ETV Bharat / state

ಡಾ. ಸರೋಜಿನಿ ಮಹಿಷಿ ವರದಿ ಜಾರಿ ಮಾಡುವಂತೆ ಪ್ರತಿಭಟನೆ

author img

By

Published : Sep 15, 2020, 3:33 PM IST

ಉದ್ಯೋಗ ಅವಕಾಶ ಹೊರ ರಾಜ್ಯದವರ ಪಾಲಾಗುತ್ತಿದ್ದು ತಕ್ಷಣವೇ ಡಾ. ಸರೋಜಿನಿ ಮಹಿಷಿ ವರದಿಯನ್ನು ಜಾರಿಗೆ ತರುವಂತೆ ವಿಜಯಪುರದಲ್ಲಿ ಕದಂಬ ಸೈನ್ಯದ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

protests-to-implementation-of-dr-sarojini-mahshi-report
ಕದಂಬ ಸೈನ್ಯ

ವಿಜಯಪುರ: ಡಾ‌. ಸರೋಜಿನಿ ಮಹಿಷಿ ಪರಿಷ್ಕೃತ ವರದಿ ಜಾರಿ ಮಾಡುವಂತೆ ಒತ್ತಾಯಿಸಿ ಕದಂಬ ಸೈನ್ಯದ ಕಾರ್ಯಕರ್ತರು ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.

ರಾಜ್ಯ ಸರ್ಕಾರಕ್ಕೆ ಹಲವು ದಿನಗಳಿಂದಲೂ ವರದಿ ಜಾರಿ ಮಾಡುವಂತೆ ಒತ್ತಾಯಿಸಿದರು ಕ್ಯಾರೆಯನ್ನುತ್ತಿಲ್ಲ. ಲಕ್ಷಾಂತರ ಉದ್ಯೋಗ ‌ಹೊರ ರಾಜ್ಯದವರ ಪಾಲಾಗುತ್ತಿದೆ. ಉದ್ಯೋಗದಲ್ಲಿ ಕನ್ನಡಿಗರಿಗೆ ಅನ್ಯಾಯವಾಗುತ್ತಿದೆ.

ಡಾ. ಸರೋಜಿನಿ ಮಹಿಷಿ ವರದಿ ಜಾರಿ ಮಾಡುವಂತೆ ಪ್ರತಿಭಟನೆ

ಇಂದಿನ ಕಾಲ ಘಟ್ಟಕ್ಕೆ ತಕ್ಕಂತೆ ಡಾ. ಸರೋಜಿನಿ ಮಹಿಷಿ ವರದಿ ಪುನರ್ ಪರಾಮರ್ಶಿಸಲು‌ ಕನ್ನಡ ಅಭಿವೃದ್ಧಿ ಪ್ರಾಧಿಕಾರ ‌ಮಾನವಿಯ ಮೇರೆಗೆ 2016ರಲ್ಲಿ ಸರ್ಕಾರ ಸಮಿತಿ ರಚನೆ ಮಾಡಿತು. ಸಮಿತಿ ವರದಿ ನೀಡಿದರು ಸರ್ಕಾರ ಜಾರಿ ಮಾಡುವಲ್ಲಿ ವಿಫಲವಾಗಿದೆ‌ ಎಂದು ರಾಜ್ಯ ಸರ್ಕಾರದ ವಿರುದ್ಧ ಕದಂಬಸೈನ್ಯದ ಕಾರ್ಯಕರ್ತರು ಕಿಡಿ ಕಾರಿದರು.

ಅಲ್ಲದೆ ಸರ್ಕಾರ ಸರೋಜಿನಿ ಮಹಿಷಿ ವರದಿ ಜಾರಿಗೆ ತರಲು ತಕ್ಷಣದ ಕ್ರಮಕ್ಕೆ ಮುಂದಾಗಿ, ಕನ್ನಡಿಗರಿಗೆ ಉದ್ಯೋಗ ಹಂಚಿಕೆಯಲ್ಲಿ ಆಗುತ್ತಿರುವ ಅನ್ಯಾಯ ತಡೆಯುವಂತೆ ಜಿಲ್ಲಾಧಿಕಾರಿ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದರು.

ವಿಜಯಪುರ: ಡಾ‌. ಸರೋಜಿನಿ ಮಹಿಷಿ ಪರಿಷ್ಕೃತ ವರದಿ ಜಾರಿ ಮಾಡುವಂತೆ ಒತ್ತಾಯಿಸಿ ಕದಂಬ ಸೈನ್ಯದ ಕಾರ್ಯಕರ್ತರು ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.

ರಾಜ್ಯ ಸರ್ಕಾರಕ್ಕೆ ಹಲವು ದಿನಗಳಿಂದಲೂ ವರದಿ ಜಾರಿ ಮಾಡುವಂತೆ ಒತ್ತಾಯಿಸಿದರು ಕ್ಯಾರೆಯನ್ನುತ್ತಿಲ್ಲ. ಲಕ್ಷಾಂತರ ಉದ್ಯೋಗ ‌ಹೊರ ರಾಜ್ಯದವರ ಪಾಲಾಗುತ್ತಿದೆ. ಉದ್ಯೋಗದಲ್ಲಿ ಕನ್ನಡಿಗರಿಗೆ ಅನ್ಯಾಯವಾಗುತ್ತಿದೆ.

ಡಾ. ಸರೋಜಿನಿ ಮಹಿಷಿ ವರದಿ ಜಾರಿ ಮಾಡುವಂತೆ ಪ್ರತಿಭಟನೆ

ಇಂದಿನ ಕಾಲ ಘಟ್ಟಕ್ಕೆ ತಕ್ಕಂತೆ ಡಾ. ಸರೋಜಿನಿ ಮಹಿಷಿ ವರದಿ ಪುನರ್ ಪರಾಮರ್ಶಿಸಲು‌ ಕನ್ನಡ ಅಭಿವೃದ್ಧಿ ಪ್ರಾಧಿಕಾರ ‌ಮಾನವಿಯ ಮೇರೆಗೆ 2016ರಲ್ಲಿ ಸರ್ಕಾರ ಸಮಿತಿ ರಚನೆ ಮಾಡಿತು. ಸಮಿತಿ ವರದಿ ನೀಡಿದರು ಸರ್ಕಾರ ಜಾರಿ ಮಾಡುವಲ್ಲಿ ವಿಫಲವಾಗಿದೆ‌ ಎಂದು ರಾಜ್ಯ ಸರ್ಕಾರದ ವಿರುದ್ಧ ಕದಂಬಸೈನ್ಯದ ಕಾರ್ಯಕರ್ತರು ಕಿಡಿ ಕಾರಿದರು.

ಅಲ್ಲದೆ ಸರ್ಕಾರ ಸರೋಜಿನಿ ಮಹಿಷಿ ವರದಿ ಜಾರಿಗೆ ತರಲು ತಕ್ಷಣದ ಕ್ರಮಕ್ಕೆ ಮುಂದಾಗಿ, ಕನ್ನಡಿಗರಿಗೆ ಉದ್ಯೋಗ ಹಂಚಿಕೆಯಲ್ಲಿ ಆಗುತ್ತಿರುವ ಅನ್ಯಾಯ ತಡೆಯುವಂತೆ ಜಿಲ್ಲಾಧಿಕಾರಿ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.