ETV Bharat / state

ಅವ್ಯವಸ್ಥೆಯ ಆಗರವಾದ ವಿಜಯಪುರದ ಡಯಾಲಿಸಿಸ್ ಕೇಂದ್ರ.. ಏನಂತಾರೆ ಜಿಲ್ಲಾ ಸರ್ಜನ್​?

author img

By

Published : Jul 11, 2021, 8:01 AM IST

ವಿಜಯಪುರ ಜಿಲ್ಲಾಸ್ಪತ್ರೆಯ ಡಯಾಲಿಸಿಸ್ ಕೇಂದ್ರ ಸೂಕ್ತ ನಿರ್ವಹಣೆಯಿಲ್ಲದೆ ಅವ್ಯವಸ್ಥೆಯ ಕೇಂದ್ರವಾಗಿ ಬದಲಾಗಿದೆ. ದೂರದೂರುಗಳಿಂದ ಚಿಕಿತ್ಸೆಗೆ ಬರುವ ಬಡ ರೋಗಿಗಳು ಪರದಾಡುವಂತಾಗಿದೆ.

Vijayapur Dialysis Center Chaos
ಡಯಾಲಿಸಿಸ್ ಮಾಡಿಸಿಕೊಳ್ಳಲು ರೋಗಿಗಳ ಪರದಾಟ

ವಿಜಯಪುರ: ನಗರದ ಜಿಲ್ಲಾಸ್ಪತ್ರೆಯಲ್ಲಿರುವ ಡಯಾಲಿಸಿಸ್ ಕೇಂದ್ರವನ್ನು ಸರ್ಕಾರ ವಿಆರ್​ಎಸ್ ಎಂಬ ಖಾಸಗಿ ಸಂಸ್ಥೆಗೆ ನಿರ್ವಹಣೆ ಮಾಡಲು ನೀಡಿದೆ. ಆದರೆ, ಕಳೆದ ಮೂರು ತಿಂಗಳಿನಿಂದ ನಿರ್ವಹಣೆ ಮಾಡುವ ಸಂಸ್ಥೆ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದು, ಡಯಾಲಿಸಿಸ್ ಕೇಂದ್ರದಲ್ಲಿ ಔಷಧಿಗಳ ಕೊರತೆ, ಕೆಟ್ಟು ನಿಂತಿರುವ ಯಂತ್ರಗಳಿಂದ ರೋಗಿಗಳು ಸಂಕಷ್ಟ ಅನುಭವಿಸುತ್ತಿದ್ದಾರೆ.

ಬಡ ರೋಗಿಗಳು ಸರ್ಕಾರಿ ಆಸ್ಪತ್ರೆಯ ಈ ಡಯಾಲಿಸಿಸ್ ಕೇಂದ್ರವನ್ನೇ ನಂಬಿದ್ದರು. ಆದರೆ, ಈಗ ಈ ಡಯಾಲಿಸಿಸ್ ಕೇಂದ್ರದಲ್ಲಿ ಸರಿಯಾದ ವ್ಯವಸ್ಥೆ ಇಲ್ಲದ ಕಾರಣ ಖಾಸಗಿ ಕೇಂದ್ರಗಳತ್ತ ಹೋಗಬೇಕಾಗಿದೆ. ತಿಂಗಳಿಗೆ 4-5 ಬಾರಿ ಡಯಾಲಿಸಿಸ್ ಮಾಡಿಸಿಕೊಳ್ಳುವ ಅನಿವಾರ್ಯತೆ ಇರುವುದರಿಂದ ಖಾಸಗಿ ಡಯಾಲಿಸಿಸ್ ಕೇಂದ್ರಗಳಲ್ಲಿ ಹೆಚ್ಚಿನ ಹಣ ಕೊಟ್ಟು ಚಿಕಿತ್ಸೆ ಪಡೆದುಕೊಳ್ಳಲು ಜನರಿಗೆ ಸಾಧ್ಯವಾಗುತ್ತಿಲ್ಲ.

