ETV Bharat / state

ಸರ್ಕಾರ ನಿತ್ಯ ಬಡವರ ಹಸಿವು ನೀಗಿಸುವ ಕಾರ್ಯದಲ್ಲಿ ತೊಡಗಿಕೊಂಡಿದೆ: ಶಾಸಕ ಎ.ಎಸ್.ಪಾಟೀಲ ನಡಹಳ್ಳಿ

ಮೊದಲ ಬಾರಿಗೆ ಸ್ವಕ್ಷೇತ್ರಕ್ಕೆ ಆಗಮಿಸಿದ ಹಿನ್ನೆಲೆ ಮುದ್ದೇಬಿಹಾಳ ತಾಲೂಕಿನ ಕುಂಟೋಜಿ ಸಂಸ್ಥಾನ ಹಿರೇಮಠದ ಚನ್ನವೀರ ಶ್ರೀಗಳ ನೇತೃತ್ವದಲ್ಲಿ ಮಂಗಳವಾರ ಇಲ್ಲಿನ ದಾಸೋಹ ನಿಲಯದಲ್ಲಿ ನಡೆದ ಸನ್ಮಾನ ಕಾರ್ಯಕ್ರಮದಲ್ಲಿ ಶಾಸಕ ಎ.ಎಸ್.ಪಾಟೀಲ ನಡಹಳ್ಳಿ ಪಾಲ್ಗೊಂಡಿದ್ದರು.

author img

By

Published : Aug 25, 2020, 9:51 PM IST

Muddebihala
ಶಾಸಕ ಎ.ಎಸ್.ಪಾಟೀಲ ನಡಹಳ್ಳಿ

ಮುದ್ದೇಬಿಹಾಳ: ಕೊರೊನಾ ವೈರಸ್‌ನ ಹಾವಳಿಯ ಮಧ್ಯೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರ ಸರ್ಕಾರ ನಿತ್ಯ 80 ಕೋಟಿ ರೂ.ವೆಚ್ಚದಲ್ಲಿ ರಾಜ್ಯದ ನಾಲ್ಕು ಕೋಟಿ ಬಡವರ ಹಸಿವು ನೀಗಿಸುವ ಕಾರ್ಯದಲ್ಲಿ ತೊಡಗಿಕೊಂಡಿದೆ ಎಂದು ಕರ್ನಾಟಕ ರಾಜ್ಯ ಆಹಾರ ಮತ್ತು ನಾಗರಿಕ ಸರಬರಾಜು ನಿಗಮದ ನೂತನ ಅಧ್ಯಕ್ಷ ಶಾಸಕ ಎ.ಎಸ್.ಪಾಟೀಲ ನಡಹಳ್ಳಿ ಹೇಳಿದರು.

ಕುಂಟೋಜಿ ಹಿರೇಮಠದ ಚನ್ನವೀರ ದೇವರು

ನಿಗಮದ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ನಂತರ ಮೊದಲ ಬಾರಿಗೆ ಸ್ವಕ್ಷೇತ್ರಕ್ಕೆ ಆಗಮಿಸಿದ ಹಿನ್ನೆಲೆ ತಾಲೂಕಿನ ಕುಂಟೋಜಿ ಸಂಸ್ಥಾನ ಹಿರೇಮಠದ ಚನ್ನವೀರ ಶ್ರೀಗಳ ನೇತೃತ್ವದಲ್ಲಿ ಮಂಗಳವಾರ ಇಲ್ಲಿನ ದಾಸೋಹ ನಿಲಯದಲ್ಲಿ ನಡೆದ ಸನ್ಮಾನ ಕಾರ್ಯಕ್ರಮದಲ್ಲಿ ಅವರು ಮಾತನಾಡಿ, ಕುಂಟೋಜಿ ಚನ್ನವೀರ ದೇವರ ಪಟ್ಟಾಧಿಕಾರ ಮಹೋತ್ಸವವನ್ನು ನನ್ನ ನೇತೃತ್ವದಲ್ಲೇ ಅದ್ದೂರಿಯಿಂದ ನಡೆಸಲು ಸಿದ್ಧನಿದ್ದೇನೆ. ಕುಂಟೋಜಿ ಸೇರಿ ತಾಲೂಕಿನ ಜನರು, ಮಠಾಧೀಶರು ಈ ಕಾರ್ಯಕ್ಕೆ ಸಹಕರಿಸಬೇಕು. ಇದರ ನೇತೃತ್ವವನ್ನು ಇಟಗಿಯ ಗುರುಶಾಂತವೀರ ಶಿವಾಚಾರ್ಯರು ವಹಿಸಿಕೊಳ್ಳಬೇಕೆನ್ನುವುದು ತಮ್ಮ ಅಪೇಕ್ಷೆಯಾಗಿದೆ ಎಂದರು.

