ETV Bharat / state

ವಿಜಯಪುರ: ಮಲಗಿದ್ದಾಗ ಹಾವು ಕಚ್ಚಿ ಗರ್ಭಿಣಿ ಸಾವು

author img

By

Published : Oct 27, 2022, 10:54 AM IST

Updated : Oct 27, 2022, 4:50 PM IST

ಹಾವು ಕಚ್ಚಿ ಗರ್ಭಿಣಿ ಮೃತಪಟ್ಟ ಘಟನೆ ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನಲ್ಲಿ ನಡೆದಿದೆ.

pregnant-woman-died-by-snake-bite
ವಿಜಯಪುರ: ಹಾವು ಕಚ್ಚಿ ನಾಲ್ಕು ತಿಂಗಳ ಗರ್ಭಿಣಿ ಸಾವು

ಮುದ್ದೇಬಿಹಾಳ(ವಿಜಯಪುರ): ಹಾವು ಕಚ್ಚಿ ನಾಲ್ಕು ತಿಂಗಳ ಗರ್ಭಿಣಿ ಸಾವಿಗೀಡಾದ ಘಟನೆ ತಾಲೂಕಿನ ಕುಂಟೋಜಿಯಲ್ಲಿ ಗುರುವಾರ ಬೆಳಗಿನ ಜಾವ ನಡೆದಿದೆ. ಕುಂಟೋಜಿ ಗ್ರಾಮದಲ್ಲಿ ಹೊಲದ ಪಕ್ಕದಲ್ಲೇ ಇರುವ ಮನೆಯಲ್ಲಿ ಮಲಗಿದ್ದಾಗ ಬೆಳಗಿನಜಾವ ವಿಷಕಾರಿ ಹಾವು ಕಚ್ಚಿದೆ ಎನ್ನಲಾಗಿದೆ.

ತೀವ್ರ ಅಸ್ವಸ್ಥಳಾದ ನಾಲ್ಕು ತಿಂಗಳ ಗರ್ಭಿಣಿ ನಿರ್ಮಲಾ ಯಲ್ಲಪ್ಪ ಚಲವಾದಿ(25) ಮೃತಪಟ್ಟಿದ್ದಾರೆ. ಹಾವು ಕಚ್ಚಿರುವುದು ಗೊತ್ತಾದ ತಕ್ಷಣ ಗರ್ಭಿಣಿಯನ್ನು ಮುದ್ದೇಬಿಹಾಳ ಸರ್ಕಾರಿ ಆಸ್ಪತ್ರೆಗೆ ಸೇರಿಸಿ ಪ್ರಾಥಮಿಕ ಚಿಕಿತ್ಸೆ ಬಳಿಕ, ಹೆಚ್ಚಿನ ಚಿಕಿತ್ಸೆಗೆ ಎಂದು ವಿಜಯಪುರ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೇ ಅಸುನೀಗಿದ್ದಾರೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.

ಮಲಗಿದ್ದಾಗ ಹಾವು ಕಚ್ಚಿ ಗರ್ಭಿಣಿ ಸಾವು

ಕಂದಾಯ ನಿರೀಕ್ಷಕ ಭೇಟಿ: ಹಾವು ಕಚ್ಚಿ ಗರ್ಭಿಣಿ ಮೃತಪಟ್ಟ ವಿಷಯ ತಿಳಿದು ಅವರ ಮನೆಗೆ ಕಂದಾಯ ನಿರೀಕ್ಷಕ ಮಹಾಂತೇಶ ಮಾಗಿ, ಗ್ರಾಮ ಲೆಕ್ಕಾಧಿಕಾರಿ ಅನುಪಮಾ ಪೂಜಾರಿ ಭೇಟಿ ನೀಡಿ ಮಾಹಿತಿ ಪಡೆದಿದ್ದಾರೆ. ಮರಣೋತ್ತರ ಪರೀಕ್ಷೆಯ ವರದಿ ಹಾಗೂ ದಾಖಲೆಗಳನ್ನು ಸಂಗ್ರಹಿಸಿ ಮೇಲಾಧಿಕಾರಿಗಳಿಗೆ ವರದಿ ಸಲ್ಲಿಸಲಾಗುವುದು ಎಂದು ಕಂದಾಯ ನಿರೀಕ್ಷಕರು ಹೇಳಿದ್ದಾರೆ.

