ವಿಜಯಪುರ: ನಗರದ ಗ್ರಾಮೀಣ ಪೊಲೀಸ್ ಠಾಣಾ ಆವರಣದಲ್ಲಿ ಕರ್ತವ್ಯ ನಿರತ ಪೊಲೀಸ್ ಸಿಬ್ಬಂದಿಗೆ ಡಿಎಸ್ಪಿ ಲಕ್ಷ್ಮೀ ನಾರಾಯಣ ಮಾಸ್ಕ್ಗಳನ್ನು ವಿತರಿಸಿದರು.
ತಮ್ಮ ಕರ್ತವ್ಯದ ಜೊತೆಗೆ ಆರೋಗ್ಯದ ಕಡೆಗೂ ಗಮನ ಹರಿಸಬೇಕು. ಮುಖಗವಸು ಧರಿಸಿಯೇ ಕೆಲಸ ಕರ್ತವ್ಯ ನಿರ್ವಹಿಸಬೇಕು. ಜೊತೆಗೆ ಬಿಡುವಾದಾಗ ಸ್ಯಾನಿಟೈಸರ್ ಬಳಸಿ ಕೈ ತೊಳೆದುಕೊಳ್ಳಿ ಎಂದು ಅವರು ಸಿಬ್ಬಂದಿಗೆ ಸೂಚಿಸಿದರು.
ಗ್ರಾಮೀಣ ವೃತ್ತ ಠಾಣೆಯ ಸಿಪಿಐ ದ್ಯಾಮಣ್ಣ, ಪಿಎಸ್ಐ ಆನಂದ ಸೇರಿದಂತೆ ಪೊಲೀಸ್ ಸಿಬ್ಬಂದಿಗೆ ಮಾಸ್ಕ್ ನೀಡಲಾಯಿತು.