ETV Bharat / state

ಕೊರೊನಾ ಹರಡದಂತೆ ತಡೆಯಲು ತೀವ್ರ ನಿಗಾವಹಿಸುವಂತೆ ಸಚಿವೆ ಶಶಿಕಲಾ ಜೊಲ್ಲೆ ಆಗ್ರಹ

ಕಂಟೇನ್ಮೆಂಟ್ ವಲಯ ಸೇರಿ ಇತರ ಪ್ರದೇಶಗಳಲ್ಲಿ ತೀವ್ರ ನಿಗಾ ಇಡುವಂತೆ ತಿಳಿಸಿರುವ ಅವರು, ಐಎಲ್‌ಐ ಮತ್ತು ಸಾರಿ ಪ್ರಕರಣಗಳಲ್ಲಿ ಖಾಸಗಿ ಆಸ್ಪತ್ರೆಗಳ ವೈದ್ಯರು ಜವಾಬ್ದಾರಿಯಿಂದ ಕಾರ್ಯ ನಿರ್ವಹಿಸುವುದರ ಜೊತೆಗೆ ಇಂತಹ ಲಕ್ಷಣವುಳ್ಳವರನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸುವುದರ ಜೊತೆಗೆ ಜಿಲ್ಲಾ ಆಸ್ಪತ್ರೆ ವೈದ್ಯರೊಂದಿಗೆ ಸಮನ್ವಯತೆ ಸಾಧಿಸಿ ಕಾರ್ಯನಿರ್ವಹಿಸಬೇಕು..

author img

By

Published : Jun 23, 2020, 8:56 PM IST

Minister Sasikala Jolle urges vigorous monitoring to prevent corona spread
ಕೊರೊನಾ ಹರಡದಂತೆ ತಡೆಯಲು ತೀವ್ರ ನಿಗಾ ವಹಿಸುವಂತೆ ಸಚಿವೆ ಶಶಿಕಲಾ ಜೊಲ್ಲೆ ಆಗ್ರಹ

ವಿಜಯಪುರ : ಕೊರೊನಾ ನಿಯಂತ್ರಣಕ್ಕಾಗಿ ನೆಗಡಿ, ಕೆಮ್ಮು, ಜ್ವರ ಹಾಗೂ ತೀವ್ರ ಉಸಿರಾಟ ತೊಂದರೆ ಲಕ್ಷಣವುಳ್ಳವರನ್ನು ಗುರುತಿಸುವ ಕಾರ್ಯ ಪರಿಣಾಮಕಾರಿಯಾಗಿ ಹಮ್ಮಿಕೊಳ್ಳುವಂತೆ ಜಿಲ್ಲಾ ಉಸ್ತುವಾರಿ ಸಚಿವೆ ಶಶಿಕಲಾ ಜೊಲ್ಲೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ನಗರದ ನೂತನ ಪ್ರವಾಸಿ ಮಂದಿರದಲ್ಲಿ ಕೋವಿಡ್-19 ನಿಯಂತ್ರಣ ಕುರಿತಂತೆ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಅವರು, ಸಾಂಕ್ರಾಮಿಕವಾಗಿ ಹರಡುತ್ತಿರುವ ಕೊರೊನಾ ಕುರಿತು ಎಲ್ಲರೂ ಮುನ್ನೆಚ್ಚರಿಕೆವಹಿಸಬೇಕು. ಐಎಲ್‌ಐ ಮತ್ತು ಸಾರಿ ಸಂಬಂಧಿತ ಲಕ್ಷಣಗಳಿದ್ದಲ್ಲಿ ತಕ್ಷಣ ವೈದ್ಯಕೀಯ ಪರೀಕ್ಷೆಗೆ ಒಳಪಡುವಂತೆ ತಿಳಿಸಿದರು. ಅಧಿಕಾರಿಗಳು ಕೂಡಾ ಇಂತಹ ಲಕ್ಷಣವುಳ್ಳವರನ್ನು ಗುರುತಿಸುವ ಕಾರ್ಯ ಪರಿಣಾಮಕಾರಿಯಾಗಿ ಹಮ್ಮಿಕೊಳ್ಳುವಂತೆ ಸೂಚಿಸಿದರು.