ಇದನ್ನೂ ಓದಿ: ಟ್ರ್ಯಾಕ್ಟರ್​ಗೆ ಕ್ರೂಸರ್ ಡಿಕ್ಕಿ ; ಸ್ಥಳದಲ್ಲೇ ದಂಪತಿ ಸಾವು - 9 ಮಂದಿಗೆ ಗಾಯ

ಮುದ್ದೇಬಿಹಾಳ(ವಿಜಯಪುರ): ಹಾವು ಕಚ್ಚಿ ನಾಲ್ಕು ತಿಂಗಳ ಗರ್ಭಿಣಿ ಸಾವಿಗೀಡಾದ ಘಟನೆ ತಾಲೂಕಿನ ಕುಂಟೋಜಿಯಲ್ಲಿ ಗುರುವಾರ ಬೆಳಗಿನ ಜಾವ ನಡೆದಿದೆ. ಕುಂಟೋಜಿ ಗ್ರಾಮದಲ್ಲಿ ಹೊಲದ ಪಕ್ಕದಲ್ಲೇ ಇರುವ ಮನೆಯಲ್ಲಿ ಮಲಗಿದ್ದಾಗ ಬೆಳಗಿನಜಾವ ವಿಷಕಾರಿ ಹಾವು ಕಚ್ಚಿದೆ ಎನ್ನಲಾಗಿದೆ.

ತೀವ್ರ ಅಸ್ವಸ್ಥಳಾದ ನಾಲ್ಕು ತಿಂಗಳ ಗರ್ಭಿಣಿ ನಿರ್ಮಲಾ ಯಲ್ಲಪ್ಪ ಚಲವಾದಿ(25) ಮೃತಪಟ್ಟಿದ್ದಾರೆ. ಹಾವು ಕಚ್ಚಿರುವುದು ಗೊತ್ತಾದ ತಕ್ಷಣ ಗರ್ಭಿಣಿಯನ್ನು ಮುದ್ದೇಬಿಹಾಳ ಸರ್ಕಾರಿ ಆಸ್ಪತ್ರೆಗೆ ಸೇರಿಸಿ ಪ್ರಾಥಮಿಕ ಚಿಕಿತ್ಸೆ ಬಳಿಕ, ಹೆಚ್ಚಿನ ಚಿಕಿತ್ಸೆಗೆ ಎಂದು ವಿಜಯಪುರ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೇ ಅಸುನೀಗಿದ್ದಾರೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.

ಮಲಗಿದ್ದಾಗ ಹಾವು ಕಚ್ಚಿ ಗರ್ಭಿಣಿ ಸಾವು

ಕಂದಾಯ ನಿರೀಕ್ಷಕ ಭೇಟಿ: ಹಾವು ಕಚ್ಚಿ ಗರ್ಭಿಣಿ ಮೃತಪಟ್ಟ ವಿಷಯ ತಿಳಿದು ಅವರ ಮನೆಗೆ ಕಂದಾಯ ನಿರೀಕ್ಷಕ ಮಹಾಂತೇಶ ಮಾಗಿ, ಗ್ರಾಮ ಲೆಕ್ಕಾಧಿಕಾರಿ ಅನುಪಮಾ ಪೂಜಾರಿ ಭೇಟಿ ನೀಡಿ ಮಾಹಿತಿ ಪಡೆದಿದ್ದಾರೆ. ಮರಣೋತ್ತರ ಪರೀಕ್ಷೆಯ ವರದಿ ಹಾಗೂ ದಾಖಲೆಗಳನ್ನು ಸಂಗ್ರಹಿಸಿ ಮೇಲಾಧಿಕಾರಿಗಳಿಗೆ ವರದಿ ಸಲ್ಲಿಸಲಾಗುವುದು ಎಂದು ಕಂದಾಯ ನಿರೀಕ್ಷಕರು ಹೇಳಿದ್ದಾರೆ.

ಇದನ್ನೂ ಓದಿ: ಟ್ರ್ಯಾಕ್ಟರ್​ಗೆ ಕ್ರೂಸರ್ ಡಿಕ್ಕಿ ; ಸ್ಥಳದಲ್ಲೇ ದಂಪತಿ ಸಾವು - 9 ಮಂದಿಗೆ ಗಾಯ

Last Updated : Oct 27, 2022, 4:50 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.