ETV Bharat / state

ನಾಳೆ ಲಾಕ್​​ಡೌನ್​​...ವಿಜಯಪುರದಲ್ಲಿ ಅಗತ್ಯ ವಸ್ತುಗಳ ಖರೀದಿಗೆ ಮುಗಿಬಿದ್ದ ಜನತೆ - Vijayapura lockdown updates

ಭಾನುವಾರ ರಾಜ್ಯಾದ್ಯಂತ ಲಾಕ್​​ಡೌನ್ ಇರಲಿದ್ದು ಕೆಲವೆಡೆ ಜನರು ಅಗತ್ಯ ವಸ್ತುಗಳ ಖರೀದಿಗೆ ಮುಗಿಬಿದ್ದಿದ್ದಾರೆ. ವಿಜಯಪುರದಲ್ಲಿ ಕೂಡಾ ಜನರು ಇಂದು ಸಾಮಗ್ರಿಗಳನ್ನು ಕೊಳ್ಳಲು ಸಾಮಾಜಿಕ ಅಂತರ ಕಾಯ್ದುಕೊಳ್ಳದೆ ರಸ್ತೆಯಲ್ಲಿ ಓಡಾಡುತ್ತಿದ್ದ ದೃಶ್ಯ ಸಾಮಾನ್ಯವಾಗಿತ್ತು.

People rushed to purchase necessary things in Vijayapura
ಅಗತ್ಯ ವಸ್ತುಗಳ ಖರೀದಿಗೆ ಮುಗಿಬಿದ್ದ ಜನತೆ
author img

By

Published : May 23, 2020, 4:31 PM IST

Updated : May 23, 2020, 7:13 PM IST

ವಿಜಯಪುರ: ಕೆಲವೊಂದು ನಿಬಂಧನೆಗಳನ್ನು ವಿಧಿಸಿ ರಾಜ್ಯಸರ್ಕಾರ ಲಾಕ್​ಡೌನ್ ಸಡಿಲಿಕೆ ಮಾಡಿದೆ. ಸೋಮವಾರದಿಂದ ಶನಿವಾರದವರೆಗೂ ಲಾಕ್​ಡೌನ್​ ಸಡಿಲಿಕೆ ಇದ್ದು ಭಾನುವಾರ ಎಲ್ಲಾ ಕಡೆ ಲಾಕ್​​ಡೌನ್ ಇರಲಿದೆ.

ವಿಜಯಪುರದಲ್ಲಿ ಅಗತ್ಯ ವಸ್ತುಗಳ ಖರೀದಿಗೆ ಮುಗಿಬಿದ್ದ ಜನತೆ

ನಾಳೆ ಭಾನುವಾರವಾಗಿದ್ದು ಲಾಕ್​ಡೌನ್​ ಇರುವುದರಿಂದ ಜನರು ಅಗತ್ಯ ವಸ್ತುಗಳನ್ನು ಖರೀದಿಸಲು ಇಂದು ಗುಂಪಾಗಿ ರಸ್ತೆಗೆ ಇಳಿದಿದ್ದಾರೆ. ಸಾಮಾಜಿಕ ಅಂತರವೂ ಇಲ್ಲದೆ ದಿನಬಳಕೆ ವಸ್ತುಗಳ ಖರೀದಿಗೆ ಮುಗಿಬಿದ್ದಿದ್ದಾರೆ. ನಾಳೆ ಬೆಳಗ್ಗೆ 7 ರಿಂದ ಸಂಜೆ 7 ವರೆಗೆ ಗುಮ್ಮಟನಗರಿ ಸಂಪೂರ್ಣವಾಗಿ ಸ್ತಬ್ಧವಾಗಲಿದೆ. ನಾಳೆ ಜಿಲ್ಲಾದ್ಯಂತ ಯಾವುದೇ ಸಾರಿಗೆ ಕೂಡಾ ಇರುವುದಿಲ್ಲ.

