ETV Bharat / state

ತ್ರಿ ಭಾಷಾ ನೀತಿ ಕುರಿತು ಗೃಹ ಸಚಿವ ಎಂ.ಬಿ ಪಾಟೀಲ್​ ಪ್ರತಿಕ್ರಿಯೆ ಏನು? -

ರಾಜ್ಯದ ಮೇಲೆ ಹಿಂದಿ ಭಾಷೆ ಹೇರಿಕೆ ಬಗ್ಗೆ ವ್ಯಾಪಕವಾಗಿ ಚರ್ಚೆ ನಡೆಯುತ್ತಿದೆ. ಈ ಕುರಿತು ಅಭಿಪ್ರಾಯ ಸಂಗ್ರಹಿಸಿ ನಿರ್ಧಾರ ತೆಗೆದುಕೊಳ್ಳಬೇಕು ಎಂದು ಗೃಹ ಸಚಿವ ಎಂ.ಬಿ ಪಾಟೀಲ್​ ಹೇಳಿದ್ದಾರೆ.

ಎಂ.ಬಿ ಪಾಟೀಲ
author img

By

Published : Jun 4, 2019, 1:52 AM IST

ವಿಜಯಪುರ: ಹಿಂದಿ ಭಾಷೆ ಹೇರಿಕೆ ವಿಚಾರ ಸರಿಯಾದ ಕ್ರಮವಲ್ಲ. ಯಾವುದೇ ಒಂದು ಭಾಷೆಯನ್ನು ಹೇರುವಾಗ ಚರ್ಚೆ ಮಾಡಬೇಕು ಎಂದು ಗೃಹ ಸಚಿವ ಎಂ.ಬಿ. ಪಾಟೀಲ್​ ಪ್ರತಿಕ್ರಿಯೆ ನೀಡಿದ್ದಾರೆ.

ಹಿಂದಿ ಭಾಷೆ ಹೇರಿಕೆ ಬಗ್ಗೆ ಪ್ರತಿಕ್ರಿಯಿಸಿದ ಎಂ.ಬಿ ಪಾಟೀಲ

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಮೊದಲು ಕನ್ನಡ ಭಾಷೆ ಉಳಿಸಿ ಬೆಳೆಸಬೇಕು. ತ್ರಿ ಭಾಷಾ ನೀತಿ ಜಾರಿ ಕುರಿತು ವ್ಯಾಪಕವಾಗಿ ಚರ್ಚೆ ನಡೆಸಿ ಅಭಿಪ್ರಾಯ ಸಂಗ್ರಹಿಸಿ ನಿರ್ಧಾರ ತೆಗೆದುಕೊಳ್ಳಬೇಕು ಎಂದಿದ್ದಾರೆ.

ಇನ್ನು ಸಚಿವ ಸಂಪುಟ ವಿಸ್ತರಣೆ ವಿಚಾರ ನನಗೆ ಸಂಬಂಧಿಸಿದ್ದಲ್ಲ, ಅದು ಹೈ ಕಮಾಂಡ್​ಗೆ ಬಿಟ್ಟದ್ದು. ರಾಜ್ಯ ಕಾಂಗ್ರೆಸ್​ ಉಸ್ತುವಾರಿ ಕೆ.ಸಿ. ವೇಣುಗೋಪಾಲ್​, ಮಾಜಿ ಸಿಎಂ ಸಿದ್ದರಾಮಯ್ಯ, ಜೆಡಿಎಸ್​ ವರಿಷ್ಠ ದೆವೇಗೌಡರು ಈ ಕುರಿತು ಚರ್ಚಿಸುತ್ತಾರೆ. ರಾಜ್ಯದಲ್ಲಿ ಮೈತ್ರಿಯೇ ಸೋಲಿಗೆ ಕಾರಣ ಅನ್ನೋದನ್ನು ವೈಯಕ್ತಿಕವಾಗಿ ನಾನು ಒಪ್ಪುವುದಿಲ್ಲ ಎಂದು ಗೃಹ ಸಚಿವರು ಹೇಳಿದ್ದಾರೆ.

