ETV Bharat / state

ಮುದ್ದೇಬಿಹಾಳ: ಟಿಎಪಿಸಿಎಂಎಸ್ ಅಧ್ಯಕ್ಷ-ಉಪಾಧ್ಯಕ್ಷರ ಅವಿರೋಧ ಆಯ್ಕೆ

author img

By

Published : Nov 19, 2020, 6:47 PM IST

ತಾಲೂಕು ಒಕ್ಕಲುತನ ಹುಟ್ಟುವಳಿ ಮಾರಾಟ ಸಹಕಾರಿ ಸಂಘದ ನೂತನ ಅಧ್ಯಕ್ಷರಾಗಿ ಬಸರಕೋಡ ಕ್ಷೇತ್ರದ ಮನೋಹರ ಸೋಮಪ್ಪ ಮೇಟಿ ಹಾಗೂ ಉಪಾಧ್ಯಕ್ಷರಾಗಿ ಕೊಣ್ಣೂರ ಕ್ಷೇತ್ರದ ಗುರಣ್ಣ ಭೀಮಣ್ಣ ಹತ್ತೂರ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ ಸಂತೋಷ ಇಳಕಲ್ ಘೋಷಿಸಿದರು.

Muddebihala TAPCMS President-Vice President Choice news
ಮುದ್ದೇಬಿಹಾಳ: ಟಿಎಪಿಸಿಎಂಎಸ್ ಅಧ್ಯಕ್ಷ-ಉಪಾಧ್ಯಕ್ಷರ ಅವಿರೋಧ ಆಯ್ಕೆ..

ಮುದ್ದೇಬಿಹಾಳ: ತಾಲೂಕು ಒಕ್ಕಲುತನ ಹುಟ್ಟುವಳಿ ಮಾರಾಟ ಸಹಕಾರಿ ಸಂಘದ ನೂತನ ಅಧ್ಯಕ್ಷ ಹಾಗೂ ಉಪಾಧ್ಯಕ್ಷರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ ಸಂತೋಷ ಇಳಕಲ್ ಘೋಷಿಸಿದ್ದಾರೆ.

ಮುದ್ದೇಬಿಹಾಳ: ಟಿಎಪಿಸಿಎಂಎಸ್ ಅಧ್ಯಕ್ಷ-ಉಪಾಧ್ಯಕ್ಷರ ಅವಿರೋಧ ಆಯ್ಕೆ

ಪಟ್ಟಣದ ಎಪಿಎಂಸಿ ಆವರಣದಲ್ಲಿರುವ ಸಂಘದ ಕಚೇರಿಯಲ್ಲಿ ಗುರುವಾರ ನಡೆದ ಚುನಾವಣೆ ಸಭೆಯಲ್ಲಿ ಅವಿರೋಧ ಆಯ್ಕೆ ಘೋಷಣೆ ಮಾಡಲಾಯಿತು. ಅಧ್ಯಕ್ಷರಾಗಿ ಆಯ್ಕೆಯಾದ ಬಸರಕೋಡ ಕ್ಷೇತ್ರದ ಬಿಜೆಪಿ ಬೆಂಬಲಿತರಾದ ಮನೋಹರ ಮೇಟಿ ಅವರಿಗೆ ಕೊಣ್ಣೂರಿನ ಶಂಕರಗೌಡ ಹಿಪ್ಪರಗಿ ಸೂಚಕರಾಗಿ, ಮಸೂತಿಯ ಮುತ್ತಣ್ಣವರ ಅನುಮೋದಕರಾಗಿ ಸಹಿ ಮಾಡಿದರು. ಉಪಾಧ್ಯಕ್ಷ ಸ್ಥಾನಕ್ಕೆ ಆಯ್ಕೆಯಾದ ಗುರಣ್ಣ ಹತ್ತೂರ ಅವರಿಗೆ ಕೋಳೂರಿನ ಚಿದಾನಂದ ಸೀತಿಮನಿ ಸೂಚಕರಾಗಿ, ಕೊಣ್ಣೂರಿನ ಪ್ರಭಾಕರ ಯಾಳವಾರ ಅನುಮೋದಕರಾಗಿ ಸಹಿ ಮಾಡಿದರು.

