ETV Bharat / state

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಸರ್ವ ಧರ್ಮದ 31ಜೋಡಿ ವಧು-ವರರು..!

ಸರ್ವ ಧರ್ಮದ 31ಜೋಡಿ ವಧು-ವರರು ಜಾತ್ರೋತ್ಸವ ಅಂಗವಾಗಿ ಇಂದು ದಾಂಪತ್ಯ ಜೀವನಕ್ಕೆ ಕಾಲಿಡುವ ಮೂಲಕ ರಾಜ್ಯದ ಗಮನ ಸೆಳೆದರು.

author img

By

Published : Apr 25, 2019, 5:08 PM IST

ಲಚ್ಯಾಣದಲ್ಲಿ ಗುರು ಶಂಕರಲಿಂಗೇಶ್ವರ ಜಾತ್ರೋತ್ಸವ ಅಂಗವಾಗಿ ನಡೆದ ಸರಳ ಸಾಮೂಹಿಕ ವಿವಾಹ ಕಾರ್ಯಕ್ರಮ

ವಿಜಯಪುರ: ಜಿಲ್ಲೆಯ ಇಂಡಿ ತಾಲೂಕಿನ ಲಚ್ಯಾಣ ಗ್ರಾಮದಲ್ಲಿ ಗುರು ಶಂಕರಲಿಂಗೇಶ್ವರ ಜಾತ್ರೋತ್ಸವ ಅಂಗವಾಗಿ ಇಂದು ಸರಳ ಸಾಮೂಹಿಕ ವಿವಾಹ ಕಾರ್ಯಕ್ರಮ ನಡೆಯಿತು. ಸರ್ವ ಧರ್ಮದ 31ಜೋಡಿ ವಧು-ವರರು ದಾಂಪತ್ಯ ಜೀವನಕ್ಕೆ ಕಾಲಿಟ್ಟರು.

ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಬಂಥನಾಳದ ಪೂಜ್ಯ ವೃಷಭಲಿಂಗೇಶ್ವರ ಮಹಾಶಿವಯೋಗಿಗಳು, ಬಡ ಕುಟುಂಬಗಳ ಕಷ್ಟಗಳನ್ನು ದೂರ ಮಾಡಲು 2005 ರಿಂದ ಮಠದಲ್ಲಿ ಸರಳ ಸಾಮೂಹಿಕ ವಿವಾಹ ಕಾರ್ಯಕ್ರಮಗಳನ್ನು ನಡೆಸಿಕೊಂಡು ಬರಲಾಗುತ್ತಿದೆ. ಈ ಮೂಲಕ ಬಡವರ ಸಂಕಷ್ಟಗಳನ್ನು ದೂರ ಮಾಡಲು ಮಠದ ವತಿಯಿಂದ ಶ್ರಮಿಸಲಾಗುತ್ತಿದೆ ಎಂದರು. ಬಂಥನಾಳದ ಶ್ರೀ ಸಂಗನಬಸವ ಮಹಾಶಿವಯೋಗಿಗಳು ಹಾಕಿಕೊಟ್ಟ ಮಾರ್ಗದಲ್ಲೇ ಮಠವನ್ನು ಮುನ್ನಡೆಸಲಾಗುತ್ತಿದೆ. ಇಂತಹ ಕ್ಷೇತ್ರದಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟ ನವ ಜೋಡಿಯ ಜೀವನ ಸುಖ ಶಾಂತಿ, ನೆಮ್ಮದಿಯಿಂದ ಕೂಡಿರಲಿ ಎಂದು ಆಶೀರ್ವದಿಸಿದರು.