ಕೇಂದ್ರದಲ್ಲಿ ರಾಜ್ಯದ ಪ್ರಬಲ ಸಮುದಾಯದವರನ್ನು ಕಡೆಗಣಿಸಲಾಗ್ತಿದೆ ಎಂಬ ವಿಚಾರವಾಗಿ ಪ್ರತಿಕ್ರಿಯಿಸಿದ ಎಂ ಬಿ ಪಾಟೀಲರು, ನಮ್ಮ ಸಮುದಾಯವೊಂದರಿಂದಲೇ 10 ಮಂದಿ ಸಂಸದರಾದರೂ ಕೂಡಾ ಒಬ್ಬರಿಗೆ ಮಾತ್ರ ಸಚಿವ ಸ್ಥಾನ ನೀಡಲಾಗಿದೆ. ಸುರೇಶ್​ ಅಂಗಡಿ ಹಾಗೂ ಪ್ರಹ್ಲಾದ್ ಜೋಶಿ ಅವರು ನಾಲ್ಕು ಬಾರಿ ಜಯ ಗಳಿಸಿದ್ದಾರೆ. ಸುರೇಶ್​ ಅಂಗಡಿಗೆ ರಾಜ್ಯ ಸಚಿವ ಸ್ಥಾನ ನಿಡಿದ್ದರೆ, ಪ್ರಹ್ಲಾದ್ ಜೋಶಿ ಕ್ಯಾಬಿನೆಟ್​ ದರ್ಜೆ ಸಚಿವರಾಗಿದ್ದಾರೆ. ಇಬ್ಬರೂ ನಾಲ್ಕು ಬಾರಿ ವಿನ್ ಆದರೂ ಕೂಡಾ, ಸುರೇಶ್ ಅಂಗಡಿಯವರನ್ನು ನಿರ್ಲಕ್ಷಿಸಲಾಗಿದೆ. ಇದು ಬಿಜೆಪಿಯ ಮನಸ್ಥಿತಿಯನ್ನು ತೋರಿಸುತ್ತದೆ ಎಂದು ಟೀಕಿಸಿದರು.

ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರ ಬಿದ್ದು ಯಡಿಯೂರಪ್ಪ ಮತ್ತೆ ಸಿಎಂ ಆಗುತ್ತಾರೆ ಎಂಬ ಸಚಿವ ಸುರೇಶ್​ ಅಂಗಡಿ ಅವರ ಹೇಳಿಕೆಗೆ ನಗುತ್ತಲೇ ಪ್ರತಿಕ್ರಿಯಿಸಿದ ಸಚಿವ ಪಾಟೀಲ್ ಅವರು​, ಮೊದಲು ತಮ್ಮ ಖಾತೆ ಕುರಿತು ಚಿಂತೆ ಮಾಡಲಿ. ಅಂಗಡಿಯವರಿಗೆ ಸ್ವಾಭಿಮಾನ ಇದ್ದರೆ ತಮ್ಮ ಸ್ಥಾನವನ್ನು ತಿರಸ್ಕರಿಸಲಿ. ನನಗೇನಾದರೂ ಹೀಗೆ ಆಗಿದ್ದರೆ ಖಂಡಿತವಾಗಿಯೂ ತಿರಸ್ಕರಿಸುತ್ತಿದ್ದೆ ಎಂದು ತಿರುಗೇಟು ನೀಡಿದರು.

ವಿಜಯಪುರ: ಹಿಂದಿ ಭಾಷೆ ಹೇರಿಕೆ ವಿಚಾರ ಸರಿಯಾದ ಕ್ರಮವಲ್ಲ. ಯಾವುದೇ ಒಂದು ಭಾಷೆಯನ್ನು ಹೇರುವಾಗ ಚರ್ಚೆ ಮಾಡಬೇಕು ಎಂದು ಗೃಹ ಸಚಿವ ಎಂ.ಬಿ. ಪಾಟೀಲ್​ ಪ್ರತಿಕ್ರಿಯೆ ನೀಡಿದ್ದಾರೆ.

ಹಿಂದಿ ಭಾಷೆ ಹೇರಿಕೆ ಬಗ್ಗೆ ಪ್ರತಿಕ್ರಿಯಿಸಿದ ಎಂ.ಬಿ ಪಾಟೀಲ

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಮೊದಲು ಕನ್ನಡ ಭಾಷೆ ಉಳಿಸಿ ಬೆಳೆಸಬೇಕು. ತ್ರಿ ಭಾಷಾ ನೀತಿ ಜಾರಿ ಕುರಿತು ವ್ಯಾಪಕವಾಗಿ ಚರ್ಚೆ ನಡೆಸಿ ಅಭಿಪ್ರಾಯ ಸಂಗ್ರಹಿಸಿ ನಿರ್ಧಾರ ತೆಗೆದುಕೊಳ್ಳಬೇಕು ಎಂದಿದ್ದಾರೆ.