ಕುಂಟೋಜಿ ಹಿರೇಮಠದ ಚನ್ನವೀರ ದೇವರು ಮಾತನಾಡಿ, ಸಂದಿಗ್ಧ ಪರಿಸ್ಥಿತಿಯಲ್ಲಿ ಸಮಯೋಚಿತ ನಿರ್ಧಾರಗಳನ್ನು ಕೈಗೊಳ್ಳುವ ಮೂಲಕ ಮತಕ್ಷೇತ್ರದ ಜನತೆ ಮೆಚ್ಚುವ ಕಾರ್ಯ ಮಾಡಿರುವ ನಡಹಳ್ಳಿ ಅವರಿಗೆ ಮುಂದಿನ ದಿನಗಳಲ್ಲಿ ಸಚಿವ ಸ್ಥಾನ ದೊರಕುವುದರಲ್ಲಿ ಸಂದೇಹವೇ ಇಲ್ಲ ಎಂದು ಹೇಳಿದರು.

ಈ ಸಂದರ್ಭದಲ್ಲಿ ಪುರಸಭೆ ಸದಸ್ಯರಾದ ಅಶೋಕ ವನಹಳ್ಳಿ, ಬಸಪ್ಪ ತಟ್ಟಿ, ಪ್ರವಚನಕಾರ ಸಂಗಯ್ಯ ಸರಗಣಾಚಾರಿ, ಪ್ರಮುಖರಾದ ಡಿ.ಬಿ.ವಡವಡಗಿ, ಪವಾಡೆಪ್ಪಗೌಡ ಹವಾಲ್ದಾರ, ಮನೋಹರ ತುಪ್ಪದ, ಸಂಗಯ್ಯ ಮಠ ಹಾಗೂ ಮುದ್ದೇಬಿಹಾಳ ಮಾರುತಿನಗರ ಬಡಾವಣೆಯ ಪ್ರಮುಖರು ಇದ್ದರು.

ಮುದ್ದೇಬಿಹಾಳ: ಕೊರೊನಾ ವೈರಸ್‌ನ ಹಾವಳಿಯ ಮಧ್ಯೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರ ಸರ್ಕಾರ ನಿತ್ಯ 80 ಕೋಟಿ ರೂ.ವೆಚ್ಚದಲ್ಲಿ ರಾಜ್ಯದ ನಾಲ್ಕು ಕೋಟಿ ಬಡವರ ಹಸಿವು ನೀಗಿಸುವ ಕಾರ್ಯದಲ್ಲಿ ತೊಡಗಿಕೊಂಡಿದೆ ಎಂದು ಕರ್ನಾಟಕ ರಾಜ್ಯ ಆಹಾರ ಮತ್ತು ನಾಗರಿಕ ಸರಬರಾಜು ನಿಗಮದ ನೂತನ ಅಧ್ಯಕ್ಷ ಶಾಸಕ ಎ.ಎಸ್.ಪಾಟೀಲ ನಡಹಳ್ಳಿ ಹೇಳಿದರು.

