ವಿಜಯಪುರ: ಸೂಕ್ತ ಬಸ್ ಸೌಲಭ್ಯವಿಲ್ಲದೇ ಶಾಲಾ-ಕಾಲೇಜು ವಿದ್ಯಾರ್ಥಿಗಳು ಏಣಿಯ ಸಹಾಯದಿಂದ ಬಸ್ ಟಾಪ್ ಏರಿ ಅಪಾಯಕಾರಿ ಪ್ರಯಾಣ ಮಾಡುತ್ತಿದ್ದರು. ಈ ಬಗ್ಗೆ ಈಟಿವಿ ಭಾರತಗೆ ವರದಿಗೆ ಸ್ಪಂದಿಸಿದ ಕೆಎಸ್ಆರ್ಟಿಸಿ ಇದೀಗ ಹೆಚ್ಚುವರಿ ಬಸ್ ಸೌಲಭ್ಯ ಕಲ್ಪಿಸಿದೆ.
ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ಗುಂಡಕರ್ಜಗಿ ಗ್ರಾಮದ ವಿದ್ಯಾರ್ಥಿಗಳು ಸಾಕಷ್ಟು ಬಸ್ ಇಲ್ಲದೇ ಸಂಕಷ್ಟ ಅನುಭವಿಸುತ್ತಿದ್ದರು. ಒಂದೇ ಬಸ್ನಲ್ಲಿ 100ಕ್ಕೂ ಅಧಿಕ ಜನರು ಪ್ರಯಾಣಿಸುತ್ತಿದ್ದರು.
ಇಂದು ಗ್ರಾಮಕ್ಕೆ ಆಗಮಿಸಿದ ಮತ್ತೊಂದು ಬಸ್ಗೆ ವಿದ್ಯಾರ್ಥಿಗಳು ಪೂಜೆ ಸಲ್ಲಿಸಿದರು. ಗ್ರಾಮಸ್ಥರು ಸಂತಸ ವ್ಯಕ್ತಪಡಿಸಿದ್ದಾರೆ.
ಇದನ್ನೂ ಓದಿ: ಸಾರಿಗೆ ಬಸ್ ಕೊರತೆ: ಏಣಿ ಮೂಲಕ ಬಸ್ ಟಾಪ್ ಹತ್ತಿ ವಿದ್ಯಾರ್ಥಿಗಳ ಪ್ರಯಾಣ