ವಿಜಯಪುರ: ವೀರ ಸಾವರ್ಕರ್ ವಿರುದ್ಧ ಅವಹೇಳನಕಾರಿ ಪುಸ್ತಕ ಪ್ರಕಟಿಸಿದವರ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳವಂತೆ ಆಗ್ರಹಿಸಿ ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ಇಂದು ವಿಜಯಪುರದಲ್ಲಿ ಪ್ರತಿಭಟನೆ ನಡೆಸಿ, ಮನವಿಪತ್ರ ಸಲ್ಲಿಸಲಾಯಿತು.
ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದ ಹಿಂದೂ ಜನ ಜಾಗೃತಿ ಕಾರ್ಯಕರ್ತರು, ಮಧ್ಯಪ್ರದೇಶ ರಾಜ್ಯದ ಭೋಪಾಲ್ದಲ್ಲಿ ಕಾಂಗ್ರೆಸ್ ನಡೆಸಿದ ಸೇವಾದಳದ ತರಬೇತಿ ಶಿಬಿರದಲ್ಲಿ ವೀರ ಸಾವರ್ಕರ್ ಹಾಗೂ ನಾಥೂರಾಮ್ ಗೋಡ್ಸೆ ಸಲಿಂಗ ಕಾಮಿಗಳಾಗಿದ್ದರು, ಅಲ್ಪ ಸಂಖ್ಯಾತರ ಮೇಲೆ ಅತ್ಯಾಚಾರ ಎಸಗುತ್ತಿದ್ದರು ಎಂದು ಸುಳ್ಳು ಬರವಣಿಗೆಗಳನ್ನು ಪ್ರಕಟಿಸಿದೆ. ಇದು ದೇಶಕ್ಕಾಗಿ ಹೋರಾಡಿದವರಿಗೆ ಮಾಡುವ ಅವಮಾನ ಇದು ಎಂದು ದೂರಿದರು.
ಅಶ್ಲೀಲವಾಗಿ ಪುಸ್ತಕ ಬರೆದ ವ್ಯಕ್ತಿಗಳನ್ನು ತಕ್ಷಣವೇ ಬಂಧಿಸುವಂತೆ ಜಿಲ್ಲಾಧಿಕಾರಿಗಳ ಮೂಲಕ ಕೇಂದ್ರ ಸರ್ಕಾರದಕ್ಕೆ ಮನವಿ ಸಲ್ಲಿಸಲಾಯಿತು.