ETV Bharat / state

ಲೋಕಸಭೆ ಚುನಾವಣೆ ಸೋಲುವ ಭಯಕ್ಕೆ ಕಾಂಗ್ರೆಸ್‌ನಿಂದ 'ಆಪರೇಷನ್ ಹಸ್ತ' ಸೃಷ್ಟಿ: ಯತ್ನಾಳ್​

author img

By ETV Bharat Karnataka Team

Published : Aug 28, 2023, 5:24 PM IST

ಲೋಕಸಭೆ ಚುನಾವಣೆಯಲ್ಲಿ ಸೋಲುವ ಭಯದಿಂದ ಆಪರೇಷನ್ ಹಸ್ತ ಎನ್ನುವುದನ್ನು ಕಾಂಗ್ರೆಸ್ ನಾಯಕರು ಸೃಷ್ಟಿಸಿದ್ದಾರೆ ಎಂದು ಬಸನಗೌಡ ಪಾಟೀಲ ಯತ್ನಾಳ್​ ಟೀಕಿಸಿದರು.

ಶಾಸಕ ಬಸನಗೌಡ ಪಾಟೀಲ ಯತ್ನಾಳ
ಶಾಸಕ ಬಸನಗೌಡ ಪಾಟೀಲ ಯತ್ನಾಳ

ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ್​ ಹೇಳಿಕೆ

ವಿಜಯಪುರ : ಬಿಜೆಪಿ ಶಾಸಕರು ಪಕ್ಷ ಬಿಟ್ಟು ಹೋಗುತ್ತಾರೆ ಎನ್ನುವುದು ಕಾಂಗ್ರೆಸ್ ಸೃಷ್ಟಿ. ನಮ್ಮಲ್ಲಿ ಯಾವುದೇ ಆಪರೇಷನ್ ಹಸ್ತವಾಗುವುದಿಲ್ಲ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಹೇಳಿದ್ದಾರೆ. ವಿಜಯಪುರ ಜಿಲ್ಲಾಸ್ಪತ್ರೆಯಲ್ಲಿ ಇಂದು (ಸೋಮವಾರ) ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದ ನಂತರ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.

ಬಿಜೆಪಿಯಲ್ಲಿದ್ದಾಗ ಮಂತ್ರಿ ಸೇರಿ ವಿವಿಧ ಹುದ್ದೆಗಳನ್ನು ಅಲಂಕರಿಸಿ ಅಧಿಕಾರ ಅನುಭವಿಸಿದ್ದಾರೆ. ಪ್ರಧಾನಿ ಮೋದಿ ಕಾಲದಲ್ಲಿ ಯಾರೂ ಬಿಜೆಪಿ ಬಿಟ್ಟು ಹೋಗುವುದಿಲ್ಲ. ಮೋದಿ ವಿಶ್ವನಾಯಕ, ದೇಶವನ್ನು ವಿಶ್ವಮಟ್ಟಕ್ಕೆ ತೆಗೆದುಕೊಂಡು ಹೋಗಿದ್ದಾರೆ. ಆಪರೇಷನ್ ಹಸ್ತ ಕೇವಲ ಕಾಂಗ್ರೆಸ್ ಸೃಷ್ಟಿ ಅಷ್ಟೇ ಎಂದರು.

