ವಿಜಯಪುರ: ಕೆಆರ್ಎಸ್ ಡ್ಯಾಂನಲ್ಲಿ ಯಾವುದೇ ಬಿರುಕಿಲ್ಲ ಎಂದು ಗಣಿ ಸಚಿವ ಮುರುಗೇಶ್ ನಿರಾಣಿ ಸ್ಪಷ್ಟಪಡಿಸಿದರು.
ಜಿಲ್ಲೆಯ ಕೊಲ್ಹಾರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಂಡ್ಯದ ಬೇಬಿ ಬೆಟ್ಟಕ್ಕೆ ನಾನು ಭೇಟಿ ನೀಡಿದ್ದೇನೆ. ವೈಜ್ಞಾನಿಕವಾಗಿ ಪರೀಕ್ಷೆ ಆಗುವವರೆಗೂ ಯಾವುದೇ ಗಣಿಗಾರಿಕೆ ನಡೆಸಬಾರದು ಎಂದು ಸೂಚಿಸಲಾಗಿದೆ ಎಂದರು.
ಕಳೆದ 4 ತಿಂಗಳಿಂದ 10 ಕಿ.ಮೀ ವ್ಯಾಪ್ತಿಯಲ್ಲಿ ಯಾವುದೇ ಗಣಿಗಾರಿಕೆ ನಡೆಯುತ್ತಿಲ್ಲ. ಈ ಸಂಬಂಧ ಕೆಆರ್ಎಸ್ ಮುಖ್ಯ ಇಂಜಿನಿಯರ್ ಜೊತೆ ಸಹ ಮಾತನಾಡಿದ್ದೇನೆ. ಕೆಆರ್ಎಸ್ ಸುತ್ತಮುತ್ತ 10 ಕಿಮೀ ಗಣಿಗಾರಿಕೆ ಬಂದ್ ಮಾಡಲಾಗಿದೆ. ಬಿರುಕು ಬಿಟ್ಟಿರುವುದು ಕೇವಲ ಊಹಾಪೋಹಗಳಷ್ಟೇ. ರೈತರು ಇದಕ್ಕೆಲ್ಲ ಕಿವಿಕೊಡಬೇಡಿ ಎಂದು ಮನವಿ ಮಾಡಿದರು.
ಇದನ್ನೂ ಓದಿ: ನಾಯಕತ್ವದ ವಿರುದ್ಧ ಕೆಲವರ ಅಪಸ್ವರ: ದಿಲ್ಲಿಗೆ ಶಾಸಕರ ನಿಯೋಗ ಕೊಂಡೊಯ್ಯುವ ಬಗ್ಗೆ ರೇಣುಕಾಚಾರ್ಯ ಹೇಳಿದ್ದೇನು?