ETV Bharat / state

ವಿಜಯಪುರ ಜಿಲ್ಲೆಯ 12 ತಾಲೂಕು ನೆರೆಪೀಡಿತ ಘೋಷಣೆಗೆ ಪ್ರಸ್ತಾವನೆ

author img

By

Published : Oct 4, 2020, 4:07 PM IST

ವಿಜಯಪುರ ಜಿಲ್ಲೆಯಲ್ಲಿ ಆಗಸ್ಟ್ ತಿಂಗಳಲ್ಲಿ ಸುರಿದ ಭಾರಿ ಮಳೆಯಿಂದ ನದಿ ಪಾತ್ರದ ಬಬಲೇಶ್ವರ, ನಿಡಗುಂದಿ, ಮುದ್ದೇಬಿಹಾಳ, ಕೊಲ್ಹಾರ ತಾಲೂಕಿನಲ್ಲಿ ಸಾರ್ವಜನಿಕರ ಆಸ್ತಿ-ಪಾಸ್ತಿ ನಷ್ಟವಾಗಿದೆ ಎಂದು ಜಿಲ್ಲಾಧಿಕಾರಿ ಪಿ. ಸುನೀಲ್​ ಕುಮಾರ್​ ಮಾಹಿತಿ ನೀಡಿದ್ದಾರೆ.

dsd
ವಿಜಯಪುರದಲ್ಲಿ ನೆರೆ ಹಾನಿ ಪರಿಹಾರಕ್ಕಾಗಿ ಘೋಷಣೆಗೆ ಜಿಲ್ಲಾಡಳಿತ ಪ್ರಸ್ತಾವನೆ

ವಿಜಯಪುರ: ಜಿಲ್ಲೆಯಲ್ಲಿ ಪ್ರಸಕ್ತ ಮಳೆಗಾಲದಲ್ಲಿ ನಿರೀಕ್ಷೆಗೂ ಮೀರಿ ಮಳೆಯಾಗಿದೆ. ಇದರಿಂದ ಮಾನವ ಹಾನಿ ಸೇರಿದಂತೆ ಆಸ್ತಿ-ಪಾಸ್ತಿ, ಕೃಷಿ ಬೆಳೆ ನಷ್ಟವಾಗಿದೆ ಎಂದು ಜಿಲ್ಲಾಧಿಕಾರಿ ಪಿ. ಸುನೀಲ್​ ಕುಮಾರ್​ ಮಾಹಿತಿ ನೀಡಿದ್ದಾರೆ.

ವಿಜಯಪುರದಲ್ಲಿ ನೆರೆ ಹಾನಿ ಪರಿಹಾರಕ್ಕಾಗಿ ಘೋಷಣೆಗೆ ಜಿಲ್ಲಾಡಳಿತ ಪ್ರಸ್ತಾವನೆ

ಹೀಗಾಗಿ ಜಿಲ್ಲೆಯ 12 ತಾಲೂಕುಗಳನ್ನು ನೆರೆಪೀಡಿತ ಎಂದು ಘೋಷಿಸಬೇಕೆಂದು ಜಿಲ್ಲಾಡಳಿತದಿಂದ ಸರ್ಕಾರಕ್ಕೆ ಪ್ರಸ್ತಾಪನೆ ಸಲ್ಲಿಸಲಾಗಿದೆ. ಪಂಚನದಿಗಳ ಬೀಡು ಎಂದು ಬಣ್ಣಿಸುತ್ತಿದ್ದ ಕಾಲವೊಂದಿತ್ತು. ಕೆಲ ವರ್ಷಗಳ ಹಿಂದೆ ಮಳೆ ಪ್ರಮಾಣ ಕಡಿಮೆಯಾಗಿದ್ದರಿಂದ ಬರದ ನಾಡು ಎಂಬ ಕುಖ್ಯಾತಿಗೆ ಜಿಲ್ಲೆ ಒಳಗಾಗಿದೆ. ಆದರೆ ಈ ಬಾರಿ ಮಳೆ ಹೆಚ್ಚಾಗಿದ್ದರಿಂದ ರಾಜ್ಯ ಸರ್ಕಾರ ನಾಲ್ಕು ತಾಲೂಕುಗಳನ್ನು ನೆರೆಪೀಡಿತ ಎಂದು ಘೋಷಿಸಿ ಎನ್​ಡಿಆರ್​ಎಫ್ ಹಾಗೂ ಎಸ್​ಡಿಆರ್​ಎಫ್ ಯೋಜನೆಯಲ್ಲಿ ನಷ್ಟ ಅನುಭವಿಸಿದವರಿಗೆ ಪರಿಹಾರ ನೀಡಿದೆ.

ಆದರೆ ಜುಲೈ, ಆಗಸ್ಟ್ ಹಾಗೂ ಸೆಪ್ಟೆಂಬರ್​ನಲ್ಲಿ ಜಿಲ್ಲೆಯಲ್ಲಿ ವಾಡಿಕೆಗಿಂತ ಶೇ 102ರಷ್ಟು ಹೆಚ್ಚುವರಿ ಮಳೆಯಾಗಿದ್ದರಿಂದ ಸಾಕಷ್ಟು ನಷ್ಟ ಉಂಟಾಗಿದೆ. ಜಿಲ್ಲೆಯಲ್ಲಿ ಇಲ್ಲಿಯವರೆಗೆ 1450 ಮನೆಗಳು ಹಾನಿಗೊಳಗಾಗಿವೆ. 80 ಕಿ.ಮೀಟರ್​ನಷ್ಟು ರಾಜ್ಯ ಹೆದ್ದಾರಿ ಹಾಳಾಗಿದೆ. ಇದರ ಅಂದಾಜು ನಷ್ಟ 12.89 ಕೋಟಿಯಷ್ಟು ಇದೆ. 10 ಸರ್ಕಾರಿ ಆಸ್ತಿ ಸಹ ಹಾನಿಯಾಗಿದ್ದು, 50 ಲಕ್ಷ ರೂ.ಅಂದಾಜಿಸಲಾಗಿದೆ. ಮಳೆಯಿಂದ ಓರ್ವ ಬಾಲಕಿ ಮೃತಪಟ್ಟು, 450 ಜಾನುವಾರುಗಳು ಅಸುನೀಗಿವೆ.

