಾ ಚವ್ಹಾಣ ಅವರ ಸಂಬಂಧಿಕರ ಮನೆ ಮೇಲೆ ಐಟಿ ದಾಳಿ ನಡೆದಿದ್ದು, ಖಾಸಗಿ ಕಾರಿನಲ್ಲಿ ಬಂದ ಸುಮಾರು 10 ಜನ ಅಧಿಕಾರಿ ಹಾಗೂ ಸಿಬ್ಬಂದಿ ದಾಳಿ ನಡೆಸಿದ್ದಾರೆ.

ಐಟಿ‌ ದಾಳಿ

ವಿಜಯಪುರ: ಚುನಾವಣೆ ಸಮೀಪಿಸುತ್ತಿದ್ದಂತೆ ಐಟಿ‌ ಅಧಿಕಾರಿಗಳು ಮತ್ತೊಂದು ಶಾಕ್​ ನೀಡಿದ್ದು, ಜೆಡಿಎಸ್ ಅಭ್ಯರ್ಥಿ ಸಂಬಂಧಿಕರ ಮನೆ ಮೇಲೆ ದಾಳಿ ಮಾಡಲಾಗಿದೆ.

ವಿಜಯಪುರ ಜಿಲ್ಲೆಯ ಮೈತ್ರಿ ಅಭ್ಯರ್ಥಿ‌ ಡಾ‌. ಸುನಿತಾ ಚವ್ಹಾಣ ಅವರ ಸಂಬಂಧಿಕರ ಮನೆ ಮೇಲೆ ಐಟಿ ದಾಳಿ ನಡೆದಿದೆ. ಜಿಲ್ಲೆಯ ಇಂಡಿ ತಾಲೂಕಿನ ತಂಬಾ ಗ್ರಾಮದಲ್ಲಿ ಶಾಸಕ ದೇವಾನಂದ ಅವರ ಸಂಬಂಧಿ ರಾಮಚಂದ್ರ ದೊಡಮನಿ ಹಾಗೂ ಆಪ್ತ ದೇವಪ್ಪ ತದ್ದೇವಾಡಿ ಮನೆ ಮೇಲೆ ದಾಳಿ ನಡೆಸಲಾಗಿದೆ ಎಂದು ತಿಳಿದು ಬಂದಿದೆ.

ಮೈತ್ರಿ ಅಭ್ಯರ್ಥಿ‌ ಡಾ‌. ಸುನಿತಾ ಚವ್ಹಾಣ ಅವರ ಸಂಬಂಧಿಕರ ಮನೆ ಮೇಲೆ ಐಟಿ ದಾಳಿ

ಖಾಸಗಿ ಕಾರಿನಲ್ಲಿ ಬಂದ ಸುಮಾರು 10 ಜನ ಅಧಿಕಾರಿ ಹಾಗೂ ಸಿಬ್ಬಂದಿ ದಾಳಿ ನಡೆಸಿದ್ದಾರೆ. ತಪಾಸಣೆ ವೇಳೆ ಅಂದಾಜು 12 ಲಕ್ಷ ರೂಪಾಯಿ ಸಿಕ್ಕಿದೆ ಎನ್ನಲಾಗಿದೆ.

ಇನ್ನು ಸಿಎಂ ಕುಮಾರಸ್ವಾಮಿ, ಮಾಜಿ ಪ್ರಧಾನಿ‌ ದೇವೇಗೌಡ ಅವರು ನಿನ್ನೆ ವಿಜಯಪುರದಲ್ಲಿ ವಾಸ್ತವ್ಯ ಹೂಡಿದ್ದು, ಇಂದು ಜಿಲ್ಲೆಯಿಂದ ಹೋದ ತಕ್ಷಣವೇ ದಾಳಿ ನಡೆಸಲಾಗಿದೆ.

ವಿಜಯಪುರ: ಚುನಾವಣೆ ಸಮೀಪಿಸುತ್ತಿದ್ದಂತೆ ಐಟಿ‌ ಅಧಿಕಾರಿಗಳು ಮತ್ತೊಂದು ಶಾಕ್​ ನೀಡಿದ್ದು, ಜೆಡಿಎಸ್ ಅಭ್ಯರ್ಥಿ ಸಂಬಂಧಿಕರ ಮನೆ ಮೇಲೆ ದಾಳಿ ಮಾಡಲಾಗಿದೆ.

ವಿಜಯಪುರ ಜಿಲ್ಲೆಯ ಮೈತ್ರಿ ಅಭ್ಯರ್ಥಿ‌ ಡಾ‌. ಸುನಿತಾ ಚವ್ಹಾಣ ಅವರ ಸಂಬಂಧಿಕರ ಮನೆ ಮೇಲೆ ಐಟಿ ದಾಳಿ ನಡೆದಿದೆ. ಜಿಲ್ಲೆಯ ಇಂಡಿ ತಾಲೂಕಿನ ತಂಬಾ ಗ್ರಾಮದಲ್ಲಿ ಶಾಸಕ ದೇವಾನಂದ ಅವರ ಸಂಬಂಧಿ ರಾಮಚಂದ್ರ ದೊಡಮನಿ ಹಾಗೂ ಆಪ್ತ ದೇವಪ್ಪ ತದ್ದೇವಾಡಿ ಮನೆ ಮೇಲೆ ದಾಳಿ ನಡೆಸಲಾಗಿದೆ ಎಂದು ತಿಳಿದು ಬಂದಿದೆ.