ರಾಜ್ಯದಲ್ಲಿ 135 ಸ್ಥಾನಗಳಿಸಿ ಕಾಂಗ್ರೆಸ್ ಅಧಿಕಾರ ನಡೆಸುತ್ತಿದೆ. ಆದರೂ ಆ ನಾಯಕರಲ್ಲಿ ಭಯವೇಕೆ ಎಂದು ಅರ್ಥವಾಗುತ್ತಿಲ್ಲ. ಮುಂದಿನ ಲೋಕಸಭೆ ಚುನಾವಣೆಯಲ್ಲಿ ಸೋಲು ಅನುಭವಿಸಬೇಕಾಗುತ್ತದೆ ಎನ್ನುವ ಭಯದಲ್ಲಿ ಬಿಜೆಪಿ ಮಾಜಿ ಶಾಸಕರನ್ನು ಸೆಳೆಯಲು ಯತ್ನಿಸುತ್ತಿದ್ದಾರೆ. ಆದರೆ ಇದರಲ್ಲಿ ಅವರು ಯಶಸ್ವಿಯಾಗುವುದಿಲ್ಲ. ಈಗ ಬಿಜೆಪಿಯಿಂದ ಯಾರು ಹೋಗಿದ್ದಾರೆ ಎಂದು ಪ್ರಶ್ನಿಸಿದ ಅವರು, ಎಸ್.ಟಿ.ಸೋಮಶೇಖರ್, ಶಿವರಾಂ ಹೆಬ್ಬಾರ್, ರೇಣುಕಾಚಾರ್ಯ, ಶಂಕರ ಪಾಟೀಲ ಮುನೇನಕೊಪ್ಪ ಇವರು ಯಾರೂ ಹೋಗುವುದಿಲ್ಲ. ಭವಿಷ್ಯದ ದೃಷ್ಟಿಯಿಂದ ಎಲ್ಲರೂ ಬಿಜೆಪಿಯಲ್ಲೇ ಇರುತ್ತಾರೆ. ಕೆಲವು ನಾಯಕರು ಸಿಎಂ ಭೇಟಿಯಾಗುತ್ತಿರುವುದು ತಮ್ಮ ಕ್ಷೇತ್ರದ ಅಭಿವೃದ್ಧಿಗೆ ಹೆಚ್ಚಿನ ಅನುದಾನ ಪಡೆಯುವ ಉದ್ದೇಶದಿಂದವೇ ಹೊರತು ರಾಜಕೀಯವಾಗಿ ಮಾತನಾಡಲು ಅಲ್ಲ ಎಂದು ಯತ್ನಾಳ್ ತಿಳಿಸಿದರು.

ಮಾಧ್ಯಮ ಸಮೀಕ್ಷೆಯಂತೆ ಮೋದಿ ಅವರೇ ಮೂರನೇ ಬಾರಿಗೆ ಪ್ರಧಾನಮಂತ್ರಿಯಾಗಲಿದ್ದಾರೆ. ರಾಜ್ಯದಲ್ಲಿ 25 ಸ್ಥಾನಗಳೂ ಸೇರಿ ದೇಶದಲ್ಲಿ 300ಕ್ಕೂ ಹೆಚ್ಚು ಸ್ಥಾನಗಳನ್ನು ಬಿಜೆಪಿ ಪಡೆಯಲಿದೆ. ಮೋದಿ ನೀಡಿದ 9 ವರ್ಷಗಳ ಆಡಳಿತ ದೇಶವನ್ನು ಆರ್ಥಿಕವಾಗಿ ವಿಶ್ವದ 5ನೇ ಸಬಲ ರಾಷ್ಟ್ರವನ್ನಾಗಿ ಮಾಡಿದೆ. ಹೀಗಿರುವಾಗ ಬಿಜೆಪಿ ಮುಖಂಡರು ಕಾಂಗ್ರೆಸ್ ಸೇರುವುದು ಗಾಳಿ ಸುದ್ದಿ ಅಷ್ಟೇ ಎಂದರು.

ಗೃಹಲಕ್ಷ್ಮೀ ಯೋಜನೆಯ ಉದ್ಘಾಟನೆಯ ಸ್ಥಳ ಬದಲಾವಣೆ ವಿಚಾರ: ಲೋಕಸಭಾ ಚುನಾವಣೆಯ ಹೊತ್ತಿನಲ್ಲಿ ಬೆಳಗಾವಿಯಿಂದ ಮೈಸೂರಿಗೆ ಗೃಹಲಕ್ಷ್ಮೀ ಯೋಜನೆ ಜಾರಿ ಕಾರ್ಯಕ್ರಮ ಶಿಫ್ಟ್ ಆಗಿರುವ ವಿಚಾರಕ್ಕೆ, ಯಾರೇ ಸಿಎಂ ಆಗಿದ್ದರೂ ಇದನ್ನು ಮಾಡುತ್ತಾರೆ. ಅದಕ್ಕೆ ವಿಶೇಷ ಅರ್ಥ ಕಲ್ಪಿಸುವುದು ಬೇಡ. ಸಿಎಂ ಯೋಜನೆಯನ್ನು ತಮ್ಮ ಜಿಲ್ಲೆಯಲ್ಲಿ ಪ್ರಾರಂಭ ಮಾಡಬೇಕು ಅಂತಿರಬಹುದು. ತಮ್ಮ ಮಗನ ರಾಜಕೀಯ ಭವಿಷ್ಯ ರೂಪಿಸುವ ಜವಾಬ್ದಾರಿ ಅವರ ಮೇಲಿದೆ ಎಂದರು.