ವಿಜಯೋತ್ಸವ:

ಟಿಎಪಿಸಿಎಂಎಸ್ ನೂತನ ಅಧ್ಯಕ್ಷ, ಉಪಾಧ್ಯಕ್ಷರು ಅವಿರೋಧವಾಗಿ ಆಯ್ಕೆಯಾಗುತ್ತಿದ್ದಂತೆ ಅವರ ಬೆಂಬಲಿಗರು ವಿಜಯೋತ್ಸವ ಆಚರಿಸಿದರು. ಈ ವೇಳೆ ಡಿಸಿಸಿ ಬ್ಯಾಂಕ್ ನಿರ್ದೇಶಕ ಸೋಮನಗೌಡ ಬಿರಾದಾರ ಕವಡಿಮಟ್ಟಿ, ತಾಪಂ ಸದಸ್ಯ ಶಿವನಗೌಡ ಮುದ್ದೇಬಿಹಾಳ, ಮಂಡಲ ಬಿಜೆಪಿ ಅಧ್ಯಕ್ಷ ಪರಶುರಾಮ ಪವಾರ ಮುಂತಾದವರು ಉಪಸ್ಥಿತರಿದ್ದರು.

ಮುದ್ದೇಬಿಹಾಳ: ತಾಲೂಕು ಒಕ್ಕಲುತನ ಹುಟ್ಟುವಳಿ ಮಾರಾಟ ಸಹಕಾರಿ ಸಂಘದ ನೂತನ ಅಧ್ಯಕ್ಷ ಹಾಗೂ ಉಪಾಧ್ಯಕ್ಷರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ ಸಂತೋಷ ಇಳಕಲ್ ಘೋಷಿಸಿದ್ದಾರೆ.

ಮುದ್ದೇಬಿಹಾಳ: ಟಿಎಪಿಸಿಎಂಎಸ್ ಅಧ್ಯಕ್ಷ-ಉಪಾಧ್ಯಕ್ಷರ ಅವಿರೋಧ ಆಯ್ಕೆ

ಪಟ್ಟಣದ ಎಪಿಎಂಸಿ ಆವರಣದಲ್ಲಿರುವ ಸಂಘದ ಕಚೇರಿಯಲ್ಲಿ ಗುರುವಾರ ನಡೆದ ಚುನಾವಣೆ ಸಭೆಯಲ್ಲಿ ಅವಿರೋಧ ಆಯ್ಕೆ ಘೋಷಣೆ ಮಾಡಲಾಯಿತು. ಅಧ್ಯಕ್ಷರಾಗಿ ಆಯ್ಕೆಯಾದ ಬಸರಕೋಡ ಕ್ಷೇತ್ರದ ಬಿಜೆಪಿ ಬೆಂಬಲಿತರಾದ ಮನೋಹರ ಮೇಟಿ ಅವರಿಗೆ ಕೊಣ್ಣೂರಿನ ಶಂಕರಗೌಡ ಹಿಪ್ಪರಗಿ ಸೂಚಕರಾಗಿ, ಮಸೂತಿಯ ಮುತ್ತಣ್ಣವರ ಅನುಮೋದಕರಾಗಿ ಸಹಿ ಮಾಡಿದರು. ಉಪಾಧ್ಯಕ್ಷ ಸ್ಥಾನಕ್ಕೆ ಆಯ್ಕೆಯಾದ ಗುರಣ್ಣ ಹತ್ತೂರ ಅವರಿಗೆ ಕೋಳೂರಿನ ಚಿದಾನಂದ ಸೀತಿಮನಿ ಸೂಚಕರಾಗಿ, ಕೊಣ್ಣೂರಿನ ಪ್ರಭಾಕರ ಯಾಳವಾರ ಅನುಮೋದಕರಾಗಿ ಸಹಿ ಮಾಡಿದರು.

ವಿಜಯೋತ್ಸವ:

ಟಿಎಪಿಸಿಎಂಎಸ್ ನೂತನ ಅಧ್ಯಕ್ಷ, ಉಪಾಧ್ಯಕ್ಷರು ಅವಿರೋಧವಾಗಿ ಆಯ್ಕೆಯಾಗುತ್ತಿದ್ದಂತೆ ಅವರ ಬೆಂಬಲಿಗರು ವಿಜಯೋತ್ಸವ ಆಚರಿಸಿದರು. ಈ ವೇಳೆ ಡಿಸಿಸಿ ಬ್ಯಾಂಕ್ ನಿರ್ದೇಶಕ ಸೋಮನಗೌಡ ಬಿರಾದಾರ ಕವಡಿಮಟ್ಟಿ, ತಾಪಂ ಸದಸ್ಯ ಶಿವನಗೌಡ ಮುದ್ದೇಬಿಹಾಳ, ಮಂಡಲ ಬಿಜೆಪಿ ಅಧ್ಯಕ್ಷ ಪರಶುರಾಮ ಪವಾರ ಮುಂತಾದವರು ಉಪಸ್ಥಿತರಿದ್ದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.