ಇನ್ನು ಸಚಿವ ಸಂಪುಟ ವಿಸ್ತರಣೆ ವಿಚಾರ ನನಗೆ ಸಂಬಂಧಿಸಿದ್ದಲ್ಲ, ಅದು ಹೈ ಕಮಾಂಡ್​ಗೆ ಬಿಟ್ಟದ್ದು. ರಾಜ್ಯ ಕಾಂಗ್ರೆಸ್​ ಉಸ್ತುವಾರಿ ಕೆ.ಸಿ. ವೇಣುಗೋಪಾಲ್​, ಮಾಜಿ ಸಿಎಂ ಸಿದ್ದರಾಮಯ್ಯ, ಜೆಡಿಎಸ್​ ವರಿಷ್ಠ ದೆವೇಗೌಡರು ಈ ಕುರಿತು ಚರ್ಚಿಸುತ್ತಾರೆ. ರಾಜ್ಯದಲ್ಲಿ ಮೈತ್ರಿಯೇ ಸೋಲಿಗೆ ಕಾರಣ ಅನ್ನೋದನ್ನು ವೈಯಕ್ತಿಕವಾಗಿ ನಾನು ಒಪ್ಪುವುದಿಲ್ಲ ಎಂದು ಗೃಹ ಸಚಿವರು ಹೇಳಿದ್ದಾರೆ.

ಕೇಂದ್ರದಲ್ಲಿ ರಾಜ್ಯದ ಪ್ರಬಲ ಸಮುದಾಯದವರನ್ನು ಕಡೆಗಣಿಸಲಾಗ್ತಿದೆ ಎಂಬ ವಿಚಾರವಾಗಿ ಪ್ರತಿಕ್ರಿಯಿಸಿದ ಎಂ ಬಿ ಪಾಟೀಲರು, ನಮ್ಮ ಸಮುದಾಯವೊಂದರಿಂದಲೇ 10 ಮಂದಿ ಸಂಸದರಾದರೂ ಕೂಡಾ ಒಬ್ಬರಿಗೆ ಮಾತ್ರ ಸಚಿವ ಸ್ಥಾನ ನೀಡಲಾಗಿದೆ. ಸುರೇಶ್​ ಅಂಗಡಿ ಹಾಗೂ ಪ್ರಹ್ಲಾದ್ ಜೋಶಿ ಅವರು ನಾಲ್ಕು ಬಾರಿ ಜಯ ಗಳಿಸಿದ್ದಾರೆ. ಸುರೇಶ್​ ಅಂಗಡಿಗೆ ರಾಜ್ಯ ಸಚಿವ ಸ್ಥಾನ ನಿಡಿದ್ದರೆ, ಪ್ರಹ್ಲಾದ್ ಜೋಶಿ ಕ್ಯಾಬಿನೆಟ್​ ದರ್ಜೆ ಸಚಿವರಾಗಿದ್ದಾರೆ. ಇಬ್ಬರೂ ನಾಲ್ಕು ಬಾರಿ ವಿನ್ ಆದರೂ ಕೂಡಾ, ಸುರೇಶ್ ಅಂಗಡಿಯವರನ್ನು ನಿರ್ಲಕ್ಷಿಸಲಾಗಿದೆ. ಇದು ಬಿಜೆಪಿಯ ಮನಸ್ಥಿತಿಯನ್ನು ತೋರಿಸುತ್ತದೆ ಎಂದು ಟೀಕಿಸಿದರು.

ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರ ಬಿದ್ದು ಯಡಿಯೂರಪ್ಪ ಮತ್ತೆ ಸಿಎಂ ಆಗುತ್ತಾರೆ ಎಂಬ ಸಚಿವ ಸುರೇಶ್​ ಅಂಗಡಿ ಅವರ ಹೇಳಿಕೆಗೆ ನಗುತ್ತಲೇ ಪ್ರತಿಕ್ರಿಯಿಸಿದ ಸಚಿವ ಪಾಟೀಲ್ ಅವರು​, ಮೊದಲು ತಮ್ಮ ಖಾತೆ ಕುರಿತು ಚಿಂತೆ ಮಾಡಲಿ. ಅಂಗಡಿಯವರಿಗೆ ಸ್ವಾಭಿಮಾನ ಇದ್ದರೆ ತಮ್ಮ ಸ್ಥಾನವನ್ನು ತಿರಸ್ಕರಿಸಲಿ. ನನಗೇನಾದರೂ ಹೀಗೆ ಆಗಿದ್ದರೆ ಖಂಡಿತವಾಗಿಯೂ ತಿರಸ್ಕರಿಸುತ್ತಿದ್ದೆ ಎಂದು ತಿರುಗೇಟು ನೀಡಿದರು.