ಕುಂಟೋಜಿ ಹಿರೇಮಠದ ಚನ್ನವೀರ ದೇವರು

ನಿಗಮದ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ನಂತರ ಮೊದಲ ಬಾರಿಗೆ ಸ್ವಕ್ಷೇತ್ರಕ್ಕೆ ಆಗಮಿಸಿದ ಹಿನ್ನೆಲೆ ತಾಲೂಕಿನ ಕುಂಟೋಜಿ ಸಂಸ್ಥಾನ ಹಿರೇಮಠದ ಚನ್ನವೀರ ಶ್ರೀಗಳ ನೇತೃತ್ವದಲ್ಲಿ ಮಂಗಳವಾರ ಇಲ್ಲಿನ ದಾಸೋಹ ನಿಲಯದಲ್ಲಿ ನಡೆದ ಸನ್ಮಾನ ಕಾರ್ಯಕ್ರಮದಲ್ಲಿ ಅವರು ಮಾತನಾಡಿ, ಕುಂಟೋಜಿ ಚನ್ನವೀರ ದೇವರ ಪಟ್ಟಾಧಿಕಾರ ಮಹೋತ್ಸವವನ್ನು ನನ್ನ ನೇತೃತ್ವದಲ್ಲೇ ಅದ್ದೂರಿಯಿಂದ ನಡೆಸಲು ಸಿದ್ಧನಿದ್ದೇನೆ. ಕುಂಟೋಜಿ ಸೇರಿ ತಾಲೂಕಿನ ಜನರು, ಮಠಾಧೀಶರು ಈ ಕಾರ್ಯಕ್ಕೆ ಸಹಕರಿಸಬೇಕು. ಇದರ ನೇತೃತ್ವವನ್ನು ಇಟಗಿಯ ಗುರುಶಾಂತವೀರ ಶಿವಾಚಾರ್ಯರು ವಹಿಸಿಕೊಳ್ಳಬೇಕೆನ್ನುವುದು ತಮ್ಮ ಅಪೇಕ್ಷೆಯಾಗಿದೆ ಎಂದರು.

ಕುಂಟೋಜಿ ಹಿರೇಮಠದ ಚನ್ನವೀರ ದೇವರು ಮಾತನಾಡಿ, ಸಂದಿಗ್ಧ ಪರಿಸ್ಥಿತಿಯಲ್ಲಿ ಸಮಯೋಚಿತ ನಿರ್ಧಾರಗಳನ್ನು ಕೈಗೊಳ್ಳುವ ಮೂಲಕ ಮತಕ್ಷೇತ್ರದ ಜನತೆ ಮೆಚ್ಚುವ ಕಾರ್ಯ ಮಾಡಿರುವ ನಡಹಳ್ಳಿ ಅವರಿಗೆ ಮುಂದಿನ ದಿನಗಳಲ್ಲಿ ಸಚಿವ ಸ್ಥಾನ ದೊರಕುವುದರಲ್ಲಿ ಸಂದೇಹವೇ ಇಲ್ಲ ಎಂದು ಹೇಳಿದರು.

ಈ ಸಂದರ್ಭದಲ್ಲಿ ಪುರಸಭೆ ಸದಸ್ಯರಾದ ಅಶೋಕ ವನಹಳ್ಳಿ, ಬಸಪ್ಪ ತಟ್ಟಿ, ಪ್ರವಚನಕಾರ ಸಂಗಯ್ಯ ಸರಗಣಾಚಾರಿ, ಪ್ರಮುಖರಾದ ಡಿ.ಬಿ.ವಡವಡಗಿ, ಪವಾಡೆಪ್ಪಗೌಡ ಹವಾಲ್ದಾರ, ಮನೋಹರ ತುಪ್ಪದ, ಸಂಗಯ್ಯ ಮಠ ಹಾಗೂ ಮುದ್ದೇಬಿಹಾಳ ಮಾರುತಿನಗರ ಬಡಾವಣೆಯ ಪ್ರಮುಖರು ಇದ್ದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.