ETV Bharat / state

ಶಾಸಕ ಮನಗೂಳಿ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದ ರಾಜಕೀಯ ಮುಖಂಡರು - Political leaders to participating MC managuli funeral

ವಯೋಸಹಜ ಕಾಯಿಲೆಯಿಂದ ನಿನ್ನೆ ನಿಧನರಾದ ಮಾಜಿ ಸಚಿವ ಎಂ.ಸಿ.ಮನಗೂಳಿ ಅವರ ಪಾರ್ಥಿವ ಶರೀರದ ಅಂತಿಮ ದರ್ಶನವನ್ನು ಜೆಡಿಎಸ್ ರಾಜ್ಯಾಧ್ಯಕ್ಷ, ಮಾಜಿ ಸಿಎಂ ಕುಮಾರಸ್ವಾಮಿ, ಹೆಚ್.ಡಿ.ರೇವಣ್ಣ, ಹೆಚ್.ಕೆ.ಕುಮಾರಸ್ವಾಮಿ, ಮಾಜಿ ಸಚಿವರಾದ ಹೆಚ್.ಕೆ.ಪಾಟೀಲ್​, ಈಶ್ವರ್​ ಖಂಡ್ರೆ ಸೇರಿದಂತೆ ಮುಂತಾದ ರಾಜಕೀಯ ನಾಯಕರು ಪಡೆದುಕೊಂಡರು.

Political leaders to participating MC managuli funeral
ಮನಗೂಳಿ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದ ರಾಜಕೀಯ ನಾಯಕರು
author img

By

Published : Jan 29, 2021, 4:53 PM IST

ವಿಜಯಪುರ: ಜಿಲ್ಲೆಯ ಹಿರಿಯ ರಾಜಕಾರಣಿ ಹಾಗೂ ಸಿಂದಗಿ ಶಾಸಕ ಎಂ.ಸಿ.ಮನಗೂಳಿ ಅನಾರೋಗ್ಯದಿಂದ ನಿಧನರಾಗಿದ್ದು, ಇಂದು ಸಿಂದಗಿ ಪಟ್ಟಣದ ಹೆಚ್.ಜಿ. ಕಾಲೇಜ್ ಮೈದಾನದಲ್ಲಿ ಸಾರ್ವಜನಿಕರಿಗೆ ಹಾಗೂ ರಾಜಕೀಯ ಮುಖಂಡರಿಗೆ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆಯಲು ವ್ಯವಸ್ಥೆ ಮಾಡಲಾಗಿತ್ತು.

ಮನಗೂಳಿ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದ ರಾಜಕೀಯ ನಾಯಕರು

ವಯೋಸಹಜ ಕಾಯಿಲೆಯಿಂದ ನಿನ್ನೆ ನಿಧನರಾದ ಮಾಜಿ ಸಚಿವ ಎಂ.ಸಿ.ಮನಗೂಳಿ ಅವರ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆಯಲು ಜೆಡಿಎಸ್ ರಾಜ್ಯಾಧ್ಯಕ್ಷ, ಮಾಜಿ ಸಿಎಂ ಕುಮಾರಸ್ವಾಮಿ, ಹೆಚ್.ಡಿ.ರೇವಣ್ಣ, ಹೆಚ್.ಕೆ.ಕುಮಾರಸ್ವಾಮಿ, ಮಾಜಿ ಸಚಿವರಾದ ಹೆಚ್.ಕೆ.ಪಾಟೀಲ್​, ಈಶ್ವರ್​ ಖಂಡ್ರೆ, ವಿಜಯಪುರ ಸಂಸದ ರಮೇಶ್​ ಜಿಗಜಿಣಗಿ, ಶಾಸಕರಾದ ಎಂ.ಬಿ.ಪಾಟೀಲ, ಶಿವಾನಂದ ಪಾಟೀಲ, ಬಸನಗೌಡ ಪಾಟೀಲ ಯತ್ನಾಳ್​, ಯಶವಂತರಾಯಗೌಡ ಪಾಟೀಲ, ಎ.ಎಸ್.ಪಾಟೀಲ ನಡಹಳ್ಳಿ, ವಿಧಾನ ಪರಿಷತ್ ಸದಸ್ಯ ಎಂ.ಪಿ.ನಾಡಗೌಡ ಸೇರಿದಂತೆ ಜಿಲ್ಲೆ ಹಾಗೂ ಉತ್ತರ ಕರ್ನಾಟಕ, ಹೈದರಾಬಾದ್ ಕರ್ನಾಟಕದ ಬಹುತೇಕ ಜನಪ್ರತಿನಿಧಿಗಳು, ಮುಖಂಡರು ಆಗಮಿಸಿ ಅಂತಿಮ ನಮನ ಸಲ್ಲಿಸಿದರು.

ಮಾಜಿ ಸಿಎಂ ಕುಮಾರಸ್ವಾಮಿ ಮಾತನಾಡಿ, ಮನಗೂಳಿಯವರು ನಮ್ಮ ಕುಟುಂಬದ ಸದಸ್ಯರಾಗಿದ್ದರು. ಕಳೆದ ಚುನಾವಣೆಯಲ್ಲಿ ಸಿಂದಗಿ ಕ್ಷೇತ್ರದಿಂದ ತಮ್ಮ ಮಗ ಸ್ಪರ್ಧಿಸಲಿ ಎಂದು ಮನಗೂಳಿ ಬಯಸಿದ್ದರು. ಆದರೆ ನಾವೇ ಒತ್ತಾಯ‌ ಮಾಡಿ ಮನಗೂಳಿ ಅವರಿಗೆ ಟಿಕೆಟ್ ನೀಡಿದ್ವಿ. ಕ್ಷೇತ್ರದ ಜನತೆ ಸಹ ಅವರ ಕೈ ಬಿಡಲಿಲ್ಲ ಎಂದು ನೆನಪಿಸಿಕೊಂಡರು.

