ETV Bharat / state

ವಿಜಯಪುರ: ನೇಣು ಬಿಗಿದ ಸ್ಥಿತಿಯಲ್ಲಿ ಅಪ್ರಾಪ್ತೆ ಶವ ಪತ್ತೆ.. ಪ್ರೀತಿಸುತ್ತಿದ್ದ ಯುವಕನಿಂದಲೇ ಕೊಲೆ?

author img

By

Published : Dec 12, 2021, 1:18 AM IST

Updated : Dec 12, 2021, 7:06 AM IST

ವಿಜಯಪುರ ನಗರದ ಹೊರಭಾಗದ ಯೋಗಾಪುರ ಕಾಲೋನಿಯಲ್ಲಿ ಬಾಲಕಿಯ ಮೃತದೇಹವು ಅನುಮಾನಾಸ್ಪದವಾಗಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.

minor-girl-body-found-hanging-in-house-at-vijayapura
ನೇಣು ಬಿಗಿದ ಸ್ಥಿತಿಯಲ್ಲಿ ಅಪ್ರಾಪ್ತೆ ಶವ ಪತ್ತೆ

ವಿಜಯಪುರ: ಇಲ್ಲಿನ ವಿಶ್ವೇಶ್ವರನಗರದ ಮನೆಯೊಂದರಲ್ಲಿ ಯುವಕನ ಜೊತೆಗೆ ವಾಸವಿದ್ದ ಬಾಲಕಿಯ ಮೃತದೇಹವು ಶನಿವಾರ ಅನುಮಾನಾಸ್ಪದವಾಗಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಅಪ್ರಾಪ್ತೆಯು ಯುವಕನ ಜೊತೆಗೆ ವಿಜಯಪುರ ನಗರದ ಹೊರಭಾಗದ ಯೋಗಾಪುರ ಕಾಲೋನಿಯಲ್ಲಿ ವಾಸವಿದ್ದಳು ಎಂದು ತಿಳಿದುಬಂದಿದೆ.

ಪ್ರಥಮ ಪಿಯುಸಿ ಓದುತ್ತಿದ್ದ ಅಪ್ರಾಪ್ತೆ ಹಾಗೂ ಯುವಕ ಸಂಜು ಹುಲ್ಲೂರು ಎಂಬಾತ ಪರಸ್ಪರ ಪ್ರೀತಿಸುತ್ತಿದ್ದರು ಎನ್ನಲಾಗಿದೆ. ಯುವಕನೇ ಅಪ್ರಾಪ್ತೆಯನ್ನು ದೈಹಿಕವಾಗಿ ಬಳಸಿಕೊಂಡು ಕೊಲೆ ಮಾಡಿ, ಬಳಿಕ ನೇಣು ಹಾಕಿದ್ದಾನೆ ಎಂದು ಆಕೆಯ ಕುಟುಂಬಸ್ಥರು ಆರೋಪಿಸಿದ್ದಾರೆ.

ನಗರದ ಮಹಿಳಾ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದ್ದು, ಪೊಲೀಸರು ಆರೋಪಿ ಯುವಕನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

ಪ್ರತಿಭಟನೆ:

ಘಟನೆ ಹಿನ್ನೆಲೆಯಲ್ಲಿ ಪೊಲೀಸ್ ಠಾಣೆ ಎದುರು ಜನರು ಜಮಾವಣೆಗೊಂಡಿದ್ದರು. ಕೆಲ ಸಮುದಾಯದವರು ಅಪ್ರಾಪ್ತೆ ಸಾವನ್ನು ಖಂಡಿಸಿ ನಗರದ ಗಾಂಧಿಚೌಕ್ ಬಳಿ ಮೇಣದ ಬತ್ತಿ ಹಚ್ಚಿ ಪ್ರತಿಭಟನೆ ನಡೆಸಿ ಆರೋಪಿಗೆ ಕಠಿಣ ಶಿಕ್ಷೆ ನೀಡುವಂತೆ ಒತ್ತಾಯಿಸಿದರು.