ಕಂಟೇನ್ಮೆಂಟ್ ವಲಯ ಸೇರಿ ಇತರ ಪ್ರದೇಶಗಳಲ್ಲಿ ತೀವ್ರ ನಿಗಾ ಇಡುವಂತೆ ತಿಳಿಸಿರುವ ಅವರು, ಐಎಲ್‌ಐ ಮತ್ತು ಸಾರಿ ಪ್ರಕರಣಗಳಲ್ಲಿ ಖಾಸಗಿ ಆಸ್ಪತ್ರೆಗಳ ವೈದ್ಯರು ಜವಾಬ್ದಾರಿಯಿಂದ ಕಾರ್ಯ ನಿರ್ವಹಿಸುವುದರ ಜೊತೆಗೆ ಇಂತಹ ಲಕ್ಷಣವುಳ್ಳವರನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸುವುದರ ಜೊತೆಗೆ ಜಿಲ್ಲಾ ಆಸ್ಪತ್ರೆ ವೈದ್ಯರೊಂದಿಗೆ ಸಮನ್ವಯತೆ ಸಾಧಿಸಿ ಕಾರ್ಯನಿರ್ವಹಿಸಬೇಕು.

ಅದರಂತೆ ಕೊರೊನಾದಿಂದ ಆಗಬಹುದಾದ ಸಾವಿನ ಪ್ರಮಾಣವನ್ನು ಸಹ ಕಡಿಮೆಯಾಗುವಂತೆ ಮುನ್ನೆಚ್ಚರಿಕೆ ವಹಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದರು. ಸಚಿವರು ಕೃಷಿ ಇಲಾಖೆ, ಎಪಿಎಂಸಿ ಮತ್ತು ಇತರ ಅವಶ್ಯಕ ಇಲಾಖೆಗಳ ಕುರಿತು ಪರಿಶೀಲನೆ ನಡೆಸಿದರು. ಜಿಲ್ಲಾಧಿಕಾರಿ ವೈ ಎಸ್ ಪಾಟೀಲ್‌ ಮಾತನಾಡಿ, ಜಿಲ್ಲೆಯಲ್ಲಿ ಈವರೆಗೆ 317 ಕೋವಿಡ್-19 ಪಾಸಿಟಿವ್ ಪ್ರಕರಣ ದೃಢವಾಗಿವೆ.

88 ಸ್ರಕಿಯ ಪ್ರಕರಣಗಳಿವೆ. ಈವರೆಗೆ 26,612 ಜನರ ಗಂಟಲು ದ್ರವ ಮಾದರಿ ನೆಗೆಟಿವ್ ಬಂದಿದ್ದು, 26,989 ಲಕ್ಷಣವುಳ್ಳ ಜನರ ಗಂಟಲು ದ್ರವ ಮಾದರಿ ವೈದ್ಯಕೀಯ ಪರೀಕ್ಷೆಗೆ ಸಂಗ್ರಹಿಸಲಾಗಿದೆ. 12,808 ಜನರು 28 ದಿನಗಳ ಐಸೋಲೇಷನ್ ಅವಧಿ ಪೂರ್ಣಗೊಳಿಸಿದ್ದಾರೆ. 21,097 ಜನರು 1 ರಿಂದ 28 ದಿನಗಳ ರಿಪೋರ್ಟಿಂಗ್ ಅವಧಿಯಲ್ಲಿದ್ದಾರೆ. ಈವರೆಗೆ 222 ಗುಣಮುಖ ರೋಗಿಗಳನ್ನು ಆಸ್ಪತ್ರೆಯಿಂದ ಬಿಡುಗಡೆಗೊಳಿಸಿಲಾಗಿದೆ. 7 ಜನರು ಕೋವಿಡ್-19 ಪಾಸಿಟಿವ್ ರೋಗಿಗಳು ಮೃತಪಟ್ಟಿದ್ದು, 34,132 ಜನರ ಮೇಲೆ ತೀವ್ರ ನಿಗಾ ಇಡಲಾಗಿದೆ.