ಮಾಜಿ ಸಿಎಂ ಜಗದೀಶ ಶೆಟ್ಟರ್ ಅವರಿಗೆ ಅಮಿತ್ ಶಾ ಫೋನ್ ಮಾಡಿ, ಅವರನ್ನು ಪಕ್ಷಕ್ಕೆ ಕರೆತರುವ ಕುರಿತು ಮಾತುಕತೆ ನಡೆದಿದೆ ಎನ್ನುವ ವಿಚಾರಕ್ಕೆ ವ್ಯಂಗ್ಯವಾಗಿ ಪ್ರತಿಕ್ರಿಯಿಸಿ, ನನಗೂ ಮೋದಿ ಫೋನ್ ಮಾಡಿದ್ದರು ಎಂದು ಹೇಳಿದರೆ, ಎರಡು ದಿನ ಅದೇ ಸುದ್ದಿ ಓಡುತ್ತದೆ. ಕೆಲವರು ತಮಗೆ ಡಿಮ್ಯಾಂಡ್ ಕ್ರಿಯೇಟ್ ಮಾಡಿಕೊಳ್ಳಲು ಮಾಧ್ಯಮಗಳಿಗೆ ಇಂಥ ಮಾಹಿತಿ ಹರಿಬಿಡ್ತಾರೆ ಎಂದು ಹೇಳಿದರು.

ಇದನ್ನೂ ಓದಿ : "ನನ್ನೊಂದಿಗೆ ಇರಲು ಬಯಸಿರುವ ಬೆಂಬಲಿಗರು ಬಿಜೆಪಿಯಲ್ಲೇ ಇದ್ದಾರೆ": ಕಾಂಗ್ರೆಸ್​ ಸೇರ್ಪಡೆ ಬಗ್ಗೆ ಶಾಸಕ ಸೋಮಶೇಖರ್ ಸ್ಪಷ್ಟನೆ

ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ್​ ಹೇಳಿಕೆ

ವಿಜಯಪುರ : ಬಿಜೆಪಿ ಶಾಸಕರು ಪಕ್ಷ ಬಿಟ್ಟು ಹೋಗುತ್ತಾರೆ ಎನ್ನುವುದು ಕಾಂಗ್ರೆಸ್ ಸೃಷ್ಟಿ. ನಮ್ಮಲ್ಲಿ ಯಾವುದೇ ಆಪರೇಷನ್ ಹಸ್ತವಾಗುವುದಿಲ್ಲ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಹೇಳಿದ್ದಾರೆ. ವಿಜಯಪುರ ಜಿಲ್ಲಾಸ್ಪತ್ರೆಯಲ್ಲಿ ಇಂದು (ಸೋಮವಾರ) ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದ ನಂತರ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.