ಲಚ್ಯಾಣದಲ್ಲಿ ಗುರು ಶಂಕರಲಿಂಗೇಶ್ವರ ಜಾತ್ರೋತ್ಸವ ಅಂಗವಾಗಿ ನಡೆದ ಸರಳ ಸಾಮೂಹಿಕ ವಿವಾಹ ಕಾರ್ಯಕ್ರಮ

ಹಳಿಂಗಳಿಯ ಶಿವಶರಣೆ ದ್ರಾಕ್ಷಾಯಿಣಿ ದೇವಿ ವಚನ ಪಠಣ ಮಾಡಿ ಅಕ್ಷತೆಯ ಕಾರ್ಯ ನೆರವೇರಿಸಿದರು. ಹಳಿಂಗಳಿಯ ಶ್ರೀ ಶಿವಾನಂದ ಮಹಾಸ್ವಾಮೀಜಿ, ಜಕನೂರಿನ ಸಿದ್ಧಲಿಂಗ ದೇವರು, ಹಿಪ್ಪರಗಿಯ ಸಿದ್ಧಾರೂಢ ಶರಣರು, ಹಣಮಂತ ಮಹಾರಾಜರು, ಪುಂಡಲಿಂಗ ಮಹಾರಾಜರು, ಶರಣಬಸವ ದೇವರು ಕಾರ್ಯಕ್ರಮದ ಸಾನಿಧ್ಯವಹಿಸಿದ್ದರು.

ಕಾರ್ಯಕ್ರಮದ ಅಂಗವಾಗಿ ಸ್ಥಳೀಯ ಗ್ರಾಮ ಪಂಚಾಯಿತಿ, ಆರೋಗ್ಯ ಇಲಾಖೆ ಹಾಗೂ ಕಮರಿಮಠದ ಸೇವಾ ಸಮಿತಿಯ ಸಹಯೋಗದಲ್ಲಿ ಉಚಿತ ಆರೋಗ್ಯ ತಪಾಸಣೆ ಶಿಬಿರ ಆಯೋಜಿಸಲಾಗಿತ್ತು.

ವಿಜಯಪುರ: ಜಿಲ್ಲೆಯ ಇಂಡಿ ತಾಲೂಕಿನ ಲಚ್ಯಾಣ ಗ್ರಾಮದಲ್ಲಿ ಗುರು ಶಂಕರಲಿಂಗೇಶ್ವರ ಜಾತ್ರೋತ್ಸವ ಅಂಗವಾಗಿ ಇಂದು ಸರಳ ಸಾಮೂಹಿಕ ವಿವಾಹ ಕಾರ್ಯಕ್ರಮ ನಡೆಯಿತು. ಸರ್ವ ಧರ್ಮದ 31ಜೋಡಿ ವಧು-ವರರು ದಾಂಪತ್ಯ ಜೀವನಕ್ಕೆ ಕಾಲಿಟ್ಟರು.

ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಬಂಥನಾಳದ ಪೂಜ್ಯ ವೃಷಭಲಿಂಗೇಶ್ವರ ಮಹಾಶಿವಯೋಗಿಗಳು, ಬಡ ಕುಟುಂಬಗಳ ಕಷ್ಟಗಳನ್ನು ದೂರ ಮಾಡಲು 2005 ರಿಂದ ಮಠದಲ್ಲಿ ಸರಳ ಸಾಮೂಹಿಕ ವಿವಾಹ ಕಾರ್ಯಕ್ರಮಗಳನ್ನು ನಡೆಸಿಕೊಂಡು ಬರಲಾಗುತ್ತಿದೆ. ಈ ಮೂಲಕ ಬಡವರ ಸಂಕಷ್ಟಗಳನ್ನು ದೂರ ಮಾಡಲು ಮಠದ ವತಿಯಿಂದ ಶ್ರಮಿಸಲಾಗುತ್ತಿದೆ ಎಂದರು. ಬಂಥನಾಳದ ಶ್ರೀ ಸಂಗನಬಸವ ಮಹಾಶಿವಯೋಗಿಗಳು ಹಾಕಿಕೊಟ್ಟ ಮಾರ್ಗದಲ್ಲೇ ಮಠವನ್ನು ಮುನ್ನಡೆಸಲಾಗುತ್ತಿದೆ. ಇಂತಹ ಕ್ಷೇತ್ರದಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟ ನವ ಜೋಡಿಯ ಜೀವನ ಸುಖ ಶಾಂತಿ, ನೆಮ್ಮದಿಯಿಂದ ಕೂಡಿರಲಿ ಎಂದು ಆಶೀರ್ವದಿಸಿದರು.