ಒಟ್ಟು 34 ಕಂಟೇನ್ಮೆಂಟ್ ವಲಯಗಳು ಚಾಲ್ತಿಯಲ್ಲಿದ್ದು, 42 ವಲಯಗಳನ್ನು ಡಿನೋಟಿಫಿಕೇಶನ್ ಮಾಡಲಾಗಿದೆ. ಈ ಹಿಂದೆ ಒಟ್ಟು 76 ಕಂಟೇನ್ಮೆಂಟ್ ವಲಯಗಳನ್ನು ಗುರುತಿಸಲಾಗಿತ್ತು ಎಂದರು. ಜಿಲ್ಲೆಯಲ್ಲಿ ಒಟ್ಟು 596 ಸಾಂಸ್ಥಿಕ ಕ್ವಾರಂಟೈನ್ ಕೇಂದ್ರಗಳನ್ನು ಸ್ಥಾಪಿಸಲಾಗಿದೆ. ಸಾಂಸ್ಥಿಕ ಕ್ವಾರಂಟೈನ್ ಕೇಂದ್ರದಲ್ಲಿ ಇದ್ದ 32,340 ಜನರ ಪೈಕಿ 30,785 ಜನರನ್ನು ಬಿಡುಗಡೆ ಮಾಡಲಾಗಿದೆ. ಸದ್ಯಕ್ಕೆ 66 ಸಾಂಸ್ಥಿಕ ಕ್ವಾರಂಟೈನ್ ಕೇಂದ್ರಗಳು ಚಾಲ್ತಿಯಲ್ಲಿದ್ದು, 1,567 ಜನರು ಸಾಂಸ್ಥಿಕ ಕ್ವಾರಂಟೈನ್‌ನಲ್ಲಿದ್ದಾರೆ.

ಈವರೆಗೆ 23,826 ಮಹಾರಾಷ್ಟ್ರದಿಂದ ಹಾಗೂ 2,982 ಗೋವಾದಿಂದ ಮತ್ತು 8,514 ಜನರು ಬೇರೆ ರಾಜ್ಯಗಳಿಂದ ಆಗಮಿಸಿದ್ದಾರೆ. ಅದರಂತೆ ವೈದ್ಯರು ಅತ್ಯುತ್ತಮ ಕಾರ್ಯ ನಿರ್ವಹಿಸುತ್ತಿದ್ದು, ಇತ್ತೀಚೆಗೆ ಅವಳಿ ಮಕ್ಕಳಿಗೆ ಹೆರಿಗೆ ನೀಡಿದ ಮಹಿಳೆಗೆ ಅತ್ಯುತ್ತಮ ವೈದ್ಯಕೀಯ ಚಿಕಿತ್ಸೆ ನೀಡಲಾಗಿದೆ ಎಂದು ಹೇಳಿದರು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅನುಪಮ್ ಅಗರವಾಲ್, ಹೋಮ್ ಕ್ವಾರಂಟೈನ್ ನಿಯಮಗಳನ್ನು ಉಲ್ಲಂಘಿಸಿದ 22 ಜನರ ಮೇಲೆ ಎಫ್‌ಐಆರ್ ದಾಖಲಿಸಲಾಗಿದೆ.

ಅದರಂತೆ ಜಿಲ್ಲೆಯ ಗಡಿಭಾಗ ಕಂಟೇನ್ಮೆಂಟ್ ವಲಯ ಮತ್ತು ಇತರೆ ಪ್ರದೇಶಗಳಲ್ಲಿ ಕಾನೂನಿನ ರೀತಿ ಸೂಕ್ತ ಕ್ರಮಕೈಗೊಳ್ಳಲಾಗುತ್ತಿದೆ ಎಂದರು. ಶಾಸಕ ಎಂ ಸಿ ಮನಗೂಳಿ, ವಿಧಾನಪರಿಷತ್ ಸದಸ್ಯ ಅರುಣ್ ಶಹಾಪೂರ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಗೋವಿಂದ ರೆಡ್ಡಿ ಸೇರಿ ಆರೋಗ್ಯ ಮತ್ತು ಇತರೆ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

ಕ್ವಾರಂಟೈನ್​​ ನಿಯಮ ಮೀರಿದರೆ ಕ್ರಮ : ಕೋವಿಡ್-19 ಅಪಾಯಕಾರಿ ಸಾಂಕ್ರಾಮಿಕ ರೋಗ ಹರಡದಂತೆ ತಡೆಗಟ್ಟುವ ನಿಟ್ಟಿನಲ್ಲಿ ಕೆಲವು ಜನರನ್ನು ಹೋಮ್ ಕ್ವಾರಂಟೈನ್ ಮಾಡಲಾಗಿದೆ. ನಿಯಮ ಉಲ್ಲಂಘಿಸಿ ಕ್ವಾರಂಟೈನ್ ಅವಧಿಯಲ್ಲಿ ನಿಯಮ ಉಲ್ಲಂಘಿಸಿದವರನ್ನು ಐಪಿಸಿ ಕಲಂ 188ರ ಅನ್ವಯ ಕಾನೂನು ಕ್ರಮ ಜರುಗಿಸುವಂತೆ ಜಿಲ್ಲಾಧಿಕಾರಿ ವೈ ಎಸ್ ಪಾಟೀಲ್‌ ಸೂಚಿಸಿದ್ದಾರೆ.