ಬಿಜೆಪಿಯಲ್ಲಿದ್ದಾಗ ಮಂತ್ರಿ ಸೇರಿ ವಿವಿಧ ಹುದ್ದೆಗಳನ್ನು ಅಲಂಕರಿಸಿ ಅಧಿಕಾರ ಅನುಭವಿಸಿದ್ದಾರೆ. ಪ್ರಧಾನಿ ಮೋದಿ ಕಾಲದಲ್ಲಿ ಯಾರೂ ಬಿಜೆಪಿ ಬಿಟ್ಟು ಹೋಗುವುದಿಲ್ಲ. ಮೋದಿ ವಿಶ್ವನಾಯಕ, ದೇಶವನ್ನು ವಿಶ್ವಮಟ್ಟಕ್ಕೆ ತೆಗೆದುಕೊಂಡು ಹೋಗಿದ್ದಾರೆ. ಆಪರೇಷನ್ ಹಸ್ತ ಕೇವಲ ಕಾಂಗ್ರೆಸ್ ಸೃಷ್ಟಿ ಅಷ್ಟೇ ಎಂದರು.

ರಾಜ್ಯದಲ್ಲಿ 135 ಸ್ಥಾನಗಳಿಸಿ ಕಾಂಗ್ರೆಸ್ ಅಧಿಕಾರ ನಡೆಸುತ್ತಿದೆ. ಆದರೂ ಆ ನಾಯಕರಲ್ಲಿ ಭಯವೇಕೆ ಎಂದು ಅರ್ಥವಾಗುತ್ತಿಲ್ಲ. ಮುಂದಿನ ಲೋಕಸಭೆ ಚುನಾವಣೆಯಲ್ಲಿ ಸೋಲು ಅನುಭವಿಸಬೇಕಾಗುತ್ತದೆ ಎನ್ನುವ ಭಯದಲ್ಲಿ ಬಿಜೆಪಿ ಮಾಜಿ ಶಾಸಕರನ್ನು ಸೆಳೆಯಲು ಯತ್ನಿಸುತ್ತಿದ್ದಾರೆ. ಆದರೆ ಇದರಲ್ಲಿ ಅವರು ಯಶಸ್ವಿಯಾಗುವುದಿಲ್ಲ. ಈಗ ಬಿಜೆಪಿಯಿಂದ ಯಾರು ಹೋಗಿದ್ದಾರೆ ಎಂದು ಪ್ರಶ್ನಿಸಿದ ಅವರು, ಎಸ್.ಟಿ.ಸೋಮಶೇಖರ್, ಶಿವರಾಂ ಹೆಬ್ಬಾರ್, ರೇಣುಕಾಚಾರ್ಯ, ಶಂಕರ ಪಾಟೀಲ ಮುನೇನಕೊಪ್ಪ ಇವರು ಯಾರೂ ಹೋಗುವುದಿಲ್ಲ. ಭವಿಷ್ಯದ ದೃಷ್ಟಿಯಿಂದ ಎಲ್ಲರೂ ಬಿಜೆಪಿಯಲ್ಲೇ ಇರುತ್ತಾರೆ. ಕೆಲವು ನಾಯಕರು ಸಿಎಂ ಭೇಟಿಯಾಗುತ್ತಿರುವುದು ತಮ್ಮ ಕ್ಷೇತ್ರದ ಅಭಿವೃದ್ಧಿಗೆ ಹೆಚ್ಚಿನ ಅನುದಾನ ಪಡೆಯುವ ಉದ್ದೇಶದಿಂದವೇ ಹೊರತು ರಾಜಕೀಯವಾಗಿ ಮಾತನಾಡಲು ಅಲ್ಲ ಎಂದು ಯತ್ನಾಳ್ ತಿಳಿಸಿದರು.

ಮಾಧ್ಯಮ ಸಮೀಕ್ಷೆಯಂತೆ ಮೋದಿ ಅವರೇ ಮೂರನೇ ಬಾರಿಗೆ ಪ್ರಧಾನಮಂತ್ರಿಯಾಗಲಿದ್ದಾರೆ. ರಾಜ್ಯದಲ್ಲಿ 25 ಸ್ಥಾನಗಳೂ ಸೇರಿ ದೇಶದಲ್ಲಿ 300ಕ್ಕೂ ಹೆಚ್ಚು ಸ್ಥಾನಗಳನ್ನು ಬಿಜೆಪಿ ಪಡೆಯಲಿದೆ. ಮೋದಿ ನೀಡಿದ 9 ವರ್ಷಗಳ ಆಡಳಿತ ದೇಶವನ್ನು ಆರ್ಥಿಕವಾಗಿ ವಿಶ್ವದ 5ನೇ ಸಬಲ ರಾಷ್ಟ್ರವನ್ನಾಗಿ ಮಾಡಿದೆ. ಹೀಗಿರುವಾಗ ಬಿಜೆಪಿ ಮುಖಂಡರು ಕಾಂಗ್ರೆಸ್ ಸೇರುವುದು ಗಾಳಿ ಸುದ್ದಿ ಅಷ್ಟೇ ಎಂದರು.