ಲಚ್ಯಾಣದಲ್ಲಿ ಗುರು ಶಂಕರಲಿಂಗೇಶ್ವರ ಜಾತ್ರೋತ್ಸವ ಅಂಗವಾಗಿ ನಡೆದ ಸರಳ ಸಾಮೂಹಿಕ ವಿವಾಹ ಕಾರ್ಯಕ್ರಮ

ಹಳಿಂಗಳಿಯ ಶಿವಶರಣೆ ದ್ರಾಕ್ಷಾಯಿಣಿ ದೇವಿ ವಚನ ಪಠಣ ಮಾಡಿ ಅಕ್ಷತೆಯ ಕಾರ್ಯ ನೆರವೇರಿಸಿದರು. ಹಳಿಂಗಳಿಯ ಶ್ರೀ ಶಿವಾನಂದ ಮಹಾಸ್ವಾಮೀಜಿ, ಜಕನೂರಿನ ಸಿದ್ಧಲಿಂಗ ದೇವರು, ಹಿಪ್ಪರಗಿಯ ಸಿದ್ಧಾರೂಢ ಶರಣರು, ಹಣಮಂತ ಮಹಾರಾಜರು, ಪುಂಡಲಿಂಗ ಮಹಾರಾಜರು, ಶರಣಬಸವ ದೇವರು ಕಾರ್ಯಕ್ರಮದ ಸಾನಿಧ್ಯವಹಿಸಿದ್ದರು.

ಕಾರ್ಯಕ್ರಮದ ಅಂಗವಾಗಿ ಸ್ಥಳೀಯ ಗ್ರಾಮ ಪಂಚಾಯಿತಿ, ಆರೋಗ್ಯ ಇಲಾಖೆ ಹಾಗೂ ಕಮರಿಮಠದ ಸೇವಾ ಸಮಿತಿಯ ಸಹಯೋಗದಲ್ಲಿ ಉಚಿತ ಆರೋಗ್ಯ ತಪಾಸಣೆ ಶಿಬಿರ ಆಯೋಜಿಸಲಾಗಿತ್ತು.

