ETV Bharat / state

ವಿಜಯಪುರದ ವ್ಯಕ್ತಿಯಲ್ಲಿ ಜೆಎನ್ 1 ದೃಢ; ಕುಟುಂಬಸ್ಥರಿಗೂ ಹೋಂ ಕ್ವಾರಂಟೈನ್

ಹೃದಯ ಶಸ್ತ್ರಚಿಕಿತ್ಸೆಗೆ ಬೆಂಗಳೂರಿಗೆ ತೆರಳಿದ್ದ ವಿಜಯಪುರ ಜಿಲ್ಲೆಯ ನಿಡಗುಂದಿ ಗ್ರಾಮದ ವ್ಯಕ್ತಿಗೆ ಕೊರೊನಾ ಜೆಎನ್ 1 ಸೋಂಕು ದೃಢಪಟ್ಟಿದೆ.

author img

By ETV Bharat Karnataka Team

Published : Dec 28, 2023, 6:26 PM IST

Updated : Dec 28, 2023, 7:26 PM IST

Health Officer Basavaraj Hubli informed the media.
ವಿಜಯಪುರ ಜಿಲ್ಲಾ ಆರೋಗ್ಯಾಧಿಕಾರಿ ಬಸವರಾಜ ಹುಬ್ಬಳ್ಳಿ ಮಾಧ್ಯಮದವರಿಗೆ ಮಾಹಿತಿ ನೀಡಿದರು.
ಡಿಎಚ್ಒ ಬಸವರಾಜ ಹುಬ್ಬಳ್ಳಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದರು.

ವಿಜಯಪುರ: ಕೊರೊನಾ ಉಪತಳಿ ಜೆಎನ್ 1 ನಿಡಗುಂದಿಯ ವ್ಯಕ್ತಿಯೊಬ್ಬರಲ್ಲಿ ದೃಢಪಟ್ಟಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಬಸವರಾಜ ಹುಬ್ಬಳ್ಳಿ ಮಾಹಿತಿ ನೀಡಿದ್ದಾರೆ. ವಿಜಯಪುರದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ವ್ಯಕ್ತಿಯು ಹೃದಯ ಶಸ್ತ್ರಚಿಕಿತ್ಸೆಗೆಂದು ಡಿಸೆಂಬರ್ 25ರಂದು ವಿಜಯಪುರದಿಂದ ಬೆಂಗಳೂರಿನ ಜಯದೇವ ಆಸ್ಪತ್ರೆಗೆ ತೆರಳಿದ್ದರು ಎಂದು ಹೇಳಿದರು.

ಡಿಸೆಂಬರ್ 27ರಂದು ಕೋವಿಡ್ ಟೆಸ್ಟ್ ಮಾಡಿದ್ದು, 28ರಂದು ಸೋಂಕು ದೃಢಪಟ್ಟಿರುವ ಮಾಹಿತಿ ಬಂದಿದೆ. ಸೋಂಕಿತ ವ್ಯಕ್ತಿಯ ಕುಟುಂಬಸ್ಥರ ರಕ್ತದ ಮಾದರಿ ಸಂಗ್ರಹಿಸಲಾಗಿದೆ. ಅವುಗಳನ್ನು ಪರೀಕ್ಷೆಗಾಗಿ ರವಾನಿಸಲಾಗಿದೆ. ಕುಟುಂಬಸ್ಥರಿಗೂ ಹೋಂ ಐಸೋಲೇಷನ್ ಮಾಡಲಾಗಿದೆ ಎಂದರು.

ಜೆಎನ್ 1 ತಳಿ ತಡೆಗೆ ಜಿಲ್ಲೆಯಲ್ಲಿ ಕಟ್ಟುನಿಟ್ಟಿನ ಕ್ರಮಕ್ಕೆ ಜಿಲ್ಲಾಡಳಿತ ಮುಂದಾಗಿದೆ. ಆರೋಗ್ಯ ಇಲಾಖೆ ಮುನ್ನೆಚ್ಚರಿಕೆ ವಹಿಸಿ ಜಾಗೃತಿ ಕ್ರಮಗಳ ಕುರಿತಂತೆ ಅಗತ್ಯ ಸೂಚನೆಗಳನ್ನು ಈಗಾಗಲೇ ಬಿಡುಗಡೆ ಮಾಡಿದೆ. ಈವರೆಗೆ 314 ಜನರಿಗೆ ಕೋವಿಡ್ ಪರೀಕ್ಷೆ ಮಾಡಲಾಗಿದೆ. ಯಾವುದೇ ಪಾಸಿಟಿವ್ ದೃಢಪಟ್ಟಿಲ್ಲ ಎಂದು ಸ್ಪಷ್ಟಪಡಿಸಿದರು.