ಡಯಾಲಿಸಿಸ್ ಮಾಡಿಸಿಕೊಳ್ಳಲು ರೋಗಿಗಳ ಪರದಾಟ

ಜಿಲ್ಲಾಸ್ಪತ್ರೆಯ ಡಯಾಲಿಸಿಸ್ ಕೇಂದ್ರದಲ್ಲಿ ಸುಮಾರು 12 ಡಯಾಲಿಸಿಸ್ ಯಂತ್ರಗಳಿವೆ. ಈ ಪೈಕಿ ನಿರ್ವಹಣೆ ಇಲ್ಲದೆ 8 ಯಂತ್ರಗಳು ಕೆಟ್ಟು ನಿಂತಿವೆ. ಇರುವ 4 ಯಂತ್ರಗಳಲ್ಲಿ ರೋಗಿಗಳಿಗೆ ಡಯಾಲಿಸಿಸ್ ಮಾಡಬೇಕು. ನಿತ್ಯ 30 ರಿಂದ 40 ರೋಗಿಗಳು ಡಯಾಲಿಸಿಸ್​ಗಾಗಿ ಬರುತ್ತಾರೆ. ಇದರ ಜೊತೆಗೆ ವೈದ್ಯರ ಕೊರತೆಯೂ ಇದೆ. ಕಿಡ್ನಿ ತಜ್ಞ ವೈದ್ಯರು ಇಲ್ಲಿ ಇಲ್ಲದ ಕಾರಣ ಕಿಡ್ನಿ ವೈಫಲ್ಯ ಅನುಭವಿಸುತ್ತಿರುವ ರೋಗಿಗಳು ನರಕಯಾತನೆ ಅನುಭವಿಸುತ್ತಿದ್ದಾರೆ.

ಓದಿ : ಹಲ್ಲು ನೋವೆಂದು ಸ್ನೇಹಿತನ ಕ್ಲಿನಿಕ್​ಗೆ ಹೋದವ ಮಸಣ ಸೇರಿದ

ರೋಗಿಗಳಿಗೆ ಆಗುತ್ತಿರುವ ಸಮಸ್ಯೆಗಳ ಬಗ್ಗೆ ಜಿಲ್ಲಾಸ್ಪತ್ರೆ ಮುಖ್ಯಸ್ಥರ ಗಮನಕ್ಕೆ ತಂದರೂ, ಅವರು ಏನು ಮಾಡಲಾಗದ ಸ್ಥಿತಿಯಲ್ಲಿದ್ದಾರೆ. ಸರ್ಕಾರ ಖಾಸಗಿ ಕಂಪನಿಗೆ ನಿರ್ವಹಣೆಗೆ ಕೊಟ್ಟಿರುವ ಕಾರಣ ಆಸ್ಪತ್ರೆಯ ವೈದ್ಯರಿಗೂ ಡಯಾಲಿಸಿಸ್ ಕೇಂದ್ರಕ್ಕೂ ಸಂಬಂಧವೇ ಇಲ್ಲದಂತಾಗಿದೆ. ಈ ಬಗ್ಗೆ ಆಸ್ಪತ್ರೆ ಮುಖ್ಯಸ್ಥರು ಸರ್ಕಾರದ ಮುಖ್ಯ ಕಾರ್ಯದರ್ಶಿ ಮತ್ತು ವಿಆರ್​ಎಸ್ ಕಂಪನಿಗೆ ಪತ್ರ ಬರೆದರೂ ಏನು‌ ಪ್ರಯೋಜನವಾಗಿಲ್ಲ.