ಮೈತ್ರಿ ಅಭ್ಯರ್ಥಿ‌ ಡಾ‌. ಸುನಿತಾ ಚವ್ಹಾಣ ಅವರ ಸಂಬಂಧಿಕರ ಮನೆ ಮೇಲೆ ಐಟಿ ದಾಳಿ

ಖಾಸಗಿ ಕಾರಿನಲ್ಲಿ ಬಂದ ಸುಮಾರು 10 ಜನ ಅಧಿಕಾರಿ ಹಾಗೂ ಸಿಬ್ಬಂದಿ ದಾಳಿ ನಡೆಸಿದ್ದಾರೆ. ತಪಾಸಣೆ ವೇಳೆ ಅಂದಾಜು 12 ಲಕ್ಷ ರೂಪಾಯಿ ಸಿಕ್ಕಿದೆ ಎನ್ನಲಾಗಿದೆ.

ಇನ್ನು ಸಿಎಂ ಕುಮಾರಸ್ವಾಮಿ, ಮಾಜಿ ಪ್ರಧಾನಿ‌ ದೇವೇಗೌಡ ಅವರು ನಿನ್ನೆ ವಿಜಯಪುರದಲ್ಲಿ ವಾಸ್ತವ್ಯ ಹೂಡಿದ್ದು, ಇಂದು ಜಿಲ್ಲೆಯಿಂದ ಹೋದ ತಕ್ಷಣವೇ ದಾಳಿ ನಡೆಸಲಾಗಿದೆ.

Intro:ವಿಜಯಪುರ Body:ವಿಜಯಪುರ:
ವಿಜಯಪುರ ಲೋಕಸಭೆ ಮೈತ್ರಿಯ ಜೆಡಿಎಸ್ ಅಭ್ಯರ್ಥಿಗೆ ಐಟಿ‌ ಶಾಕ್ ನೀಡಿದೆ.
ಅಭ್ಯರ್ಥಿ‌ ಡಾ‌. ಸುನಿತಾ ಚವ್ಹಾಣ ಅವರ ಸಂಭಂದಿಕರ ಮನೆ ಮೇಲೆ ಐಟಿ ದಾಳಿ ನಡೆಸಿದೆ.
ನಾಗಠಾಣ ಜೆಡಿಎಸ್ ಶಾಸಕನ ಪತ್ನಿಯಾಗಿರುವ ಡಾ. ಸುನಿತಾ ಚವ್ಹಾಣ ಜೆಡಿಎಸ್ ಅಭ್ಯರ್ಥಿ.ಯಾಗಿದ್ದಾರೆ.
ಶಾಸಕ ದೇವಾನಂದ ಅವರ ಸಂಭಂದಿ ರಾಮಚಂದ್ರ ದೊಡಮನಿ ಹಾಗೂ ಆಪ್ತ ದೇವಪ್ಪ ತದ್ದೇವಾಡಿ ಮನೆ ಮೇಲೆ ದಾಳಿ ನಡೆಸಲಾಗಿದೆ.
ವಿಜಯಪುರ ಜಿಲ್ಲೆ ಇಂಡಿ ತಾಲೂಕಿನ ತಂಬಾ ಗ್ರಾಮದಲ್ಲಿ ದಾಳಿ.
ಸುಮಾರು ಅಧಿಕಾರಿ ಹಾಗೂ ಸಿಬ್ಬಂದಿ ಸೇರಿ 10 ಜನರಿಂದ ದಾಳಿ ನಡೆಸಲಾಗಿದೆ.
ಖಾಸಗಿ ಕಾರಿನಲ್ಲಿ ಬಂದು ದಾಳಿ ನಡೆಸಿರುವ ಅಧಿಕಾರಿಗಳು.
ತಪಾಸಣೆ ವೇಳೆ ಅಂದಾಜು 12ಲಕ್ಷ ರೂಪಾಯಿ ಸಿಕ್ಕಿರುವ ಮಾಹಿತಿ ಗೊತ್ತಾಗಿದೆ.
ಸಿಎಂ ಕುಮಾರಸ್ವಾಮಿ, ಮಾಜಿ ಪ್ರಧಾನಿ‌ ದೇವೇಗೌಡ ಅವರು ನಿನ್ನೆ ವಿಜಯಪುರದಲ್ಲಿ ವಾಸ್ತವ್ಯ ಹೂಡಿದ್ದು, ಇಂದು ಜಿಲ್ಲೆಯಿಂದ ಹೋದ ತಕ್ಷಣವೇ ದಾಳಿ ನಡೆಸಲಾಗಿದೆ.
ಚುನಾವಣೆ ಸಮೀಪಿಸುತ್ತಿದ್ದಂತೆ ಐಟಿ‌ ಅಧಿಕಾರಿಗಳಿಂದ ಜೆಡಿಎಸ್ ಅಭ್ಯರ್ಥಿ ಸಂಭಂದಿಕರ ಮನೆ ಮೇಲೆ ದಾಳಿ ಮಾಡಲಾಗಿದೆ.Conclusion:ವಿಜಯಪುರ

For All Latest Updates

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.