ETV Bharat / state

ಪೌರತ್ವ ಕಾಯ್ದೆಗೆ ವಿರೋಧ: ವಿಜಯಪುರದಲ್ಲಿ ಪ್ರಗತಿಪರ ಸಂಘಟನೆಗಳಿಂದ ಜಾಥಾ

ಕೇಂದ್ರ ಸರ್ಕಾರ ಜಾರಿ ಮಾಡಿರುವ ಪೌರತ್ವ ಕಾಯ್ದೆ ಹಾಗೂ ಎನ್‌ಆರ್‌ಸಿ ವಿರೋಧಿಸಿ ಪ್ರಗತಿಪರ ಸಂಘಟನೆಗಳು ಇಂದು ನಗರದಲ್ಲಿ ಜಾಥಾ ನಡೆಸಿದವು.

author img

By

Published : Jan 28, 2020, 2:59 PM IST

KN_VJP_01_CAA_Virodisi_jatha_AVB_KA10027
ಪೌರತ್ವ ಕಾಯ್ದೆಗೆ ವಿರೋಧ, ವಿಜಯಪುರದಲ್ಲಿ ಪ್ರಗತಿ ಪರ ಸಂಘಟನೆಗಳಿಂದ ಜಾಥಾ

ವಿಜಯಪುರ: ಕೇಂದ್ರ ಸರ್ಕಾರ ಜಾರಿ ಮಾಡಿರುವ ಪೌರತ್ವ ಕಾಯ್ದೆ ಹಾಗೂ ಎನ್‌ಆರ್‌ಸಿ ವಿರೋಧಿಸಿ ಪ್ರಗತಿಪರ ಸಂಘಟನೆಗಳು ಇಂದು ನಗರದಲ್ಲಿ ಜಾಥಾ ನಡೆಸಿದವು.

ಪೌರತ್ವ ಕಾಯ್ದೆಗೆ ವಿರೋಧ: ವಿಜಯಪುರದಲ್ಲಿ ಪ್ರಗತಿಪರ ಸಂಘಟನೆಗಳಿಂದ ಜಾಥಾ
ನಗರದ ಅಂಬೇಡ್ಕರ್ ವೃತ್ತದಿಂದ ಪ್ರಾರಂಭವಾದ ಜಾಗೃತಿ ಜಾಥಾದಲ್ಲಿ "ಸಂವಿಧಾನ ರಕ್ಷಿಸಿ ಪ್ರಜಾಪ್ರಭುತ್ವ ಉಳಿಸಿ" ಎಂಬ ಧ್ಯೇಯದೊಂದಿಗೆ ಕಂದಗಲ ಹನುವಂತರಾಯ ರಂಗಮಂದಿರದವರೆಗೆ ಜಾಥಾ ನಡೆಸಿ ಕೇಂದ್ರ‌ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ಕೇಂದ್ರ ಬಿಜೆಪಿ‌ ಸರ್ಕಾರ ದೇಶದ ಜನರ ಭಾವನೆಗಳಿಗೆ ಧಕ್ಕೆಯುಂಟು ಮಾಡುವ ಕಾಯ್ದೆ ಜಾರಿ ಮಾಡುತ್ತಿದೆ.‌ ಎರಡು ಅವಧಿಗೆ ಅಧಿಕಾರದಲ್ಲಿದ್ದರೂ ಯುವ ಸಮೂಹಕ್ಕೆ ಉದ್ಯೋಗ ನೀಡದೇ ಆರ್ಥಿಕ ದಿವಾಳಿತನಕ್ಕೆ ಕೇಂದ್ರ ಸರ್ಕಾರ ತಳ್ಳಿದೆ‌. ಅವುಗಳನ್ನು ಮುಚ್ಚಿಹಾಕಲು ಇಂತಹ ಕಾಯ್ದೆ ಜಾರಿ ಮಾಡಲು ಮುಂದಾಗಿದೆ ಎಂದು ಪ್ರಗತಿಪರ ಸಂಘಟನೆ ಕಾರ್ಯಕರ್ತೆ‌ ಅಭಯಾ ಕಿಡಿಕಾರಿದರು.

ವಿಜಯಪುರ: ಕೇಂದ್ರ ಸರ್ಕಾರ ಜಾರಿ ಮಾಡಿರುವ ಪೌರತ್ವ ಕಾಯ್ದೆ ಹಾಗೂ ಎನ್‌ಆರ್‌ಸಿ ವಿರೋಧಿಸಿ ಪ್ರಗತಿಪರ ಸಂಘಟನೆಗಳು ಇಂದು ನಗರದಲ್ಲಿ ಜಾಥಾ ನಡೆಸಿದವು.

ಪೌರತ್ವ ಕಾಯ್ದೆಗೆ ವಿರೋಧ: ವಿಜಯಪುರದಲ್ಲಿ ಪ್ರಗತಿಪರ ಸಂಘಟನೆಗಳಿಂದ ಜಾಥಾ
ನಗರದ ಅಂಬೇಡ್ಕರ್ ವೃತ್ತದಿಂದ ಪ್ರಾರಂಭವಾದ ಜಾಗೃತಿ ಜಾಥಾದಲ್ಲಿ "ಸಂವಿಧಾನ ರಕ್ಷಿಸಿ ಪ್ರಜಾಪ್ರಭುತ್ವ ಉಳಿಸಿ" ಎಂಬ ಧ್ಯೇಯದೊಂದಿಗೆ ಕಂದಗಲ ಹನುವಂತರಾಯ ರಂಗಮಂದಿರದವರೆಗೆ ಜಾಥಾ ನಡೆಸಿ ಕೇಂದ್ರ‌ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ಕೇಂದ್ರ ಬಿಜೆಪಿ‌ ಸರ್ಕಾರ ದೇಶದ ಜನರ ಭಾವನೆಗಳಿಗೆ ಧಕ್ಕೆಯುಂಟು ಮಾಡುವ ಕಾಯ್ದೆ ಜಾರಿ ಮಾಡುತ್ತಿದೆ.‌ ಎರಡು ಅವಧಿಗೆ ಅಧಿಕಾರದಲ್ಲಿದ್ದರೂ ಯುವ ಸಮೂಹಕ್ಕೆ ಉದ್ಯೋಗ ನೀಡದೇ ಆರ್ಥಿಕ ದಿವಾಳಿತನಕ್ಕೆ ಕೇಂದ್ರ ಸರ್ಕಾರ ತಳ್ಳಿದೆ‌. ಅವುಗಳನ್ನು ಮುಚ್ಚಿಹಾಕಲು ಇಂತಹ ಕಾಯ್ದೆ ಜಾರಿ ಮಾಡಲು ಮುಂದಾಗಿದೆ ಎಂದು ಪ್ರಗತಿಪರ ಸಂಘಟನೆ ಕಾರ್ಯಕರ್ತೆ‌ ಅಭಯಾ ಕಿಡಿಕಾರಿದರು.
ETV Bharat Logo

Copyright © 2024 Ushodaya Enterprises Pvt. Ltd., All Rights Reserved.