ಗೃಹಲಕ್ಷ್ಮೀ ಯೋಜನೆಯ ಉದ್ಘಾಟನೆಯ ಸ್ಥಳ ಬದಲಾವಣೆ ವಿಚಾರ: ಲೋಕಸಭಾ ಚುನಾವಣೆಯ ಹೊತ್ತಿನಲ್ಲಿ ಬೆಳಗಾವಿಯಿಂದ ಮೈಸೂರಿಗೆ ಗೃಹಲಕ್ಷ್ಮೀ ಯೋಜನೆ ಜಾರಿ ಕಾರ್ಯಕ್ರಮ ಶಿಫ್ಟ್ ಆಗಿರುವ ವಿಚಾರಕ್ಕೆ, ಯಾರೇ ಸಿಎಂ ಆಗಿದ್ದರೂ ಇದನ್ನು ಮಾಡುತ್ತಾರೆ. ಅದಕ್ಕೆ ವಿಶೇಷ ಅರ್ಥ ಕಲ್ಪಿಸುವುದು ಬೇಡ. ಸಿಎಂ ಯೋಜನೆಯನ್ನು ತಮ್ಮ ಜಿಲ್ಲೆಯಲ್ಲಿ ಪ್ರಾರಂಭ ಮಾಡಬೇಕು ಅಂತಿರಬಹುದು. ತಮ್ಮ ಮಗನ ರಾಜಕೀಯ ಭವಿಷ್ಯ ರೂಪಿಸುವ ಜವಾಬ್ದಾರಿ ಅವರ ಮೇಲಿದೆ ಎಂದರು.

ಮಾಜಿ ಸಿಎಂ ಜಗದೀಶ ಶೆಟ್ಟರ್ ಅವರಿಗೆ ಅಮಿತ್ ಶಾ ಫೋನ್ ಮಾಡಿ, ಅವರನ್ನು ಪಕ್ಷಕ್ಕೆ ಕರೆತರುವ ಕುರಿತು ಮಾತುಕತೆ ನಡೆದಿದೆ ಎನ್ನುವ ವಿಚಾರಕ್ಕೆ ವ್ಯಂಗ್ಯವಾಗಿ ಪ್ರತಿಕ್ರಿಯಿಸಿ, ನನಗೂ ಮೋದಿ ಫೋನ್ ಮಾಡಿದ್ದರು ಎಂದು ಹೇಳಿದರೆ, ಎರಡು ದಿನ ಅದೇ ಸುದ್ದಿ ಓಡುತ್ತದೆ. ಕೆಲವರು ತಮಗೆ ಡಿಮ್ಯಾಂಡ್ ಕ್ರಿಯೇಟ್ ಮಾಡಿಕೊಳ್ಳಲು ಮಾಧ್ಯಮಗಳಿಗೆ ಇಂಥ ಮಾಹಿತಿ ಹರಿಬಿಡ್ತಾರೆ ಎಂದು ಹೇಳಿದರು.

ಇದನ್ನೂ ಓದಿ : "ನನ್ನೊಂದಿಗೆ ಇರಲು ಬಯಸಿರುವ ಬೆಂಬಲಿಗರು ಬಿಜೆಪಿಯಲ್ಲೇ ಇದ್ದಾರೆ": ಕಾಂಗ್ರೆಸ್​ ಸೇರ್ಪಡೆ ಬಗ್ಗೆ ಶಾಸಕ ಸೋಮಶೇಖರ್ ಸ್ಪಷ್ಟನೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.