ವಿಜಯಪುರ: ಜಿಲ್ಲೆಯಲ್ಲಿ ಪ್ರಸಕ್ತ ಮಳೆಗಾಲದಲ್ಲಿ ನಿರೀಕ್ಷೆಗೂ ಮೀರಿ ಮಳೆಯಾಗಿದೆ. ಇದರಿಂದ ಮಾನವ ಹಾನಿ ಸೇರಿದಂತೆ ಆಸ್ತಿ-ಪಾಸ್ತಿ, ಕೃಷಿ ಬೆಳೆ ನಷ್ಟವಾಗಿದೆ ಎಂದು ಜಿಲ್ಲಾಧಿಕಾರಿ ಪಿ. ಸುನೀಲ್​ ಕುಮಾರ್​ ಮಾಹಿತಿ ನೀಡಿದ್ದಾರೆ.

ವಿಜಯಪುರದಲ್ಲಿ ನೆರೆ ಹಾನಿ ಪರಿಹಾರಕ್ಕಾಗಿ ಘೋಷಣೆಗೆ ಜಿಲ್ಲಾಡಳಿತ ಪ್ರಸ್ತಾವನೆ

ಹೀಗಾಗಿ ಜಿಲ್ಲೆಯ 12 ತಾಲೂಕುಗಳನ್ನು ನೆರೆಪೀಡಿತ ಎಂದು ಘೋಷಿಸಬೇಕೆಂದು ಜಿಲ್ಲಾಡಳಿತದಿಂದ ಸರ್ಕಾರಕ್ಕೆ ಪ್ರಸ್ತಾಪನೆ ಸಲ್ಲಿಸಲಾಗಿದೆ. ಪಂಚನದಿಗಳ ಬೀಡು ಎಂದು ಬಣ್ಣಿಸುತ್ತಿದ್ದ ಕಾಲವೊಂದಿತ್ತು. ಕೆಲ ವರ್ಷಗಳ ಹಿಂದೆ ಮಳೆ ಪ್ರಮಾಣ ಕಡಿಮೆಯಾಗಿದ್ದರಿಂದ ಬರದ ನಾಡು ಎಂಬ ಕುಖ್ಯಾತಿಗೆ ಜಿಲ್ಲೆ ಒಳಗಾಗಿದೆ. ಆದರೆ ಈ ಬಾರಿ ಮಳೆ ಹೆಚ್ಚಾಗಿದ್ದರಿಂದ ರಾಜ್ಯ ಸರ್ಕಾರ ನಾಲ್ಕು ತಾಲೂಕುಗಳನ್ನು ನೆರೆಪೀಡಿತ ಎಂದು ಘೋಷಿಸಿ ಎನ್​ಡಿಆರ್​ಎಫ್ ಹಾಗೂ ಎಸ್​ಡಿಆರ್​ಎಫ್ ಯೋಜನೆಯಲ್ಲಿ ನಷ್ಟ ಅನುಭವಿಸಿದವರಿಗೆ ಪರಿಹಾರ ನೀಡಿದೆ.

ಆದರೆ ಜುಲೈ, ಆಗಸ್ಟ್ ಹಾಗೂ ಸೆಪ್ಟೆಂಬರ್​ನಲ್ಲಿ ಜಿಲ್ಲೆಯಲ್ಲಿ ವಾಡಿಕೆಗಿಂತ ಶೇ 102ರಷ್ಟು ಹೆಚ್ಚುವರಿ ಮಳೆಯಾಗಿದ್ದರಿಂದ ಸಾಕಷ್ಟು ನಷ್ಟ ಉಂಟಾಗಿದೆ. ಜಿಲ್ಲೆಯಲ್ಲಿ ಇಲ್ಲಿಯವರೆಗೆ 1450 ಮನೆಗಳು ಹಾನಿಗೊಳಗಾಗಿವೆ. 80 ಕಿ.ಮೀಟರ್​ನಷ್ಟು ರಾಜ್ಯ ಹೆದ್ದಾರಿ ಹಾಳಾಗಿದೆ. ಇದರ ಅಂದಾಜು ನಷ್ಟ 12.89 ಕೋಟಿಯಷ್ಟು ಇದೆ. 10 ಸರ್ಕಾರಿ ಆಸ್ತಿ ಸಹ ಹಾನಿಯಾಗಿದ್ದು, 50 ಲಕ್ಷ ರೂ.ಅಂದಾಜಿಸಲಾಗಿದೆ. ಮಳೆಯಿಂದ ಓರ್ವ ಬಾಲಕಿ ಮೃತಪಟ್ಟು, 450 ಜಾನುವಾರುಗಳು ಅಸುನೀಗಿವೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.