ವಿಜಯಪುರ: ಕೊರೊನಾ ವೈರಸ್ ನಿಯಂತ್ರಣಕ್ಕೆ ಜಿಲ್ಲಾಡಳಿತ ರಾತ್ರಿ ಕರ್ಫ್ಯೂ ಜಾರಿ ಮಾಡಿದ್ರು ಜನರು ಮಾತ್ರ ನಿಯಮ ಪಾಲಿಸುತ್ತಿಲ್ಲ.
ನಗರದಲ್ಲಿ ಕೋವಿಡ್ ವೈರಸ್ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ ಜಿಲ್ಲಾದ್ಯಂತ ರಾತ್ರಿ 8 ಗಂಟೆಯಿಂದ ಬೆಳಿಗ್ಗೆ 5 ಗಂಟೆಯವರಿಗೂ ಕರ್ಫ್ಯೂ ಜಾರಿ ಮಾಡಿದ್ದಾರೆ. ರಾತ್ರಿ ಗುಮ್ಮಟನಗರಿಯಲ್ಲಿ ಅಂಗಡಿ-ಮುಂಗಟ್ಟುಗಳು ಬಂದ್ ಆಗಿದ್ದವು. ಆದರೆ ಜನರು ಮಾತ್ರ ನಮಗೂ ಜಿಲ್ಲಾಡಳಿತದ ನಿಯಮಕ್ಕೂ ಸಂಬಂಧವಿಲ್ಲದಂತೆ ಓಡಾಡುತ್ತಿದ್ದರು.
ಜಿಲ್ಲೆಯಲ್ಲಿ ಇಂದು ಒಂದೇ ದಿನ 39 ಜನರಿಗೆ ಸೋಂಕು ತಗುಲಿದೆ. ಒಟ್ಟಾರೆ ವಿಜಯಪುರ ಜಿಲ್ಲೆಯಲ್ಲಿ 399 ಮಂದಿಗೆ ಸೋಂಕು ತಗುಲಿದ್ದು, ಇಬ್ಬರು ಮೃತಪಟ್ಟಿದ್ದಾರೆ.