ಜಿಲ್ಲೆಯಲ್ಲಿ ಹೋಮ್ ಕ್ವಾರಂಟೈನ್ ಮಾಡಲಾಗಿದ್ದವರಲ್ಲಿ ಕೆಲವರು ಸರ್ಕಾರದ ನಿಯಮ ಉಲ್ಲಂಘಿಸಿ ಸಾರ್ವಜನಿಕ ಸ್ಥಳಗಳಲ್ಲಿ ಹಾಗೂ ಸಭೆ-ಸಮಾರಂಭದಲ್ಲಿ ಭಾಗಿಯಾಗಿದ್ದ 148 ಜನರ ಮೇಲೆ ಪರಿಶೀಲನೆ ನಡೆಸಲಾಗಿದೆ. ನಿಯಮ ಉಲ್ಲಂಘಿಸಿದವರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು ಎಂದು ತಿಳಿಸಿದ್ದಾರೆ.

ವಿಜಯಪುರ : ಕೊರೊನಾ ನಿಯಂತ್ರಣಕ್ಕಾಗಿ ನೆಗಡಿ, ಕೆಮ್ಮು, ಜ್ವರ ಹಾಗೂ ತೀವ್ರ ಉಸಿರಾಟ ತೊಂದರೆ ಲಕ್ಷಣವುಳ್ಳವರನ್ನು ಗುರುತಿಸುವ ಕಾರ್ಯ ಪರಿಣಾಮಕಾರಿಯಾಗಿ ಹಮ್ಮಿಕೊಳ್ಳುವಂತೆ ಜಿಲ್ಲಾ ಉಸ್ತುವಾರಿ ಸಚಿವೆ ಶಶಿಕಲಾ ಜೊಲ್ಲೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ನಗರದ ನೂತನ ಪ್ರವಾಸಿ ಮಂದಿರದಲ್ಲಿ ಕೋವಿಡ್-19 ನಿಯಂತ್ರಣ ಕುರಿತಂತೆ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಅವರು, ಸಾಂಕ್ರಾಮಿಕವಾಗಿ ಹರಡುತ್ತಿರುವ ಕೊರೊನಾ ಕುರಿತು ಎಲ್ಲರೂ ಮುನ್ನೆಚ್ಚರಿಕೆವಹಿಸಬೇಕು. ಐಎಲ್‌ಐ ಮತ್ತು ಸಾರಿ ಸಂಬಂಧಿತ ಲಕ್ಷಣಗಳಿದ್ದಲ್ಲಿ ತಕ್ಷಣ ವೈದ್ಯಕೀಯ ಪರೀಕ್ಷೆಗೆ ಒಳಪಡುವಂತೆ ತಿಳಿಸಿದರು. ಅಧಿಕಾರಿಗಳು ಕೂಡಾ ಇಂತಹ ಲಕ್ಷಣವುಳ್ಳವರನ್ನು ಗುರುತಿಸುವ ಕಾರ್ಯ ಪರಿಣಾಮಕಾರಿಯಾಗಿ ಹಮ್ಮಿಕೊಳ್ಳುವಂತೆ ಸೂಚಿಸಿದರು.

ಕಂಟೇನ್ಮೆಂಟ್ ವಲಯ ಸೇರಿ ಇತರ ಪ್ರದೇಶಗಳಲ್ಲಿ ತೀವ್ರ ನಿಗಾ ಇಡುವಂತೆ ತಿಳಿಸಿರುವ ಅವರು, ಐಎಲ್‌ಐ ಮತ್ತು ಸಾರಿ ಪ್ರಕರಣಗಳಲ್ಲಿ ಖಾಸಗಿ ಆಸ್ಪತ್ರೆಗಳ ವೈದ್ಯರು ಜವಾಬ್ದಾರಿಯಿಂದ ಕಾರ್ಯ ನಿರ್ವಹಿಸುವುದರ ಜೊತೆಗೆ ಇಂತಹ ಲಕ್ಷಣವುಳ್ಳವರನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸುವುದರ ಜೊತೆಗೆ ಜಿಲ್ಲಾ ಆಸ್ಪತ್ರೆ ವೈದ್ಯರೊಂದಿಗೆ ಸಮನ್ವಯತೆ ಸಾಧಿಸಿ ಕಾರ್ಯನಿರ್ವಹಿಸಬೇಕು.