ಇದನ್ನೂ ಓದಿ: ಬೆಳಗಾವಿ:​​ ಫಾದರ್ ಮೇಲೆ ತಲ್ವಾರ್​​ನಿಂದ ಹಲ್ಲೆಗೆ ಯತ್ನ.. ದುಷ್ಕರ್ಮಿಯ ಚಲನವಲನ ಸಿಸಿಟಿವಿಯಲ್ಲಿ ಸೆರೆ

ವಿಜಯಪುರ: ಇಲ್ಲಿನ ವಿಶ್ವೇಶ್ವರನಗರದ ಮನೆಯೊಂದರಲ್ಲಿ ಯುವಕನ ಜೊತೆಗೆ ವಾಸವಿದ್ದ ಬಾಲಕಿಯ ಮೃತದೇಹವು ಶನಿವಾರ ಅನುಮಾನಾಸ್ಪದವಾಗಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಅಪ್ರಾಪ್ತೆಯು ಯುವಕನ ಜೊತೆಗೆ ವಿಜಯಪುರ ನಗರದ ಹೊರಭಾಗದ ಯೋಗಾಪುರ ಕಾಲೋನಿಯಲ್ಲಿ ವಾಸವಿದ್ದಳು ಎಂದು ತಿಳಿದುಬಂದಿದೆ.

ಪ್ರಥಮ ಪಿಯುಸಿ ಓದುತ್ತಿದ್ದ ಅಪ್ರಾಪ್ತೆ ಹಾಗೂ ಯುವಕ ಸಂಜು ಹುಲ್ಲೂರು ಎಂಬಾತ ಪರಸ್ಪರ ಪ್ರೀತಿಸುತ್ತಿದ್ದರು ಎನ್ನಲಾಗಿದೆ. ಯುವಕನೇ ಅಪ್ರಾಪ್ತೆಯನ್ನು ದೈಹಿಕವಾಗಿ ಬಳಸಿಕೊಂಡು ಕೊಲೆ ಮಾಡಿ, ಬಳಿಕ ನೇಣು ಹಾಕಿದ್ದಾನೆ ಎಂದು ಆಕೆಯ ಕುಟುಂಬಸ್ಥರು ಆರೋಪಿಸಿದ್ದಾರೆ.

ನಗರದ ಮಹಿಳಾ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದ್ದು, ಪೊಲೀಸರು ಆರೋಪಿ ಯುವಕನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

ಪ್ರತಿಭಟನೆ:

ಘಟನೆ ಹಿನ್ನೆಲೆಯಲ್ಲಿ ಪೊಲೀಸ್ ಠಾಣೆ ಎದುರು ಜನರು ಜಮಾವಣೆಗೊಂಡಿದ್ದರು. ಕೆಲ ಸಮುದಾಯದವರು ಅಪ್ರಾಪ್ತೆ ಸಾವನ್ನು ಖಂಡಿಸಿ ನಗರದ ಗಾಂಧಿಚೌಕ್ ಬಳಿ ಮೇಣದ ಬತ್ತಿ ಹಚ್ಚಿ ಪ್ರತಿಭಟನೆ ನಡೆಸಿ ಆರೋಪಿಗೆ ಕಠಿಣ ಶಿಕ್ಷೆ ನೀಡುವಂತೆ ಒತ್ತಾಯಿಸಿದರು.

ಇದನ್ನೂ ಓದಿ: ಬೆಳಗಾವಿ:​​ ಫಾದರ್ ಮೇಲೆ ತಲ್ವಾರ್​​ನಿಂದ ಹಲ್ಲೆಗೆ ಯತ್ನ.. ದುಷ್ಕರ್ಮಿಯ ಚಲನವಲನ ಸಿಸಿಟಿವಿಯಲ್ಲಿ ಸೆರೆ

Last Updated : Dec 12, 2021, 7:06 AM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.