ಪ್ರಸ್ತುತ ಡಯಾಲಿಸಿಸ್ ಕೇಂದ್ರವನ್ನು ನಿರ್ವಹಣೆ ಮಾಡುತ್ತಿರುವ ಕಂಪನಿ ಆರ್ಥಿಕ ಸಂಕಷ್ಟದಲ್ಲಿ ಇರುವ ಕಾರಣ, ಬೇರೆ ಕಂಪನಿಗೆ ನಿರ್ವಹಣೆಯ ಉಸ್ತುವಾರಿ ಕೊಟ್ಟರೆ ಸಮಸ್ಯೆ ಬಗೆ ಹರಿಯಬಹುದು ಎಂದು ಜಿಲ್ಲಾ ಸರ್ಜನ್ ಡಾ. ಶರಣಪ್ಪ ಕಟ್ಟಿ ಹೇಳುತ್ತಿದ್ದಾರೆ.

ವಿಜಯಪುರ: ನಗರದ ಜಿಲ್ಲಾಸ್ಪತ್ರೆಯಲ್ಲಿರುವ ಡಯಾಲಿಸಿಸ್ ಕೇಂದ್ರವನ್ನು ಸರ್ಕಾರ ವಿಆರ್​ಎಸ್ ಎಂಬ ಖಾಸಗಿ ಸಂಸ್ಥೆಗೆ ನಿರ್ವಹಣೆ ಮಾಡಲು ನೀಡಿದೆ. ಆದರೆ, ಕಳೆದ ಮೂರು ತಿಂಗಳಿನಿಂದ ನಿರ್ವಹಣೆ ಮಾಡುವ ಸಂಸ್ಥೆ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದು, ಡಯಾಲಿಸಿಸ್ ಕೇಂದ್ರದಲ್ಲಿ ಔಷಧಿಗಳ ಕೊರತೆ, ಕೆಟ್ಟು ನಿಂತಿರುವ ಯಂತ್ರಗಳಿಂದ ರೋಗಿಗಳು ಸಂಕಷ್ಟ ಅನುಭವಿಸುತ್ತಿದ್ದಾರೆ.

ಬಡ ರೋಗಿಗಳು ಸರ್ಕಾರಿ ಆಸ್ಪತ್ರೆಯ ಈ ಡಯಾಲಿಸಿಸ್ ಕೇಂದ್ರವನ್ನೇ ನಂಬಿದ್ದರು. ಆದರೆ, ಈಗ ಈ ಡಯಾಲಿಸಿಸ್ ಕೇಂದ್ರದಲ್ಲಿ ಸರಿಯಾದ ವ್ಯವಸ್ಥೆ ಇಲ್ಲದ ಕಾರಣ ಖಾಸಗಿ ಕೇಂದ್ರಗಳತ್ತ ಹೋಗಬೇಕಾಗಿದೆ. ತಿಂಗಳಿಗೆ 4-5 ಬಾರಿ ಡಯಾಲಿಸಿಸ್ ಮಾಡಿಸಿಕೊಳ್ಳುವ ಅನಿವಾರ್ಯತೆ ಇರುವುದರಿಂದ ಖಾಸಗಿ ಡಯಾಲಿಸಿಸ್ ಕೇಂದ್ರಗಳಲ್ಲಿ ಹೆಚ್ಚಿನ ಹಣ ಕೊಟ್ಟು ಚಿಕಿತ್ಸೆ ಪಡೆದುಕೊಳ್ಳಲು ಜನರಿಗೆ ಸಾಧ್ಯವಾಗುತ್ತಿಲ್ಲ.