Intro:ವಿಜಯಪುರ Body:ವಿಜಯಪುರ: ಹಿಂದಿ ಭಾಷೆ ಹೇರಿಕೆ ವಿಚಾರ
ಸರಿಯಾದ ಕ್ರಮವಲ್ಲ ಯಾವುದೇ ಒಂದು ಭಾಷೆಯನ್ನು ಹೇರುವಾಗ ಚರ್ಚೆ ಮಾಡಬೇಕು ಎಂದು ಗೃಹಸಚಿವ ಎಂ.ಬಿ.ಪಾಟೀಲ ಪ್ರತಿಕ್ರಿಯೆ ನೀಡಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕನ್ನಡ ಭಾಷೆ ಉಳಿಸಿ ಬೆಳೆಸಬೇಕು.
ಹಿಂದಿ ಭಾಷೆ ವ್ಯಾಪಕವಾಗಿ ಚರ್ಚೆ ನಡೆಸಿ ಅಭಿಪ್ರಾಯ ಕೂಡಿಕರಿಸಿ ನಿರ್ಧಾರ ತೆಗೆದುಕೊಳ್ಳಬೇಕು ಎಂದರು.
ಸಚಿವ ಸಂಪುಟ ವಿಸ್ತರಣೆ ವಿಚಾರ ನನಗೆ ಸಂಬಂಧಿಸಿದ್ದಲ್ಲ ಅದು ಹೈ ಕಮಾಂಡ್ ಗೆ ಬಿಟ್ಟಿದ್ದು..ಕೆ.ಸಿ.ವೇಣುಗೋಪಾಲ, ಸಿದ್ದರಾಮಯ್ಯ, ದೆವೇಗೌಡರು ಈ ಕುರಿತು ಚರ್ಚಿಸುತ್ತಾರೆ ಎಂದರು.
ರಾಜ್ಯದಲ್ಲಿ ಮೈತ್ರೀನೇ ಸೋಲಿಗೆ ಕಾರಣ ಎಂಬುದು ವೈಯಕ್ತಿಕವಾಗಿ ನಾನು ಒಪ್ಪುವದಿಲ್ಲ.
ಈ ಲೋಕಸಭಾ ಚುನಾವಣೆ ನಮಗೆ ಆಶ್ಚರ್ಯ ಉಂಟು ಮಾಡಿದೆ ಎಂದರು.
ಕೇಂದ್ರದಲ್ಲಿ ಲಿಂಗಾಯತರ ಕಡೆಗಣನೆ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಅವರು
ಹತ್ತು ಜನ ಲಿಂಗಾಯತ ಸಂಸದರಾದರೂ ಕೂಡಾ ಒಬ್ಬ ರಿಗೆ ಸಚಿವ ಸ್ತಾನ ನೀಡಿದ್ದಾರೆ.
ಸುರೇಶ ಅಂಗಡಿ ಹಾಗೂ ಪ್ರಹ್ಲಾದ್ ಜೋಶಿ ಅವರು ನಾಲ್ಕು ಬಾರಿ ಜಯ ಗಳಿಸಿದ್ದಾರೆ.
ಸುರೇಶ ಅಂಗಡಿ ಅವರು ರಾಜ್ಯ ಸಚಿವರು, ಪ್ರಹ್ಲಾದ್ ಜೋಷಿ ಅವರು ಕೇಂದ್ರ ಸಚಿವರಾಗಿದ್ದಾರೆ.
ಇಬ್ಬರೂ ನಾಲ್ಕು ಬಾರಿ ವಿನ್ ಆದರೂ ಕೂಡಾ, ಸುರೇಶ್ ಅಂಗಡಿಯವರಿಗೂ ಕ್ಯಾಬಿನೆಟ್ ದರ್ಜೆ ಸಚಿವರನ್ನಾಗಿ ಮಾಡಬೇಕಾಗಿತ್ತು, ಇದು ಬಿಜೆಪಿಯ ಮನಸ್ಥಿತಿಯನ್ನು ತೋರುತ್ತದೆ ಎಂದರು.
ರಾಜ್ಯದಲ್ಲಿ ಸಮಿಶ್ರ ಸರ್ಕಾರ ಬಿದ್ದು ಯಡಿಯೂರಪ್ಪ ಸಿಎಂ ಆಗುತ್ತಾರೆ ಎಂಬ ಸುರೇಶ ಅಂಗಡಿ ಅವರ ಹೇಳಿಕೆ ವಿಚಾರಕ್ಕೆ ನಗುತ್ತಲೇ ಉತ್ತರಿಸಿದ ಸಚಿವ ಪಾಟೀಲ
ಸುರೇಶ್ ಅಂಗಡಿ ಅವರು ಮೊದಲು ತಮ್ಮ ಖಾತೆ ಕುರಿತು ಚಿಂತೆ ಮಾಡಲಿ.
ಸುರೇಶ ಅಂಗಡಿಯವರಿಗೆ ಸ್ವಾಭಿಮಾನ ಇದ್ದರೆ ತಮ್ಮ ಸ್ಥಾನವನ್ನು ತಿರಸ್ಕಾರ ಮಾಡಲಿ.
ನನಗೇನಾದರೂ ಹೀಗೆ ಆಗಿದ್ದರೆ ನಾನು ಖಂಡಿತವಾಗಿ ತಿರಸ್ಕರಿಸುತ್ತಿದೆ ಎಂದರು.Conclusion:ವಿಜಯಪುರ

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.