ETV Bharat / state

ನೆರೆಗೆ ನಲುಗಿದ ಇಂಡಿ ತಾಲೂಕು: ರಾಷ್ಟ್ರೀಯ ವಿಪತ್ತು ಎಂದು ಘೋಷಿಸುವಂತೆ ಜೆಡಿಎಸ್​ ಒತ್ತಾಯ

author img

By

Published : Oct 27, 2020, 2:05 PM IST

ಕಳೆದ ವಾರ ಸುರಿದ ಭಾರಿ ಮಳೆಯಿಂದಾಗಿ ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ 12 ಗ್ರಾಮಗಳು ಜಲಾವೃತವಾಗಿದ್ದು, ಸರ್ಕಾರ ಈ ಕೂಡಲೇ ಈ ಗ್ರಾಮಗಳನ್ನು ರಾಷ್ಟ್ರೀಯ ವಿಪತ್ತು ಎಂದು ಘೋಷಿಸಿ ಪರಿಹಾರ ನೀಡಬೇಕು ಎಂದು ಜೆಡಿಎಸ್​​ ಕಾರ್ಯಕರ್ತರು ಮನವಿ ಮಾಡಿದರು.

JDS Activist urging through DC
ಜಿಲ್ಲಾಧಿಕಾರಿಗೆ ಮನವಿ ಮಾಡಿದ ಜೆಡಿಎಸ್​ ಕಾರ್ಯಕರ್ತರು

ವಿಜಯಪುರ: ಇಂಡಿ ತಾಲೂಕಿನ 12 ಗ್ರಾಮಗಳನ್ನು ರಾಷ್ಟ್ರೀಯ ವಿಪತ್ತು ಎಂದು ಘೋಷಿಸಿ ಪ್ರವಾಹಕ್ಕೆ ತುತ್ತಾದ ಗ್ರಾಮಗಳಿಗೆ ಪರಿಹಾರದ ಹಣ ಬಿಡುಗಡೆಗೊಳಿಸುವಂತೆ ಆಗ್ರಹಿಸಿ ಜೆಡಿಎಸ್ ಕಾರ್ಯಕರ್ತರು ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.

ಜಿಲ್ಲಾಧಿಕಾರಿಗೆ ಮನವಿ ಮಾಡಿದ ಜೆಡಿಎಸ್​ ಕಾರ್ಯಕರ್ತರು

ಕಳೆದ ವಾರ ಸುರಿದ ಭಾರಿ ಮಳೆಯಿಂದಾಗಿ ಇಂಡಿ ಭಾಗದ 12 ಗ್ರಾಮಗಳು ಸಂಪೂರ್ಣವಾಗಿ ಮುಳುಗಿಹೋಗಿದ್ದು, 3 ಸಾವಿರಕ್ಕೂ ಅಧಿಕ ಜನರ ಜೀವನ ಬೀದಿಗೆ ಬಂದಿದೆ. ನದಿಪಾತ್ರದ ಜನರ ಬದುಕು ಸಂಕಷ್ಟದಲ್ಲಿ ಸಿಲುಕಿದ್ದು, ಶೇಂಗಾ, ದಾಳಿಂಬೆ, ಈರುಳ್ಳಿ, ಕಬ್ಬು, ಬಾಳೆ, ತೊಗರಿ ಸೇರಿದಂತೆ ಅಪಾರ ಪ್ರಮಾಣದ ಬೆಳೆ ಹಾನಿಯಾಗಿದೆ. ಅಲ್ಲದೆ ಮನೆಯಲ್ಲಿದ್ದ ದವಸ ಧಾನ್ಯಗಳು ಕೂಡ ಪ್ರವಾಹದ ನೀರಿನಲ್ಲಿ ಕೊಚ್ಚಿ ಹೋಗಿದೆ. ಇಂಡಿ ತಾಲೂಕಿನಲ್ಲಿ ಅಂದಾಜು 6,525 ಹೆಕ್ಟರ್ ಪ್ರದೇಶ ಬೆಳೆ ನಾಶವಾಗಿದ್ದು, ಮುಖ್ಯಮಂತ್ರಿಗಳು ಕೂಡಲೇ ಗ್ರಾಮಗಳನ್ನು ಸ್ಥಳಾಂತರಗೊಳಿಸಬೇಕು ಎಂದು ಒತ್ತಾಯಿಸಿದರು.