ಜೆಎನ್ 1 ತಡೆಗೆ ಮುನ್ನೆಚ್ಚರಿಕೆ ಕ್ರಮ: ರಾಜ್ಯದಲ್ಲಿ ಕೋವಿಡ್ ಪ್ರಕರಣಗಳು ಏರುಗತಿಯಲ್ಲಿ ಸಾಗಿವೆ. ಉಪತಳಿ ನಿಯಂತ್ರಣಕ್ಕೆ ಕೈಗೊಳ್ಳಬೇಕಾದ ಕ್ರಮ, ಚಿಕಿತ್ಸಾ ಸಿದ್ಧತೆ ಕುರಿತಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಅಧ್ಯಕ್ಷತೆಯಲ್ಲಿ ಸಚಿವ ಸಂಪುಟ ಉಪ ಸಮಿತಿಯ ಸಭೆ ಇತ್ತೀಚೆಗೆ ನಡೆಯಿತು. ಆಸ್ಪತ್ರೆಗಳಿಗೆ ಮಾರ್ಗಸೂಚಿ ಸಿದ್ಧಪಡಿಸುವ ಕುರಿತಂತೆ ಸಭೆಯಲ್ಲಿ ಚರ್ಚೆ ನಡೆಸಲಾಗಿದೆ.

ಸಾರ್ವಜನಿಕರು ಜೆಎನ್ 1 ಕುರಿತು ಆತಂಕಪಡುವ ಅಗತ್ಯವಿಲ್ಲ. ಇದು ಅಪಾಯಕಾರಿ ಅಲ್ಲ. ಆದರೆ, ಪ್ರತಿಯೊಬ್ಬರೂ ಮುನ್ನೆಚ್ಚರಿಕೆ ವಹಿಸಬೇಕಿದೆ. ಆರೋಗ್ಯ ಇಲಾಖೆಯಿಂದ ಈಗಾಗಲೇ ಮಾರ್ಗಸೂಚಿ ಹೊರಡಿಸಲಾಗಿದೆ. 60 ವರ್ಷ ಮೇಲ್ಪಟ್ಟವರು, ಗರ್ಭಿಣಿಯರು, ಕಿಡ್ನಿ, ಹೃದಯ ಇತರ ಕಾಯಿಲೆ ಹೊಂದಿದ್ದವರು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು ಎಂದು ಸಭೆಯಲ್ಲಿ ಸೂಚಿಸಲಾಗಿದೆ.

ಇದನ್ನೂಓದಿ: ದೇಶದಲ್ಲಿ ಹರಡುತ್ತಿರುವ ಜೆಎನ್​.1 ತಳಿ; ಬೂಸ್ಟರ್ ಲಸಿಕೆ​ ಅಗತ್ಯವಿಲ್ಲ ಎಂದ ತಜ್ಞರು

ಡಿಎಚ್ಒ ಬಸವರಾಜ ಹುಬ್ಬಳ್ಳಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದರು.

ವಿಜಯಪುರ: ಕೊರೊನಾ ಉಪತಳಿ ಜೆಎನ್ 1 ನಿಡಗುಂದಿಯ ವ್ಯಕ್ತಿಯೊಬ್ಬರಲ್ಲಿ ದೃಢಪಟ್ಟಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಬಸವರಾಜ ಹುಬ್ಬಳ್ಳಿ ಮಾಹಿತಿ ನೀಡಿದ್ದಾರೆ. ವಿಜಯಪುರದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ವ್ಯಕ್ತಿಯು ಹೃದಯ ಶಸ್ತ್ರಚಿಕಿತ್ಸೆಗೆಂದು ಡಿಸೆಂಬರ್ 25ರಂದು ವಿಜಯಪುರದಿಂದ ಬೆಂಗಳೂರಿನ ಜಯದೇವ ಆಸ್ಪತ್ರೆಗೆ ತೆರಳಿದ್ದರು ಎಂದು ಹೇಳಿದರು.