ಈ ವೇಳೆ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ, ಮಾಜಿ ಸಚಿವ ಎಂ.ಬಿ.ಪಾಟೀಲ ಸೇರಿದಂತೆ ಹಲವು ಗಣ್ಯರು ಮನಗೂಳಿ ಅವರ ಒಡನಾಟವನ್ನು ನೆನೆದರು.

ವಿಜಯಪುರ: ಜಿಲ್ಲೆಯ ಹಿರಿಯ ರಾಜಕಾರಣಿ ಹಾಗೂ ಸಿಂದಗಿ ಶಾಸಕ ಎಂ.ಸಿ.ಮನಗೂಳಿ ಅನಾರೋಗ್ಯದಿಂದ ನಿಧನರಾಗಿದ್ದು, ಇಂದು ಸಿಂದಗಿ ಪಟ್ಟಣದ ಹೆಚ್.ಜಿ. ಕಾಲೇಜ್ ಮೈದಾನದಲ್ಲಿ ಸಾರ್ವಜನಿಕರಿಗೆ ಹಾಗೂ ರಾಜಕೀಯ ಮುಖಂಡರಿಗೆ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆಯಲು ವ್ಯವಸ್ಥೆ ಮಾಡಲಾಗಿತ್ತು.

ಮನಗೂಳಿ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದ ರಾಜಕೀಯ ನಾಯಕರು

ವಯೋಸಹಜ ಕಾಯಿಲೆಯಿಂದ ನಿನ್ನೆ ನಿಧನರಾದ ಮಾಜಿ ಸಚಿವ ಎಂ.ಸಿ.ಮನಗೂಳಿ ಅವರ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆಯಲು ಜೆಡಿಎಸ್ ರಾಜ್ಯಾಧ್ಯಕ್ಷ, ಮಾಜಿ ಸಿಎಂ ಕುಮಾರಸ್ವಾಮಿ, ಹೆಚ್.ಡಿ.ರೇವಣ್ಣ, ಹೆಚ್.ಕೆ.ಕುಮಾರಸ್ವಾಮಿ, ಮಾಜಿ ಸಚಿವರಾದ ಹೆಚ್.ಕೆ.ಪಾಟೀಲ್​, ಈಶ್ವರ್​ ಖಂಡ್ರೆ, ವಿಜಯಪುರ ಸಂಸದ ರಮೇಶ್​ ಜಿಗಜಿಣಗಿ, ಶಾಸಕರಾದ ಎಂ.ಬಿ.ಪಾಟೀಲ, ಶಿವಾನಂದ ಪಾಟೀಲ, ಬಸನಗೌಡ ಪಾಟೀಲ ಯತ್ನಾಳ್​, ಯಶವಂತರಾಯಗೌಡ ಪಾಟೀಲ, ಎ.ಎಸ್.ಪಾಟೀಲ ನಡಹಳ್ಳಿ, ವಿಧಾನ ಪರಿಷತ್ ಸದಸ್ಯ ಎಂ.ಪಿ.ನಾಡಗೌಡ ಸೇರಿದಂತೆ ಜಿಲ್ಲೆ ಹಾಗೂ ಉತ್ತರ ಕರ್ನಾಟಕ, ಹೈದರಾಬಾದ್ ಕರ್ನಾಟಕದ ಬಹುತೇಕ ಜನಪ್ರತಿನಿಧಿಗಳು, ಮುಖಂಡರು ಆಗಮಿಸಿ ಅಂತಿಮ ನಮನ ಸಲ್ಲಿಸಿದರು.

ಮಾಜಿ ಸಿಎಂ ಕುಮಾರಸ್ವಾಮಿ ಮಾತನಾಡಿ, ಮನಗೂಳಿಯವರು ನಮ್ಮ ಕುಟುಂಬದ ಸದಸ್ಯರಾಗಿದ್ದರು. ಕಳೆದ ಚುನಾವಣೆಯಲ್ಲಿ ಸಿಂದಗಿ ಕ್ಷೇತ್ರದಿಂದ ತಮ್ಮ ಮಗ ಸ್ಪರ್ಧಿಸಲಿ ಎಂದು ಮನಗೂಳಿ ಬಯಸಿದ್ದರು. ಆದರೆ ನಾವೇ ಒತ್ತಾಯ‌ ಮಾಡಿ ಮನಗೂಳಿ ಅವರಿಗೆ ಟಿಕೆಟ್ ನೀಡಿದ್ವಿ. ಕ್ಷೇತ್ರದ ಜನತೆ ಸಹ ಅವರ ಕೈ ಬಿಡಲಿಲ್ಲ ಎಂದು ನೆನಪಿಸಿಕೊಂಡರು.

ಈ ವೇಳೆ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ, ಮಾಜಿ ಸಚಿವ ಎಂ.ಬಿ.ಪಾಟೀಲ ಸೇರಿದಂತೆ ಹಲವು ಗಣ್ಯರು ಮನಗೂಳಿ ಅವರ ಒಡನಾಟವನ್ನು ನೆನೆದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.