ಈ ಕೂಡಲೇ ರಾಜ್ಯ ಸರ್ಕಾರ ಇಂಡಿ ತಾಲೂಕಿನ 12 ಗ್ರಾಮಗಳನ್ನು ರಾಷ್ಟ್ರೀಯ ವಿಪತ್ತು ಎಂದು ಘೋಷಿಸಿ, ಗ್ರಾಮಗಳನ್ನು ಸ್ಥಳಾಂತರ ಮಾಡುವ ಜೊತೆಗೆ ಹಾನಿಗೊಳಗಾದ ರೈತರ ನೆರವಿಗೆ ಧಾವಿಸುವಂತೆ ಜಿಲ್ಲಾಧಿಕಾರಿ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದರು.

ವಿಜಯಪುರ: ಇಂಡಿ ತಾಲೂಕಿನ 12 ಗ್ರಾಮಗಳನ್ನು ರಾಷ್ಟ್ರೀಯ ವಿಪತ್ತು ಎಂದು ಘೋಷಿಸಿ ಪ್ರವಾಹಕ್ಕೆ ತುತ್ತಾದ ಗ್ರಾಮಗಳಿಗೆ ಪರಿಹಾರದ ಹಣ ಬಿಡುಗಡೆಗೊಳಿಸುವಂತೆ ಆಗ್ರಹಿಸಿ ಜೆಡಿಎಸ್ ಕಾರ್ಯಕರ್ತರು ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.

ಜಿಲ್ಲಾಧಿಕಾರಿಗೆ ಮನವಿ ಮಾಡಿದ ಜೆಡಿಎಸ್​ ಕಾರ್ಯಕರ್ತರು

ಕಳೆದ ವಾರ ಸುರಿದ ಭಾರಿ ಮಳೆಯಿಂದಾಗಿ ಇಂಡಿ ಭಾಗದ 12 ಗ್ರಾಮಗಳು ಸಂಪೂರ್ಣವಾಗಿ ಮುಳುಗಿಹೋಗಿದ್ದು, 3 ಸಾವಿರಕ್ಕೂ ಅಧಿಕ ಜನರ ಜೀವನ ಬೀದಿಗೆ ಬಂದಿದೆ. ನದಿಪಾತ್ರದ ಜನರ ಬದುಕು ಸಂಕಷ್ಟದಲ್ಲಿ ಸಿಲುಕಿದ್ದು, ಶೇಂಗಾ, ದಾಳಿಂಬೆ, ಈರುಳ್ಳಿ, ಕಬ್ಬು, ಬಾಳೆ, ತೊಗರಿ ಸೇರಿದಂತೆ ಅಪಾರ ಪ್ರಮಾಣದ ಬೆಳೆ ಹಾನಿಯಾಗಿದೆ. ಅಲ್ಲದೆ ಮನೆಯಲ್ಲಿದ್ದ ದವಸ ಧಾನ್ಯಗಳು ಕೂಡ ಪ್ರವಾಹದ ನೀರಿನಲ್ಲಿ ಕೊಚ್ಚಿ ಹೋಗಿದೆ. ಇಂಡಿ ತಾಲೂಕಿನಲ್ಲಿ ಅಂದಾಜು 6,525 ಹೆಕ್ಟರ್ ಪ್ರದೇಶ ಬೆಳೆ ನಾಶವಾಗಿದ್ದು, ಮುಖ್ಯಮಂತ್ರಿಗಳು ಕೂಡಲೇ ಗ್ರಾಮಗಳನ್ನು ಸ್ಥಳಾಂತರಗೊಳಿಸಬೇಕು ಎಂದು ಒತ್ತಾಯಿಸಿದರು.

ಈ ಕೂಡಲೇ ರಾಜ್ಯ ಸರ್ಕಾರ ಇಂಡಿ ತಾಲೂಕಿನ 12 ಗ್ರಾಮಗಳನ್ನು ರಾಷ್ಟ್ರೀಯ ವಿಪತ್ತು ಎಂದು ಘೋಷಿಸಿ, ಗ್ರಾಮಗಳನ್ನು ಸ್ಥಳಾಂತರ ಮಾಡುವ ಜೊತೆಗೆ ಹಾನಿಗೊಳಗಾದ ರೈತರ ನೆರವಿಗೆ ಧಾವಿಸುವಂತೆ ಜಿಲ್ಲಾಧಿಕಾರಿ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.