ಡಿಸೆಂಬರ್ 27ರಂದು ಕೋವಿಡ್ ಟೆಸ್ಟ್ ಮಾಡಿದ್ದು, 28ರಂದು ಸೋಂಕು ದೃಢಪಟ್ಟಿರುವ ಮಾಹಿತಿ ಬಂದಿದೆ. ಸೋಂಕಿತ ವ್ಯಕ್ತಿಯ ಕುಟುಂಬಸ್ಥರ ರಕ್ತದ ಮಾದರಿ ಸಂಗ್ರಹಿಸಲಾಗಿದೆ. ಅವುಗಳನ್ನು ಪರೀಕ್ಷೆಗಾಗಿ ರವಾನಿಸಲಾಗಿದೆ. ಕುಟುಂಬಸ್ಥರಿಗೂ ಹೋಂ ಐಸೋಲೇಷನ್ ಮಾಡಲಾಗಿದೆ ಎಂದರು.

ಜೆಎನ್ 1 ತಳಿ ತಡೆಗೆ ಜಿಲ್ಲೆಯಲ್ಲಿ ಕಟ್ಟುನಿಟ್ಟಿನ ಕ್ರಮಕ್ಕೆ ಜಿಲ್ಲಾಡಳಿತ ಮುಂದಾಗಿದೆ. ಆರೋಗ್ಯ ಇಲಾಖೆ ಮುನ್ನೆಚ್ಚರಿಕೆ ವಹಿಸಿ ಜಾಗೃತಿ ಕ್ರಮಗಳ ಕುರಿತಂತೆ ಅಗತ್ಯ ಸೂಚನೆಗಳನ್ನು ಈಗಾಗಲೇ ಬಿಡುಗಡೆ ಮಾಡಿದೆ. ಈವರೆಗೆ 314 ಜನರಿಗೆ ಕೋವಿಡ್ ಪರೀಕ್ಷೆ ಮಾಡಲಾಗಿದೆ. ಯಾವುದೇ ಪಾಸಿಟಿವ್ ದೃಢಪಟ್ಟಿಲ್ಲ ಎಂದು ಸ್ಪಷ್ಟಪಡಿಸಿದರು.

ಜೆಎನ್ 1 ತಡೆಗೆ ಮುನ್ನೆಚ್ಚರಿಕೆ ಕ್ರಮ: ರಾಜ್ಯದಲ್ಲಿ ಕೋವಿಡ್ ಪ್ರಕರಣಗಳು ಏರುಗತಿಯಲ್ಲಿ ಸಾಗಿವೆ. ಉಪತಳಿ ನಿಯಂತ್ರಣಕ್ಕೆ ಕೈಗೊಳ್ಳಬೇಕಾದ ಕ್ರಮ, ಚಿಕಿತ್ಸಾ ಸಿದ್ಧತೆ ಕುರಿತಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಅಧ್ಯಕ್ಷತೆಯಲ್ಲಿ ಸಚಿವ ಸಂಪುಟ ಉಪ ಸಮಿತಿಯ ಸಭೆ ಇತ್ತೀಚೆಗೆ ನಡೆಯಿತು. ಆಸ್ಪತ್ರೆಗಳಿಗೆ ಮಾರ್ಗಸೂಚಿ ಸಿದ್ಧಪಡಿಸುವ ಕುರಿತಂತೆ ಸಭೆಯಲ್ಲಿ ಚರ್ಚೆ ನಡೆಸಲಾಗಿದೆ.

ಸಾರ್ವಜನಿಕರು ಜೆಎನ್ 1 ಕುರಿತು ಆತಂಕಪಡುವ ಅಗತ್ಯವಿಲ್ಲ. ಇದು ಅಪಾಯಕಾರಿ ಅಲ್ಲ. ಆದರೆ, ಪ್ರತಿಯೊಬ್ಬರೂ ಮುನ್ನೆಚ್ಚರಿಕೆ ವಹಿಸಬೇಕಿದೆ. ಆರೋಗ್ಯ ಇಲಾಖೆಯಿಂದ ಈಗಾಗಲೇ ಮಾರ್ಗಸೂಚಿ ಹೊರಡಿಸಲಾಗಿದೆ. 60 ವರ್ಷ ಮೇಲ್ಪಟ್ಟವರು, ಗರ್ಭಿಣಿಯರು, ಕಿಡ್ನಿ, ಹೃದಯ ಇತರ ಕಾಯಿಲೆ ಹೊಂದಿದ್ದವರು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು ಎಂದು ಸಭೆಯಲ್ಲಿ ಸೂಚಿಸಲಾಗಿದೆ.

ಇದನ್ನೂಓದಿ: ದೇಶದಲ್ಲಿ ಹರಡುತ್ತಿರುವ ಜೆಎನ್​.1 ತಳಿ; ಬೂಸ್ಟರ್ ಲಸಿಕೆ​ ಅಗತ್ಯವಿಲ್ಲ ಎಂದ ತಜ್ಞರು

Last Updated : Dec 28, 2023, 7:26 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.