ಅದರಂತೆ ಕೊರೊನಾದಿಂದ ಆಗಬಹುದಾದ ಸಾವಿನ ಪ್ರಮಾಣವನ್ನು ಸಹ ಕಡಿಮೆಯಾಗುವಂತೆ ಮುನ್ನೆಚ್ಚರಿಕೆ ವಹಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದರು. ಸಚಿವರು ಕೃಷಿ ಇಲಾಖೆ, ಎಪಿಎಂಸಿ ಮತ್ತು ಇತರ ಅವಶ್ಯಕ ಇಲಾಖೆಗಳ ಕುರಿತು ಪರಿಶೀಲನೆ ನಡೆಸಿದರು. ಜಿಲ್ಲಾಧಿಕಾರಿ ವೈ ಎಸ್ ಪಾಟೀಲ್‌ ಮಾತನಾಡಿ, ಜಿಲ್ಲೆಯಲ್ಲಿ ಈವರೆಗೆ 317 ಕೋವಿಡ್-19 ಪಾಸಿಟಿವ್ ಪ್ರಕರಣ ದೃಢವಾಗಿವೆ.

88 ಸ್ರಕಿಯ ಪ್ರಕರಣಗಳಿವೆ. ಈವರೆಗೆ 26,612 ಜನರ ಗಂಟಲು ದ್ರವ ಮಾದರಿ ನೆಗೆಟಿವ್ ಬಂದಿದ್ದು, 26,989 ಲಕ್ಷಣವುಳ್ಳ ಜನರ ಗಂಟಲು ದ್ರವ ಮಾದರಿ ವೈದ್ಯಕೀಯ ಪರೀಕ್ಷೆಗೆ ಸಂಗ್ರಹಿಸಲಾಗಿದೆ. 12,808 ಜನರು 28 ದಿನಗಳ ಐಸೋಲೇಷನ್ ಅವಧಿ ಪೂರ್ಣಗೊಳಿಸಿದ್ದಾರೆ. 21,097 ಜನರು 1 ರಿಂದ 28 ದಿನಗಳ ರಿಪೋರ್ಟಿಂಗ್ ಅವಧಿಯಲ್ಲಿದ್ದಾರೆ. ಈವರೆಗೆ 222 ಗುಣಮುಖ ರೋಗಿಗಳನ್ನು ಆಸ್ಪತ್ರೆಯಿಂದ ಬಿಡುಗಡೆಗೊಳಿಸಿಲಾಗಿದೆ. 7 ಜನರು ಕೋವಿಡ್-19 ಪಾಸಿಟಿವ್ ರೋಗಿಗಳು ಮೃತಪಟ್ಟಿದ್ದು, 34,132 ಜನರ ಮೇಲೆ ತೀವ್ರ ನಿಗಾ ಇಡಲಾಗಿದೆ.

ಒಟ್ಟು 34 ಕಂಟೇನ್ಮೆಂಟ್ ವಲಯಗಳು ಚಾಲ್ತಿಯಲ್ಲಿದ್ದು, 42 ವಲಯಗಳನ್ನು ಡಿನೋಟಿಫಿಕೇಶನ್ ಮಾಡಲಾಗಿದೆ. ಈ ಹಿಂದೆ ಒಟ್ಟು 76 ಕಂಟೇನ್ಮೆಂಟ್ ವಲಯಗಳನ್ನು ಗುರುತಿಸಲಾಗಿತ್ತು ಎಂದರು. ಜಿಲ್ಲೆಯಲ್ಲಿ ಒಟ್ಟು 596 ಸಾಂಸ್ಥಿಕ ಕ್ವಾರಂಟೈನ್ ಕೇಂದ್ರಗಳನ್ನು ಸ್ಥಾಪಿಸಲಾಗಿದೆ. ಸಾಂಸ್ಥಿಕ ಕ್ವಾರಂಟೈನ್ ಕೇಂದ್ರದಲ್ಲಿ ಇದ್ದ 32,340 ಜನರ ಪೈಕಿ 30,785 ಜನರನ್ನು ಬಿಡುಗಡೆ ಮಾಡಲಾಗಿದೆ. ಸದ್ಯಕ್ಕೆ 66 ಸಾಂಸ್ಥಿಕ ಕ್ವಾರಂಟೈನ್ ಕೇಂದ್ರಗಳು ಚಾಲ್ತಿಯಲ್ಲಿದ್ದು, 1,567 ಜನರು ಸಾಂಸ್ಥಿಕ ಕ್ವಾರಂಟೈನ್‌ನಲ್ಲಿದ್ದಾರೆ.