ಡಯಾಲಿಸಿಸ್ ಮಾಡಿಸಿಕೊಳ್ಳಲು ರೋಗಿಗಳ ಪರದಾಟ

ಜಿಲ್ಲಾಸ್ಪತ್ರೆಯ ಡಯಾಲಿಸಿಸ್ ಕೇಂದ್ರದಲ್ಲಿ ಸುಮಾರು 12 ಡಯಾಲಿಸಿಸ್ ಯಂತ್ರಗಳಿವೆ. ಈ ಪೈಕಿ ನಿರ್ವಹಣೆ ಇಲ್ಲದೆ 8 ಯಂತ್ರಗಳು ಕೆಟ್ಟು ನಿಂತಿವೆ. ಇರುವ 4 ಯಂತ್ರಗಳಲ್ಲಿ ರೋಗಿಗಳಿಗೆ ಡಯಾಲಿಸಿಸ್ ಮಾಡಬೇಕು. ನಿತ್ಯ 30 ರಿಂದ 40 ರೋಗಿಗಳು ಡಯಾಲಿಸಿಸ್​ಗಾಗಿ ಬರುತ್ತಾರೆ. ಇದರ ಜೊತೆಗೆ ವೈದ್ಯರ ಕೊರತೆಯೂ ಇದೆ. ಕಿಡ್ನಿ ತಜ್ಞ ವೈದ್ಯರು ಇಲ್ಲಿ ಇಲ್ಲದ ಕಾರಣ ಕಿಡ್ನಿ ವೈಫಲ್ಯ ಅನುಭವಿಸುತ್ತಿರುವ ರೋಗಿಗಳು ನರಕಯಾತನೆ ಅನುಭವಿಸುತ್ತಿದ್ದಾರೆ.

ಓದಿ : ಹಲ್ಲು ನೋವೆಂದು ಸ್ನೇಹಿತನ ಕ್ಲಿನಿಕ್​ಗೆ ಹೋದವ ಮಸಣ ಸೇರಿದ

ರೋಗಿಗಳಿಗೆ ಆಗುತ್ತಿರುವ ಸಮಸ್ಯೆಗಳ ಬಗ್ಗೆ ಜಿಲ್ಲಾಸ್ಪತ್ರೆ ಮುಖ್ಯಸ್ಥರ ಗಮನಕ್ಕೆ ತಂದರೂ, ಅವರು ಏನು ಮಾಡಲಾಗದ ಸ್ಥಿತಿಯಲ್ಲಿದ್ದಾರೆ. ಸರ್ಕಾರ ಖಾಸಗಿ ಕಂಪನಿಗೆ ನಿರ್ವಹಣೆಗೆ ಕೊಟ್ಟಿರುವ ಕಾರಣ ಆಸ್ಪತ್ರೆಯ ವೈದ್ಯರಿಗೂ ಡಯಾಲಿಸಿಸ್ ಕೇಂದ್ರಕ್ಕೂ ಸಂಬಂಧವೇ ಇಲ್ಲದಂತಾಗಿದೆ. ಈ ಬಗ್ಗೆ ಆಸ್ಪತ್ರೆ ಮುಖ್ಯಸ್ಥರು ಸರ್ಕಾರದ ಮುಖ್ಯ ಕಾರ್ಯದರ್ಶಿ ಮತ್ತು ವಿಆರ್​ಎಸ್ ಕಂಪನಿಗೆ ಪತ್ರ ಬರೆದರೂ ಏನು‌ ಪ್ರಯೋಜನವಾಗಿಲ್ಲ.

ಪ್ರಸ್ತುತ ಡಯಾಲಿಸಿಸ್ ಕೇಂದ್ರವನ್ನು ನಿರ್ವಹಣೆ ಮಾಡುತ್ತಿರುವ ಕಂಪನಿ ಆರ್ಥಿಕ ಸಂಕಷ್ಟದಲ್ಲಿ ಇರುವ ಕಾರಣ, ಬೇರೆ ಕಂಪನಿಗೆ ನಿರ್ವಹಣೆಯ ಉಸ್ತುವಾರಿ ಕೊಟ್ಟರೆ ಸಮಸ್ಯೆ ಬಗೆ ಹರಿಯಬಹುದು ಎಂದು ಜಿಲ್ಲಾ ಸರ್ಜನ್ ಡಾ. ಶರಣಪ್ಪ ಕಟ್ಟಿ ಹೇಳುತ್ತಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.