ETV Bharat / state

ವಿಜಯಪುರ: ಕಡಿಮೆ ಅಂಕ ಬಂದಿದ್ದಕ್ಕೆ ಮನನೊಂದು ನರ್ಸಿಂಗ್ ವಿದ್ಯಾರ್ಥಿನಿ ಆತ್ಮಹತ್ಯೆ

ಪರೀಕ್ಷೆಯಲ್ಲಿ ನಿರೀಕ್ಷಿಸಿದಷ್ಟು ಉತ್ತಮ ಅಂಕ ಬಂದಿಲ್ಲ ಎಂಬ ಕಾರಣಕ್ಕೆ ನರ್ಸಿಂಗ್ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವಿಜಯಪುರ ಜಿಲ್ಲೆಯ ಚಡಚಣ ಪಟ್ಟಣದಲ್ಲಿ ನಡೆದಿದೆ.

author img

By

Published : Nov 10, 2022, 8:48 AM IST

student committed suicide
ವಿದ್ಯಾರ್ಥಿನಿ ಆತ್ಮಹತ್ಯೆ

ವಿಜಯಪುರ: ಪರೀಕ್ಷೆಯಲ್ಲಿ ಕಡಿಮೆ ಅಂಕ ಬಂದಿದೆ ಎಂದು ಮನನೊಂದು ನರ್ಸಿಂಗ್ ವಿದ್ಯಾರ್ಥಿನಿ ನೇಣಿಗೆ ಶರಣಾದ ಘಟನೆ ಜಿಲ್ಲೆಯ ಚಡಚಣ ಪಟ್ಟಣದಲ್ಲಿ ನಡೆದಿದೆ. ನೇಕಾರ ಕಾಲೋನಿಯ ಕೀರ್ತನಾ ಮಧುಕರ (21) ಆತ್ಮಹತ್ಯೆ ಮಾಡಿಕೊಂಡ ಯುವತಿ.

ವಿಜಯಪುರದ ಬಿಎಲ್​ಡಿಇ ನರ್ಸಿಂಗ್ ಕಾಲೇಜ್​ನಲ್ಲಿ ಎರಡನೇ ವರ್ಷದ ನರ್ಸಿಂಗ್​ ಕೋರ್ಸ್​ ಓದುತ್ತಿದ್ದಳು. ಮೊದಲನೇ ವರ್ಷದ ಅಂತಿಮ ಪರೀಕ್ಷೆ ಬರೆದು ಎರಡನೇ ವರ್ಷಕ್ಕೆ ದಾಖಲಾತಿ ಪಡೆದಿದ್ದಳು ಎನ್ನಲಾಗಿದೆ. ಇತ್ತೀಚಿಗೆ ಮೊದಲು ವರ್ಷದ ಅಂತಿಮ ಪರೀಕ್ಷೆಯ ಫಲಿತಾಂಶ ಬಂದಾಗ ನಿರೀಕ್ಷಿಸಿದಷ್ಟು ಅಂಕಗಳು ಬಂದಿರಲಿಲ್ಲ. ಇದರಿಂದ ಮನನೊಂದಿದ್ದ ಕೀರ್ತನಾ, ಮನೆಯಲ್ಲಿ ಯಾರೂ ಇಲ್ಲದ ವೇಳೆ ಫ್ಯಾನ್​ಗೆ ನೇಣು ಬಿಗಿದುಕೊಂಡು ಸಾವಿಗೆ ಶರಣಾಗಿದ್ದಾಳೆ. ಈ ಕುರಿತು ಚಡಚಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯಪುರ: ಪರೀಕ್ಷೆಯಲ್ಲಿ ಕಡಿಮೆ ಅಂಕ ಬಂದಿದೆ ಎಂದು ಮನನೊಂದು ನರ್ಸಿಂಗ್ ವಿದ್ಯಾರ್ಥಿನಿ ನೇಣಿಗೆ ಶರಣಾದ ಘಟನೆ ಜಿಲ್ಲೆಯ ಚಡಚಣ ಪಟ್ಟಣದಲ್ಲಿ ನಡೆದಿದೆ. ನೇಕಾರ ಕಾಲೋನಿಯ ಕೀರ್ತನಾ ಮಧುಕರ (21) ಆತ್ಮಹತ್ಯೆ ಮಾಡಿಕೊಂಡ ಯುವತಿ.

ವಿಜಯಪುರದ ಬಿಎಲ್​ಡಿಇ ನರ್ಸಿಂಗ್ ಕಾಲೇಜ್​ನಲ್ಲಿ ಎರಡನೇ ವರ್ಷದ ನರ್ಸಿಂಗ್​ ಕೋರ್ಸ್​ ಓದುತ್ತಿದ್ದಳು. ಮೊದಲನೇ ವರ್ಷದ ಅಂತಿಮ ಪರೀಕ್ಷೆ ಬರೆದು ಎರಡನೇ ವರ್ಷಕ್ಕೆ ದಾಖಲಾತಿ ಪಡೆದಿದ್ದಳು ಎನ್ನಲಾಗಿದೆ. ಇತ್ತೀಚಿಗೆ ಮೊದಲು ವರ್ಷದ ಅಂತಿಮ ಪರೀಕ್ಷೆಯ ಫಲಿತಾಂಶ ಬಂದಾಗ ನಿರೀಕ್ಷಿಸಿದಷ್ಟು ಅಂಕಗಳು ಬಂದಿರಲಿಲ್ಲ. ಇದರಿಂದ ಮನನೊಂದಿದ್ದ ಕೀರ್ತನಾ, ಮನೆಯಲ್ಲಿ ಯಾರೂ ಇಲ್ಲದ ವೇಳೆ ಫ್ಯಾನ್​ಗೆ ನೇಣು ಬಿಗಿದುಕೊಂಡು ಸಾವಿಗೆ ಶರಣಾಗಿದ್ದಾಳೆ. ಈ ಕುರಿತು ಚಡಚಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಪ್ರೀತಿಸಿದ್ದ ಯುವತಿಗೆ ಮದುವೆ ನಿಶ್ಚಯ: ಫೇಸ್​ಬುಕ್​ ಲೈವ್​ನಲ್ಲಿ ಕಟ್ಟರ್ ಯಂತ್ರದಿಂದ ಕತ್ತು ಕೊಯ್ದುಕೊಂಡ ಪ್ರಿಯಕರ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.