ಈವರೆಗೆ 23,826 ಮಹಾರಾಷ್ಟ್ರದಿಂದ ಹಾಗೂ 2,982 ಗೋವಾದಿಂದ ಮತ್ತು 8,514 ಜನರು ಬೇರೆ ರಾಜ್ಯಗಳಿಂದ ಆಗಮಿಸಿದ್ದಾರೆ. ಅದರಂತೆ ವೈದ್ಯರು ಅತ್ಯುತ್ತಮ ಕಾರ್ಯ ನಿರ್ವಹಿಸುತ್ತಿದ್ದು, ಇತ್ತೀಚೆಗೆ ಅವಳಿ ಮಕ್ಕಳಿಗೆ ಹೆರಿಗೆ ನೀಡಿದ ಮಹಿಳೆಗೆ ಅತ್ಯುತ್ತಮ ವೈದ್ಯಕೀಯ ಚಿಕಿತ್ಸೆ ನೀಡಲಾಗಿದೆ ಎಂದು ಹೇಳಿದರು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅನುಪಮ್ ಅಗರವಾಲ್, ಹೋಮ್ ಕ್ವಾರಂಟೈನ್ ನಿಯಮಗಳನ್ನು ಉಲ್ಲಂಘಿಸಿದ 22 ಜನರ ಮೇಲೆ ಎಫ್‌ಐಆರ್ ದಾಖಲಿಸಲಾಗಿದೆ.

ಅದರಂತೆ ಜಿಲ್ಲೆಯ ಗಡಿಭಾಗ ಕಂಟೇನ್ಮೆಂಟ್ ವಲಯ ಮತ್ತು ಇತರೆ ಪ್ರದೇಶಗಳಲ್ಲಿ ಕಾನೂನಿನ ರೀತಿ ಸೂಕ್ತ ಕ್ರಮಕೈಗೊಳ್ಳಲಾಗುತ್ತಿದೆ ಎಂದರು. ಶಾಸಕ ಎಂ ಸಿ ಮನಗೂಳಿ, ವಿಧಾನಪರಿಷತ್ ಸದಸ್ಯ ಅರುಣ್ ಶಹಾಪೂರ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಗೋವಿಂದ ರೆಡ್ಡಿ ಸೇರಿ ಆರೋಗ್ಯ ಮತ್ತು ಇತರೆ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

ಕ್ವಾರಂಟೈನ್​​ ನಿಯಮ ಮೀರಿದರೆ ಕ್ರಮ : ಕೋವಿಡ್-19 ಅಪಾಯಕಾರಿ ಸಾಂಕ್ರಾಮಿಕ ರೋಗ ಹರಡದಂತೆ ತಡೆಗಟ್ಟುವ ನಿಟ್ಟಿನಲ್ಲಿ ಕೆಲವು ಜನರನ್ನು ಹೋಮ್ ಕ್ವಾರಂಟೈನ್ ಮಾಡಲಾಗಿದೆ. ನಿಯಮ ಉಲ್ಲಂಘಿಸಿ ಕ್ವಾರಂಟೈನ್ ಅವಧಿಯಲ್ಲಿ ನಿಯಮ ಉಲ್ಲಂಘಿಸಿದವರನ್ನು ಐಪಿಸಿ ಕಲಂ 188ರ ಅನ್ವಯ ಕಾನೂನು ಕ್ರಮ ಜರುಗಿಸುವಂತೆ ಜಿಲ್ಲಾಧಿಕಾರಿ ವೈ ಎಸ್ ಪಾಟೀಲ್‌ ಸೂಚಿಸಿದ್ದಾರೆ.

ಜಿಲ್ಲೆಯಲ್ಲಿ ಹೋಮ್ ಕ್ವಾರಂಟೈನ್ ಮಾಡಲಾಗಿದ್ದವರಲ್ಲಿ ಕೆಲವರು ಸರ್ಕಾರದ ನಿಯಮ ಉಲ್ಲಂಘಿಸಿ ಸಾರ್ವಜನಿಕ ಸ್ಥಳಗಳಲ್ಲಿ ಹಾಗೂ ಸಭೆ-ಸಮಾರಂಭದಲ್ಲಿ ಭಾಗಿಯಾಗಿದ್ದ 148 ಜನರ ಮೇಲೆ ಪರಿಶೀಲನೆ ನಡೆಸಲಾಗಿದೆ. ನಿಯಮ ಉಲ್ಲಂಘಿಸಿದವರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು ಎಂದು ತಿಳಿಸಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.