ETV Bharat / state

ಇಸ್ಪೀಟ್ ದಂಧೆ ಬಗ್ಗೆ ಮಾಹಿತಿ ನೀಡಿದ ವ್ಯಕ್ತಿಗೆ ಇಂಡಿ ಪೊಲೀಸರಿಂದ ಥಳಿತ ಆರೋಪ

ಇಂಡಿ ಗ್ರಾಮೀಣ ಠಾಣೆ ಪೊಲೀಸರ ವಿರುದ್ಧ ಹಲ್ಲೆ ಆರೋಪ ಕೇಳಿ ಬಂದಿದೆ. ಕಾನೂನು ಬಾಹಿರ ಚಟುವಟಿಕೆ ಬಗ್ಗೆ ಮಾಹಿತಿ ನೀಡಿದ ವ್ಯಕ್ತಿಗೆ ಪೊಲೀಸರು ಥಳಿಸಿದ್ದಾರೆ ಎನ್ನಲಾಗ್ತಿದೆ.

author img

By

Published : May 29, 2021, 11:27 AM IST

Updated : May 29, 2021, 11:43 AM IST

Police beaten man who informed about Gambling
ಯುವಕನ ಮೇಲೆ ಹಲ್ಲೆ

ವಿಜಯಪುರ : ಸಾರ್ವಜನಿಕ ಸ್ಥಳದಲ್ಲಿ ಜೂಜಾಟ ನಡೆಯುತ್ತಿದೆ ಎಂದು ಮಾಹಿತಿ ನೀಡಿದ ವ್ಯಕ್ತಿಗೆ ಪೊಲೀಸರೇ ಥಳಿಸಿದ್ದಾರೆ ಎಂಬ ಆರೋಪ ಪ್ರಕರಣ ಇಂಡಿ ತಾಲೂಕಿನ ಮಸಳಿ ಬಿ.ಕೆ ಗ್ರಾಮದಲ್ಲಿ ನಡೆದಿದೆ.

ಲಾಕ್ ಡೌನ್​ ಸಮಯದಲ್ಲಿ ಮಸಳಿ ಗ್ರಾಮದಲ್ಲಿ ಇಸ್ಪೀಟ್ ದಂಧೆ ನಡೆಯುತ್ತಿದೆ ಎಂದು ಗ್ರಾಮದ ಸಂತೋಷ ನದ್ಯಾಳ್ ಎಂಬ ಯುವಕ ಇಂಡಿ ಗ್ರಾಮೀಣ ಪೊಲೀಸರಿಗೆ ಮಾಹಿತಿ ನೀಡಿದ್ದ. ಮಾಹಿತಿ ಆಧರಿಸಿ ಜೂಜುಕೋರರನ್ನು ಬಂಧಿಸಬೇಕಿದ್ದ ಪೊಲೀಸರು ಇತರ ವ್ಯಕ್ತಿಗಳೊಂದಿಗೆ ಸೇರಿಕೊಂಡು ದೂರು ನೀಡಿದ ಸಂತೋಷ್​ಗೆ ಥಳಿಸಿ, ಬಳಿಕ ಮಸಳಿ ಬಳಿಯ ಸೇತುವೆ ಕೆಳಗೆ ಬಿಸಾಕಿ ಹೋಗಿದ್ದಾರೆ ಎಂದು ಆರೋಪಿಸಲಾಗಿದೆ.

ಪೊಲೀಸರಿಂದ ಹಲ್ಲೆಗೊಳಗಾದ ಯುವಕ ಸಂತೋಷ್ ನದ್ಯಾಳ್

ಓದಿ : ಹಣ ನೀಡದಿದ್ದಕ್ಕೆ ಪಾರ್ಶ್ವವಾಯು ಪೀಡಿತ ತಂದೆಯನ್ನ ಕೊಡಲಿಯಿಂದ ಹೊಡೆದು ಕೊಂದ ಮಗ!

ಹಲ್ಲೆ ನಡೆಸಿದ ಪೊಲೀಸರ ವಿರುದ್ಧ ದೂರು ನೀಡಲು ಹೋದರೆ, ಇಂಡಿ ಗ್ರಾಮೀಣ ಠಾಣೆ ಪೊಲೀಸರು ದೂರು ಸ್ವೀಕರಿಸಿಲ್ಲ ಎಂದು ಸಂತೋಷ್ ನದ್ಯಾಳ್ ಹೇಳಿದ್ದು, ಸದ್ಯ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.

ವಿಜಯಪುರ : ಸಾರ್ವಜನಿಕ ಸ್ಥಳದಲ್ಲಿ ಜೂಜಾಟ ನಡೆಯುತ್ತಿದೆ ಎಂದು ಮಾಹಿತಿ ನೀಡಿದ ವ್ಯಕ್ತಿಗೆ ಪೊಲೀಸರೇ ಥಳಿಸಿದ್ದಾರೆ ಎಂಬ ಆರೋಪ ಪ್ರಕರಣ ಇಂಡಿ ತಾಲೂಕಿನ ಮಸಳಿ ಬಿ.ಕೆ ಗ್ರಾಮದಲ್ಲಿ ನಡೆದಿದೆ.

ಲಾಕ್ ಡೌನ್​ ಸಮಯದಲ್ಲಿ ಮಸಳಿ ಗ್ರಾಮದಲ್ಲಿ ಇಸ್ಪೀಟ್ ದಂಧೆ ನಡೆಯುತ್ತಿದೆ ಎಂದು ಗ್ರಾಮದ ಸಂತೋಷ ನದ್ಯಾಳ್ ಎಂಬ ಯುವಕ ಇಂಡಿ ಗ್ರಾಮೀಣ ಪೊಲೀಸರಿಗೆ ಮಾಹಿತಿ ನೀಡಿದ್ದ. ಮಾಹಿತಿ ಆಧರಿಸಿ ಜೂಜುಕೋರರನ್ನು ಬಂಧಿಸಬೇಕಿದ್ದ ಪೊಲೀಸರು ಇತರ ವ್ಯಕ್ತಿಗಳೊಂದಿಗೆ ಸೇರಿಕೊಂಡು ದೂರು ನೀಡಿದ ಸಂತೋಷ್​ಗೆ ಥಳಿಸಿ, ಬಳಿಕ ಮಸಳಿ ಬಳಿಯ ಸೇತುವೆ ಕೆಳಗೆ ಬಿಸಾಕಿ ಹೋಗಿದ್ದಾರೆ ಎಂದು ಆರೋಪಿಸಲಾಗಿದೆ.

ಪೊಲೀಸರಿಂದ ಹಲ್ಲೆಗೊಳಗಾದ ಯುವಕ ಸಂತೋಷ್ ನದ್ಯಾಳ್

ಓದಿ : ಹಣ ನೀಡದಿದ್ದಕ್ಕೆ ಪಾರ್ಶ್ವವಾಯು ಪೀಡಿತ ತಂದೆಯನ್ನ ಕೊಡಲಿಯಿಂದ ಹೊಡೆದು ಕೊಂದ ಮಗ!

ಹಲ್ಲೆ ನಡೆಸಿದ ಪೊಲೀಸರ ವಿರುದ್ಧ ದೂರು ನೀಡಲು ಹೋದರೆ, ಇಂಡಿ ಗ್ರಾಮೀಣ ಠಾಣೆ ಪೊಲೀಸರು ದೂರು ಸ್ವೀಕರಿಸಿಲ್ಲ ಎಂದು ಸಂತೋಷ್ ನದ್ಯಾಳ್ ಹೇಳಿದ್ದು, ಸದ್ಯ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.

Last Updated : May 29, 2021, 11:43 AM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.