ನಾಳೆ ಎಲ್ಲಾ ಅಂಗಡಿ ಮುಂಗಟ್ಟುಗಳನ್ನು ಬಂದ್ ಮಾಡುವಂತೆ ಜಿಲ್ಲಾಡಳಿತ ಈಗಾಗಲೇ ಸೂಚಿಸಿದೆ. ಮೆಡಿಕಲ್, ಆಸ್ಪತ್ರೆ, ಹಾಲು ಸೇರಿದಂತೆ ತುರ್ತು ಸೇವೆಗಳನ್ನು ಹೊರತುಪಡಿಸಿ ಬಹುತೇಕ ಎಲ್ಲಾ ಸೇವೆಗಳು ಬಂದ್​ ಆಗಲಿದೆ. ಆದ್ದರಿಂದ ಜನರು ಸುಡುಬಿಸಿಲಿನಲ್ಲೇ ಇಂದು ಅಗತ್ಯವಸ್ತುಗಳನ್ನು ಕೊಂಡೊಯ್ಯಲು ಮುಗಿಬಿದ್ದಿದ್ದಾರೆ. ಇನ್ನು ನಗರದಲ್ಲಿ ಹೆಚ್ಚಿನ ಪೊಲೀಸ್ ಬಂದೋಬಸ್ತ್​ ಮಾಡಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ವಿಜಯಪುರ: ಕೆಲವೊಂದು ನಿಬಂಧನೆಗಳನ್ನು ವಿಧಿಸಿ ರಾಜ್ಯಸರ್ಕಾರ ಲಾಕ್​ಡೌನ್ ಸಡಿಲಿಕೆ ಮಾಡಿದೆ. ಸೋಮವಾರದಿಂದ ಶನಿವಾರದವರೆಗೂ ಲಾಕ್​ಡೌನ್​ ಸಡಿಲಿಕೆ ಇದ್ದು ಭಾನುವಾರ ಎಲ್ಲಾ ಕಡೆ ಲಾಕ್​​ಡೌನ್ ಇರಲಿದೆ.

ವಿಜಯಪುರದಲ್ಲಿ ಅಗತ್ಯ ವಸ್ತುಗಳ ಖರೀದಿಗೆ ಮುಗಿಬಿದ್ದ ಜನತೆ

ನಾಳೆ ಭಾನುವಾರವಾಗಿದ್ದು ಲಾಕ್​ಡೌನ್​ ಇರುವುದರಿಂದ ಜನರು ಅಗತ್ಯ ವಸ್ತುಗಳನ್ನು ಖರೀದಿಸಲು ಇಂದು ಗುಂಪಾಗಿ ರಸ್ತೆಗೆ ಇಳಿದಿದ್ದಾರೆ. ಸಾಮಾಜಿಕ ಅಂತರವೂ ಇಲ್ಲದೆ ದಿನಬಳಕೆ ವಸ್ತುಗಳ ಖರೀದಿಗೆ ಮುಗಿಬಿದ್ದಿದ್ದಾರೆ. ನಾಳೆ ಬೆಳಗ್ಗೆ 7 ರಿಂದ ಸಂಜೆ 7 ವರೆಗೆ ಗುಮ್ಮಟನಗರಿ ಸಂಪೂರ್ಣವಾಗಿ ಸ್ತಬ್ಧವಾಗಲಿದೆ. ನಾಳೆ ಜಿಲ್ಲಾದ್ಯಂತ ಯಾವುದೇ ಸಾರಿಗೆ ಕೂಡಾ ಇರುವುದಿಲ್ಲ.

ನಾಳೆ ಎಲ್ಲಾ ಅಂಗಡಿ ಮುಂಗಟ್ಟುಗಳನ್ನು ಬಂದ್ ಮಾಡುವಂತೆ ಜಿಲ್ಲಾಡಳಿತ ಈಗಾಗಲೇ ಸೂಚಿಸಿದೆ. ಮೆಡಿಕಲ್, ಆಸ್ಪತ್ರೆ, ಹಾಲು ಸೇರಿದಂತೆ ತುರ್ತು ಸೇವೆಗಳನ್ನು ಹೊರತುಪಡಿಸಿ ಬಹುತೇಕ ಎಲ್ಲಾ ಸೇವೆಗಳು ಬಂದ್​ ಆಗಲಿದೆ. ಆದ್ದರಿಂದ ಜನರು ಸುಡುಬಿಸಿಲಿನಲ್ಲೇ ಇಂದು ಅಗತ್ಯವಸ್ತುಗಳನ್ನು ಕೊಂಡೊಯ್ಯಲು ಮುಗಿಬಿದ್ದಿದ್ದಾರೆ. ಇನ್ನು ನಗರದಲ್ಲಿ ಹೆಚ್ಚಿನ ಪೊಲೀಸ್ ಬಂದೋಬಸ್ತ್​ ಮಾಡಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Last Updated : May 23, 2020, 7:13 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.