Intro:Body:ವಿಜಯಪುರ,: ಜಿಲ್ಲೆಯ ಇಂಡಿ ತಾಲ್ಲೂಕಿನ ಲಚ್ಯಾಣ ಗ್ರಾಮದಲ್ಲಿ ಗುರು ಶಂಕರಲಿಂಗೇಶ್ವರ ಜಾತ್ರೋತ್ಸವ ಅಂಗವಾಗಿ ಗುರುವಾರ ಸರಳ ಸಾಮೂಹಿಕ ವಿವಾಹ ಕಾರ್ಯಕ್ರಮ ನಡೆಯಿತು. ಸರ್ವ ಧರ್ಮದ ೩೧ ಜೋಡಿ ವಧು - ವರರು ದಾಂಪತ್ಯ ಜೀವನಕ್ಕೆ ಹೆಜ್ಜೆ ಹಾಕಿದರು.
ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಬಂಥನಾಳದ ಪೂಜ್ಯ ವೃಷಭಲಿಂಗೇಶ್ವರ ಮಹಾಶಿವಯೋಗಿಗಳು ಮಾತನಾಡಿ, ಬರದ ಬವಣೆಯಿಂದ ಬಸವಳಿದ ಕುಟುಂಬಗಳ ಕಷ್ಟ ಕಾರ್ಪಣ್ಯಗಳನ್ನು ದೂರ ಮಾಡಲು, ಕಳೆದ ೨೦೦೫ ರಿಂದ ಮಠದಲ್ಲಿ ಸರಳ ಸಾಮೂಹಿಕ ವಿವಾಹ ಕಾರ್ಯಕ್ರಮಗಳನ್ನು ಸಂಘಟಿಸಲಾಗಿದೆ. ಅಂದಿನಿಂದ ಇಂದಿನ ವರೆಗೂ ಪ್ರತಿವರ್ಷ ಈ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತಿದೆ. ಈ ಮೂಲಕ ಬಡವರ ಸಂಕಷ್ಟಗಳನ್ನು ದೂರ ಮಾಡಲು ಮಠದ ವತಿಯಿಂದ ಶ್ರಮಿಸಲಾಗುತ್ತಿದೆ ಎಂದರು.
ಬಂಥನಾಳದ ಶ್ರೀ ಸಂಗನಬಸವ ಮಹಾಶಿವಯೋಗಿಗಳು ಹಾಕಿಕೊಟ್ಟ ಮಾರ್ಗದಲ್ಲೆ ಮಠವನ್ನು ಮುನ್ನಡೆಸಲಾಗುತ್ತಿದೆ. ಇಂಥಹ ಕ್ಷೇತ್ರದಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಸರ್ವ ಧರ್ಮದ ೩೧ ನವ ಜೋಡಿಯ ಗೃಹಸ್ಥಾಶ್ರಮದ ಜೀವನ ಸುಖ ಶಾಂತಿ, ನೆಮ್ಮದಿಯಿಂದ ಕೂಡಿರಲಿ ಎಂದು ಆಶಿರ್ವದಿಸಿದರು.
ಹಳಿಂಗಳಿಯ ಶಿವಶರಣೆ ದ್ರಾಕ್ಷಾಯಿಣಿ ದೇವಿ ಅವರು ವಚನ ಪಠಣ ಮಾಡಿ ಅಕ್ಷತೆಯ ಕಾರ್ಯ ನೆರವೇರಿಸಿದರು. ಹಳಿಂಗಳಿಯ ಶ್ರೀ ಶಿವಾನಂದ ಮಹಾಸ್ವಾಮೀಜಿ, ಜಕನೂರಿನ ಸಿದ್ಧಲಿಂಗ ದೇವರು, ಹಿಪ್ಪರಗಿಯ ಸಿದ್ಧಾರೂಢ ಶರಣರು, ಹಣಮಂತ ಮಹಾರಾಜರು, ಪುಂಡಲಿಂಗ ಮಹಾರಾಜರು, ಶರಣಬಸವ ದೇವರು ಕಾರ್ಯಕ್ರಮದ ಸಾನಿಧ್ಯವಹಿಸಿದ್ದರು. ಧನರಾಜ್ ಮುಜಗೊಂಡ ಕಾರ್ಯಕ್ರಮ ನಿರೂಪಿಸಿದರು.
ಕಾರ್ಯಕ್ರಮದ ಅಂಗವಾಗಿ ಸ್ಥಳೀಯ ಗ್ರಾಮ ಪಂಚಾಯಿತಿ, ಆರೋಗ್ಯ ಇಲಾಖೆ ಹಾಗೂ ಕಮರಿಮಠದ ಸೇವಾ ಸಮಿತಿಯ ಸಹಯೋಗದಲ್ಲಿ ಉಚಿತ ಆರೋಗ್ಯ ತಪಾಸಣೆ ಶಿಬಿರ ಆಯೋಜಿಸಲಾಗಿತ್ತು.
ಉತ್ಸವದಲ್ಲಿ ಪಾಲ್ಗೊಂಡ ಭಕ್ತರಿಗೆ ಇಲ್ಲಿನ ನಿರಂತರ ಅನ್ನ ದಾಸೋಹ ಕೇಂದ್ರದಲ್ಲಿ ಹುಗ್ಗಿ, ಸಜ್ಜಕ, ರೊಟ್ಟಿ, ಅನ್ನ, ಸಾಂಬಾರ, ತಂಪಾದ ಮಜ್ಜಿಗೆ ವಿತರಿಸಲಾಯಿತು.Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.