ಮುದ್ದೇಬಿಹಾಳ: ಉತ್ತರ ಪ್ರದೇಶದಲ್ಲಿ ದಲಿತ ಯುವತಿಯನ್ನು ಅತ್ಯಾಚಾರ ಮಾಡಿ ಬರ್ಬರವಾಗಿ ಹತ್ಯೆ ಮಾಡಿ ಸುಟ್ಟು ಹಾಕಿದ ಘಟನೆ ಖಂಡಿಸಿ ಪಟ್ಟಣದ ಬಸವೇಶ್ವರ ಸರ್ಕಲ್ನಲ್ಲಿ ಎನ್.ಎಸ್.ಯು.ಐ ಹಾಗೂ ಯುವ ಕಾಂಗ್ರೆಸ್ ಸಂಘಟನೆ ವತಿಯಿಂದ ಪ್ರತಿಭಟನೆ ನಡೆಸಲಾಯಿತು.
ಯುವ ಕಾಂಗ್ರೆಸ್ ಅಧ್ಯಕ್ಷ ಮಹ್ಮದ್ ರಫೀಕ್ ಶಿರೋಳ, ಉಪಾಧ್ಯಕ್ಷ ಮಹ್ಮದ್ ಯೂಸುಫ್ ನಾಯ್ಕೋಡಿ,ಎಸ್ಸಿ ಮೋರ್ಚಾ ಅಧ್ಯಕ್ಷ ಅಶೋಕ ಅಜಮನಿ,ಹುಸೇನ್ ಮುಲ್ಲಾ,ಮಾನಪ್ಪ ನಾಯಕ,ಲಕ್ಷಣ ಚವ್ಹಾಣ,ಮಹಿಬೂಬ ಮೊಕಾಶಿ ಮೊದಲಾದವರು ಇದ್ದರು.