ETV Bharat / state

ಹಾಡಹಗಲೇ ವೃದ್ಧನ ಬರ್ಬರ ಹತ್ಯೆ: ಬೆಚ್ಚಿದ ವಿಜಯಪುರ ನಗರದ ಜನತೆ

author img

By

Published : Dec 21, 2020, 6:45 PM IST

ಹಾಡಹಗಲೇ ವೃದ್ಧನನ್ನು ಬರ್ಬರವಾಗಿ ಹತ್ಯೆಗೈದಿರುವ ಘಟನೆ ವಿಜಯಪುರದಲ್ಲಿ ನಡೆದಿದೆ. ಈ ಕೃತ್ಯಕ್ಕೆ ಇಡೀ ನಗರ ಬೆಚ್ಚಿಬಿದ್ದಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.

Vijayapura
ಬರ್ಬರ ಕೊಲೆ

ವಿಜಯಪುರ: ಹಾಡಹಗಲೇ ವೃದ್ಧನನ್ನು ಬರ್ಬರವಾಗಿ ಹತ್ಯೆಗೈದಿರುವ ಘಟನೆ ನಗರದ ಮೀನಾಕ್ಷಿ ವೃತ್ತದ ಗೋಡಮೊಳೆಯಲ್ಲಿ ನಡೆದಿದೆ. ಮಾರಕಾಸ್ತ್ರಗಳಿಂದ ಕೊಚ್ಚಿ ವಿನಯ್ ನಾಯಕ್ (68) ಎಂಬಾತನನ್ನು ಕೊಲೆ ಮಾಡಲಾಗಿದೆ.

ಮನೆಯಲ್ಲಿ ಯಾರೂ ಇಲ್ಲದ ವೇಳೆ ಈ ದುಷ್ಕೃತ್ಯ ನಡೆದಿದೆ. ಹೊರಗೆ ಹೋಗಿದ್ದವರು ಮನೆಗೆ ಬಂದಾಗ ವಿಷಯ ಗೊತ್ತಾಗಿದೆ. ವೃದ್ಧ ರಕ್ತದ ಮಡುವಿನಲ್ಲಿ ಬಿದ್ದು ಕೊನೆಯುಸಿರೆಳೆದಿದ್ದಾನೆ. ಕಳ್ಳತನ ಮಾಡುವುದಕ್ಕೆ ಬಂದವರು ವೃದ್ಧನ ಹತ್ಯೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ಎಸ್​ಪಿ ಅನುಪಮ್ ಅಗರ್ವಾಲ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ನಗರದಲ್ಲಿ ನಡೆದಿರುವ ಈ ಘಟನೆ ಸಾರ್ವಜನಿಕರಲ್ಲಿ ಭೀತಿ ಹುಟ್ಟಿಸಿದ್ದು, ಗಾಂಧಿ ಚೌಕ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯಪುರ: ಹಾಡಹಗಲೇ ವೃದ್ಧನನ್ನು ಬರ್ಬರವಾಗಿ ಹತ್ಯೆಗೈದಿರುವ ಘಟನೆ ನಗರದ ಮೀನಾಕ್ಷಿ ವೃತ್ತದ ಗೋಡಮೊಳೆಯಲ್ಲಿ ನಡೆದಿದೆ. ಮಾರಕಾಸ್ತ್ರಗಳಿಂದ ಕೊಚ್ಚಿ ವಿನಯ್ ನಾಯಕ್ (68) ಎಂಬಾತನನ್ನು ಕೊಲೆ ಮಾಡಲಾಗಿದೆ.

ಮನೆಯಲ್ಲಿ ಯಾರೂ ಇಲ್ಲದ ವೇಳೆ ಈ ದುಷ್ಕೃತ್ಯ ನಡೆದಿದೆ. ಹೊರಗೆ ಹೋಗಿದ್ದವರು ಮನೆಗೆ ಬಂದಾಗ ವಿಷಯ ಗೊತ್ತಾಗಿದೆ. ವೃದ್ಧ ರಕ್ತದ ಮಡುವಿನಲ್ಲಿ ಬಿದ್ದು ಕೊನೆಯುಸಿರೆಳೆದಿದ್ದಾನೆ. ಕಳ್ಳತನ ಮಾಡುವುದಕ್ಕೆ ಬಂದವರು ವೃದ್ಧನ ಹತ್ಯೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ಎಸ್​ಪಿ ಅನುಪಮ್ ಅಗರ್ವಾಲ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ನಗರದಲ್ಲಿ ನಡೆದಿರುವ ಈ ಘಟನೆ ಸಾರ್ವಜನಿಕರಲ್ಲಿ ಭೀತಿ ಹುಟ್ಟಿಸಿದ್ದು, ಗಾಂಧಿ ಚೌಕ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.